Homeಮುಖಪುಟಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

’ನಾನು ಸೋಫಾ​ ಮೇಲೆ ಕುಳಿತಿದ್ದನ್ನು ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ’ - ರಾಹುಲ್ ಗಾಂಧಿ

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನಲ್ಲಿ ನಡೆದ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಸೋಫಾ ಮೇಲೆ ಕುಳಿತಿದ್ದನ್ನು ಟೀಕಿಸಿದ ಆಡಳಿತ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಪ್ರಧಾನ ಮಂತ್ರಿಗಳು ಐಷಾರಾಮಿ ವಿಮಾನಗಳ ಖರೀದಿಗೆ ಸಾವಿರಾರು ಕೋಟಿಗಳನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಸ್ಟಮ್ ನಿರ್ಮಿತ ಬೋಯಿಂಗ್ ವಿಮಾನಗಳು “ಕೇವಲ ಒಂದು ಸೋಫಾ ಹೊಂದಿಲ್ಲ, ಅವರಿಗಾಗಿ ಇಡೀ ವಿಮಾನದ ತುಂಬಾ ಐಷಾರಾಮಿ ಹಾಸಿಗೆಗಳೇ ಇವೆ. ಈ ಬಗ್ಗೆ ನೀವು ಅವರನ್ನು ಯಾಕೆ ಪ್ರಶ್ನಿಸಬಾರದು..?” ಎಂದರು.

“ನಾನು ಸೋಫಾ​ ಮೇಲೆ ಕುಳಿತಿದ್ದನ್ನ ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ” ಎಂದು ಪಟಿಯಾಲದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ಬಿಕ್ಕಟ್ಟು ಹೆಚ್ಚಾಗಿದ್ದು, ಸರ್ಕಾರ ಅಗತ್ಯ ಶಸ್ತ್ರಾಸ್ತ್ರ, ಗುಂಡುಮದ್ದುಗಳು, ಇಂಧನ, ಆಹಾರ, ನೀರು ಮತ್ತು ಚಳಿಗಾಲದ ಅಗತ್ಯ ವಸ್ತುಗಳನ್ನು ಪೂರ್ವ ಲಡಾಖ್‌ಗೆ ಕಳಿಸುತ್ತಿದೆ. ಇಂತಹ ಸಮಯದಲ್ಲಿ ಎರಡು ವಿಶೇಷ ವಿಮಾನಗಳಿಗೆ ಇಷ್ಟೊಂದು ಹಣ ಖರ್ಚು ಮಾಡಿದ್ದಾರೆ. ಯಾಕೆಂದರೆ ತನ್ನ ಸ್ನೇಹಿತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಬಳಿ ಅಂಥದ್ದೇ ವಿಮಾನ ಇದೆ ಅನ್ನೋ ಕಾರಣಕ್ಕೆ ಎಂದು ಅವರು ಟ್ರೋಲ್ ಮಾಡಿದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಒಂದೆಡೆ ಪ್ರಧಾನಿ ಮೋದಿ 8,000 ಕೋಟಿ ರೂಪಾಯಿ ಮೌಲ್ಯದ ಎರಡು ವಿಮಾನಗಳನ್ನು ಖರೀದಿಸಿದ್ದಾರೆ. ಮತ್ತೊಂದೆಡೆ, ಚೀನಾ ನಮ್ಮ ಗಡಿಯಲ್ಲಿದೆ ಮತ್ತು ನಮ್ಮ ಭದ್ರತಾ ಪಡೆಗಳು ಚಳಿಯಲ್ಲಿ ನಡುಗುತ್ತಾ ನಮ್ಮನ್ನ ರಕ್ಷಣೆ ಮಾಡ್ತಿದ್ದಾರೆ” ಎಂದು ಅವರು ಹೇಳಿದರು, ಜೊತೆಗೆ ಸೋಫಾಗಳನ್ನು ತಮ್ಮ ಹಿತೈಷಿಗಳು ಅಲ್ಲಿ ಇರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇತ್ತ ಸರ್ಕಾರ ವಿಮಾನಗಳ ಖರೀದಿಯನ್ನು ಸಮರ್ಥಿಸಿಕೊಂಡಿದ್ದು, ವಿಮಾನಗಳು ಭಾರತೀಯ ವಾಯುಪಡೆಗೆ ಸೇರಿವೆ. ಅದು ಕೇವಲ ಪ್ರಧಾನಮಂತ್ರಿಯ ವಿಮಾನ ಅಲ್ಲ, ಇತರ ವಿವಿಐಪಿಗಳ ಬಳಕೆಗಾಗಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ತಿಂಗಳ ಆರಂಭದಲ್ಲಿ ಅಮೆರಿಕಾದಿಂದ ದೆಹಲಿಗೆ ಬಂದಿಳಿದಿತ್ತು.

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನು ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನು ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...