Homeಮುಖಪುಟಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ...

ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

- Advertisement -
- Advertisement -

ನವೆಂಬರ್ 9, 2019 ರಂದು ಬಾಬರಿ ಮಸೀದಿ ಭೂ ವಿವಾದದ ತೀರ್ಪು ನೀಡಿದ ನಂತರ, ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪೀಠದ ಭಾಗವಾಗಿದ್ದ ಇತರ ನ್ಯಾಯಮೂರ್ತಿಗಳನ್ನು ಹೋಟೆಲ್ ತಾಜ್ ಮಾನ್ಸಿಂಗ್‌ಗೆ ಭೋಜನಕ್ಕೆ ಕರೆದೊಯ್ದು, ಅತ್ಯುತ್ತಮವಾದ ವೈನ್‌‌ ಕುಡಿಸಿದರು ಎಂದು ತನ್ನ ಆತ್ಮ ಚರಿತ್ರೆಯಲ್ಲಿ ಹೇಳಿದ್ದಾರೆ.

ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ರಂಜನ್‌ ಗೊಗೊಯ್, “ಜಸ್ಟಿಸ್ ಫಾರ್ ದಿ ಜಡ್ಜ್: ಆನ್ ಆಟೋಬಯೋಗ್ರಫಿ” ಎಂಬ ತಮ್ಮ ಆತ್ಮಚರಿತ್ರೆಯಲ್ಲಿ ವೃತ್ತಿಜೀವನಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ಘಟನೆಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ:ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of god | ಸಾಕ್ಷ್ಯಚಿತ್ರ ನೋಡಿ

ಬಾಬರಿ ಮಸೀದಿ ತೀರ್ಪು ನೀಡಿದ ನಂತರದ ಸಂಜೆಯ ಬಗ್ಗೆ ಉಲ್ಲೇಖಿಸಿ, “ತೀರ್ಪಿನ ನಂತರ, ಸೆಕ್ರೆಟರಿ ಜನರಲ್ ಅವರು ಅಶೋಕ ಚಕ್ರದ ಕೆಳಗೆ ಕೋರ್ಟ್‌ ನಂ 1 ರ ಹೊರಗಿನ ನ್ಯಾಯಾಧೀಶರ ಗ್ಯಾಲರಿಯಲ್ಲಿ ಫೋಟೋ ಸೆಷನ್ ಅನ್ನು ಆಯೋಜಿಸಿದರು. ಸಂಜೆ ನಾನು ತೀರ್ಪು ನೀಡಿದ ನ್ಯಾಯಮೂರ್ತಿಗಳನ್ನು ತಾಜ್ ಮಾನ್ಸಿಂಗ್ ಹೋಟೆಲ್‌ಗೆ ಊಟಕ್ಕೆ ಕರೆದುಕೊಂಡು ಹೋದೆ. ಅಲ್ಲಿ ಲಭ್ಯವಿರುವ ಅತ್ಯುತ್ತಮವಾದ ವೈನ್ ಬಾಟಲಿಯನ್ನು ಹಂಚಿಕೊಂಡು, ನಾವು ಚೈನೀಸ್ ಆಹಾರವನ್ನು ಸೇವಿಸಿದೆವು. ಹಿರಿಯವನಾಗಿ ನಾನೇ ಅಂದು ಬಿಲ್ಲನ್ನು ಪಾವತಿಸಿದೆ” ಎಂದು ಗೊಗೊಯ್ ಬರೆದಿದ್ದಾರೆ.

ರಂಜನ್‌ ಗೊಗೊಯ್‌ ಸುಪ್ರೀಂಕೋರ್ಟ್‌‌ನ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಾಬರಿ ಮಸೀದಿ ವಿವಾದದ ತೀರ್ಪು ನೀಡಿದ ಐದು ನ್ಯಾಯಾಮೂರ್ತಿಗಳ ಸಂವಿಧಾನ ಪೀಠದಲ್ಲಿ ಗೊಗೊಯ್ ನಂತರ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎಸ್‌.ಎ. ಬೋಬ್ಡೆ, ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಇದ್ದರು.

ರಂಜನ್‌ ಗೊಗೊಯ್ ಅವರು ತಮ್ಮ ಆತ್ಮಚರಿತ್ರೆಯಲ್ಲಿ ತನ್ನ ಮೇಲಿನ ಲೈಂಗಿಕ ಪ್ರಕರಣ, 2018 ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳ ಪತ್ರಿಕಾಗೋಷ್ಠಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬರೆದಿದ್ದಾರೆ.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...