Homeಅಂತರಾಷ್ಟ್ರೀಯಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

ಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

- Advertisement -
- Advertisement -

ಅಮೆರಿಕದ ನೂತನ ಅಧ್ಯಕ್ಷರಾದ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಜೋ ಬೈಡನ್, ಟ್ರಂಪ್  ಆಡಳಿತವು ಜಾರಿಗೆ ತಂದಿದ್ದ ಹಲವು ನೀತಿಗಳಲ್ಲಿ ಬದಲಾವಣೆ ತರುವುದಕ್ಕಾಗಿ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದಾರೆ. ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆ ಮತ್ತು ಜನಾಂಗೀಯ ಸಮಾನಯತೆಯ ವಿಷಯಗಳಲ್ಲಿ ಮಹತ್ವದ ತಿದ್ದುಪಡಿಗೆ ಮುಂದಾಗಿದ್ದಾರೆ.

ಕ್ಯಾಪಿಟಲ್ ಕಚೇರಿಯ ಅಧಿಕಾರ ಹಿಡಿದ ನಂತರ ಎರಡು ಪ್ರಮುಖ ನಿರ್ದೇಶನಗಳು ಮತ್ತು 15 ಕಾರ್ಯನಿರ್ವಾಹಕ ಕ್ರಮಗಳಿಗೆ ಬೈಡನ್ ಸಹಿ ಹಾಕಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಟ್ರಂಪ್ ಆಡಳಿತ ಜಾರಿಗೆ ತಂದ ಹಲವು ನೀತಿಗಳಲ್ಲಿ ಬದಲಾವಣೆಗೆ ಬೈಡನ್ ಒತ್ತುನೀಡಿದ್ದಾರೆ. ಇಂದಿನಂತೆ ಆರಂಭಿಸಲು ಬೇರೆ ಸಮಯವಿಲ್ಲ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಬೈಡನ್ ಉತ್ತರಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕವನ್ನು ಎದುರಿಸುವುದನ್ನು ಟ್ರಂಪ್ ಆಡಳಿತ ತನ್ನ ಮೊದಲ ಆದ್ಯತೆಯನ್ನಾಗಿಸಿಕೊಂಡಿದೆ. ಮುಂದಿನ ನೂರು ದಿನಗಳ ಕಾಲ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಲು ಬೈಡನ್ ಮನವಿ ಮಾಡಿದ್ದಾರೆ. ಹೊಸ ಫೆಡರಲ್ ಕಚೇರಿಯನ್ನು ರಚಿಸುವುದು ಮತ್ತು ಜಾಗತಿಕ ಆರೋಗ್ಯ ಸುರಕ್ಷತೆ ಮತ್ತು ರಕ್ಷಣೆಗಾಗಿ ಟ್ರಂಪ್ ಆಡಳಿತದಲ್ಲಿ ಮುಚ್ಚಿರುವ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶನಾಲಯವನ್ನು ಪುನಃಸ್ಥಾಪಿಸಲು ಬೈಡನ್ ಮುಂದಾಗಿದ್ದಾರೆ.

ವಲಸೆ ವಿಚಾರದಲ್ಲಿ ಬೈಡನ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. 2012ರಲ್ಲಿ ಜಾರಿಗೆ ತಂದ ಬಾಲ್ಯದ ವಲಸೆಯ ಹಕ್ಕುಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಇದರಿಂದ ಲಕ್ಷಾಂತರ ಜನರನ್ನು ಗಡೀಪಾರು ಮಾಡುವಿಕೆಯಿಂದ ರಕ್ಷಿಸಲಾಗುತ್ತದೆ. ಅಲ್ಲದೆ ಅಂತರ್ಯುದ್ಧ ಮತ್ತು ಎಬೋಲಾ ದಾಳಿಯಿಂದ ಪಲಾಯನ ಮಾಡಿದ ಲೈಬೀರಿಯನ್ನರಿಗೆ ತಾತ್ಕಾಲಿಕ ಕಾನೂನು ಸ್ಥಾನಮಾನವನ್ನು ಜೂನ್ 2022 ರವರೆಗೆ ವಿಸ್ತರಿಸುವುದಾಗಿ ಅವರ ಆದೇಶಗಳಲ್ಲಿ ತಿಳಿಸಲಾಗಿದೆ.

ಇದಲ್ಲದೆ ಹವಾಮಾನ ಬದಲಾವಣೆ ಮತ್ತು ಜನಾಂಗೀಯ ಸಮಾನತೆಗಾಗಿನ ಹಲವು ಆದೇಶಗಳಿಗೆ ಬೈಡನ್ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...