HomeUncategorized’ಉಸುರಿಗೆ ಒಂದು ಹೆಸರು ಕೊಟ್ಟು, ಹೆಸರಿಗೆ ಒಂದು ಕುಸುರಿ ಕೊಟ್ಟು’

’ಉಸುರಿಗೆ ಒಂದು ಹೆಸರು ಕೊಟ್ಟು, ಹೆಸರಿಗೆ ಒಂದು ಕುಸುರಿ ಕೊಟ್ಟು’

- Advertisement -
- Advertisement -

ಜರ್ಮನಿಯ ಡ್ಯೂಷ ವಿಜ್ಞಾನ ವಸ್ತುಸಂಗ್ರಹಾಲಯದ ಬಗ್ಗೆ ಒಂದು ಜೋಕು ಐತಿ.

ಅದನ್ನ ನೋಡಲಿಕ್ಕೆ ಬಂದ ಒಬ್ಬ ಸಾಲಿ ಹುಡುಗ ಅಲ್ಲೆ ಇರುವ ಮೈಕೆಲ್ ಸೇಂದಿವೋಗಿಯಸ್ ಹಾಗೂ ಆಂಟೋನಿ ಲವೊಸಯಿಯರ ಅವರ ಚಿತ್ರಪಟ ನೋಡಿ ಗಾಬರಿ ಆಗಿಬಿಟ್ಟನಂತ. “ಅಯ್ಯೋ ಯಪ್ಪ, ಇವರು ಹುಟ್ಟುವದಕ್ಕಿಂತ ಮೊದಲು ನಾವು ಹೆಂಗ ಉಸರಾಟ ಮಾಡ್ತಾ ಇದ್ದೆವೋ ಏನೋ?” ಅಂತ. ಪೋಲಂಡ್‌ನ ವಿಜ್ಞಾನಿ ಮೈಕೆಲ್ ಅವರು ಗಾಳಿ ಒಳಗ ಮನುಷ್ಯ ಉಸರಾಟ ಮಾಡಲಿಕ್ಕೆ ಅನುಕೂಲ ಆಗುವ ಹವೆ ಒಂದು ಐತಿ

ಅಂತ ಸುಮಾರು 1605ಕ್ಕ ಕಂಡುಹಿಡದರು.

ಅದನ್ನ ಜೀವಾಹಾರ ಅಂತ ಕರಿಯಬಹುದು ಅಂತ ಹೇಳಿದರು.
ಅವರ ಆದ ಮ್ಯಾಲೆ 170 ವರ್ಷ ನಂತರ ಹುಟ್ಟಿದ ಸ್ವೀಡನ್ ದೇಶದ ಅಂಟೋನಿ ಅವರು ಅದಕ್ಕ ಆಮ್ಲಜನಕ ಅಂತ ಹೆಸರು ಇಟ್ಟರು. ಅದು ಯಾಕ್ ಅಂದ್ರ ಅದಕ್ಕ ನೀರು, ಅಥವಾ ಇತರ ದ್ರವ ಸೇರಿಸಿದರ ಅದು ಆಮ್ಲೀಯ ಗುಣ ಪಡೆದುಕೊಳ್ಳುತ್ತದ ಅಂತ ಹೇಳಿ.

ಆ ಹುಡುಗನ ಮತಿನಾಗ ಜೋಕು ಎನಪಾ ಅಂದ್ರ ಆ ವಿಜ್ಞಾನಿಗಳು ಆಮ್ಲಜನಕವನ್ನು ಸೃಷ್ಟಿ ಮಾಡಲಿಲ್ಲ. ಅದನ್ನು ಗುರುತಿಸಿದರು, ಅದಕ್ಕ ಹೆಸರು ಇಟ್ಟರು.

ಕವಿಗೆ ಏನು ಕೆಲಸ ಅಂತ ಕೇಳಿದಾಗ ಬೇಂದ್ರೆ ಅವರು ಹೇಳಿದರಂತ.

