Homeಅಂಕಣಗಳುಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

- Advertisement -
- Advertisement -

ಸಂತೆಯ ಗದ್ದಲದಲ್ಲಿ ಗಂಟು ಕಳ್ಳರು ತಾವು ಮಾಡುವ ಕೆಲಸವನ್ನ ನಿರಾತಂಕವಾಗಿ ಮಾಡಿ ಮುಗಿಸಿದಂತೆ ವಿಧಾನಸಭೆಯಲ್ಲಿ ಧರಣಿ, ಗೌಜು ಗದ್ದಲ ನಡೆಯುತ್ತಿದ್ದಾಗಲೇ, ಇತ್ತ ಶಾಸಕರು ಮಂತ್ರಿಗಳು ಮತ್ತು ಮುಖ್ಯಮಂತ್ರಿಯ ಸಂಬಳ ಹೆಚ್ಚಿಸುವ ಬಿಲ್ಲನ್ನು ಸದ್ದಿಲ್ಲದೆ ಜಾರಿಮಾಡಿಕೊಂಡರಂತಲ್ಲಾ. ಸಾಮಾನ್ಯವಾಗಿ ಜೇಬುಗಳ್ಳರು ಮಾತ್ರ ಇಂತಹ ಕೆಲಸ ಮಾಡುತ್ತಾರೆಂದು ಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಹಗಲುಗಳ್ಳರು ತಮ್ಮ ತುಟ್ಟಿಭತ್ಯೆಗಳನ್ನು ಏರಿಸಿಕೊಳ್ಳುವುದನ್ನು ಅನಾದಿಕಾಲದಿಂದ ನೋಡುತ್ತ ಬಂದಿದ್ದಾರೆ ಸಾಮಾನ್ಯ ಜನ. ಈಗಲೂ ಕೂಡ ಕನಿಕರದ ಒಪ್ಪಿಗೆ ಕೊಡುತ್ತಿದ್ದರು. ಆದರದು ಚರ್ಚೆಯಾಗಬೇಕಿತ್ತು. ಶಾಸಕರು ಹಾಲಿ ಪಡೆಯುತ್ತಿರುವ ಸಂಬಳ ಸಾಲುತ್ತಿಲ್ಲ, ಅಜ್ಜಿ ಹೊಸೆದ ದಾರವೆಲ್ಲಾ ಅಜ್ಜನ ಉಡದಾರಕ್ಕೆ ಸಾಲುತ್ತಿಲ್ಲ ಎಂಬಂತೆ, ಸರಕಾರ ಈಗ ಕೊಡುತ್ತಿರುವುದೆಲ್ಲಾ ಹಿಂದಿನ ಚುನಾವಣೆಗಾಗಿ ಮಾಡಿಕೊಂಡ ಸಾಲದ ಬಡ್ಡಿಗೇ ಸಾಲುತ್ತಿಲ್ಲ ಎಂಬುದು ಹಲವು ಶಾಸಕರ ಸುಳ್ಳು ಆಳಲಾಗಿತ್ತು. ವಾಸ್ತವವಾಗಿ ಈಗ ಸರಕಾರದ ಅಭಿವೃದ್ಧಿ ಕೆಲಸಗಳಲ್ಲಿ ನಲವತ್ತು ಪರಸೆಂಟು ಶಾಸಕರ ಪಟಾಲಂಗೆ ಸೇರುತ್ತಿದೆಯಂತೆ, ಇನ್ನ ರೆವಿನ್ಯೂ ಇಲಾಖೆ, ಅಬಕಾರಿ ಇಲಾಖೆ, ಕಾಡಿನ ಇಲಾಖೆ, ಗಣಿಗಾರಿಕೆ ಬಾಬ್ತು ಮತ್ತು ಪೊಲೀಸ್ ಠಾಣೆಗಳು ಒಪ್ಪಿಸುವ ಕಪ್ಪ ಕಾಣಿಕೆಯನ್ನ ಬರೆದುಕೊಂಡು ಟೋಟ್ಲು ಮಾಡಿದರೆ, ಈಗ ಸರಕಾರ ಗುಪ್ತವಾಗಿ ಮಂಜೂರು ಮಾಡಿಕೊಂಡ ಸಂಬಳದ ಮೊತ್ತ ಜುಜುಬಿ ಚಿಲ್ಲರೆ ಕಾಸಂತಲ್ಲಾ ಥೂತ್ತೇರಿ.

