Homeಮುಖಪುಟಗುರುವನ್ನು ಅರಸುವ ಕಲೆ: ಗುರುಪೂರ್ಣಿಮ ದಿನದ ಅಂಗವಾಗಿ ವಿಶೇಷ ಸ್ಟೋರಿ ಓದಿ

ಗುರುವನ್ನು ಅರಸುವ ಕಲೆ: ಗುರುಪೂರ್ಣಿಮ ದಿನದ ಅಂಗವಾಗಿ ವಿಶೇಷ ಸ್ಟೋರಿ ಓದಿ

ಅಕಸ್ಮಾತ್ ಗುರು ಮತ್ತು ದೇವರು ಇಬ್ಬರೂ ಏಕ ಕಾಲಕ್ಕೆ ಎದುರಾದರೆ ನಾನು ಯಾರ ಕಾಲಿಗೆ ಮೊದಲು ಬೀಳಲಿ ಎಂದು. (ಒಳ ಮನಸ್ಸು ಹೇಳುತ್ತದೆ) ಮೊದಲು ಗುರುಗಳ ಪಾದಕ್ಕೆ ಎರಗು ಏಕೆಂದರೆ ಗುರುಗಳಿಂದಲೇ ಆ ಗೋವಿಂದನ ದರ್ಶನ ಸಾಧ್ಯವಾಯಿತು ಎಂದು

- Advertisement -
- Advertisement -

ಪರಸ್ಪರ ವೈಯುಕ್ತಿಕ ಸಂಬಂಧಗಳ ಬಗ್ಗೆ ಲೇಖನ ಬರೆದಾಗ, ಕೆಲವು ಸಂಬಂಧಗಳು ವಿಶೇಷವಾಗಿರುತ್ತವೆ ಎಂದು ತಿಳಿಸಿದ್ದೆ. ಅವುಗಳಲ್ಲಿ ಗುರು-ಶಿಷ್ಯ ಸಂಬಂಧವೂ ಒಂದು.

ಗುರುಗಳು ಶಿಷ್ಯರನ್ನು ಹುಡುಕುತ್ತಿದ್ದರೆ, ಶಿಷ್ಯರು ಗುರುಗಳನ್ನು ಅರಸುತ್ತಿರುತ್ತಾರೆ. ಇಬ್ಬರ ಮಿಲನವೂ ತೀರ ಅಪರೂಪ ಮತ್ತು ಕೇವಲ ಆಕಸ್ಮಿಕ. ಹೆಚ್ಚಾಗಿ ಇದು ರಾಂಗ್ ನಂಬರ್ ಅಥವಾ ಮಿಸ್ಡ್ ಕಾಲ್ ಪ್ರಸಂಗಗಳೇ ಆಗಿರುತ್ತದೆ.

ಯಾರು ಈ ಗುರುಗಳು? ಮನೆ ಬಿಟ್ಟು ಮಠದಲ್ಲಿರುವ ಕಾವಿ ಧರಿಸಿದ ಸನ್ಯಾಸಿಗಳೇ? ಸರಕಾರಿ ಜಮೀನು ಕಬಳಿಸಿ, ರಾಜಕಾರಣಿಗಳ ಹಣವನ್ನು ಭದ್ರವಾಗಿರಿಸಿಕೊಂಡಿರುವ, ಸ್ವಿಸ್ ಬ್ಯಾಂಕ್ ಎಕ್ಸ್ಟೆನ್ಷನ್ ಕೌಂಟರ್ ನಡೆಸುತ್ತಿರುವ ಪ್ರವಚನಕಾರರೇ? ಸಾಮ್ರಾಜ್ಯ ಕಟ್ಟಿಕೊಂಡು ರಾಜಕೀಯ ಪಕ್ಷಗಳಿಗೆ ಮತಬ್ಯಾಂಕ್ ಸರಬರಾಜು ಮಾಡುತ್ತಿರುವ ಸ್ವಾಮೀಜಿಗಳೇ? ಮುಗ್ಧ ಜನರನ್ನು ದಾರಿತಪ್ಪಿಸಿ, ಮಾಡಬಾರದ್ದನ್ನು ಮಾಡಿ, ಜೈಲಿಗೆ ಹೋಗಿ ಕುಳಿತಿರುವ ಬಾಪೂ/ಬಾಬಾಗಳೇ? ನಾನು ಹೇಳುತ್ತಿರುವುದು ಇಂತಹ ಢೋಂಗಿಗಳ ಬಗ್ಗೆ ಅಲ್ಲ.

