Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...