Homeಪುಸ್ತಕ ವಿಮರ್ಶೆಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

ಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

- Advertisement -
- Advertisement -

ಪ್ರಿಯ ಮಿತ್ರರಾದ ಗಿರೀಶ್ ತಾಳಿಕಟ್ಟೆ ಅನುವಾದ ಮಾಡಿರುವ, ಮರಲಿನ್ ಮತ್ತು ಮರೈಸ್ ಬೈಲಿ ಅವರು ರಚಿಸಿರುವ ‘ಆ 117 ದಿನಗಳು’ ಪುಸ್ತಕದ ಹಸ್ತಪ್ರತಿಯನ್ನು ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದೆ. ಪ್ರವಾಸಪ್ರಿಯನಾದ ನನಗಿದು ಬಹಳ ಖುಷಿ ಕೊಟ್ಟಿತು. ಸಾಹಸಿಗಳಾದ ಮರಲಿನ್ ಮತ್ತು ಮೈರಸ್ ದಂಪತಿಗಳು ಇಂಗ್ಲೆಂಡಿನಿಂದ ಚಿಕ್ಕದೊಂದು ನಾವೆಯಲ್ಲಿ ಹೊರಟು, ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಸಮುದ್ರಗಳನ್ನು ಹಾಯುತ್ತ, ನಡುವೆ ನಾವೆ ದುರಂತಕ್ಕೊಳಗಾಗಿ, ಜೀವನ್ಮರಣದ ಗಳಿಗೆಗಳನ್ನು ಎದುರಿಸುತ್ತ ಬದುಕಿ ಬಂದ ಕಥೆಯದು. ಅವರು ಪಯಣ ಆರಂಭಿಸಿದ ಮತ್ತು ತಲುಪಿದ ಬಿಂದುಗಳ ನಡುವಿನ ಕಡಲಿನ ಹರಹನ್ನು ಭೂಪಟದಲ್ಲಿ ನೋಡಿದರೆ ದಂಗುಬಡಿಯುತ್ತದೆ. ಈ ಕಥನದಲ್ಲಿ ಪಯಣದ ಪೂರ್ವದಲ್ಲಿ, ಪಯಣದಲ್ಲಿ ಹಾಗೂ ಪಯಣದ ಬಳಿಕ ಅವರ ಬಾಳಿನಲ್ಲಿ ಪ್ರೇಮ ಸಾಹಸ ಆನಂದ ದುಃಖ ಅಗಲಿಕೆಗಳು, ಸಮುದ್ರದ ಅಲೆಗಳಂತೆ ಒಂದಾದಮೇಲೆಒಂದು ಬಂದು ಅಪ್ಪಳಿಸುತ್ತವೆ. ಇದೊಂದು ರೋಚಕವಾದ ಪ್ರವಾಸ ಕಥನ. ಇದನ್ನು ಓದುವಾಗ, ತೇಜಸ್ವಿಯವರ ‘ಮಹಾಪಲಾಯನ’ ನೆನಪಿಗೆ ಬಂದಿತು; ಎವರೆಸ್ಟ್ ಶಿಖರವನ್ನು ಏರಿ ಹಿಮಪಾತಕ್ಕೆ ಸಿಕ್ಕು ಸಾವಿನಿಂದ ಕೂದಲೆಳೆ ಅಂತರದಲ್ಲಿ ಬಚಾವಾಗಿ ಬಂದ ಅಮೆರಿಕನ್ ಪರ್ವತಾರೋಹಿ ಪೇವರ್ ಮೈಕಲ್‌ನ ‘ಥಿನ್ ಏರ್’; ಸುನ್ ಶುಯೆನ್ ಎಂಬ ಇತಿಹಾಸಜ್ಞೆ, ಚೀನಾದಿಂದ ಭಾರತಕ್ಕೆ ಹ್ಯೂಯನ್‌ತ್ಸಾಂಗ್ ಪಯಣಿಸಿದ ಹಾದಿಯಲ್ಲೆ ಪಯಣಿಸುತ್ತ ಬಂದು ಬರೆದ ಕಥನ, ‘ಟೆನ್‌ಥೌಸಂಡ್ ಮೈಲ್ಸ್ ವಿಥೌಟ್ ಕ್ಲೌಡ್’ ಮುಂತಾದ ಕೃತಿಗಳು ಮನಃಪಟಲದ ಮೇಲೆ ಹಾದುಹೋದವು.