ಕಲಿಸಿದಾತಂ ವರ್ಣ ಮಾತ್ರಂ ಗುರು ಎಂದು ನಮ್ಮ ಭಾಷೆ ಹೇಳುತ್ತದೆ. ನಿನಗೆ ಒಂದು ಅಕ್ಷರ ಹೇಳಿಕೊಟ್ಟವರೂ ಸಹ ಗುರು ಎಂದು. ಅಂದ ಮಾತ್ರಕ್ಕೆ ಕೇವಲ ಒಂದಕ್ಷರ ಕಲಿಸಿದ ಮಾತ್ರಕ್ಕೆ ಅವರು ನಮ್ಮ ಸಂಪೂರ್ಣ ಜೀವನದ ಗುರುಗಳಾದರೇ? ಗುರುಗಳು ಇರಲೇ ಬೇಕೇ, ಅವರಿಲ್ಲದೆ ನಮಗೆ ಮೋಕ್ಷಕ್ಕೆ ದಾರಿಯೇ ಇಲ್ಲವೇ?

ನಮ್ಮ ಸಂಸ್ಕೃತಿ ಗುರುಗಳಿಗೆ ಬಹಳ ಉನ್ನತ ಸ್ಥಾನ ನೀಡಿದೆ. ಶ್ರೇಷ್ಠ ಕವಿ ಮತ್ತು ಭಕ್ತ ಕಬೀರ್ ದಾಸ್ ಹೇಳುತ್ತಾರೆ:

ಗುರು ಗೋವಿಂದ್ ದೋಊ ಖಡೇ ಕಾಕೆ ಲಾಗೌ ಪಾಯ್ |

ಬಲಿಹಾರೀ ಗುರು ಆಪನೇ ಗೋವಿಂದ್ ದಿಯೋ ಬತಾಯ್ ||

ಅರ್ಥಾತ್ (ಹೊರ ಮನಸ್ಸು ಪ್ರಶ್ನೆ ಮಾಡುತ್ತಿದೆ) ಅಕಸ್ಮಾತ್ ಗುರು ಮತ್ತು ದೇವರು ಇಬ್ಬರೂ ಏಕ ಕಾಲಕ್ಕೆ ಎದುರಾದರೆ ನಾನು ಯಾರ ಕಾಲಿಗೆ ಮೊದಲು ಬೀಳಲಿ ಎಂದು. (ಒಳ ಮನಸ್ಸು ಹೇಳುತ್ತದೆ) ಮೊದಲು ಗುರುಗಳ ಪಾದಕ್ಕೆ ಎರಗು ಏಕೆಂದರೆ ಗುರುಗಳಿಂದಲೇ ಆ ಗೋವಿಂದನ ದರ್ಶನ ಸಾಧ್ಯವಾಯಿತು ಎಂದು. ಹೀಗೆ ಗುರುಗಳನ್ನು ದೇವರಿಗಿಂತಲೂ ಎತ್ತರದ ಸ್ಥಾನದಲ್ಲಿ ನಾವು ನೋಡುತ್ತೇವೆ.

ನಮ್ಮ ತಾಯಿಯೇ ನಮಗೆಲ್ಲಾ ಮೊದಲ ಗುರು. ತಂದೆಯೂ ಸಹ ಗುರುವಿನ ಸ್ಥಾನದಲ್ಲಿದ್ದಾರೆ. ನಮ್ಮ ಶಾಲೆಯ ಶಿಕ್ಷಕರೂ ಸಹ ನಮಗೆ ಗುರುಗಳೇ. ಆದರೆ ನಿಜವಾದ, ನಾವು ಅರಸುತ್ತಿರುವ ಗುರು ಯಾರು? ಗುರುಗಳು ನಮಗೆ ಯಾವ ಕಾಲದಲ್ಲಿ ಯಾವ ರೂಪದಲ್ಲಿ ಸಿಗುತ್ತಾರೋ, ಕಾಣುತ್ತಾರೋ ಅದನ್ನು ಅಥವಾ ಯಾವಾಗ ನಮಗೆ ಯಾವ ಪಾಠ ಕಲಿಸುತ್ತಾರೆ ಅದನ್ನೂ ಹೇಳುವುದು ಸಾಧ್ಯವಿಲ್ಲ.

