Homeಮುಖಪುಟಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

ಬಿಜೆಪಿಯಿಂದ ಸ್ಪರ್ಧಿಸಲು ಗೋಯಲ್‌ ರಾಜೀನಾಮೆ ನೀಡಿರಬಹುದು: ಜೈರಾಮ್ ರಮೇಶ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್‌ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್, ಚುನಾವಣಾ ಆಯುಕ್ತರ ರಾಜೀನಾಮೆಗೆ ಕಾರಣವಾದ ಮೂರು ಸಾಧ್ಯತೆಗಳನ್ನು ಪ್ರಸ್ತಾಪಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮಾದ್ಯಮ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಚುನಾವಣಾ ಆಯೋಗವು ನ್ಯಾಯಯುತ ಸಂಸ್ಥೆಯಾಗಬೇಕು, ಅದು ಸಾಂವಿಧಾನಿಕ ಸಂಸ್ಥೆಯಾಗಿದೆ. ಅರುಣ್ ಗೋಯೆಲ್ ನಿನ್ನೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಮೂರು ಕಾರಣಗಳು ಅವಲೋಕಿಸಬಹುದು. ಮೊದಲನೆಯದಾಗಿ ಮುಖ್ಯ ಚುನಾವಣಾ ಆಯುಕ್ತರಿಗೂ ಅವರಿಗೂ ಏನಾದರೂ ಭಿನ್ನಾಭಿಪ್ರಾಯಗಳಿವೆಯೇ? ಇಲ್ಲವಾದರೆ ಮುಂದಿನ ಸೀಟಿನಲ್ಲಿ ಕುಳಿತು ವಾಹನ ಚಲಾಯಿಸುವ ಮೋದಿ ಸರಕಾರಕ್ಕೂ ಅವರಿಗೂ ಏನಾದರೂ ಭಿನ್ನಾಭಿಪ್ರಾಯಗಳಿವೆಯಾ? ಎರಡನೆಯದಾಗಿ ಕೆಲವು ವೈಯಕ್ತಿಕ ಕಾರಣಗಳಿರಬಹುದು. ಮೂರನೆಯದಾಗಿ ಇತ್ತೀಚೆಗೆ ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದಾರೆ, ಅದರಂತೆ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ರಾಜೀನಾಮೆ ನೀಡಿದ್ದಾರೆಯೇ? ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದೇನು ಚುನಾವಣಾ ಆಯೋಗವೇ ಅಥವಾ ಚುನಾವಣಾ ಲೋಪವೇ?  ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಚುನಾವಣಾ ಆಯೋಗದ ಸಮಿತಿಯಲ್ಲಿ ಕೇವಲ ಒಬ್ಬರು ಸದಸ್ಯರಷ್ಟೇ ಇದ್ದಾರೆ.  ಇದು ಏಕೆ? ಎಂದು ಪ್ರಶ್ನಿಸಿದ್ದರು.

ನಾನು ಈ ಹಿಂದೆಯೇ ಹೇಳಿದಂತೆ, ಸ್ವತಂತ್ರ ಸಂಸ್ಥೆಗಳ ವ್ಯವಸ್ಥಿತ ನಾಶವನ್ನು ನಿಲ್ಲಿಸದಿದ್ದರೆ, ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿರಂಕುಶ ಪ್ರಭುತ್ವವು ಅತಿಕ್ರಮಿಸಲಿದೆ. ಕುಸಿಯುತ್ತಿರುವ ಸಾಂವಿಧಾನಿಕ ಸಂಸ್ಥೆಗಳ ಪಟ್ಟಿಗೆ ಇದೀಗ ಚುನಾವಣಾ ಆಯೋಗವೂ ಸೇರ್ಪಡೆಯಾಗಿದೆ. ಚುನಾವಣಾ ಆಯೋಗದ ಸಮಿತಿಯಲ್ಲಿ ಮೂವರು ಸದಸ್ಯರು ಇರಬೇಕು. ಆದರೆ, ಗೋಯಲ್‌ ಅವರು ತಮ್ಮ ಸ್ಥಾನ ತೊರೆದಿರುವುದರಿಂದ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮಾತ್ರವೇ ಉಳಿದಿದ್ದಾರೆ. ಸಮಿತಿಯಲ್ಲಿದ್ದ ಮತ್ತೊಬ್ಬ ಚುನಾವಣಾ ಆಯುಕ್ತರಾಗಿ ಅನೂಪ್ ಚೌಧರಿ ಪಾಂಡೆ ಅವರು ಫೆಬ್ರವರಿಯಲ್ಲಿ ನಿವೃತ್ತರಾಗಿದ್ದರು. ಚುನಾವಣಾ ಆಯುಕ್ತರ ನೇಮಕದ ಹೊಸ ಪ್ರಕ್ರಿಯೆ ಆರಂಭವಾದಾಗಿನಿಂದ ಆಡಳಿತ ಪಕ್ಷ ಮತ್ತು ಪ್ರಧಾನಿಗೆ ಪರಿಣಾಮಕಾರಿಯಾದ ಅಧಿಕಾರ ದೊರೆತಿದೆ. ಆದರೂ, ಹಿಂದಿನ ಚುನಾವಣಾ ಆಯುಕ್ತರ ಅವಧಿ ಮುಗಿದ 23 ದಿನಗಳ ನಂತರವೂ ಹೊಸಬರನ್ನು ಏಕೆ ನೇಮಿಸಿಲ್ಲ? ಮೋದಿ ಸರ್ಕಾರ ಇದಕ್ಕೆ ಉತ್ತರಿಸಲೇಬೇಕು. ಸೂಕ್ತ ವಿವರಣೆಯನ್ನೂ ನೀಡಬೇಕು ಎಂದು ಖರ್ಗೆ ಆಗ್ರಹಿಸಿದ್ದರು.

ಇದನ್ನು ಓದಿ: ಬಿಜೆಪಿ 400 ಸೀಟ್ ಗೆದ್ದರೆ ಸಂವಿಧಾನ ತಿದ್ದುಪಡಿ: ಹಿಡನ್‌ ಅಜೆಂಡಾ ಬಿಚ್ಚಿಟ್ಟ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...