Homeಅಂಕಣಗಳು’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

’ಕಲ್ಲು ಹೂವಿನ ನೆರಳು’: ತಾಜಾ ನಿರೂಪಣೆಯ ಮತ್ತು ಸಂವೇದನೆಯುಳ್ಳ ಗ್ರಹಿಕೆಯ ಕಥೆಗಳು

- Advertisement -
- Advertisement -

ಕಥಾ ರಚನೆಗೆ ಬೇಕಾದ ಸರಕು ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದರೂ ಕೂಡ, ಅದನ್ನು ಕಥೆಯಾಗಿಸುವ ನಿರೂಪಣಾ ಕೌಶಲ್ಯಕ್ಕೆ ಸಿದ್ಧತೆ ಮತ್ತು ಕಾರ್ಯಕ್ಷಮತೆಯ ಅಗತ್ಯವಿದೆ. ಅನಿಲ್ ಗುನ್ನಾಪುರ ಅವರ ’ಕಲ್ಲು ಹೂವಿನ ನೆರಳು’ ಸಂಕಲನದಲ್ಲಿ ಅಂತಹ ಕೌಶಲ್ಯದ ಛಾಯೆ ನಮಗೆ ಕಥೆಗಳ ಒಳಗಿಳಿದಂತೆ ಕಾಣತೊಡಗುತ್ತದೆ. ಕಥೆಗಾರನ ತನ್ಮಯತೆ ಮತ್ತು ಅಂತರಾಳದ ತುಡಿತಗಳಿಗೆ ಅಕ್ಷರದ ಬಣ್ಣ ಬಳಿದಾಗ, ಅದು ಕಲ್ಲು ಹೂವಿನ ನೆರಳಾಗಿ ವಿಶಿಷ್ಟವಾದ ಕಲಾಕೃತಿಯಾಗಿ ರೂಪುಗೊಳ್ಳುತ್ತದೆ. ತನ್ನ ಸುತ್ತಲಿನವರು ತಮ್ಮ ಬದುಕನ್ನು ಹೆಣೆದುಕೊಳ್ಳುವಂತೆಯೇ, ಕಥೆಗಾರ ಕಥೆಗಳ ಹೆಣೆಯುತ್ತ, ತನ್ನೊಳಗಿನ ಭಾವ ಪ್ರಪಂಚವನ್ನು ಲೋಕದೃಷ್ಟಿಯಿಂದ ಕಾಣಬಯಸುತ್ತಾನೆ. ಇಲ್ಲಿನ ಬಹುತೇಕ ಕಥೆಗಳು ಕೆಂಡದಂತೆ ಕಂಡರೂ ಕೂಡ ಮಂಜಿನ ಹಾಗೆ ತಣ್ಣನೆಯ ನೋವು, ಹತಾಶೆ, ಮೌನ ಮತ್ತು ಕ್ರೌರ್ಯದ ನಿಲುಗನ್ನಡಿಯೇ ಆಗಿವೆ. ಸುತ್ತಲಿನ ಲೋಕ ಮೀಮಾಂಸೆ ಒಂದೆಡೆಯಾದರೆ, ಬದುಕಿನ ಸಣ್ಣಸಣ್ಣ ತಿರುವುಗಳು ಕೂಡ ನೋವಿನ ನಗಾರಿ ಬಾರಿಸಲು ನಿಂತಿರುವಂತೆ ಕಾಣುವುದು ಇಲ್ಲಿನ ಕಥೆಗಳ ವಿಶೇಷ!