ನನ್ನ ಸ್ನೇಹಿತನೊಬ್ಬ ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿದ್ದ. ಅಲ್ಲಿನ ಪ್ರಾಚಾರ್ಯರು ಘನ ಪಂಡಿತರು ಮತ್ತು ಸಹಜಜ್ಞಾನಿಗಳು. ಒಳ್ಳೆಯ ವಿದ್ಯಾರ್ಥಿಯಾದ ಈತನನ್ನು ಕಂಡಾಗಲೆಲ್ಲಾ, ತಮ್ಮ ಕೊಠಡಿಗೆ ಕರೆದು, ಒಂದಿಷ್ಟು ಪುಡಿ ಅಥವಾ ಚೂರ್ಣ ಅಥವಾ ಲೇಹ್ಯ ಮುಂತಾದ ಆಯುರ್ವೇದದ ಔಷಧಿಯನ್ನು ಒಂದು ಕಾಗದದ ಮೇಲೆ ಹಾಕಿ, ಇವನಿಗೆ ಕೊಟ್ಟು ಅದನ್ನು ಸರಿಯಾಗಿ ತೂಕಮಾಡಿಸಿಕೊಂಡು ಬರಲು ಆದೇಶಿಸುತ್ತಿದ್ದರು. ಕಾಲೇಜಿನ ಹೊರಗೆ ಒಂದು ಸಣ್ಣ ಕಿರಾಣಿ ಅಂಗಡಿ ಇತ್ತು. ಆ ಹಳ್ಳಿಗೆ ಇದ್ದುದು ಒಂದೇ ಅಂಗಡಿಯಾದ್ದರಿಂದ ಯಾವಾಗಲೂ ಗ್ರಾಹಕರು ಇರುತ್ತಿದ್ದರು. ವ್ಯಾಪಾರವಿಲ್ಲದೆ ಸುಮ್ಮನೆ ಕೂತಿದ್ದಾಗ ಮಾತ್ರ, ಇಂತಹ (ಬಿಟ್ಟಿ) ತೂಕ ಮಾಡುವ ಕೆಲಸ ಅಂಗಡಿಯ ಮಾಲೀಕ ಮಾಡಿಕೊಡುತ್ತಿದ್ದ. ಮಿಕ್ಕಂತೆ ಇವನನ್ನು ಆತ ಕಣ್ಣೆತ್ತಿಯೂ ನೋಡುತ್ತಿರಲಿಲ್ಲ. ಈತನಿಗೆ ತುಂಬಾ ಮುಜುಗರವಾಗಿ, ಅವಶ್ಯಕತೆ ಇಲ್ಲದಿದ್ದರೂ, ಅಂಗಡಿಯಿಂದ ಏನಾದರೂ ಸೋಪು, ಬ್ಲೇಡು ಮುಂತಾದ ವಸ್ತುವನ್ನು ಖರೀದಿಸಿ, ಪ್ರಾಚಾರ್ಯರ ಬಿಟ್ಟಿ ಕೆಲಸ ಬೇಗನೇ ಮಾಡಿಸಿಕೊಳ್ಳುತ್ತಿದ್ದ. ನಿದಾನವಾಗಿ ಹಿಂತಿರುಗಿದರೆ ಪ್ರಾಚಾರ್ಯರಿಂದಲೂ ಒಂದೆರಡು ಮಾತು ಕೇಳಬೇಕಾಗುತ್ತಿತ್ತು. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ, ಆತ ಪ್ರಾಚಾರ್ಯಕರ ಕಣ್ಣಿಗೆ ಬೀಳದಂತೆ ಓಡಾಡುತ್ತಿದ್ದ ಆದರೆ ಅವರ ಹದ್ದಿನ ಕಣ್ಣಿನಿಂದ ಸದಾ ತಪ್ಪಿಸಿಕೊಳ್ಳುವುದೂ ಸಹ ಕಷ್ಟದ ಕೆಲಸವಾಗಿತ್ತು.

