Homeಮುಖಪುಟಗುರುವನ್ನು ಅರಸುವ ಕಲೆ: ಗುರುಪೂರ್ಣಿಮ ದಿನದ ಅಂಗವಾಗಿ ವಿಶೇಷ ಸ್ಟೋರಿ ಓದಿ

ಗುರುವನ್ನು ಅರಸುವ ಕಲೆ: ಗುರುಪೂರ್ಣಿಮ ದಿನದ ಅಂಗವಾಗಿ ವಿಶೇಷ ಸ್ಟೋರಿ ಓದಿ

ಅಕಸ್ಮಾತ್ ಗುರು ಮತ್ತು ದೇವರು ಇಬ್ಬರೂ ಏಕ ಕಾಲಕ್ಕೆ ಎದುರಾದರೆ ನಾನು ಯಾರ ಕಾಲಿಗೆ ಮೊದಲು ಬೀಳಲಿ ಎಂದು. (ಒಳ ಮನಸ್ಸು ಹೇಳುತ್ತದೆ) ಮೊದಲು ಗುರುಗಳ ಪಾದಕ್ಕೆ ಎರಗು ಏಕೆಂದರೆ ಗುರುಗಳಿಂದಲೇ ಆ ಗೋವಿಂದನ ದರ್ಶನ ಸಾಧ್ಯವಾಯಿತು ಎಂದು

- Advertisement -
- Advertisement -

ಪರಸ್ಪರ ವೈಯುಕ್ತಿಕ ಸಂಬಂಧಗಳ ಬಗ್ಗೆ ಲೇಖನ ಬರೆದಾಗ, ಕೆಲವು ಸಂಬಂಧಗಳು ವಿಶೇಷವಾಗಿರುತ್ತವೆ ಎಂದು ತಿಳಿಸಿದ್ದೆ. ಅವುಗಳಲ್ಲಿ ಗುರು-ಶಿಷ್ಯ ಸಂಬಂಧವೂ ಒಂದು.

ಗುರುಗಳು ಶಿಷ್ಯರನ್ನು ಹುಡುಕುತ್ತಿದ್ದರೆ, ಶಿಷ್ಯರು ಗುರುಗಳನ್ನು ಅರಸುತ್ತಿರುತ್ತಾರೆ. ಇಬ್ಬರ ಮಿಲನವೂ ತೀರ ಅಪರೂಪ ಮತ್ತು ಕೇವಲ ಆಕಸ್ಮಿಕ. ಹೆಚ್ಚಾಗಿ ಇದು ರಾಂಗ್ ನಂಬರ್ ಅಥವಾ ಮಿಸ್ಡ್ ಕಾಲ್ ಪ್ರಸಂಗಗಳೇ ಆಗಿರುತ್ತದೆ.

ಯಾರು ಈ ಗುರುಗಳು? ಮನೆ ಬಿಟ್ಟು ಮಠದಲ್ಲಿರುವ ಕಾವಿ ಧರಿಸಿದ ಸನ್ಯಾಸಿಗಳೇ? ಸರಕಾರಿ ಜಮೀನು ಕಬಳಿಸಿ, ರಾಜಕಾರಣಿಗಳ ಹಣವನ್ನು ಭದ್ರವಾಗಿರಿಸಿಕೊಂಡಿರುವ, ಸ್ವಿಸ್ ಬ್ಯಾಂಕ್ ಎಕ್ಸ್ಟೆನ್ಷನ್ ಕೌಂಟರ್ ನಡೆಸುತ್ತಿರುವ ಪ್ರವಚನಕಾರರೇ? ಸಾಮ್ರಾಜ್ಯ ಕಟ್ಟಿಕೊಂಡು ರಾಜಕೀಯ ಪಕ್ಷಗಳಿಗೆ ಮತಬ್ಯಾಂಕ್ ಸರಬರಾಜು ಮಾಡುತ್ತಿರುವ ಸ್ವಾಮೀಜಿಗಳೇ? ಮುಗ್ಧ ಜನರನ್ನು ದಾರಿತಪ್ಪಿಸಿ, ಮಾಡಬಾರದ್ದನ್ನು ಮಾಡಿ, ಜೈಲಿಗೆ ಹೋಗಿ ಕುಳಿತಿರುವ ಬಾಪೂ/ಬಾಬಾಗಳೇ? ನಾನು ಹೇಳುತ್ತಿರುವುದು ಇಂತಹ ಢೋಂಗಿಗಳ ಬಗ್ಗೆ ಅಲ್ಲ.