“ಕುದುರಿಯವರು ಬಂದಾರವ್ವಾ, ಕುದುರಿಯವರು ಬಂದಾರ, ಉಸುರಿಗೆ ಒಂದು ಹೆಸರು ಕೊಟ್ಟು, ಹೆಸರಿಗೆ ಒಂದು ಕುಸುರಿ ಕೊಟ್ಟು, ಏನೇನೋ ಅಂದರವ್ವಾ, ಕುದುರಿಯವರು ಬಂದಾರ”.

ಈ ಪ್ರಕರಣದೊಳಗ ನಾವು ಮೈಕಲ್ ಅವರದು ಒಂದು ಕುದುರಿ, ಅಂಟೋನಿ ಅವರದು ಇನ್ನೊಂದು ಕುದುರಿ ಅಂತ ತಿಳಕೋಬಹುದು. ಅವರ ಸಂಶೋಧನೆ ಏನು ಅಂದ್ರ ಆಮ್ಲಜನಕದ ಗುಣ ಗುರುತು ಹಚ್ಚಿದ್ದು, ಮತ್ತು ಅದಕ್ಕ ಹೆಸರು ಕೊಟ್ಟಿದ್ದು. ಏನೇನೋ ಅಂದರವ್ವಾ ಅಂದ್ರ ಇಷ್ಟ ಮತ್ತ.

ಇವರು ಇಬ್ಬರು 17-18ನೆ ಶತಮಾನದೊಳಗ ಈ ಸಂಶೋಧನೆ ಮಾಡದೇ ಹೋಗಿದ್ದರೆ ನಾವು ಎಲ್ಲಾ ಏನು ಉಸಿರಾಡಿಸಬೇಕಿತ್ತು? ಅಥವಾ ಅದಕ್ಕಿಂತ ಮುಂಚಿನ ಮನುಷ್ಯರೆಲ್ಲಾ ಏನು ಉಸಿರಾಡುತ್ತಾ ಇದ್ದರು ಅನ್ನುವುದು ನಮ್ಮ ತಲಿ ಒಳಗ ಬರೋದು ಸಹಜ. ಇಂತಹ ಸಂದೇಹಗಳು ಈಗಲೂ ನಮ್ಮ ಜನರಿಗೆ ಕಾಡಲಿಕ್ಕೆ ಹತ್ತಿಬಿಟ್ಟಾವು.

ಈಗ ದೇಶಾದ್ಯಂತ ಆಮ್ಲಜನಕ ಕೊರತೆ ಐತಿ. ನಾವು ಉಸಿರು ಆಡುವ ಗಾಳಿ ಒಳಗ ಬೇಕಾದಷ್ಟು ಆಮ್ಲಜನಕ ಇದ್ದರೂ ಕೂಡ ಕೊರೊನಾ ರೋಗಿಗಳಿಗೆ ಅದು ಸಾಲೋದಿಲ್ಲಾ. ಅವರಿಗೆ ಬರೆ ಶುದ್ಧ ಆಮ್ಲಜನಕ ಬೇಕಾಗತದ.
ಇದು ಎರಡು ಮೂರು ರೀತಿಯಿಂದ ಸಿಗತದ. ಮನಿಯೊಳಗ ಇರೋ ರೋಗಿಗಳು ಸಾಂದ್ರ ಆಮ್ಲಜನಕ ತಯಾರಕ ಯಂತ್ರ ಇಟ್ಟುಕೋತಾರ. ಆಸ್ಪತ್ರೆಯೊಳಗ ಇರೋ ರೋಗಿಗಳಿಗೆ ಆಮ್ಲಜನಕದ ಸಿಲಿಂಡರ್ ಬೇಕಾಗತದ. ಇದು ಪ್ರತಿ ಹಾಸಿಗೆ ಪಕ್ಕದಾಗ ಇರಬಹುದು, ಅಥವಾ ಇಡೀ ಆಸ್ಪತ್ರೆಗೆ ಒಂದು ದೊಡ್ಡ ಯಂತ್ರ ಇದ್ದು, ಅದರಿಂದ ಪ್ರತಿ ಹಾಸಿಗೆಗೆ ನಳಿಕೆಯಿಂದ ಪೂರೈಕೆ ಆಗಬಹುದು.

