Homeಅಂಕಣಗಳುಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

- Advertisement -
- Advertisement -

ಸಂತೆಯ ಗದ್ದಲದಲ್ಲಿ ಗಂಟು ಕಳ್ಳರು ತಾವು ಮಾಡುವ ಕೆಲಸವನ್ನ ನಿರಾತಂಕವಾಗಿ ಮಾಡಿ ಮುಗಿಸಿದಂತೆ ವಿಧಾನಸಭೆಯಲ್ಲಿ ಧರಣಿ, ಗೌಜು ಗದ್ದಲ ನಡೆಯುತ್ತಿದ್ದಾಗಲೇ, ಇತ್ತ ಶಾಸಕರು ಮಂತ್ರಿಗಳು ಮತ್ತು ಮುಖ್ಯಮಂತ್ರಿಯ ಸಂಬಳ ಹೆಚ್ಚಿಸುವ ಬಿಲ್ಲನ್ನು ಸದ್ದಿಲ್ಲದೆ ಜಾರಿಮಾಡಿಕೊಂಡರಂತಲ್ಲಾ. ಸಾಮಾನ್ಯವಾಗಿ ಜೇಬುಗಳ್ಳರು ಮಾತ್ರ ಇಂತಹ ಕೆಲಸ ಮಾಡುತ್ತಾರೆಂದು ಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಹಗಲುಗಳ್ಳರು ತಮ್ಮ ತುಟ್ಟಿಭತ್ಯೆಗಳನ್ನು ಏರಿಸಿಕೊಳ್ಳುವುದನ್ನು ಅನಾದಿಕಾಲದಿಂದ ನೋಡುತ್ತ ಬಂದಿದ್ದಾರೆ ಸಾಮಾನ್ಯ ಜನ. ಈಗಲೂ ಕೂಡ ಕನಿಕರದ ಒಪ್ಪಿಗೆ ಕೊಡುತ್ತಿದ್ದರು. ಆದರದು ಚರ್ಚೆಯಾಗಬೇಕಿತ್ತು. ಶಾಸಕರು ಹಾಲಿ ಪಡೆಯುತ್ತಿರುವ ಸಂಬಳ ಸಾಲುತ್ತಿಲ್ಲ, ಅಜ್ಜಿ ಹೊಸೆದ ದಾರವೆಲ್ಲಾ ಅಜ್ಜನ ಉಡದಾರಕ್ಕೆ ಸಾಲುತ್ತಿಲ್ಲ ಎಂಬಂತೆ, ಸರಕಾರ ಈಗ ಕೊಡುತ್ತಿರುವುದೆಲ್ಲಾ ಹಿಂದಿನ ಚುನಾವಣೆಗಾಗಿ ಮಾಡಿಕೊಂಡ ಸಾಲದ ಬಡ್ಡಿಗೇ ಸಾಲುತ್ತಿಲ್ಲ ಎಂಬುದು ಹಲವು ಶಾಸಕರ ಸುಳ್ಳು ಆಳಲಾಗಿತ್ತು. ವಾಸ್ತವವಾಗಿ ಈಗ ಸರಕಾರದ ಅಭಿವೃದ್ಧಿ ಕೆಲಸಗಳಲ್ಲಿ ನಲವತ್ತು ಪರಸೆಂಟು ಶಾಸಕರ ಪಟಾಲಂಗೆ ಸೇರುತ್ತಿದೆಯಂತೆ, ಇನ್ನ ರೆವಿನ್ಯೂ ಇಲಾಖೆ, ಅಬಕಾರಿ ಇಲಾಖೆ, ಕಾಡಿನ ಇಲಾಖೆ, ಗಣಿಗಾರಿಕೆ ಬಾಬ್ತು ಮತ್ತು ಪೊಲೀಸ್ ಠಾಣೆಗಳು ಒಪ್ಪಿಸುವ ಕಪ್ಪ ಕಾಣಿಕೆಯನ್ನ ಬರೆದುಕೊಂಡು ಟೋಟ್ಲು ಮಾಡಿದರೆ, ಈಗ ಸರಕಾರ ಗುಪ್ತವಾಗಿ ಮಂಜೂರು ಮಾಡಿಕೊಂಡ ಸಂಬಳದ ಮೊತ್ತ ಜುಜುಬಿ ಚಿಲ್ಲರೆ ಕಾಸಂತಲ್ಲಾ ಥೂತ್ತೇರಿ.

