Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...