Homeಮುಖಪುಟದಕ್ಲಕಥಾ ದೇವಿ ಕಾವ್ಯ: ಭಾರತವನ್ನುಳಿಸುವ ದಲಿತರ ಐಕ್ಯ ನಡಿಗೆ

ದಕ್ಲಕಥಾ ದೇವಿ ಕಾವ್ಯ: ಭಾರತವನ್ನುಳಿಸುವ ದಲಿತರ ಐಕ್ಯ ನಡಿಗೆ

- Advertisement -
- Advertisement -

ಕನ್ನಡದ ಬಕಾಲ ಮುನಿ ಎಂದೇ ಹೆಸರಾದ ಕೆ.ಬಿ.ಸಿದ್ದಯ್ಯನವರ ’ದಕ್ಲಕಥಾ ದೇವಿ ಕಾವ್ಯ’ ಈಗ ರಂಗಭೂಮಿಯಲ್ಲಿ ದೊಡ್ಡ ಸದ್ದು ಮಾಡುತ್ತಿದೆ. ತಳ ಸಮುದಾಯಗಳ ಯುವಜನರೇ ಸೇರಿ ಕಟ್ಟಿರುವ ’ಜಂಗಮ ಕಲೆಕ್ಟಿವ್’ ತಂಡ ಈ ಮಹತ್ತರ ರಂಗಸಾಧ್ಯತೆಯನ್ನು ಆಗುಮಾಡಿದೆ. ನೀನಾಸಂ ಅಲ್ಲಿ ಕಲಿತು ಸಿಂಗಾಪುರದಲ್ಲಿ ಹೆಚ್ಚಿನ ರಂಗಾಧ್ಯಯನ ಮಾಡಿ ಬಂದ ಕನ್ನಡದ ಇವತ್ತಿನ ಸೂಕ್ಷ್ಮ ರಂಗ ನಿರ್ದೇಶಕ ಕೆ.ಪಿ.ಲಕ್ಷ್ಮಣ್ ’ದಕ್ಲಕಥಾ ದೇವಿ ಕಾವ್ಯ’ವನ್ನು ನಾಟಕವಾಗಿಸಿದ್ದಾರೆ.

ಎಲ್ಲಾ ಜಾನಪದ ಕಾವ್ಯಗಳೂ ಅತ್ಯದ್ಭುತವಾದ ರಂಗ ಸಾಧ್ಯತೆಯನ್ನು ಹೊಂದಿರುವಂಥವು. ಅದರಲ್ಲೂ ಪದಕಟ್ಟುವಿಕೆಯಲ್ಲೇ ತಾಳಪ್ರಜ್ಞೆಯನ್ನು ಅಂತರ್ಗತವಾಗಿ ಒಳಗೊಂಡಿರುವ ಸಿದ್ದಯ್ಯನವರ ಬಕಾಲ, ದಕ್ಲಕಥಾ ದೇವಿಯಂತಹ ಕಾವ್ಯಗಳನ್ನು ನಾಟಕ ಮಾಡುವುದೆಂದರೆ, ಅದನ್ನು ಆಗುಮಾಡುವವರಿಗೆ ಕಾವ್ಯದ ಆಳಕ್ಕಿಳಿದು ರೂಪಕಗಳನ್ನು ಕಟ್ಟಿಕೊಳ್ಳುವ ಅಂತಃಶಕ್ತಿ ಬೇಕು. ಇದರ ಜೊತೆಗೆ ತಳ ಸಮುದಾಯಗಳ ಚಲನಶೀಲತೆ, ಸಾಂಸ್ಕೃತಿಕ ಎಚ್ಚರ, ಸಮಕಾಲೀನ ಸಾಂಸ್ಕೃತಿಕ ರಾಜಕಾರಣದ ಅರಿವು ಮತ್ತು ಇವೆಲ್ಲವುಗಳನ್ನು ನಟರ ನೆರವಿನಿಂದ ರಂಗದ ಮೇಲೆ ತರಬಲ್ಲ ಕಸುವು ಇರಬೇಕು. ಲಕ್ಷ್ಮಣ್ ಈ ಕಸುವನ್ನು ’ದಕ್ಲಕಥಾ ದೇವಿ ಕಾವ್ಯ’ದ ಮೂಲಕ ಕನ್ನಡಿಗರ ಗಮನಕ್ಕೆ ತಂದಿದ್ದಾರೆ.