*******

ಈ ಶಾಸಕ ಮಂತ್ರಿ ಮಹೋದಯರ ಸವಲತ್ತಿನ ಹಣವನ್ನು ಈ ಸಮಯದಲ್ಲಿ ಹೆಚ್ಚು ಮಾಡಿಕೊಂಡದ್ದು ಜೀವಂತ ಮಿಕಗಳನ್ನ ಹರಿದು ತಿನ್ನುವಂತಹ ಹೈನಾಗಳ ಕೃತ್ಯವಾಗಿದೆಯಂತಲ್ಲಾ. ಸದರಿ ಸರಕಾರ ಪ್ರವಾಹದಿಂದ ಬೀದಿಗೆ ಬಿದ್ದ ಕುಟುಂಬಗಳ ಯೋಗಕ್ಷೇಮ ನೋಡಲಿಲ್ಲ. ಕೊರೊನಾದಿಂದ ನಿರ್ಗತಿಕರಾದವರಿಗೆ ಏನು ಮಾಡಿದರೆಂಬುದು ತಿಳಿಯಲಿಲ್ಲ. ಕೊರೊನಾ ಸಾವಿಗೆ ತುತ್ತಾಗಿ ಸತ್ತವರ ಮಕ್ಕಳು ಅನಾಥರಾಗಿ, ಆ ಮಕ್ಕಳು ಯಾವ ಸವಲತ್ತಿಗೆ ತುತ್ತಾದರೆಂಬ ಮಾಹಿತಿ ಯಾರಿಗೂ ಇಲ್ಲ. ಈ ನಡುವೆ ಸರಕಾರದ ಮಾಸಾಶನ ಕಾಯುತ್ತ ಕುಳಿತವರ ಕಣ್ಣು ಒದ್ದೆಯಾಗಿವೆ. ಅತಿಥಿ ಉಪನ್ಯಾಸಕರು, ಪ್ರವಾಹಕ್ಕೆ ಸಿಕ್ಕವರು ನಡುಗೋಡೆಯ ಮೇಲೆ ನಿಂತಂತೆ ದಿಕ್ಕುಕಾಣದಂತಹ ಕಣ್ಣುಗಳಿಂದ ಸರಕಾರದ ಕಡೆ ನೋಡುತ್ತಿದ್ದಾರೆ. ಇನ್ನ ಮೂರುದಶಕದ ಹಿಂದೆ ಗ್ರಾಮಪಂಚಾಯ್ತಿ ಗ್ರಂಥಾಲಯಗಳಿಗೆ ಗೌರವಧನದಿಂದ ನೇಮಕವಾದ ಗ್ರಂಥಾಲಯ ಮೇಲ್ವಿಚಾರಕರು ಈಗ ಪಿಂಚಣಿಯಿಲ್ಲದೆ ನಿವೃತ್ತರಾಗುತ್ತಿದ್ದಾರೆ. ಕಡೆ ತಿಂಗಳ ಗೌರವಧನವಾದ ಹನ್ನೆರಡು ಸಾವಿರ ತೆಗೆದುಕೊಂಡು ಮುಂದೆ ಅವರ ಹೆಂಡತಿ ಮಕ್ಕಳ ಕತೆಯೇನು ಎಂದು ನೆನಸಿಕೊಂಡರೆ ಭಯವಾಗುತ್ತದೆ. ಪ್ರತಿ ಕೆಲಸಕ್ಕೂ ಫೈನಾನ್ಸ್ ಡಿಪಾರ್ಟ್‌ಮೆಂಟಿನ ಒಪ್ಪಿಗೆ ಬೇಕಾಗುತ್ತದೆಂಬ ತಕರಾರು ತೆಗೆವ ಈ ಜನಪ್ರತಿನಿಧಿಗಳು ಇಂತಹ ಭೀಕರ ಸ್ಥಿತಿಯಲ್ಲಿಯೂ ತಮ್ಮ ಸವಲತ್ತುಗಳನ್ನು ಏರಿಸಿಕೊಂಡು ನಿಜಕ್ಕೂ ಸರಕಾರದ ಖಜಾನೆ ಕಳ್ಳರಾದರಂತಲ್ಲಾ ಥೂತ್ತೇರಿ.