ಹಾಗೂ ಹೀಗೂ ಒಂದು ವರ್ಷ ಕಳೆದ ನಂತರ, ಆತ ರಜೆಯ ಮೇಲೆ ತನ್ನ ಊರಿಗೆ ಬಂದ. ಪ್ರಾಚಾರ್ಯರ ಬಿಟ್ಟಿ ಚಾಕರಿಯಿಂದ ಬೇಸತ್ತಿದ್ದ ಆತ ತನ್ನ ತಂದೆಯ ಹತ್ತಿರ ಕೇಳಿ ಹಣ ಪಡೆದು, ನಗರಕ್ಕೆ ಹೋಗಿ, ಒಂದು ಸಣ್ಣ ತೂಕದ ಯಂತ್ರ ಖರೀದಿಸಿದ. ಅದನ್ನು ಜೋಪಾನವಾಗಿ ತನ್ನೊಡನೆ ರಜೆ ಮುಗಿದಾಗ ಕಾಲೇಜಿಗೆ ತೆಗೆದುಕೊಂಡು ಹೋದ. ಇವನನ್ನು ಕಂಡಕೂಡಲೇ ಮತ್ತೆ ಪ್ರಾಚಾರ್ಯರು ಕರೆದು ಒಂದಿಷ್ಟು ಪುಡಿ ಕೊಟ್ಟು, ತೂಕ ಮಾಡಿಸಿಕೊಂಡು ಬರಲು ಹೇಳಿದರು. ಇವನು ತನ್ನ ಹಾಸ್ಟೆಲ್ ರೂಮಿಗೆ ಹೋಗಿ, ತೂಕದ ಯಂತ್ರವನ್ನು ಹೊರತೆಗೆದು, ಅದರಲ್ಲಿ ಸರಿಯಾಗಿ ಪುಡಿಯನ್ನು ತೂಕ ಮಾಡಿ, ಜೊತೆಗೆ ಯಂತ್ರವನ್ನೂ ತೆಗೆದುಕೊಂಡು, ಪ್ರಾಚಾರ್ಯರ ಕೊಠಡಿಗೆ ಹೋದ. ಆ ಯಂತ್ರವನ್ನು ಅವರಿಗೆ ಕಾಣಿಕೆಯಾಗಿ ಕೊಡುತ್ತಾ, ಇನ್ನು ಮೇಲೆ ಯಾವುದೇ ಸಣ್ಣ-ಪುಟ್ಟ ವಸ್ತುವನ್ನು ಇಲ್ಲೇ ತೂಗಬಹುದು ಎಂದು ಹೇಳಿದ. ಕೆಲಸದಿಂದ ತಪ್ಪಿಸಿಕೊಂಡ ಸಾಧನೆಯಿಂದ ಬೀಗುತ್ತಿದ್ದ ಇವನ ಮುಖಚರ್ಯೆ ಕಂಡು ಖಿನ್ನರಾದ ಪ್ರಾಚಾರ್ಯರು ಇವನ ಯಂತ್ರವನ್ನು ಒಂದು ಸಣ್ಣ ಪೆಟ್ಟಿಗೆ ತೆಗೆದು ಅದರಲ್ಲಿ ಈಗಾಗಲೇ ಇದ್ದ, ಇನ್ನೂ ಹಲವಾರು ತೂಕದ ಯಂತ್ರಗಳ ಜೊತೆಗೆ ಸೇರಿಸಿ ಬಾಗಿಲು ಹಾಕಿದರು. ಇವನ ಮುಖ ಆಗಲೇ ಬಿಳಿಚಿತ್ತು. ಪ್ರಾಚಾರ್ಯರ ಬಳಿ ಈಗಾಗಲೇ ಇಷ್ಟೊಂದು ಯಂತ್ರಗಳಿದ್ದರೆ ಏಕೆ ನನ್ನನ್ನುಕಂಡಾಗಲೆಲ್ಲಾ ಪುಡಿ ಇತ್ಯಾದಿಯನ್ನು ಹೊರಗಿನಿಂದ ತೂಕ ಮಾಡಿಸಿಕೊಂಡು ಬರಲು ಹೇಳುತ್ತಿದ್ದರು ಎಂಬುದು ಇವನಿಗೆ ಅರ್ಥವಾಗಲಿಲ್ಲ. ಇವನ ಮನಃಸ್ಥಿತಿ ಅರಿತ ಪ್ರಾಚಾರ್ಯರು ಸ್ವತಃ ಹೇಳಿದರು.