ಮೇಲ್ಕಾಣಿಸಿದ ಪ್ರವಾಸ ಕಥನಗಳ ವಿಶಿಷ್ಟತೆಯೆಂದರೆ, ಕೆಲವು ಸಾಹಸಿಗಳಾದ ವ್ಯಕ್ತಿಗಳು ತಮ್ಮ ಜೀವನದಲ್ಲಿ ವಿಶಿಷ್ಟವಾದ ಗುರಿಯನ್ನು ಇಟ್ಟುಕೊಂಡು, ಕಷ್ಟ ಅಪಾಯಗಳಿಂದ ಕೂಡಿರುವ ಹಾದಿಯಲ್ಲಿ ಪಯಣಿಸುವುದು. ಘಾತಕ ತಿರುವುಗಳಲ್ಲಿ ಮೃತ್ಯುವಿನ ಜತೆ ಮುಖಾಬಿಲೆ ಮಾಡುತ್ತ, ಬದುಕಿನ ಹೊಸ ಅನುಭವಗಳಿಗೆ ತೆರೆದುಕೊಳ್ಳುವುದು. ಎಂತಲೇ ಅವರ ಅನುಭವದಿಂದ ಹುಟ್ಟಿದ ಈ ಕೃತಿಗಳು ಕೇವಲ ಹುಚ್ಚುಸಾಹಸಿಗಳು ಮಾಡಿದ ರೋಚಕ ಪ್ರವಾಸ ವರದಿಗಳಾಗಿಲ್ಲ. ದಾರ್ಶನಿಕವಾಗಿ ಮಾನವ ಚೈತನ್ಯದಲ್ಲಿ ಹುದುಗಿರುವ ಅದಮ್ಯ ಸಾಹಸ ಪ್ರವೃತ್ತಿಯನ್ನು ಲೋಕಕ್ಕೆ ಕಾಣಿಸುವ ಕಥನಗಳಾಗಿವೆ. ನೂರರಲ್ಲಿ ಒಬ್ಬರಾಗಿ ಸಾಮಾನ್ಯ ಲಯದ ಬದುಕನ್ನು ಬಾಳಲು ನಿರಾಕರಿಸಿ, ಎಲ್ಲರಿಗಿಂತ ವಿಶಿಷ್ಟವಾದ ಬದುಕನ್ನು ನಡೆಸುವ ವಿಶಿಷ್ಟ ಲೋಕದೃಷ್ಟಿಯುಳ್ಳವರ ಜೀವನಗಾಥೆಗಳಾಗಿವೆ. ಅಪಾರವಾದ ಜೀವನಪ್ರೀತಿಯುಳ್ಳ ವ್ಯಕ್ತಿಗಳು ತಾವು ಹೋಗುವ ಅಪರಿಚಿತ ಎಡೆಯಲ್ಲಿ ಸಿಗುವ ಜನರೊಟ್ಟಿಗೆ ಮನುಷ್ಯ ಸಂಬಂಧ ಬೆಳೆಸುವ ಮಾನವೀಯ ಅಧ್ಯಾಯಗಳಾಗಿವೆ. ಆನಂದದಾಯಕವೂ ಕಠೋರವೂ ಆದ ಬಾನು ಕಡಲು ಕಾಡು ಮರುಭೂಮಿಯಂತಹ ನಿಸರ್ಗದ ಜತೆ ಅನುಸಂಧಾನ ಮಾಡುವ ಪ್ರಯೋಗಗಳಾಗಿವೆ.