*******

ಈ ಶಾಸಕ ಮಂತ್ರಿ ಮಹೋದಯರ ಸವಲತ್ತಿನ ಹಣವನ್ನು ಈ ಸಮಯದಲ್ಲಿ ಹೆಚ್ಚು ಮಾಡಿಕೊಂಡದ್ದು ಜೀವಂತ ಮಿಕಗಳನ್ನ ಹರಿದು ತಿನ್ನುವಂತಹ ಹೈನಾಗಳ ಕೃತ್ಯವಾಗಿದೆಯಂತಲ್ಲಾ. ಸದರಿ ಸರಕಾರ ಪ್ರವಾಹದಿಂದ ಬೀದಿಗೆ ಬಿದ್ದ ಕುಟುಂಬಗಳ ಯೋಗಕ್ಷೇಮ ನೋಡಲಿಲ್ಲ. ಕೊರೊನಾದಿಂದ ನಿರ್ಗತಿಕರಾದವರಿಗೆ ಏನು ಮಾಡಿದರೆಂಬುದು ತಿಳಿಯಲಿಲ್ಲ. ಕೊರೊನಾ ಸಾವಿಗೆ ತುತ್ತಾಗಿ ಸತ್ತವರ ಮಕ್ಕಳು ಅನಾಥರಾಗಿ, ಆ ಮಕ್ಕಳು ಯಾವ ಸವಲತ್ತಿಗೆ ತುತ್ತಾದರೆಂಬ ಮಾಹಿತಿ ಯಾರಿಗೂ ಇಲ್ಲ. ಈ ನಡುವೆ ಸರಕಾರದ ಮಾಸಾಶನ ಕಾಯುತ್ತ ಕುಳಿತವರ ಕಣ್ಣು ಒದ್ದೆಯಾಗಿವೆ. ಅತಿಥಿ ಉಪನ್ಯಾಸಕರು, ಪ್ರವಾಹಕ್ಕೆ ಸಿಕ್ಕವರು ನಡುಗೋಡೆಯ ಮೇಲೆ ನಿಂತಂತೆ ದಿಕ್ಕುಕಾಣದಂತಹ ಕಣ್ಣುಗಳಿಂದ ಸರಕಾರದ ಕಡೆ ನೋಡುತ್ತಿದ್ದಾರೆ. ಇನ್ನ ಮೂರುದಶಕದ ಹಿಂದೆ ಗ್ರಾಮಪಂಚಾಯ್ತಿ ಗ್ರಂಥಾಲಯಗಳಿಗೆ ಗೌರವಧನದಿಂದ ನೇಮಕವಾದ ಗ್ರಂಥಾಲಯ ಮೇಲ್ವಿಚಾರಕರು ಈಗ ಪಿಂಚಣಿಯಿಲ್ಲದೆ ನಿವೃತ್ತರಾಗುತ್ತಿದ್ದಾರೆ. ಕಡೆ ತಿಂಗಳ ಗೌರವಧನವಾದ ಹನ್ನೆರಡು ಸಾವಿರ ತೆಗೆದುಕೊಂಡು ಮುಂದೆ ಅವರ ಹೆಂಡತಿ ಮಕ್ಕಳ ಕತೆಯೇನು ಎಂದು ನೆನಸಿಕೊಂಡರೆ ಭಯವಾಗುತ್ತದೆ. ಪ್ರತಿ ಕೆಲಸಕ್ಕೂ ಫೈನಾನ್ಸ್ ಡಿಪಾರ್ಟ್‌ಮೆಂಟಿನ ಒಪ್ಪಿಗೆ ಬೇಕಾಗುತ್ತದೆಂಬ ತಕರಾರು ತೆಗೆವ ಈ ಜನಪ್ರತಿನಿಧಿಗಳು ಇಂತಹ ಭೀಕರ ಸ್ಥಿತಿಯಲ್ಲಿಯೂ ತಮ್ಮ ಸವಲತ್ತುಗಳನ್ನು ಏರಿಸಿಕೊಂಡು ನಿಜಕ್ಕೂ ಸರಕಾರದ ಖಜಾನೆ ಕಳ್ಳರಾದರಂತಲ್ಲಾ ಥೂತ್ತೇರಿ.

