Homeಅಂಕಣಗಳು’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

- Advertisement -
- Advertisement -

ಕಥಾ ರಚನೆಗೆ ಬೇಕಾದ ಸರಕು ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೂ ಕೂಡ, ಅದನ್ನು ಕಥೆಯಾಗಿಸುವ ನಿರೂಪಣಾ ಕೌಶಲ್ಯಕ್ಕೆ ಸಿದ್ಧತೆ ಮತ್ತು ಕಾರ್ಯಕ್ಷಮತೆಯ ಅಗತ್ಯವಿದೆ. ಅನಿಲ್ ಗುನ್ನಾಪುರ ಅವರ ’ಕಲ್ಲು ಹೂವಿನ ನೆರಳು’ ಸಂಕಲನದಲ್ಲಿ ಅಂತಹ ಕೌಶಲ್ಯದ ಛಾಯೆ ನಮಗೆ ಕಥೆಗಳ ಒಳಗಿಳಿದಂತೆ ಕಾಣತೊಡಗುತ್ತದೆ. ಕಥೆಗಾರನ ತನ್ಮಯತೆ ಮತ್ತು ಅಂತರಾಳದ ತುಡಿತಗಳಿಗೆ ಅಕ್ಷರದ ಬಣ್ಣ ಬಳಿದಾಗ, ಅದು ಕಲ್ಲು ಹೂವಿನ ನೆರಳಾಗಿ ವಿಶಿಷ್ಟವಾದ ಕಲಾಕೃತಿಯಾಗಿ ರೂಪುಗೊಳ್ಳುತ್ತದೆ. ತನ್ನ ಸುತ್ತಲಿನವರು ತಮ್ಮ ಬದುಕನ್ನು ಹೆಣೆದುಕೊಳ್ಳುವಂತೆಯೇ, ಕಥೆಗಾರ ಕಥೆಗಳ ಹೆಣೆಯುತ್ತ, ತನ್ನೊಳಗಿನ ಭಾವ ಪ್ರಪಂಚವನ್ನು ಲೋಕದೃಷ್ಟಿಯಿಂದ ಕಾಣಬಯಸುತ್ತಾನೆ. ಇಲ್ಲಿನ ಬಹುತೇಕ ಕಥೆಗಳು ಕೆಂಡದಂತೆ ಕಂಡರೂ ಕೂಡ ಮಂಜಿನ ಹಾಗೆ ತಣ್ಣನೆಯ ನೋವು, ಹತಾಶೆ, ಮೌನ ಮತ್ತು ಕ್ರೌರ್ಯದ ನಿಲುಗನ್ನಡಿಯೇ ಆಗಿವೆ. ಸುತ್ತಲಿನ ಲೋಕ ಮೀಮಾಂಸೆ ಒಂದೆಡೆಯಾದರೆ, ಬದುಕಿನ ಸಣ್ಣಸಣ್ಣ ತಿರುವುಗಳು ಕೂಡ ನೋವಿನ ನಗಾರಿ ಬಾರಿಸಲು ನಿಂತಿರುವಂತೆ ಕಾಣುವುದು ಇಲ್ಲಿನ ಕಥೆಗಳ ವಿಶೇಷ!

ಪ್ರತಿ ಕಥೆಯ ಸ್ಥಾಯಿಭಾವ, ಮೌನ ಮತ್ತು ಮುಗ್ಧತೆಯೇ ಆಗಿದ್ದರೂ, ಅದಕ್ಕಿರುವ ಸಂಚಾರಿ ಭಾವ ಮನೋಸಂಬಂಧವೆ ಆಗಿಬಿಡುತ್ತದೆ. ಕೊಳದೊಳಗೆ ಸಣ್ಣ ಕಲ್ಲು ಬಿದ್ದು ತರಂಗ ಎಬ್ಬಿಸುವ ಹಾಗೆ, ಸಣ್ಣದೊಂದು ಮಾತು, ಘಟನೆ, ಸ್ವಕಲ್ಪಿತ ವಿಚಾರಗಳಿಂದ ಮನಸ್ಸಿನಲ್ಲಿ ಏಳಬಹುದಾದ ತರಂಗಗಳ ಒಟ್ಟು ಮೊತ್ತವೇ ಈ ಕಥಾಗುಚ್ಚ ಎನ್ನಬಹುದು!

