Homeಮುಖಪುಟಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

ಮೋದಿಯ ₹8000 ಕೋಟಿ ವಿಮಾನದ ಬಗ್ಗೆ ಪ್ರಶ್ನೆ ಯಾಕಿಲ್ಲ?- ರಾಹುಲ್ ಗಾಂಧಿ

’ನಾನು ಸೋಫಾ​ ಮೇಲೆ ಕುಳಿತಿದ್ದನ್ನು ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ’ - ರಾಹುಲ್ ಗಾಂಧಿ

- Advertisement -
- Advertisement -

ವಿವಾದಿತ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನಲ್ಲಿ ನಡೆದ ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಸೋಫಾ ಮೇಲೆ ಕುಳಿತಿದ್ದನ್ನು ಟೀಕಿಸಿದ ಆಡಳಿತ ಪಕ್ಷಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಪ್ರಧಾನ ಮಂತ್ರಿಗಳು ಐಷಾರಾಮಿ ವಿಮಾನಗಳ ಖರೀದಿಗೆ ಸಾವಿರಾರು ಕೋಟಿಗಳನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಸ್ಟಮ್ ನಿರ್ಮಿತ ಬೋಯಿಂಗ್ ವಿಮಾನಗಳು “ಕೇವಲ ಒಂದು ಸೋಫಾ ಹೊಂದಿಲ್ಲ, ಅವರಿಗಾಗಿ ಇಡೀ ವಿಮಾನದ ತುಂಬಾ ಐಷಾರಾಮಿ ಹಾಸಿಗೆಗಳೇ ಇವೆ. ಈ ಬಗ್ಗೆ ನೀವು ಅವರನ್ನು ಯಾಕೆ ಪ್ರಶ್ನಿಸಬಾರದು..?” ಎಂದರು.

“ನಾನು ಸೋಫಾ​ ಮೇಲೆ ಕುಳಿತಿದ್ದನ್ನ ಎಲ್ಲರೂ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಿದ ಬೋಯಿಂಗ್ 777 ಬಗ್ಗೆ ಯಾರೂ ಕೇಳುತ್ತಿಲ್ಲ ಎಂಬುದು ವಿಚಿತ್ರ” ಎಂದು ಪಟಿಯಾಲದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಆಗಮಿಸಿದ ಪ್ರಧಾನಿಯ ಪ್ರಯಾಣಕ್ಕೆಂದೆ ವಿಶೇಷವಾಗಿ ತಯಾರಾದ ವಿಮಾನ!

ಭಾರತ-ಚೀನಾ ಗಡಿಯಲ್ಲಿ ಚೀನಾದೊಂದಿಗೆ ಬಿಕ್ಕಟ್ಟು ಹೆಚ್ಚಾಗಿದ್ದು, ಸರ್ಕಾರ ಅಗತ್ಯ ಶಸ್ತ್ರಾಸ್ತ್ರ, ಗುಂಡುಮದ್ದುಗಳು, ಇಂಧನ, ಆಹಾರ, ನೀರು ಮತ್ತು ಚಳಿಗಾಲದ ಅಗತ್ಯ ವಸ್ತುಗಳನ್ನು ಪೂರ್ವ ಲಡಾಖ್‌ಗೆ ಕಳಿಸುತ್ತಿದೆ. ಇಂತಹ ಸಮಯದಲ್ಲಿ ಎರಡು ವಿಶೇಷ ವಿಮಾನಗಳಿಗೆ ಇಷ್ಟೊಂದು ಹಣ ಖರ್ಚು ಮಾಡಿದ್ದಾರೆ. ಯಾಕೆಂದರೆ ತನ್ನ ಸ್ನೇಹಿತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಬಳಿ ಅಂಥದ್ದೇ ವಿಮಾನ ಇದೆ ಅನ್ನೋ ಕಾರಣಕ್ಕೆ ಎಂದು ಅವರು ಟ್ರೋಲ್ ಮಾಡಿದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಒಂದೆಡೆ ಪ್ರಧಾನಿ ಮೋದಿ 8,000 ಕೋಟಿ ರೂಪಾಯಿ ಮೌಲ್ಯದ ಎರಡು ವಿಮಾನಗಳನ್ನು ಖರೀದಿಸಿದ್ದಾರೆ. ಮತ್ತೊಂದೆಡೆ, ಚೀನಾ ನಮ್ಮ ಗಡಿಯಲ್ಲಿದೆ ಮತ್ತು ನಮ್ಮ ಭದ್ರತಾ ಪಡೆಗಳು ಚಳಿಯಲ್ಲಿ ನಡುಗುತ್ತಾ ನಮ್ಮನ್ನ ರಕ್ಷಣೆ ಮಾಡ್ತಿದ್ದಾರೆ” ಎಂದು ಅವರು ಹೇಳಿದರು, ಜೊತೆಗೆ ಸೋಫಾಗಳನ್ನು ತಮ್ಮ ಹಿತೈಷಿಗಳು ಅಲ್ಲಿ ಇರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಇತ್ತ ಸರ್ಕಾರ ವಿಮಾನಗಳ ಖರೀದಿಯನ್ನು ಸಮರ್ಥಿಸಿಕೊಂಡಿದ್ದು, ವಿಮಾನಗಳು ಭಾರತೀಯ ವಾಯುಪಡೆಗೆ ಸೇರಿವೆ. ಅದು ಕೇವಲ ಪ್ರಧಾನಮಂತ್ರಿಯ ವಿಮಾನ ಅಲ್ಲ, ಇತರ ವಿವಿಐಪಿಗಳ ಬಳಕೆಗಾಗಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಯಂತಹ ಗಣ್ಯವಕ್ತಿಗಳು ಪ್ರಯಾಣಿಸಲೆಂದೇ ವಿಶೇಷವಾಗಿ ತಯಾರಿಸಲಾಗಿರುವ B777(ಏರ್​ ಇಂಡಿಯಾ ಒನ್) ವಿಮಾನ ತಿಂಗಳ ಆರಂಭದಲ್ಲಿ ಅಮೆರಿಕಾದಿಂದ ದೆಹಲಿಗೆ ಬಂದಿಳಿದಿತ್ತು.

ಪ್ರಸ್ತುತ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಪ್ರಧಾನಿಗಳು ಏರ್​ ಇಂಡಿಯಾದ ಬಿ747 ವಿಮಾನವನ್ನ ಪ್ರಯಾಣಕ್ಕಾಗಿ ಬಳಸುತ್ತಿದ್ದು, ಇದನ್ನು ಏರ್​ ಇಂಡಿಯಾ ಪೈಲಟ್​ಗಳೇ ಚಾಲನೆ ಮಾಡುತ್ತಾರೆ. ಆದರೆ ಹೊಸದಾಗಿ ಆಗಮಿಸಿರುವ ವಿಶೇಷ ವಿಮಾನವನ್ನು ಏರ್​ ಇಂಡಿಯಾ ಪೈಲಟ್​ಗಳ ಬದಲಾಗಿ ಭಾರತೀಯ ವಾಯುಸೇನೆಯ ಪೈಲಟ್​​ಗಳು ಚಾಲನೆ ಮಾಡಲಿದ್ದಾರೆ.


ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...