Hijab Live | ‘ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆಯಲ್ಲ’: ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರದ ವಾದ | NaanuGauri

********

 

ಹಿಜಾಬ್ ಬಟ್ಟೆಯ ವಿಷಯ ಕರ್ನಾಟಕದ ತುಂಬ ಹರಡಿದ ಸನ್ನಿವೇಶವನ್ನ ಬಳಸಿಕೊಂಡು ಕೇಸರಿ ವಸ್ತ್ರವನ್ನ ಕರ್ನಾಟಕದ ತುಂಬ ಹಾಸಲು ಕೊರಟ ಕೇಸರಿ ಕಂದಗಳು ಧರ್ಮಸ್ಥಳಕ್ಕೆ ಹೊರಟ ಶಿವಭಕ್ತಾದಿಗಳನ್ನು ಹಿಡಿದು ಕೇಸರಿ ವಸ್ತ್ರಕೊಟ್ಟು, ಜೊತೆಗೆ ಮಜ್ಜಿಗೆ ಪಾನಕ ಕೊಟ್ಟು ಕಳಿಸುತ್ತಿದ್ದಾರಂತಲ್ಲಾ. ಈ ಕಂದಗಳ ಈ ಶ್ರಮ ನೋಡಿದ ಕಾಂಗೈಗಳು ಕಂಗಾಲಾಗಿ ತಾವೇನು ಹಂಚಬೇಕೆಂಬುದು ಹೊಳೆಯದೆ, ಮೇಕೆದಾಟಿನ ಕಡೆ ಹೊರಟರಂತಲ್ಲಾ. ಅತ್ತ ಕೇಸರಿ ವಸ್ತ್ರ ವಿತರಣೆ ಇತ್ತ ಮೇಕೆದಾಟಿನ ಪಾದಯಾತ್ರೆ ನೋಡಿದ ಕುಮಾರಣ್ಣನವರು ಇವರಿಬ್ಬರದೂ ಅಧಿಕಾರ ದಾಹದ ನಡವಳಿಕೆ ಎಂದು ನಿರ್ಲಿಪ್ತವಾಗಿ ಹೇಳಿ, ಈಗೇನು ಮಾಡಬೇಕೆಂಬ ಗೊಂದಲಕ್ಕೆ ಬಿದ್ದರಂತಲ್ಲಾ. ಈ ನಡುವೆ ಕರ್ನಾಟಕದ ಕೆಲ ಬುದ್ಧಿಜೀವಿಗಳು, ನೋಡಿ ಎಡೂರಪ್ಪನವರು ಸಂಘಪರಿವಾರದಿಂದ ಬಂದವರು, ಆದರೂ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡುವಾಗ ಹಸಿರು ಶಾಲು ಹಾಕಿದ್ದರು, ಅದೇ ಬಸವರಾಜ ಬೊಮ್ಮಾಯಿ ಎಂಬ ವ್ಯಕ್ತಿ, ರಾಯಿಸ್ಟ್ ಬೊಮ್ಮಾಯಿ ಎಂದು ಹೆಸರಾಗಿದ್ದ ಎಸ್ಸಾರ್ ಬೊಮ್ಮಾಯಿ ಮಗ, ಈತನಿಗೂ ಕೇಸರಿ ಶಾಲಿಗೂ ಯಾವ ಸಂಬಂಧವೂ ಇಲ್ಲ, ಆದರೂ ಕೇಸರಿ ಶಾಲನ್ನ ಹೊದ್ದು ಕುಂಟುತ್ತ ನಡೆದದ್ದು ನಿಜವೊ ನಟನೆಯೋ ಎಂಬುದೇ ಗೊತ್ತಾಗುತ್ತಿಲ್ಲ, ಒಟ್ಟಿನಲ್ಲಿ ಇವರೊಬ್ಬ ಸೂತ್ರದ ಗೊಂಬೆ ಎಂದರಂತಲ್ಲಾ ಥೂತ್ತೇರಿ.