Hijab Live | ‘ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆಯಲ್ಲ’: ನ್ಯಾಯಾಲಯದಲ್ಲಿ ರಾಜ್ಯ ಸರ್ಕಾರದ ವಾದ | NaanuGauri

********

 

ಹಿಜಾಬ್ ಬಟ್ಟೆಯ ವಿಷಯ ಕರ್ನಾಟಕದ ತುಂಬ ಹರಡಿದ ಸನ್ನಿವೇಶವನ್ನ ಬಳಸಿಕೊಂಡು ಕೇಸರಿ ವಸ್ತ್ರವನ್ನ ಕರ್ನಾಟಕದ ತುಂಬ ಹಾಸಲು ಕೊರಟ ಕೇಸರಿ ಕಂದಗಳು ಧರ್ಮಸ್ಥಳಕ್ಕೆ ಹೊರಟ ಶಿವಭಕ್ತಾದಿಗಳನ್ನು ಹಿಡಿದು ಕೇಸರಿ ವಸ್ತ್ರಕೊಟ್ಟು, ಜೊತೆಗೆ ಮಜ್ಜಿಗೆ ಪಾನಕ ಕೊಟ್ಟು ಕಳಿಸುತ್ತಿದ್ದಾರಂತಲ್ಲಾ. ಈ ಕಂದಗಳ ಈ ಶ್ರಮ ನೋಡಿದ ಕಾಂಗೈಗಳು ಕಂಗಾಲಾಗಿ ತಾವೇನು ಹಂಚಬೇಕೆಂಬುದು ಹೊಳೆಯದೆ, ಮೇಕೆದಾಟಿನ ಕಡೆ ಹೊರಟರಂತಲ್ಲಾ. ಅತ್ತ ಕೇಸರಿ ವಸ್ತ್ರ ವಿತರಣೆ ಇತ್ತ ಮೇಕೆದಾಟಿನ ಪಾದಯಾತ್ರೆ ನೋಡಿದ ಕುಮಾರಣ್ಣನವರು ಇವರಿಬ್ಬರದೂ ಅಧಿಕಾರ ದಾಹದ ನಡವಳಿಕೆ ಎಂದು ನಿರ್ಲಿಪ್ತವಾಗಿ ಹೇಳಿ, ಈಗೇನು ಮಾಡಬೇಕೆಂಬ ಗೊಂದಲಕ್ಕೆ ಬಿದ್ದರಂತಲ್ಲಾ. ಈ ನಡುವೆ ಕರ್ನಾಟಕದ ಕೆಲ ಬುದ್ಧಿಜೀವಿಗಳು, ನೋಡಿ ಎಡೂರಪ್ಪನವರು ಸಂಘಪರಿವಾರದಿಂದ ಬಂದವರು, ಆದರೂ ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡುವಾಗ ಹಸಿರು ಶಾಲು ಹಾಕಿದ್ದರು, ಅದೇ ಬಸವರಾಜ ಬೊಮ್ಮಾಯಿ ಎಂಬ ವ್ಯಕ್ತಿ, ರಾಯಿಸ್ಟ್ ಬೊಮ್ಮಾಯಿ ಎಂದು ಹೆಸರಾಗಿದ್ದ ಎಸ್ಸಾರ್ ಬೊಮ್ಮಾಯಿ ಮಗ, ಈತನಿಗೂ ಕೇಸರಿ ಶಾಲಿಗೂ ಯಾವ ಸಂಬಂಧವೂ ಇಲ್ಲ, ಆದರೂ ಕೇಸರಿ ಶಾಲನ್ನ ಹೊದ್ದು ಕುಂಟುತ್ತ ನಡೆದದ್ದು ನಿಜವೊ ನಟನೆಯೋ ಎಂಬುದೇ ಗೊತ್ತಾಗುತ್ತಿಲ್ಲ, ಒಟ್ಟಿನಲ್ಲಿ ಇವರೊಬ್ಬ ಸೂತ್ರದ ಗೊಂಬೆ ಎಂದರಂತಲ್ಲಾ ಥೂತ್ತೇರಿ.