ಇಲ್ಲಿನ ಪ್ರತಿ ಕಥೆಗೂ ಅಂತರ್ ಸಂಬಂಧೀಯ ಗುಣ ಇದ್ದಂತೆ ಕಾಣುತ್ತಿದ್ದಂತೆಯೇ, ಇಲ್ಲವೆನಿಸಿಯೂಬಿಡುತ್ತದೆ. ’ಪರಿಮಳ’ ಕಥೆಯ ಪಮ್ಮಿಯೂ, ’ಗುಲ್ ಮೊಹರ್ ಹುಡುಗ’ನಾದ ಅಪ್ಪುವಿಗೂ ಸಾಮ್ಯತೆಯ ಕಲ್ಪಿಸಬಹುದು. ಇಬ್ಬರಲ್ಲೂ ಮುಗ್ಧತೆ ಸಾಮಾನ್ಯವೆನಿಸಿದರೂ, ಪಮ್ಮಿಗೆ ಸಂಬಂಧದ ಕುರಿತಿರುವ ಗೊಂದಲ ಅಪ್ಪುವಿಗಿಲ್ಲ.

ಆದರೆ, ’ಗುಲ್ ಮೊಹರ್ ಹುಡುಗ’ ಕಥೆಯಲ್ಲಿರುವ ಅರವಿಂದನಿಗೆ ಇರುವ ಲೈಂಗಿಕ ಆಸಕ್ತಿ ಹೆಂಡತಿಯಾದ ನಳಿನಿಯಲ್ಲಿ ಹೆಚ್ಚು ಕಾಣಿಸದು, ಅಂತೆಯೇ ’ಶ್ಯಾರಿಯ ಗಲ್ಲಾ ಡೆಬ್ಬಿ’ಯ ಬಾಯಕ್ಕನಿಗೆ ಇರುವ ಲೈಂಗಿಕ ಆಸಕ್ತಿ ಗಂಡ ಹುಚ್ಚಯ್ಯನಿಗೆ ಇಲ್ಲದಿರುವುದು ಒಂದು ರೀತಿಯ ವೈರುಧ್ಯವನ್ನು ಎದುರಿಟ್ಟ ಹಾಗಿದೆ. ಇದರಿಂದ ಪರಸ್ಪರ ಸಂಬಂಧಗಳ ನಡುವೆ ಬಿಟ್ಟಿರಬಹುದಾದ ಬಿರುಕು ಕೂಡ ಪ್ರಮುಖ ಪಾತ್ರವಹಿಸಿದೆ ಎನಿಸಬಹುದು. ’ಹುಚ್ಚಯ್ಯನ ಲೀಲೆ’ ಕಥೆಯಲ್ಲಿ ಬರುವ ಚೆನ್ನಪ್ಪನಿಗೂ ’ಕಮಲಜ್ಜಿ’ಗೂ ಇರಬಹುದಾದ ಉದಾರತೆಯ ಗುಣವು ಒಂದೇ ಅನ್ನಿಸಿದರೂ, ಚೆನ್ನಪ್ಪನದು ಊರ ಜನರ ಕುರಿತ ತನಗರಿವಿಲ್ಲದೆಯೇ ಬಂದಿರುವ ಅಘೋಷಿತ ಕಾಳಜಿಯಾದರೆ, ಕಮಲಜ್ಜಿಯದ್ದು ಮಗನ, ಮೊಮ್ಮಕ್ಕಳ ಕುರಿತ ಕೌಟುಂಬಿಕ ಕಾಳಜಿ, ಚೆನ್ನಪ್ಪ ಹುಚ್ಚಯ್ಯನಂತೆಯೇ ಆಧ್ಯಾತ್ಮದಲ್ಲಿ ಐಕ್ಯವಾದರೆ, ಕಮಲಜ್ಜಿ ಸಂಬಂಧಗಳ ಸೆಳೆತದಲ್ಲೆ ಮುಳುಗುತ್ತಾಳೆ.