ಇವು ಎರಡೂ ಈಗ ಕಮ್ಮಿ ಅಗಿಬಿಟ್ಟಾವ. ಯಾಕ್ ಅಂದ್ರ ಪೂರೈಕೆಗಿಂತ ಬೇಡಿಕೆ ಹೆಚ್ಚು ಆಗಿಬಿಟ್ಟದ. ಇದು ಅರ್ಥಶಾಸ್ತ್ರದ ಮೂಲ ನಿಯಮಗಳಲ್ಲಿ ಒಂದು.

ಕೊರೊನಾ ವೈರಸ್‌ನ ಎರಡನೇ ಅಲೆ ಶುರು ಆದ ಮೇಲೆ ಈ ಕೊರತೆ ಆಗೆತಿ. ಮೊದಲನೇ ಅಲೆ ಒಳಗ ಬಹಳ ಜನರಿಗೆ ರೋಗಲಕ್ಷಣ ಇರಲಿಲ್ಲ. ಹಾಗೂ ಈಗ ನಾವು ಈ ಸೋಂಕಿಗೆ ಯಾರನ್ನ ಬಯ್ಯಬೇಕು ಅನ್ನೋ ಚಿಂತನೆ ಒಳಗ ಇದ್ದೀವಿ.

ನಾಳೆ ಇದು ಹೆಚ್ಚು ಆದರ ನಮಗ ಯಾವುದರ ಕೊರತೆ ಆಗಬಹುದು ಅಂತ ತಿಳಕೊಂಡಿದ್ದರ ಈ ಪರಿಸ್ಥಿತಿ ಬರ್ತಾ ಇರಲಿಲ್ಲ. ಅಂದ್ರ ಒಬ್ಬ ವಿದ್ಯಾರ್ಥಿ ಎಂಟನೇ ಇಯತ್ತೆ ಪಾಸು ಮಾಡಿ ಒಂಬತ್ತನೇ ಇಯತ್ತೆಗೆ ಬಂದಾಗ ಎಂಟನೇ ಇಯತ್ತೆಯ ಪಾಠಗಳು ಒಂದಾದರೂ ನೆನಪು ಇರಬೇಕು, ಅಲ್ಲವೇ?

ಓದಿ, ಬರೆದು, ಪಾಸು ಆಗಿದ್ದರ ಅವರಿಗೆ ನೆನಪು ಇರ್ತದ. ಕೊರೊನಾ ಪಾಸು ಆದರ ಇರೋದಿಲ್ಲ. ನಮ್ಮ ಸರಕಾರಗಳಿಗೂ ಅಷ್ಟ. ಅವರು ಮೊದಲನೇ ಅಲೆಯೊಳಗ ಜನರಿಗೆ ಅನುಕೂಲ ಮಾಡಿಕೊಟ್ಟು, ರೋಗ ನಿಯಂತ್ರಣ ಮಾಡಿದ್ದರ ಎನರ ಪಾಠ ಕಲಿತಾ ಇದ್ದರು. ಅವರೂ ಕೈ ಝಾಡಿಸಿ, ದೂರ ನಿಂತು ಬರೆ ರೇಡಿಯೋ ಭಾಷಣ ಮಾಡಿದ್ದಕ್ಕ ಅವರಿಗೂ ನೆನಪು ಇಲ್ಲ.