ಕೆ.ಬಿ.ಸಿದ್ದಯ್ಯ

ಕೆ.ಬಿ.ಸಿದ್ದಯ್ಯನವರ ಮಾತುಗಳ ಮೂಲಕ ಶುರುವಾಗುವ ನಾಟಕ ತಮಟೆ ನುಡಿಸುತ್ತಾ ನೆಲದ ಮೇಲೆ ಬಿದ್ದ ನೋಟನ್ನು ಕಣ್ಣರೆಪ್ಪೆಯಲ್ಲಿ ಎತ್ತಿಕೊಳ್ಳುವ ಪಾತ್ರಧಾರಿಯನ್ನು ಸ್ಪಟಿಕದ ಚೂರುಗಳ ಹಾಗೆ ಒಡೆಯುತ್ತಾ ಸಾಗುತ್ತದೆ. ಹಾಗೆ ಒಡೆದ ಪ್ರತಿಚೂರಿನಲ್ಲೂ ದಲಿತ ಬದುಕಿನ ಬಣ್ಣಗಳು ಪ್ರತಿಫಲಿಸುತ್ತದೆ. ದಕ್ಲಕಥಾ ದೇವಿಯ ಮಾತಿನ ಮಾಯಕಕ್ಕೆ ಇಡೀ ರಂಗಮಂಟಪ ನಾಲಿಗೆಯೊಣಗಿದ ಹಸುಗೂಸಿನ ಒಣ ತುಟಿಗಳ ಹಾಗೆ ನಿಧಾನಕ್ಕೆ ಪಸೆಯಾಡಲು ಶುರುವಿಟ್ಟುಕೊಳ್ಳುತ್ತದೆ. ನಾಟಕ ಘಟಿಸುತ್ತಾ ಘಟಿಸುತ್ತಾ ಪಾತ್ರಗಳೊಳಗೆ ಪಾತ್ರಗಳು ಒಡಮೂಡುತ್ತಾ ಸಮುದಾಯದೊಳಗಿನ ಸಮುದಾಯಗಳನ್ನು ಕಾಣಿಸುವ ಮಾಂತ್ರಿಕತೆ ತೆರೆದುಕೊಳ್ಳುತ್ತದೆ.

ಮಾದಿಗ ಸಮುದಾಯದ ಮಕ್ಕಳೆಂದೇ ನಂಬಿರುವ ದಕ್ಕಲರ ಕುಲಪುರಾಣವನ್ನು ನಿರೂಪಿಸುತ್ತಾ ಸಿದ್ದಯ್ಯನವರು ಮಾದಿಗ ಸಮುದಾಯದ ಕಾರುಣ್ಯದ ಹಾದಿಯನ್ನು ಬಿಚ್ಚಿಡುತ್ತಾರೆ. ಊರ ಹೊರಗೆ ನಿಂತು ಮಾದಿಗರ ಕೇರಿಯಲ್ಲಿ ಮಾತ್ರವೇ ಅನ್ನ ಬೇಡುವ ದಕ್ಕಲರು ಕಣ್ಣಿಗೆ ಕಾಣದಷ್ಟು ಸಣ್ಣ ಸಮುದಾಯವಾದರೂ ತಮ್ಮೊಳಗೆ ಇಡೀ ಜಗತ್ತಿಗೆ ಆಗುವಂಥಾ ಬೃಹತ್ತಾದ ಸಾಂಸ್ಕೃತಿಕ ಸಂಪತ್ತನ್ನು ಇರಿಸಿಕೊಂಡಿದ್ದಾರೆ. ಈ ಸಾಂಸ್ಕೃತಿಕ ಸಂಪತ್ತು ’ದಕ್ಲಕಥಾ ದೇವಿ ಕಾವ್ಯ’ ನಾಟಕದ ಮೂಲಕ ಕನ್ನಡನಾಡಿನ ಸೀಳುರೋಗಕ್ಕೆ ಔಷಧಿಯಾಗಿ ಒದಗಿಬಂದಿದೆ. ಮಾದಿಗ ಸಮುದಾಯದ ಚಿಕ್ಕ ಕುಟುಂಬವೊಂದು ದಕ್ಕಲ ದೇವಿಯ ಕಥೆಯನ್ನು ಹೇಳುತ್ತಾ ಊರೂರು ಅಲೆದು ಬದುಕು ನಡೆಸುವ ಮತ್ತು ಕುಲಗಳನ್ನು ಕೂಡಿಸುತ್ತಾ ಸಾಗುವ ವಿಭಿನ್ನ ರಂಗತಂತ್ರವನ್ನು ನಿರ್ದೇಶಕರು ಕಟ್ಟಿಕೊಂಡಿದ್ದಾರೆ.