ಕಲಿಸಿದಾತಂ ವರ್ಣ ಮಾತ್ರಂ ಗುರು ಎಂದು ನಮ್ಮ ಭಾಷೆ ಹೇಳುತ್ತದೆ. ನಿನಗೆ ಒಂದು ಅಕ್ಷರ ಹೇಳಿಕೊಟ್ಟವರೂ ಸಹ ಗುರು ಎಂದು. ಅಂದ ಮಾತ್ರಕ್ಕೆ ಕೇವಲ ಒಂದಕ್ಷರ ಕಲಿಸಿದ ಮಾತ್ರಕ್ಕೆ ಅವರು ನಮ್ಮ ಸಂಪೂರ್ಣ ಜೀವನದ ಗುರುಗಳಾದರೇ? ಗುರುಗಳು ಇರಲೇ ಬೇಕೇ, ಅವರಿಲ್ಲದೆ ನಮಗೆ ಮೋಕ್ಷಕ್ಕೆ ದಾರಿಯೇ ಇಲ್ಲವೇ?

ನಮ್ಮ ಸಂಸ್ಕೃತಿ ಗುರುಗಳಿಗೆ ಬಹಳ ಉನ್ನತ ಸ್ಥಾನ ನೀಡಿದೆ. ಶ್ರೇಷ್ಠ ಕವಿ ಮತ್ತು ಭಕ್ತ ಕಬೀರ್ ದಾಸ್ ಹೇಳುತ್ತಾರೆ:

ಗುರು ಗೋವಿಂದ್ ದೋಊ ಖಡೇ ಕಾಕೆ ಲಾಗೌ ಪಾಯ್ |

ಬಲಿಹಾರೀ ಗುರು ಆಪನೇ ಗೋವಿಂದ್ ದಿಯೋ ಬತಾಯ್ ||

ಅರ್ಥಾತ್ (ಹೊರ ಮನಸ್ಸು ಪ್ರಶ್ನೆ ಮಾಡುತ್ತಿದೆ) ಅಕಸ್ಮಾತ್ ಗುರು ಮತ್ತು ದೇವರು ಇಬ್ಬರೂ ಏಕ ಕಾಲಕ್ಕೆ ಎದುರಾದರೆ ನಾನು ಯಾರ ಕಾಲಿಗೆ ಮೊದಲು ಬೀಳಲಿ ಎಂದು. (ಒಳ ಮನಸ್ಸು ಹೇಳುತ್ತದೆ) ಮೊದಲು ಗುರುಗಳ ಪಾದಕ್ಕೆ ಎರಗು ಏಕೆಂದರೆ ಗುರುಗಳಿಂದಲೇ ಆ ಗೋವಿಂದನ ದರ್ಶನ ಸಾಧ್ಯವಾಯಿತು ಎಂದು. ಹೀಗೆ ಗುರುಗಳನ್ನು ದೇವರಿಗಿಂತಲೂ ಎತ್ತರದ ಸ್ಥಾನದಲ್ಲಿ ನಾವು ನೋಡುತ್ತೇವೆ.

ನಮ್ಮ ತಾಯಿಯೇ ನಮಗೆಲ್ಲಾ ಮೊದಲ ಗುರು. ತಂದೆಯೂ ಸಹ ಗುರುವಿನ ಸ್ಥಾನದಲ್ಲಿದ್ದಾರೆ. ನಮ್ಮ ಶಾಲೆಯ ಶಿಕ್ಷಕರೂ ಸಹ ನಮಗೆ ಗುರುಗಳೇ. ಆದರೆ ನಿಜವಾದ, ನಾವು ಅರಸುತ್ತಿರುವ ಗುರು ಯಾರು? ಗುರುಗಳು ನಮಗೆ ಯಾವ ಕಾಲದಲ್ಲಿ ಯಾವ ರೂಪದಲ್ಲಿ ಸಿಗುತ್ತಾರೋ, ಕಾಣುತ್ತಾರೋ ಅದನ್ನು ಅಥವಾ ಯಾವಾಗ ನಮಗೆ ಯಾವ ಪಾಠ ಕಲಿಸುತ್ತಾರೆ ಅದನ್ನೂ ಹೇಳುವುದು ಸಾಧ್ಯವಿಲ್ಲ.