ಅನಿಲ್ ಗುನ್ನಾಪುರ

ಇನ್ನೂ ’ಶ್ಯಾರಿಯ ಗಲ್ಲಾ ಡೆಬ್ಬಿ’ ಕಥೆಯಂತು ಓದುಗರ ಕಣ್ಣಂಚಿನಲ್ಲಿ ನೀರು ಚಿಮ್ಮಿಸಬಲ್ಲ ಅನಿರೀಕ್ಷಿತ ದುರಂತದ ಕಥೆ. ಬದುಕ ಕಟ್ಟಿಕೊಳ್ಳಲು ಊರಿಂದ ಊರಿಗೆ ಅಲೆಯುವ ಬದುಕಿನ ಬವಣೆ ಇಲ್ಲಿನ ಕೇಂದ್ರ ವಸ್ತು. ಬಾಯಕ್ಕನ ಬದುಕಿನ ಹಸಿವಿನೊಂದಿಗೆ, ಮಿಲನದ ಹಸಿವು, ಗಂಡ ಹುಚ್ಚಪ್ಪನ ಕುಡಿತದ ಹಸಿವು, ಮಗಳು ಶ್ಯಾರಿಯ ಅಕ್ಷರದ ಹಸಿವು ಅಲ್ಲದೇ ಕೊನೆಯಲ್ಲಿ ಅಪರಿಚಿತ ಆಸಾಮಿಯ ಅತ್ಯಾಚಾರದ ಹಸಿವಿನಿಂದಾಗಿ ಇಡೀ ಕುಟುಂಬವೇ ನರಳುವ ಮತ್ತು ಓದುಗರನ್ನು ವಿಚಿತ್ರ ಯಾತನೆಗೆ ಒಳಗು ಮಾಡುವ ಕಥೆಯಿದು.
ಇಲ್ಲಿನ ಎಂಟು ಕಥೆಗಳ ಪೈಕಿ ’ಚಿನ್ಮಯ ನಿಲಯ’ ಕಥೆಯ ವಸ್ತು ಕನ್ನಡ ಕಥಾ ಲೋಕಕ್ಕೆ ತೀರ ಹೊಸತು ಅನ್ನಿಸಿತು. ಬುದ್ಧಿಮಾಂದ್ಯರ ಲೈಂಗಿಕತೆಯ ಕುರಿತು ಮಿಶಲ್ ಫುಕೋ ಹೇಳಿದ ನಿಯಮವನ್ನು, ಕಥೆಗಾರ ಅರಿವಿದ್ದೋ, ಅರಿವಿಲ್ಲದೆಯೋ ಬಳಸಿಕೊಂಡಿದ್ದಾನೆ ಮತ್ತು ಯಶಸ್ವಿ ಕೂಡ ಆಗಿದ್ದಾನೆ. ಆ ಕಥೆಯ ನಿರೂಪಣೆ
ಕುತೂಹಲ ಅನಿಸುತ್ತದೆ, ಚಂಪಾ ಆಂಟಿ ಮತ್ತು ಸುಭಾಷ್ ಅಂಕಲ್‌ನ ಮನೆಯ ಕಥೆಯನ್ನು ಯಾರು ನಿರೂಪಣೆ ಮಾಡುತ್ತಿದ್ದಾರೆ ಎಂಬುದೇ ಗೊತ್ತಾಗುವುದಿಲ್ಲ. ಈ ಕಥೆಯಲ್ಲಿ ಬರುವ ಸಂಬಂಧಗಳ ಬಂಧ ಕೆಲವು ಸಲ ಬಿಗಿಯಾಗಿ, ಮತ್ತೂ ಗಟ್ಟಿಯಾಗಿ ಏಕತಾನತೆಯನ್ನು ಇಲ್ಲವಾಗಿಸುತ್ತದೆ. ಮೂವತ್ತೊಂದು ವರ್ಷದ ಚಿನ್ಮಯನ ಅಂಗಾಂಗವು ಚಂದ್ರವ್ವನ ಸ್ಪರ್ಷದಿಂದ ಜಾಗೃತವಾಗುವ ಮತ್ತು ಪರಸ್ಪರರು ಬೆರೆಯುವುದು ಅವನ ಬದುಕಿನ ಚೈತನ್ಯಕ್ಕೆ ಕಾರಣವಾಯಿತೇ? ಅಥವಾ ಅವನಲ್ಲಾದ ಬದಲಾವಣೆ ಮನುಷ್ಯ ಸಹಜವಾದದ್ದೆ? ಎಂಬ ಹಲವು ವಿಚಾರವನ್ನು ವಿವೇಚಿಸುವಂತೆ ಮಾಡುತ್ತ ನಿರೂಪಕ ನಿರ್ಗಮಿಸುತ್ತಾನೆ.