ಇದನ್ನೂ ಓದಿ: ತಂದೆ ಮತ್ತು ಮೂವರು ಹೆಣ್ಣುಮಕ್ಕಳು; ದ್ವೇಷದ ರಂಗಭೂಮಿಯಲ್ಲಿ ಒಂದು ಹಳೆಯ ಕಥೆ

ಕರ್ನಾಟಕದಲ್ಲಿ ಅದರಲ್ಲೂ ಬಯಲ ಸೀಮೆಯಲ್ಲಿ ಹೊಲೆಯ ಮಾದಿಗರ ಸಾಂಸ್ಕೃತಿಕ ಚಹರೆಗಳಾದ ತಮಟೆ ಮತ್ತು ಅರೆವಾದ್ಯಗಳನ್ನು ಇಡೀ ನಾಟಕದಲ್ಲಿ ಸೂಜಿ ದಾರದ ಹಾಗೆ ಬಳಸಲಾಗಿದೆ. ದಕ್ಕಲದೇವನು ತನ್ನ ಎಡಭುಜದ ಮೇಲೆ ತಮಟೆಯನ್ನೂ, ಬಲಭುಜದ ಮೇಲೆ ಅರೆಯನ್ನೂ ಹೊತ್ತುಕೊಂಡು ಅವುಗಳನ್ನು ನುಡಿಸುವ ತನ್ನಿಬ್ಬರು ಮಕ್ಕಳನ್ನು ಜೊತೆಗೂಡಿಸಿಕೊಂಡು ಲೋಕಸಂಚಾರ ಹೊರಡುತ್ತಾನೆ. ಇಡೀ ರಂಗಭೂಮಿಯನ್ನೇ ನಾವು ಲೋಕದ ವಿಸ್ತಾರವೆಂದು ಭಾವಿಸಿದರೆ, ಆ ರಂಗದ ಒಂದು ಮೂಲೆಯಲ್ಲಿ ಕೂತ ದಕ್ಕಲದೇವಿ ಇಡೀ ಲೋಕವನ್ನೇ ಆವರಿಸಿಕೊಳ್ಳುತ್ತಾಳೆ ಮತ್ತು ತನ್ನ ಗಂಡ, ಮಕ್ಕಳ ಯಾತ್ರೆ ಅವಳ ಅರಿವಿಗೆ ಬರುತ್ತಲೇ ಇರುತ್ತದೆ. ಈ ವಿಶಿಷ್ಟ ರಂಗತಂತ್ರವನ್ನು ನಿರ್ದೇಶಕರು ದಲಿತ ಸಮುದಾಯದ ಎಡ ಬಲ ಬಣಗಳ ನಡುವಿನ ವಿದ್ಯಮಾನಗಳನ್ನು ಗಮನಿಸುವ ಬಾಬಾಸಾಹೇಬರ ಕಣ್ಣುಗಳಂತೆ ಸೃಷ್ಟಿಸಿದ್ದಾರೆ. ಇದನ್ನು ಹೊಸ ಕಾಲದ ಹೊಸ ಪ್ರಜ್ಞೆಯ ಲಕ್ಷ್ಮಣ್ ಅಂತಹ ನಿರ್ದೇಶಕರು ಮಾತ್ರ ಮಾಡಲು ಸಾಧ್ಯ.

ದಲಿತರ ನೋವುಗಳನ್ನಷ್ಟೇ ಕಲಾತ್ಮಕ ಮಂಡನೆ ಮಾಡುವ ಮೂಲಕ ಕಟ್ಟಲು ಯತ್ನಿಸಿ ಸೋಲುತ್ತಿದ್ದವರ ಎದುರಿಗೆ ಲಕ್ಷ್ಮಣ್ ಗೆದ್ದಿದ್ದಾರೆ. ಅಥವಾ ಹೊಸ ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ಊರ ಹಬ್ಬಗಳಲ್ಲಿ ಗ್ರಾಮದೇವತೆಗೆಂದು ಬೆಳಗಿನ ಜಾವ ಕಡಿದ ಕೋಣದ ರಕ್ತದಲ್ಲಿ ಅನ್ನವನ್ನು ಕಲೆಸಿ ಊರಿನ ಸುತ್ತಲಿನ ಹೊಲಗಳಿಗೆ ಚೆಲ್ಲುವ ’ರಿಚ್ಯುವಲ್ ಈ ನಾಟಕದ ಕೇಂದ್ರಬಿಂದು.