ನನ್ನ ಸ್ನೇಹಿತನೊಬ್ಬ ರಾಜ್ಯದ ಗ್ರಾಮೀಣ ಭಾಗದಲ್ಲಿರುವ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಿಕ್ಷಣ ಪಡೆಯುತ್ತಿದ್ದ. ಅಲ್ಲಿನ ಪ್ರಾಚಾರ್ಯರು ಘನ ಪಂಡಿತರು ಮತ್ತು ಸಹಜಜ್ಞಾನಿಗಳು. ಒಳ್ಳೆಯ ವಿದ್ಯಾರ್ಥಿಯಾದ ಈತನನ್ನು ಕಂಡಾಗಲೆಲ್ಲಾ, ತಮ್ಮ ಕೊಠಡಿಗೆ ಕರೆದು, ಒಂದಿಷ್ಟು ಪುಡಿ ಅಥವಾ ಚೂರ್ಣ ಅಥವಾ ಲೇಹ್ಯ ಮುಂತಾದ ಆಯುರ್ವೇದದ ಔಷಧಿಯನ್ನು ಒಂದು ಕಾಗದದ ಮೇಲೆ ಹಾಕಿ, ಇವನಿಗೆ ಕೊಟ್ಟು ಅದನ್ನು ಸರಿಯಾಗಿ ತೂಕಮಾಡಿಸಿಕೊಂಡು ಬರಲು ಆದೇಶಿಸುತ್ತಿದ್ದರು. ಕಾಲೇಜಿನ ಹೊರಗೆ ಒಂದು ಸಣ್ಣ ಕಿರಾಣಿ ಅಂಗಡಿ ಇತ್ತು. ಆ ಹಳ್ಳಿಗೆ ಇದ್ದುದು ಒಂದೇ ಅಂಗಡಿಯಾದ್ದರಿಂದ ಯಾವಾಗಲೂ ಗ್ರಾಹಕರು ಇರುತ್ತಿದ್ದರು. ವ್ಯಾಪಾರವಿಲ್ಲದೆ ಸುಮ್ಮನೆ ಕೂತಿದ್ದಾಗ ಮಾತ್ರ, ಇಂತಹ (ಬಿಟ್ಟಿ) ತೂಕ ಮಾಡುವ ಕೆಲಸ ಅಂಗಡಿಯ ಮಾಲೀಕ ಮಾಡಿಕೊಡುತ್ತಿದ್ದ. ಮಿಕ್ಕಂತೆ ಇವನನ್ನು ಆತ ಕಣ್ಣೆತ್ತಿಯೂ ನೋಡುತ್ತಿರಲಿಲ್ಲ. ಈತನಿಗೆ ತುಂಬಾ ಮುಜುಗರವಾಗಿ, ಅವಶ್ಯಕತೆ ಇಲ್ಲದಿದ್ದರೂ, ಅಂಗಡಿಯಿಂದ ಏನಾದರೂ ಸೋಪು, ಬ್ಲೇಡು ಮುಂತಾದ ವಸ್ತುವನ್ನು ಖರೀದಿಸಿ, ಪ್ರಾಚಾರ್ಯರ ಬಿಟ್ಟಿ ಕೆಲಸ ಬೇಗನೇ ಮಾಡಿಸಿಕೊಳ್ಳುತ್ತಿದ್ದ. ನಿದಾನವಾಗಿ ಹಿಂತಿರುಗಿದರೆ ಪ್ರಾಚಾರ್ಯರಿಂದಲೂ ಒಂದೆರಡು ಮಾತು ಕೇಳಬೇಕಾಗುತ್ತಿತ್ತು. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ, ಆತ ಪ್ರಾಚಾರ್ಯಕರ ಕಣ್ಣಿಗೆ ಬೀಳದಂತೆ ಓಡಾಡುತ್ತಿದ್ದ ಆದರೆ ಅವರ ಹದ್ದಿನ ಕಣ್ಣಿನಿಂದ ಸದಾ ತಪ್ಪಿಸಿಕೊಳ್ಳುವುದೂ ಸಹ ಕಷ್ಟದ ಕೆಲಸವಾಗಿತ್ತು.