’ಚುಕ್ಕಿ ಕೇಳಿದ ಕತೆ’ ವಿಶೇಷವಾಗಿ ನಿರೂಪಿಸಿದ ಒಂದು ಕಥಾವಸ್ತು. ಕಥೆಯೊಳಗೊಂದು ಕಥೆ ಹೆಣೆಯುವ ಕುಸುರಿ ಕೆಲಸದಲ್ಲಿ ಕಥೆಗಾರ ಗೆದ್ದಿದ್ದಾನೆ. ’ಅವನಿ’ ಕಥೆಯೂ ಕೂಡ ಸಹಜ ಕುತೂಹಲದಿಂದ ಏನನ್ನೋ ಹೇಳಲುಹೋಗಿ, ಕೊನೆಗೆ ಏನೂ ಹೇಳದೆ ದೃಶ್ಯಗಳನ್ನಷ್ಟೆ ಎದುರಿಟ್ಟು ಸುಂದರ ಚಿತ್ರಾಕೃತಿಯಾಗಿ ನಿಂತುಬಿಡುತ್ತದೆ.

ಹೀಗೆ ಕಥೆಗಳ ಚೌಕಟ್ಟಿನಲ್ಲಿ ತುಂಬಬಹುದಾದ ಚಿತ್ರಗಳನ್ನು ಕಥೆಗಾರ ತನ್ನ ಅನುಭವದ ಕುಂಚದಿಂದ ಚಿತ್ರಿಸಲು ಪ್ರಯತ್ನಪಟ್ಟಿದ್ದಾನೆ. ಕುತೂಹಲದ ನಿರೂಪಣೆ ಮತ್ತು ಭಾಷಾ ಸೊಗಡಿನ ವೈಶಿಷ್ಟ್ಯತೆ ಆಕರ್ಷಕವಾಗಿದೆ. ಕಥೆಯ ಕೊನೆಯನ್ನು ಕೊನೆಯಾಗುವಂತೆಯೂ ಮತ್ತು ಕೊನೆಗಾಣದಂತೆಯೂ ಎಲ್ಲವನ್ನೂ ತಾನೆ ಹೇಳಿ ಮುಗಿಸಬೇಕೆಂಬ ವಾಚಾಳಿತನ ಕಥೆಗಾರನಿಗಿಲ್ಲ. ಒಟ್ಟಿನಲ್ಲಿ ಹೊಸ ತಲೆಮಾರಿನ ಕಥೆಗಳಿಗೆ ವಿಶೇಷ ಆಯಾಮ ಇರುವುದಂತೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....