*******

ಶ್ರೀಕೃಷ್ಣರಾಜೇಂದ್ರ ಒಡೆಯರು ಗಾಂಧೀಜಿಯಿಂದ ರಾಜರ್ಷಿ ಎಂಬ ಹೆಸರು ಪಡೆದವರು. ಕಲೆ, ಸಾಹಿತ್ಯ, ಸಂಗೀತ ಮತ್ತು ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವರು. ಇಂತಹ ಮಹನೀಯರ ಮಹತ್ವದ ತೀರ್ಮಾನದಿಂದ ರಚನೆಗೊಂಡು ಮುನ್ನಡೆದ ಕನ್ನಡ ಸಾಹಿತ್ಯ ಪರಿಷತ್ತಿಗೆ ಗಂಡಾಂತರ ಬಂದಿದೆಯಂತಲ್ಲಾ. ಕನ್ನಡ ಸಾಹಿತ್ಯ ಪರಿಷತ್‌ಗೆ ಆಯ್ಕೆಯಾಗಿ ಬಂದ ಜೋಷಿ ಕನ್ನಡ ಸಾಹಿತ್ಯ ಪರಿಷತ್‌ಅನ್ನು ಬ್ರಾಹ್ಮಣೀಕರಿಸಲು ಮನಸ್ಸು ಮಾಡಿದ ದಿನದಿಂದಲೇ ಎಲ್ಲ ಕಾಯಿಲೆಗಳು ಪ್ರಾರಂಭವಾಗಿದೆಯಂತಲ್ಲಾ. ಕಳೆದ ಶತಮಾನದಿಂದ ನಿರಾತಂಕವಾಗಿ ತನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತ ಬಂದ ಸಾಹಿತ್ಯ ಪರಿಷತ್‌ಅನ್ನು ತನ್ನ ಪುರೋಹಿತಶಾಹಿ ಚಿಂತನೆಗಳಿಂದ ಬದಲಾಯಿಸಲು ಹೊರಟ ಜೋಷಿ ತಾನು ಗುರುಗೋವಿಂದರ ಸಂಬಂಧಿ ಎಂದು ಹೇಳಿಕೊಂಡಿದ್ದಾರೆ, ಗುರುಗೋವಿಂದರನ್ನ ಅವರ ಶಿಷ್ಯ ಶಿಶುನಾಳ ಶರೀಫರು “ವಜ್ರದ ಹರಳು” ಎಂದು ಕರೆದರು. ಅಂತಹ ವಜ್ರದ ಹರಳಿನ ವಂಶದ ಈತ ಮರಳಿನ ಕಣವಾಗುವ ಕಡೆ ನಡೆಯುವ ಮೊದಲು, ಕನ್ನಡ ಸಾಹಿತ್ಯ ಪರಂಪರೆಯ ನಡೆಯನ್ನ ಅವಲೋಕಿಸಬೇಕಿದೆಯಂತಲ್ಲಾ. ಅದಕ್ಕಿಂತ ಮೊದಲು ತಲೆಯಲ್ಲಿ ತುಂಬಿಕೊಂಡಿರುವ ಅಸಂಬದ್ಧ ಸಂಗತಿಗಳನ್ನು ಆಚೆಹಾಕಿ, ಮೈಸೂರು ಸ್ಯಾಂಡಲ್ ಸೋಪಿನಿಂದ ತೊಳೆದುಕೊಂಡು ಹೊಸದಾಗಿ ಯೋಚಿಸಬೇಕಿದೆಯಂತಲ್ಲಾ ಥೂತ್ತೇರಿ


ಇದನ್ನೂ ಓದಿ: ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....