ಹಾಗೂ ಹೀಗೂ ಒಂದು ವರ್ಷ ಕಳೆದ ನಂತರ, ಆತ ರಜೆಯ ಮೇಲೆ ತನ್ನ ಊರಿಗೆ ಬಂದ. ಪ್ರಾಚಾರ್ಯರ ಬಿಟ್ಟಿ ಚಾಕರಿಯಿಂದ ಬೇಸತ್ತಿದ್ದ ಆತ ತನ್ನ ತಂದೆಯ ಹತ್ತಿರ ಕೇಳಿ ಹಣ ಪಡೆದು, ನಗರಕ್ಕೆ ಹೋಗಿ, ಒಂದು ಸಣ್ಣ ತೂಕದ ಯಂತ್ರ ಖರೀದಿಸಿದ. ಅದನ್ನು ಜೋಪಾನವಾಗಿ ತನ್ನೊಡನೆ ರಜೆ ಮುಗಿದಾಗ ಕಾಲೇಜಿಗೆ ತೆಗೆದುಕೊಂಡು ಹೋದ. ಇವನನ್ನು ಕಂಡಕೂಡಲೇ ಮತ್ತೆ ಪ್ರಾಚಾರ್ಯರು ಕರೆದು ಒಂದಿಷ್ಟು ಪುಡಿ ಕೊಟ್ಟು, ತೂಕ ಮಾಡಿಸಿಕೊಂಡು ಬರಲು ಹೇಳಿದರು. ಇವನು ತನ್ನ ಹಾಸ್ಟೆಲ್ ರೂಮಿಗೆ ಹೋಗಿ, ತೂಕದ ಯಂತ್ರವನ್ನು ಹೊರತೆಗೆದು, ಅದರಲ್ಲಿ ಸರಿಯಾಗಿ ಪುಡಿಯನ್ನು ತೂಕ ಮಾಡಿ, ಜೊತೆಗೆ ಯಂತ್ರವನ್ನೂ ತೆಗೆದುಕೊಂಡು, ಪ್ರಾಚಾರ್ಯರ ಕೊಠಡಿಗೆ ಹೋದ. ಆ ಯಂತ್ರವನ್ನು ಅವರಿಗೆ ಕಾಣಿಕೆಯಾಗಿ ಕೊಡುತ್ತಾ, ಇನ್ನು ಮೇಲೆ ಯಾವುದೇ ಸಣ್ಣ-ಪುಟ್ಟ ವಸ್ತುವನ್ನು ಇಲ್ಲೇ ತೂಗಬಹುದು ಎಂದು ಹೇಳಿದ. ಕೆಲಸದಿಂದ ತಪ್ಪಿಸಿಕೊಂಡ ಸಾಧನೆಯಿಂದ ಬೀಗುತ್ತಿದ್ದ ಇವನ ಮುಖಚರ್ಯೆ ಕಂಡು ಖಿನ್ನರಾದ ಪ್ರಾಚಾರ್ಯರು ಇವನ ಯಂತ್ರವನ್ನು ಒಂದು ಸಣ್ಣ ಪೆಟ್ಟಿಗೆ ತೆಗೆದು ಅದರಲ್ಲಿ ಈಗಾಗಲೇ ಇದ್ದ, ಇನ್ನೂ ಹಲವಾರು ತೂಕದ ಯಂತ್ರಗಳ ಜೊತೆಗೆ ಸೇರಿಸಿ ಬಾಗಿಲು ಹಾಕಿದರು. ಇವನ ಮುಖ ಆಗಲೇ ಬಿಳಿಚಿತ್ತು. ಪ್ರಾಚಾರ್ಯರ ಬಳಿ ಈಗಾಗಲೇ ಇಷ್ಟೊಂದು ಯಂತ್ರಗಳಿದ್ದರೆ ಏಕೆ ನನ್ನನ್ನುಕಂಡಾಗಲೆಲ್ಲಾ ಪುಡಿ ಇತ್ಯಾದಿಯನ್ನು ಹೊರಗಿನಿಂದ ತೂಕ ಮಾಡಿಸಿಕೊಂಡು ಬರಲು ಹೇಳುತ್ತಿದ್ದರು ಎಂಬುದು ಇವನಿಗೆ ಅರ್ಥವಾಗಲಿಲ್ಲ. ಇವನ ಮನಃಸ್ಥಿತಿ ಅರಿತ ಪ್ರಾಚಾರ್ಯರು ಸ್ವತಃ ಹೇಳಿದರು.