ಕೆ.ಪಿ.ಲಕ್ಷ್ಮಣ್

ಇದರೊಟ್ಟಿಗೆ ದಕ್ಕಲ ಮಕ್ಕಳು ಊರಬೀದಿಯ ಅಂಚಿನಲ್ಲಿ ಮಾದಿಗರಿಂದ ಸಂಗ್ರಹಿಸುವ ಅನ್ನದ ಮಡಿಕೆಗಳನ್ನು ಒಡೆದು ಅನ್ನವನ್ನು ತಲೆಯ ಮೇಲೆ ಹೊತ್ತೊಯ್ಯುವ ರಿಚ್ಯುವಲ್ ಅನ್ನೂ ಕೂಡಿಸಲಾಗಿದೆ. ನಾಟಕ ಎಲ್ಲವನ್ನೂ ಅಭಿನಯಿಸುತ್ತಾ ಕೊನೆಯ ಘಟ್ಟಕ್ಕೆ ಬರುವಷ್ಟರಲ್ಲಿ ಭಾರತೀಯರು ಅವುಡುಗಚ್ಚಿ ಸಹಿಸಿಕೊಳ್ಳಬೇಕಾದ, ಆ ಮೂಲಕ ತಳ ಸಮುದಾಯಗಳ ನಡಿಗೆಗೆ ಹೆಜ್ಜೆ ಹೊಂದಿಸಬೇಕಾದ ಸಮಯ ಬಂದೇಬಿಡುತ್ತದೆ.

ಆ ಘಟ್ಟದಲ್ಲಿ ದಕ್ಲಕಥಾ ದೇವಿ ಭಾರತಮಾತೆಯಾಗಿಬಿಡುತ್ತಾಳೆ. ಈ ದೃಶ್ಯ ಚಮತ್ಕಾರ ನಡೆಯುವ ಮೊದಲು ಭಾರತೀಯ ಗಂಡಸರು ಮೈಗೂಡಿಸಿಕೊಳ್ಳಲೇಬೇಕಾದ ಹೆಣ್ತನದ ಮಾದರಿಯೊಂದು ನಮ್ಮೆದುರು ಬಿಚ್ಚಿಕೊಳ್ಳುತ್ತದೆ. ಗಂಡನ್ನು ಹೆಣ್ಣಾಗಿಸಿ, ಅವನ ’ಪುರುಷಾಹಂಕಾರವನ್ನು’ ಲಯಗೊಳಿಸಿ ಹೆಣ್ಣ ಕಣ್ಣನ್ನು ಮುಡಿಯುವ ಅದ್ಭುತ ಕಾವ್ಯದಂತೆ ಆ ದೃಶ್ಯ ಮೂಡಿಬಂದಿದೆ.

ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ಇನ್ನು ಲಕ್ಷ್ಮಣ್ ಅವರ ಈ ಸಾಹಸಕ್ಕೆ ಕೈಜೋಡಿಸಿರುವ ನಟರು ಇತ್ತೀಚೆಗೆ ಕನ್ನಡ ರಂಗಭೂಮಿಯಲ್ಲಿ ನಾನು ನೋಡಿದ ಅತ್ಯದ್ಭುತ ಕಲಾವಿದರು. ದಕ್ಕಲದೇವನ ಪಾತ್ರ ಮಾಡುತ್ತಾ ಬೆರಗು ಹುಟ್ಟಿಸುವ ಸಂತೋಷ್ ದಿಂಡ್ಲೂರು, ದಕ್ಕಲದೇವಿ ಪಾತ್ರದ ಮೂಲಕ ನೆಲದವ್ವನೇ ಎದ್ದು ಬಂದಂತೆ ನಟಿಸುವ ಬಿಂದು ರಕ್ಷಿದಿ, ತಮಟೆ ಬಡಿಯುತ್ತಾ ಕಣ್ಣ ರೆಪ್ಪೆಯಲ್ಲಿ ನೋಟು ಎತ್ತುವ ಡಿಂಗ್ರಿ ಭರತ್, ಅರೆವಾದ್ಯದ ಮೂಲಕ ಮಾಂತ್ರಿಕ ಲೋಕವನ್ನೇ ಸೃಷ್ಟಿಸುವ ನರಸಿಂಹರಾಜು, ಗಂಗಮ್ಮನಾಗಿ ಧುಮ್ಮಿಕ್ಕುವ ರಮಿಕಾ ಚೈತ್ರ- ಈ ಎಲ್ಲರೂ ಅದ್ಬುತ ನಟರು. ಎಲ್ಲರೂ ನುರಿತ ಹಾಡುಗಾರರಾಗಿರುವುದು ಈ ನಾಟಕದ ಇನ್ನೊಂದು ಶಕ್ತಿ. ಇವರೆಲ್ಲರೊಂದಿಗೆ ಬೆಳಕಿನ ಮಂಜು ನಾರಾಯಣ್, ಡ್ರಾಮಟರ್ಜಿಯ ಮೋಹಿತ್, ವಸ್ತ್ರವಿನ್ಯಾಸದ ಶ್ವೇತಾರಾಣಿ, ನಿರ್ದೇಶನದಲ್ಲಿ ಸಹಾಯ ಮಾಡಿದ ಸ್ಕಂದ, ಶ್ರೀಹರ್ಷ ಮತ್ತು ಪೂರ್ವಿ ಕಲ್ಯಾಣಿ ಇವರೆಲ್ಲರೂ ಸೇರಿಕೊಂಡು ಕನ್ನಡ ರಂಗಭೂಮಿಗೆ ದಾರಿದೀಪವಾಗಬಲ್ಲ ನಾಟಕವೊಂದನ್ನು ಕೊಟ್ಟಿದ್ದಾರೆ.

ಭಾರತವನ್ನು ಮೇಲೆತ್ತುವ ಜವಾಬ್ದಾರಿಯನ್ನು ಹೊಂದಿರುವ ದಲಿತ ಸಮುದಾಯ ಒಟ್ಟಾಗಿ ಸಾಗಬೇಕಾದ ಬಾಬಾ ಸಾಹೇಬರ ಕನಸು ಕನ್ನಡದ ಕೆ.ಬಿ. ಸಿದ್ದಯ್ಯನವರ ಕಣ್ಣುಗಳಲ್ಲಿ ದೀಪವಾಗಿ ಉರಿಯುತ್ತಾ ತಲೆಮಾರುಗಳಿಗೆ ದಾರಿಯಾಗುತ್ತಿರುವುದನ್ನು ನೋಡಲು ನಾವು ’ದಕ್ಲಕಥಾ ದೇವಿ ಕಾವ್ಯ’ ನಾಟಕವನ್ನು ನೋಡಬೇಕು.

(’ದಕ್ಲಕಥಾ ದೇವಿ ಕಾವ್ಯ’ ನಾಟಕದ ಮುಂದಿನ ಪ್ರದರ್ಶನ ನವೆಂಬರ್ 19, 2022 ಶನಿವಾರ ಸಂಜೆ 6:00 ಗಂಟೆಗೆ ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಆಯೋಜಿತವಾಗಿದೆ)

ಹುಲಿಕುಂಟೆ ಮೂರ್ತಿ

ಹುಲಿಕುಂಟೆ ಮೂರ್ತಿ
ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆಯ ಮೂರ್ತಿ, ಕನ್ನಡ ಅಧ್ಯಾಪಕರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಎಂಎ ಮಾಡುವ ಮುಂಚಿನಿಂದಲೂ ಸಾಮಾಜಿಕ ಚಳವಳಿಗಳಲ್ಲಿ ಕ್ರಿಯಾಶೀಲರು. ‘ನೀಲಿ ಗ್ಯಾನ’ ಕವನ ಸಂಕಲನಕ್ಕೂ ಮುಂಚೆಯೇ ಕವಿಯಾಗಿ ಗುರುತು ಪಡೆದುಕೊಂಡಿದ್ದರು. ಕೌದಿ ಚಿತ್ರದ ಗೀತರಚನೆಗಾಗಿ ರಾಜ್ಯಪ್ರಶಸ್ತಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...