ಅಂದಹಾಗೆ ಆಮ್ಲಜನಕ ತಯಾರಿ ಅಂದ್ರ ಉಪಗ್ರಹ ಉಡಾವಣೆಯಷ್ಟು ಸಂಕೀರ್ಣ ವಿಷಯ ಏನೂ ಅಲ್ಲ. ಅದಕ್ಕೆ ದೊಡ್ಡದೊಡ್ಡ ದುಬಾರಿ ಯಂತ್ರ ಬೇಕಾಗಿಲ್ಲ. ಅದನ್ನು ಸಕ್ಕರೆ ಕಾರ್ಖಾನೆಗಳ ಬಾಯಿಲರ್‌ಗಳಿಂದ ತಯಾರು ಮಾಡಬಹುದು. ಇಡೀ ದೇಶದಲ್ಲಿ ಎರಡನೇ ಅತಿಹೆಚ್ಚು ಸಕ್ಕರೆ ಕಾರಖಾನೆ ಹೊಂದಿರುವ ಮಹಾರಾಷ್ಟ್ರ ಸರಕಾರ ತನ್ನ ಸಕ್ಕರೆ ಕಾರಖಾನೆಗಳಿಂದ ಆಮ್ಲಜನಕ ತಯಾರು ಮಾಡಿಸುತ್ತಾ ಇದೆ.

ಇಡೀ ದೇಶದಲ್ಲಿ 732 ಸಕ್ಕರೆ ಕಾರ್ಖಾನೆ ಅದಾವು. ಅವು ಒಂದು ದಿನಕ್ಕ ಸರಾಸರಿ 70 ಟನ್ ಆಮ್ಲಜನಕ ತಯಾರು ಮಾಡಿದರ 1464 ಟನ್ ಆಮ್ಲಜನಕ ದೇಶದ ರೋಗಿಗಳಿಗೆ ಸಿಗತದ. ಆದರ ಅತಿ ಹೆಚ್ಚು ಸಕ್ಕರೆ ಕಾರ್ಖಾನೆ ಇರುವ ಉತ್ತರ ಪ್ರದೇಶ ಹಾಗೂ ಕಬ್ಬು ಬೆಳೆಯುವ ಹರಿಯಾಣ, ಗೋವಾ, ಕರ್ನಾಟಕ ಮುಂತಾದ ರಾಜ್ಯಗಳ ಸರ್ಕಾರಗಳು ನಮಗೆ ಆಮ್ಲಜನಕ ಕೊರತೆ ಇಲ್ಲ, ನಮಗ ಈಗ ಏನು ಬೇಕಾಗಿಲ್ಲ ಅಂತ ಹೇಳಿ ಬಿಟ್ಟಾವು. ಈಗ ಏನು ಮಾಡ್ತೀರಿ? ರೊಟ್ಟಿ ಬ್ಯಾಡ ಅಂದವರಿಗೆ ಹೋಳಿಗೆ ತಿನ್ನಸಲಿಕ್ಕೆ ಆಗತದ?
ಇನ್ನೊಂದು ವಿಷಯ ಅಂದ್ರ ಕೊರೊನಾ ನಿವರ್ಹಹಣೆ ಒಳಗ ನಮ್ಮ ದೇಶದ ಅಡಳಿತದ ಒಂದು ಹುಳುಕು ಹೊರಗ ಬಂದದ. ಅದು ಎನಪ ಅಂದ್ರ ಅನಗತ್ಯ ಕೇಂದ್ರೀಕರಣ.