*******

ಶ್ರೀಕೃಷ್ಣರಾಜೇಂದ್ರ ಒಡೆಯರು ಗಾಂಧೀಜಿಯಿಂದ ರಾಜರ್ಷಿ ಎಂಬ ಹೆಸರು ಪಡೆದವರು. ಕಲೆ, ಸಾಹಿತ್ಯ, ಸಂಗೀತ ಮತ್ತು ಈ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವರು. ಇಂತಹ ಮಹನೀಯರ ಮಹತ್ವದ ತೀರ್ಮಾನದಿಂದ ರಚನೆಗೊಂಡು ಮುನ್ನಡೆದ ಕನ್ನಡ ಸಾಹಿತ್ಯ ಪರಿಷತ್ತಿಗೆ ಗಂಡಾಂತರ ಬಂದಿದೆಯಂತಲ್ಲಾ. ಕನ್ನಡ ಸಾಹಿತ್ಯ ಪರಿಷತ್‌ಗೆ ಆಯ್ಕೆಯಾಗಿ ಬಂದ ಜೋಷಿ ಕನ್ನಡ ಸಾಹಿತ್ಯ ಪರಿಷತ್‌ಅನ್ನು ಬ್ರಾಹ್ಮಣೀಕರಿಸಲು ಮನಸ್ಸು ಮಾಡಿದ ದಿನದಿಂದಲೇ ಎಲ್ಲ ಕಾಯಿಲೆಗಳು ಪ್ರಾರಂಭವಾಗಿದೆಯಂತಲ್ಲಾ. ಕಳೆದ ಶತಮಾನದಿಂದ ನಿರಾತಂಕವಾಗಿ ತನ್ನ ಜವಾಬ್ದಾರಿಯನ್ನ ನಿರ್ವಹಿಸುತ್ತ ಬಂದ ಸಾಹಿತ್ಯ ಪರಿಷತ್‌ಅನ್ನು ತನ್ನ ಪುರೋಹಿತಶಾಹಿ ಚಿಂತನೆಗಳಿಂದ ಬದಲಾಯಿಸಲು ಹೊರಟ ಜೋಷಿ ತಾನು ಗುರುಗೋವಿಂದರ ಸಂಬಂಧಿ ಎಂದು ಹೇಳಿಕೊಂಡಿದ್ದಾರೆ, ಗುರುಗೋವಿಂದರನ್ನ ಅವರ ಶಿಷ್ಯ ಶಿಶುನಾಳ ಶರೀಫರು “ವಜ್ರದ ಹರಳು” ಎಂದು ಕರೆದರು. ಅಂತಹ ವಜ್ರದ ಹರಳಿನ ವಂಶದ ಈತ ಮರಳಿನ ಕಣವಾಗುವ ಕಡೆ ನಡೆಯುವ ಮೊದಲು, ಕನ್ನಡ ಸಾಹಿತ್ಯ ಪರಂಪರೆಯ ನಡೆಯನ್ನ ಅವಲೋಕಿಸಬೇಕಿದೆಯಂತಲ್ಲಾ. ಅದಕ್ಕಿಂತ ಮೊದಲು ತಲೆಯಲ್ಲಿ ತುಂಬಿಕೊಂಡಿರುವ ಅಸಂಬದ್ಧ ಸಂಗತಿಗಳನ್ನು ಆಚೆಹಾಕಿ, ಮೈಸೂರು ಸ್ಯಾಂಡಲ್ ಸೋಪಿನಿಂದ ತೊಳೆದುಕೊಂಡು ಹೊಸದಾಗಿ ಯೋಚಿಸಬೇಕಿದೆಯಂತಲ್ಲಾ ಥೂತ್ತೇರಿ


ಇದನ್ನೂ ಓದಿ: ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...