ಮಗೂ, ಆಯುರ್ವೇದದ ಔಷದಿಗಳನ್ನು ಮಾಡುವ ಸಂಹಿತದಲ್ಲಿ ನಾವು ವಿವಿಧ ಸಾಮಗ್ರಿಗಳನ್ನು ಸೇರಿಸುತ್ತೇವೆ. ಅವನ್ನು ಈಗಿನ ಗ್ರಾಂ ಲೆಕ್ಕದಲ್ಲಿ ಅಲ್ಲ, ನಮ್ಮ ಕಾಲದ ಸೇರು, ಪಂಚೇರು, ಪಾವು, ತೊಲ ಗುಲಗಂಜಿ ತೂಕದಲ್ಲಿ ಅಳೆಯುತ್ತೇವೆ. ಒಳ್ಳೆಯ ವೈದ್ಯನಾಗಬೇಕಿದ್ದಲ್ಲಿ ವಸ್ತುವನ್ನು ಕಣ್ಣಿನಲ್ಲಿ ಕರಾರುವಾಕ್ಕಾಗಿ ತೂಗುವ, ಅಳೆಯುವ ಶಕ್ತಿ ಬರಬೇಕು. ಅ ಶಕ್ತಿ ನಿನಗೆ ಸಿಗಲಿ ಎಂದು ನಿನಗೆ ತೂಕ ಮಾಡಿಸಿಕೊಂಡು ಬರಲು ಹೇಳುತ್ತಿದ್ದೆ. ನಿನಗೆ ತೂಕಕ್ಕೆ ವಸ್ತುವನ್ನು ಕೊಡುವ ಮುಂಚೆಯೇ ಅದರಲ್ಲಿ ಎಷ್ಟಿದೆ ಅನ್ನುವುದು ನನಗೆ ಗೊತ್ತಿರುತ್ತಿತ್ತು, ಹಾಗಾಗಿ ನೀನು ಸರಿಯಾಗಿ ತೂಕ ಮಾಡಿಸಿಕೊಂಡು ಬಂದೆಯೋ ಅಥವಾ ಸುಳ್ಳು ಹೇಳಿದೆಯೋ ಅದೂ ಸಹ ನನಗೆ ತಿಳಿಯುತ್ತಿತ್ತು. ನಿನ್ನ ಜ್ಞಾನಕ್ಕಾಗಿ ನಾನು ನಿನಗೆ ಕೆಲಸ ಹೇಳುತ್ತಿದ್ದೆನೇ ಹೊರತು, ನನ್ನ ಪ್ರಯೋಜನಕ್ಕಾಗಿ ಅಲ್ಲ. ಕೂಡಲೇ ಜ್ಞಾನೋದಯವಾದ ಆತ ಗುರುಗಳ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ. ಈಗ ನನ್ನ ಸ್ನೇಹಿತ ಆಯುರ್ವೇದ ಪಂಡಿತನಾಗಿ ಒಳ್ಳೆಯ ಹೆಸರು ಮತ್ತು ಸಂಪಾದನೆ ಎರಡೂ ಮಾಡಿಕೊಳ್ಳುತ್ತಿದ್ದಾನೆ.

ಹೀಗೆ ನಮಗೆ ಯಾವಾಗ ಗುರುಗಳ ಸಾನಿಧ್ಯ, ಸಾಕ್ಷಾತ್ಕಾರ, ಜ್ಞಾನ ಲಭ್ಯವಾಗುತ್ತದೋ, ಇಲ್ಲವೋ ಯಾರೂ ಹೇಳಲು ಬರುವುದಿಲ್ಲ. ಜೀವನದಲ್ಲಿ ನಮಗೆ ಕಾಲಕಾಲಕ್ಕೆ ಹಲವಾರು ಗುರುಗಳ ಅವಶ್ಯಕತೆ ಬರುತ್ತದೆ. ಸರಿಯಾದ ಗುರು ಸಿಗುವವರೆಗೆ ಅರಸುವ ಕೆಲಸ ತಪ್ಪುವುದಿಲ್ಲ.

ಶ್ರೀ ಗುರುಭ್ಯೋ ನಮಃ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...