ಒಂದು ನೂರ ಮೂವತ್ತು ಕೋಟಿ ಜನಸಂಖ್ಯೆಯ ದೇಶದೊಳಗ ಎಲ್ಲ ನಿರ್ಧಾರಗಳನ್ನು ದೆಹಲಿಯ ಕೆಲವೇ ಕೆಲವು ಜನ ತೊಗೊಳ್ಳೋದು ಕಾರ್ಯಸಾಧು ಅಲ್ಲ. ಆದರ ಕಳೆದ ಏಳು ವರ್ಷಗಳಿಂದ ಹಂಗನ ನಡದದ. ಆಮ್ಲಜನಕದ ಕತಿನೂ ಹಂಗ. ಇಡೀ ದೇಶಕ್ಕೆ ಆಮ್ಲಜನಕ ಎಷ್ಟು ಬೇಕು ಅನ್ನೋದನ್ನ ಕೇಂದ್ರದ ಕೆಲವು ರಾಜಕಾರಣಿಗಳು-ಅಧಿಕಾರಿಗಳು ನಿರ್ಧಾರ ಮಾಡತಾರ. ಎಲ್ಲಾ ಮಾರಾಟಗಾರರಿಂದ ಸಂಪೂರ್ಣ ಖರೀದಿ ಅವರೇ ಮಾಡತಾರ. ಪ್ರತಿ ರಾಜ್ಯಕ್ಕ ಎಷ್ಟು ಬೇಕು ಅನ್ನೋದು ಅವರೇ ನಿಗದಿ ಮಾಡಿ ಕಳಸತಾರ. ಇದರಾಗ ಎಪ್ರಾ ತಪ್ರಾ ಆಗತದ. ಹೆಚ್ಚು ಕೇಸು ಇರೋ ರಾಜ್ಯಗಳಿಗೆ ಕಮ್ಮಿ, ಕಮ್ಮಿ ಕೇಸು ರಾಜ್ಯಗಳಿಗೆ ಹೆಚ್ಚು ಆಮ್ಲಜನಕ ಸಿಕ್ಕದ. ದೆಹಲಿಗೆ ಹತ್ತಿರ ಇರೋ ರಾಜ್ಯಗಳಿಗೆ ಸಹಜವಾಗಿ ಹೆಚ್ಚು ಆಮ್ಲಜನಕ ಸಿಕ್ಕು, ದೆಹಲಿಯಿಂದ ದೂರ ಇದ್ದ ರಾಜ್ಯಗಳಿಗೆ ಕಮ್ಮಿ ಸಿಕ್ಕದ.

ಇದನ್ನ ಪ್ರಶ್ನೆ ಮಾಡುವ, ಇದರ ಹಿಂದಿನ ಕೇಂದ್ರೀಕರಣದ ಸೂತ್ರದ ಅನಾನುಕೂಲತೆಯ ಬಗ್ಗೆ ಮಾತಾಡುವ ಬುದ್ಧಿಜೀವಿಗಳು ಯಾರು ಉಳಿದಿಲ್ಲ. ಹೆಚ್ಚು ವಯಸ್ಸಿನವರನ್ನ ಕೊರೊನಾ ಪೀಪಿಯಿ ಕಿಟ್ಟಿನಾಗ ಸುತ್ತಿ ಕರಕೊಂಡು ಹೋಗಿ ಬಿಟ್ಟೆತಿ. ಸಣ್ಣ ವಯಸ್ಸಿನವರು ಹೆದರಿಕೊಂಡು ಕೂತಾರ. ಹೆದರಲಾರದೆ ದನಿ ಎತ್ತಿದವರು ಜೈಲಿನೊಳಗ ಇದ್ದಾರ.

ಆಮ್ಲಜನಕದ ಸಂಶೋಧನೆಗೆ ಮುಂಚೆ ಜನ ಏನು ಉಸಿರು ಆಡ್ತಾ ಇದ್ದರೂ ಅಂತ ಸಣ್ಣ ಹುಡುಗರು ಕೇಳಿದರ, ಪಂಥ ಪ್ರಧಾನ ಸೇವಕರಿಗಿಂತ ಮುಂಚೆ ಈ ದೇಶವನ್ನ ಯಾರು ನಡೆಸುತ್ತಾ ಇದ್ದರು? ಇಲ್ಲೆ ಆಡಳಿತ ಅನ್ನೋದು ಇತ್ತೋ ಇಲ್ಲೋ ಅನ್ನೋ ಪ್ರಶ್ನೆಗಳನ್ನ ದೊಡ್ಡವರು ಕೇಳಾಕ ಹತ್ಯಾರ.

ಇದನ್ನ ಜೋಕು ಅಂತ ಹೇಳೋರು ಮಾತ್ರ ಯಾರೂ ಇರಲಾರದ ಹಂಗ ಆಗೇದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...