ಪ್ರತಿ ಕಥೆಯ ಸ್ಥಾಯಿಭಾವ, ಮೌನ ಮತ್ತು ಮುಗ್ಧತೆಯೇ ಆಗಿದ್ದರೂ, ಅದಕ್ಕಿರುವ ಸಂಚಾರಿ ಭಾವ ಮನೋಸಂಬಂಧವೆ ಆಗಿಬಿಡುತ್ತದೆ. ಕೊಳದೊಳಗೆ ಸಣ್ಣ ಕಲ್ಲು ಬಿದ್ದು ತರಂಗ ಎಬ್ಬಿಸುವ ಹಾಗೆ, ಸಣ್ಣದೊಂದು ಮಾತು, ಘಟನೆ, ಸ್ವಕಲ್ಪಿತ ವಿಚಾರಗಳಿಂದ ಮನಸ್ಸಿನಲ್ಲಿ ಏಳಬಹುದಾದ ತರಂಗಗಳ ಒಟ್ಟು ಮೊತ್ತವೇ ಈ ಕಥಾಗುಚ್ಚ ಎನ್ನಬಹುದು!

ಇಲ್ಲಿನ ಪ್ರತಿ ಕಥೆಗೂ ಅಂತರ್ ಸಂಬಂಧೀಯ ಗುಣ ಇದ್ದಂತೆ ಕಾಣುತ್ತಿದ್ದಂತೆಯೇ, ಇಲ್ಲವೆನಿಸಿಯೂಬಿಡುತ್ತದೆ. ’ಪರಿಮಳ’ ಕಥೆಯ ಪಮ್ಮಿಯೂ, ’ಗುಲ್ ಮೊಹರ್ ಹುಡುಗ’ನಾದ ಅಪ್ಪುವಿಗೂ ಸಾಮ್ಯತೆಯ ಕಲ್ಪಿಸಬಹುದು. ಇಬ್ಬರಲ್ಲೂ ಮುಗ್ಧತೆ ಸಾಮಾನ್ಯವೆನಿಸಿದರೂ, ಪಮ್ಮಿಗೆ ಸಂಬಂಧದ ಕುರಿತಿರುವ ಗೊಂದಲ ಅಪ್ಪುವಿಗಿಲ್ಲ.

ಆದರೆ, ’ಗುಲ್ ಮೊಹರ್ ಹುಡುಗ’ ಕಥೆಯಲ್ಲಿರುವ ಅರವಿಂದನಿಗೆ ಇರುವ ಲೈಂಗಿಕ ಆಸಕ್ತಿ ಹೆಂಡತಿಯಾದ ನಳಿನಿಯಲ್ಲಿ ಹೆಚ್ಚು ಕಾಣಿಸದು, ಅಂತೆಯೇ ’ಶ್ಯಾರಿಯ ಗಲ್ಲಾ ಡೆಬ್ಬಿ’ಯ ಬಾಯಕ್ಕನಿಗೆ ಇರುವ ಲೈಂಗಿಕ ಆಸಕ್ತಿ ಗಂಡ ಹುಚ್ಚಯ್ಯನಿಗೆ ಇಲ್ಲದಿರುವುದು ಒಂದು ರೀತಿಯ ವೈರುಧ್ಯವನ್ನು ಎದುರಿಟ್ಟ ಹಾಗಿದೆ. ಇದರಿಂದ ಪರಸ್ಪರ ಸಂಬಂಧಗಳ ನಡುವೆ ಬಿಟ್ಟಿರಬಹುದಾದ ಬಿರುಕು ಕೂಡ ಪ್ರಮುಖ ಪಾತ್ರವಹಿಸಿದೆ ಎನಿಸಬಹುದು. ’ಹುಚ್ಚಯ್ಯನ ಲೀಲೆ’ ಕಥೆಯಲ್ಲಿ ಬರುವ ಚೆನ್ನಪ್ಪನಿಗೂ ’ಕಮಲಜ್ಜಿ’ಗೂ ಇರಬಹುದಾದ ಉದಾರತೆಯ ಗುಣವು ಒಂದೇ ಅನ್ನಿಸಿದರೂ, ಚೆನ್ನಪ್ಪನದು ಊರ ಜನರ ಕುರಿತ ತನಗರಿವಿಲ್ಲದೆಯೇ ಬಂದಿರುವ ಅಘೋಷಿತ ಕಾಳಜಿಯಾದರೆ, ಕಮಲಜ್ಜಿಯದ್ದು ಮಗನ, ಮೊಮ್ಮಕ್ಕಳ ಕುರಿತ ಕೌಟುಂಬಿಕ ಕಾಳಜಿ, ಚೆನ್ನಪ್ಪ ಹುಚ್ಚಯ್ಯನಂತೆಯೇ ಆಧ್ಯಾತ್ಮದಲ್ಲಿ ಐಕ್ಯವಾದರೆ, ಕಮಲಜ್ಜಿ ಸಂಬಂಧಗಳ ಸೆಳೆತದಲ್ಲೆ ಮುಳುಗುತ್ತಾಳೆ.

