Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...