ಮಗೂ, ಆಯುರ್ವೇದದ ಔಷದಿಗಳನ್ನು ಮಾಡುವ ಸಂಹಿತದಲ್ಲಿ ನಾವು ವಿವಿಧ ಸಾಮಗ್ರಿಗಳನ್ನು ಸೇರಿಸುತ್ತೇವೆ. ಅವನ್ನು ಈಗಿನ ಗ್ರಾಂ ಲೆಕ್ಕದಲ್ಲಿ ಅಲ್ಲ, ನಮ್ಮ ಕಾಲದ ಸೇರು, ಪಂಚೇರು, ಪಾವು, ತೊಲ ಗುಲಗಂಜಿ ತೂಕದಲ್ಲಿ ಅಳೆಯುತ್ತೇವೆ. ಒಳ್ಳೆಯ ವೈದ್ಯನಾಗಬೇಕಿದ್ದಲ್ಲಿ ವಸ್ತುವನ್ನು ಕಣ್ಣಿನಲ್ಲಿ ಕರಾರುವಾಕ್ಕಾಗಿ ತೂಗುವ, ಅಳೆಯುವ ಶಕ್ತಿ ಬರಬೇಕು. ಅ ಶಕ್ತಿ ನಿನಗೆ ಸಿಗಲಿ ಎಂದು ನಿನಗೆ ತೂಕ ಮಾಡಿಸಿಕೊಂಡು ಬರಲು ಹೇಳುತ್ತಿದ್ದೆ. ನಿನಗೆ ತೂಕಕ್ಕೆ ವಸ್ತುವನ್ನು ಕೊಡುವ ಮುಂಚೆಯೇ ಅದರಲ್ಲಿ ಎಷ್ಟಿದೆ ಅನ್ನುವುದು ನನಗೆ ಗೊತ್ತಿರುತ್ತಿತ್ತು, ಹಾಗಾಗಿ ನೀನು ಸರಿಯಾಗಿ ತೂಕ ಮಾಡಿಸಿಕೊಂಡು ಬಂದೆಯೋ ಅಥವಾ ಸುಳ್ಳು ಹೇಳಿದೆಯೋ ಅದೂ ಸಹ ನನಗೆ ತಿಳಿಯುತ್ತಿತ್ತು. ನಿನ್ನ ಜ್ಞಾನಕ್ಕಾಗಿ ನಾನು ನಿನಗೆ ಕೆಲಸ ಹೇಳುತ್ತಿದ್ದೆನೇ ಹೊರತು, ನನ್ನ ಪ್ರಯೋಜನಕ್ಕಾಗಿ ಅಲ್ಲ. ಕೂಡಲೇ ಜ್ಞಾನೋದಯವಾದ ಆತ ಗುರುಗಳ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ. ಈಗ ನನ್ನ ಸ್ನೇಹಿತ ಆಯುರ್ವೇದ ಪಂಡಿತನಾಗಿ ಒಳ್ಳೆಯ ಹೆಸರು ಮತ್ತು ಸಂಪಾದನೆ ಎರಡೂ ಮಾಡಿಕೊಳ್ಳುತ್ತಿದ್ದಾನೆ.

ಹೀಗೆ ನಮಗೆ ಯಾವಾಗ ಗುರುಗಳ ಸಾನಿಧ್ಯ, ಸಾಕ್ಷಾತ್ಕಾರ, ಜ್ಞಾನ ಲಭ್ಯವಾಗುತ್ತದೋ, ಇಲ್ಲವೋ ಯಾರೂ ಹೇಳಲು ಬರುವುದಿಲ್ಲ. ಜೀವನದಲ್ಲಿ ನಮಗೆ ಕಾಲಕಾಲಕ್ಕೆ ಹಲವಾರು ಗುರುಗಳ ಅವಶ್ಯಕತೆ ಬರುತ್ತದೆ. ಸರಿಯಾದ ಗುರು ಸಿಗುವವರೆಗೆ ಅರಸುವ ಕೆಲಸ ತಪ್ಪುವುದಿಲ್ಲ.

ಶ್ರೀ ಗುರುಭ್ಯೋ ನಮಃ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...