ಅನಿಲ್ ಗುನ್ನಾಪುರ

ಇನ್ನೂ ’ಶ್ಯಾರಿಯ ಗಲ್ಲಾ ಡೆಬ್ಬಿ’ ಕಥೆಯಂತು ಓದುಗರ ಕಣ್ಣಂಚಿನಲ್ಲಿ ನೀರು ಚಿಮ್ಮಿಸಬಲ್ಲ ಅನಿರೀಕ್ಷಿತ ದುರಂತದ ಕಥೆ. ಬದುಕ ಕಟ್ಟಿಕೊಳ್ಳಲು ಊರಿಂದ ಊರಿಗೆ ಅಲೆಯುವ ಬದುಕಿನ ಬವಣೆ ಇಲ್ಲಿನ ಕೇಂದ್ರ ವಸ್ತು. ಬಾಯಕ್ಕನ ಬದುಕಿನ ಹಸಿವಿನೊಂದಿಗೆ, ಮಿಲನದ ಹಸಿವು, ಗಂಡ ಹುಚ್ಚಪ್ಪನ ಕುಡಿತದ ಹಸಿವು, ಮಗಳು ಶ್ಯಾರಿಯ ಅಕ್ಷರದ ಹಸಿವು ಅಲ್ಲದೇ ಕೊನೆಯಲ್ಲಿ ಅಪರಿಚಿತ ಆಸಾಮಿಯ ಅತ್ಯಾಚಾರದ ಹಸಿವಿನಿಂದಾಗಿ ಇಡೀ ಕುಟುಂಬವೇ ನರಳುವ ಮತ್ತು ಓದುಗರನ್ನು ವಿಚಿತ್ರ ಯಾತನೆಗೆ ಒಳಗು ಮಾಡುವ ಕಥೆಯಿದು.
ಇಲ್ಲಿನ ಎಂಟು ಕಥೆಗಳ ಪೈಕಿ ’ಚಿನ್ಮಯ ನಿಲಯ’ ಕಥೆಯ ವಸ್ತು ಕನ್ನಡ ಕಥಾ ಲೋಕಕ್ಕೆ ತೀರ ಹೊಸತು ಅನ್ನಿಸಿತು. ಬುದ್ಧಿಮಾಂದ್ಯರ ಲೈಂಗಿಕತೆಯ ಕುರಿತು ಮಿಶಲ್ ಫುಕೋ ಹೇಳಿದ ನಿಯಮವನ್ನು, ಕಥೆಗಾರ ಅರಿವಿದ್ದೋ, ಅರಿವಿಲ್ಲದೆಯೋ ಬಳಸಿಕೊಂಡಿದ್ದಾನೆ ಮತ್ತು ಯಶಸ್ವಿ ಕೂಡ ಆಗಿದ್ದಾನೆ. ಆ ಕಥೆಯ ನಿರೂಪಣೆ
ಕುತೂಹಲ ಅನಿಸುತ್ತದೆ, ಚಂಪಾ ಆಂಟಿ ಮತ್ತು ಸುಭಾಷ್ ಅಂಕಲ್‌ನ ಮನೆಯ ಕಥೆಯನ್ನು ಯಾರು ನಿರೂಪಣೆ ಮಾಡುತ್ತಿದ್ದಾರೆ ಎಂಬುದೇ ಗೊತ್ತಾಗುವುದಿಲ್ಲ. ಈ ಕಥೆಯಲ್ಲಿ ಬರುವ ಸಂಬಂಧಗಳ ಬಂಧ ಕೆಲವು ಸಲ ಬಿಗಿಯಾಗಿ, ಮತ್ತೂ ಗಟ್ಟಿಯಾಗಿ ಏಕತಾನತೆಯನ್ನು ಇಲ್ಲವಾಗಿಸುತ್ತದೆ. ಮೂವತ್ತೊಂದು ವರ್ಷದ ಚಿನ್ಮಯನ ಅಂಗಾಂಗವು ಚಂದ್ರವ್ವನ ಸ್ಪರ್ಷದಿಂದ ಜಾಗೃತವಾಗುವ ಮತ್ತು ಪರಸ್ಪರರು ಬೆರೆಯುವುದು ಅವನ ಬದುಕಿನ ಚೈತನ್ಯಕ್ಕೆ ಕಾರಣವಾಯಿತೇ? ಅಥವಾ ಅವನಲ್ಲಾದ ಬದಲಾವಣೆ ಮನುಷ್ಯ ಸಹಜವಾದದ್ದೆ? ಎಂಬ ಹಲವು ವಿಚಾರವನ್ನು ವಿವೇಚಿಸುವಂತೆ ಮಾಡುತ್ತ ನಿರೂಪಕ ನಿರ್ಗಮಿಸುತ್ತಾನೆ.

’ಚುಕ್ಕಿ ಕೇಳಿದ ಕತೆ’ ವಿಶೇಷವಾಗಿ ನಿರೂಪಿಸಿದ ಒಂದು ಕಥಾವಸ್ತು. ಕಥೆಯೊಳಗೊಂದು ಕಥೆ ಹೆಣೆಯುವ ಕುಸುರಿ ಕೆಲಸದಲ್ಲಿ ಕಥೆಗಾರ ಗೆದ್ದಿದ್ದಾನೆ. ’ಅವನಿ’ ಕಥೆಯೂ ಕೂಡ ಸಹಜ ಕುತೂಹಲದಿಂದ ಏನನ್ನೋ ಹೇಳಲುಹೋಗಿ, ಕೊನೆಗೆ ಏನೂ ಹೇಳದೆ ದೃಶ್ಯಗಳನ್ನಷ್ಟೆ ಎದುರಿಟ್ಟು ಸುಂದರ ಚಿತ್ರಾಕೃತಿಯಾಗಿ ನಿಂತುಬಿಡುತ್ತದೆ.

ಹೀಗೆ ಕಥೆಗಳ ಚೌಕಟ್ಟಿನಲ್ಲಿ ತುಂಬಬಹುದಾದ ಚಿತ್ರಗಳನ್ನು ಕಥೆಗಾರ ತನ್ನ ಅನುಭವದ ಕುಂಚದಿಂದ ಚಿತ್ರಿಸಲು ಪ್ರಯತ್ನಪಟ್ಟಿದ್ದಾನೆ. ಕುತೂಹಲದ ನಿರೂಪಣೆ ಮತ್ತು ಭಾಷಾ ಸೊಗಡಿನ ವೈಶಿಷ್ಟ್ಯತೆ ಆಕರ್ಷಕವಾಗಿದೆ. ಕಥೆಯ ಕೊನೆಯನ್ನು ಕೊನೆಯಾಗುವಂತೆಯೂ ಮತ್ತು ಕೊನೆಗಾಣದಂತೆಯೂ ಎಲ್ಲವನ್ನೂ ತಾನೆ ಹೇಳಿ ಮುಗಿಸಬೇಕೆಂಬ ವಾಚಾಳಿತನ ಕಥೆಗಾರನಿಗಿಲ್ಲ. ಒಟ್ಟಿನಲ್ಲಿ ಹೊಸ ತಲೆಮಾರಿನ ಕಥೆಗಳಿಗೆ ವಿಶೇಷ ಆಯಾಮ ಇರುವುದಂತೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...