ಮರಲಿನ್ ಮತ್ತು ಮರೈಸ್ ಜೋಡಿಯ ಯಾನವನ್ನು ನೋಡುವಾಗ ‘ಜುಗಾರಿ ಕ್ರಾಸ್’ನ ಸುರೇಶ್ ಮತ್ತು ಗೌರಿಯರು ನೆನಪಾದರು. ತೇಜಸ್ವಿಯವರ ಕಥನಗಳಲ್ಲಿ ಪ್ರೇಮಿಗಳು ಮಾಡುವ ಸಾಹಸಗಳಲ್ಲಿ ಗಂಡು ಹೆಚ್ಚು ಕ್ರಿಯಾಶೀಲ, ಧೈರ್ಯಶಾಲಿ. ಮಹಿಳೆ ಅನುಸರಿಸುವವಳು. ಆದರೆ ಈ ಪ್ರವಾಸ ಕಥನ ಬಿಚ್ಚಿಡುವ ಬಾಳಕಡಲಿನಲ್ಲಿ ಕಡೆಗೋಲನ್ನು ಗಂಡು ಕೈಬಿಟ್ಟಾಗಲೆಲ್ಲ ಅದನ್ನು ಎತ್ತಿಕೊಂಡು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಾಳೆ. ನಿಸರ್ಗವು ಸ್ತ್ರೀಯೊಳಗಿನ ಅಪಾರ ಚೈತನ್ಯ ಧೈರ್ಯ ತಾಯ್ತನಗಳನ್ನು ಲೋಕಕ್ಕೆ ಕಾಣಿಸಲೆಂದೇ ಸೃಷ್ಟಿಸಿದ ನಿಗೂಢ ಪ್ರಾಕೃತಿಕ ನಾಟಕದಂತಿದೆ ಇದು. ಈ ದೃಷ್ಟಿಯಿಂದ ಕೃತಿಯನ್ನು ಗಿರೀಶ್ ಹೆಣ್ಣಿಗೆ ಅರ್ಪಿಸುತ್ತ ಆಡಿರುವ ಮಾತುಗಳು ಮಾರ್ಮಿಕವೂ ಅರ್ಥಪೂರ್ಣವೂ ಆಗಿವೆ. ಮರಲಿನ್ ತೀರಿಕೊಂಡ ಬಳಿಕ ಏಕಾಂಗಿಯಾದ ಮರೈಸ್, ಆಕೆಯನ್ನು ನೆನಪಿಸಿಕೊಳ್ಳುತ್ತ ಹೇಳುವುದು ಕೂಡ ಇದಕ್ಕೆ ಪೂರಕವಾಗಿದೆ; ‘ಎಂಥಾ ಸಂಕಷ್ಟ ಎದುರಾದಾಗಲೂ ಮರಲಿನ್ ತನ್ನೊಳಗಿನ ಬದುಕುವ ತುಡಿತವನ್ನು ಕಳೆದುಕೊಳ್ಳಲಿಲ್ಲ. ಆತ್ಮವಿಶ್ವಾಸವನ್ನು ಘಾಸಿ ಮಾಡಿಕೊಳ್ಳಲಿಲ್ಲ. ಹೆಣ್ಣು ಎಂಬ ಆ ಅದ್ಭುತ ಸೃಷ್ಟಿಗೆ ಇರುವ ಶಕ್ತಿಯೇ ಅಂತಹದ್ದು… ಮರಲಿನ್‌ಳನ್ನು ಭೇಟಿಯಾಗುವವರೆಗೆ ಪ್ರೀತಿ ವಾತ್ಸಲ್ಯ ಎಂಬುದೇ ನನಗೆ ತಿಳಿದಿರಲಿಲ್ಲ. ಆಕೆ ನನ್ನ ಬಾಳಿಗೆ ಬೆಳಕಾದಳು. ನನ್ನ ಬದುಕಿಗೆ ಬೇಕಿದ್ದ ಸುಖ, ಸಂತೋಷ, ನೆಮ್ಮದಿ ಧೈರ್ಯ ಎಲ್ಲವನ್ನೂ ತಂದವಳು. ಆಕೆಯಿಲ್ಲದೆ ನಾನು ಅಪೂರ್ಣ’; ಜ್ಞಾನೋದಯ ಸಾಕ್ಷಾತ್ಕಾರ ಎಂದರೆ ಇದುವೇ.

ಗಿರೀಶ್ ತಾಳಿಕಟ್ಟೆ

ಲವಲವಿಕೆಯ ಗದ್ಯ ಲೇಖಕರಾದ ಗಿರೀಶ್ ತಾಳಿಕಟ್ಟೆ ಕೃತಿಯನ್ನು ಸೊಗಸಾಗಿ ಅನುವಾದಿಸಿದ್ದಾರೆ. ಮತೀಯತೆ, ಜಾತೀಯತೆಯಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿರುವ ಭಾರತದ ಹೊಸತಲೆಮಾರಿನ ಹುಡುಗ-ಹುಡುಗಿಯರು ಇಂತಹ ಕಥನಗಳನ್ನು ಓದಬೇಕು; ಇದರಿಂದ ಹೊರಲೋಕದಲ್ಲಿ ಚೈತನ್ಯಶೀಲರಾದ ಜನ ಸಂಪ್ರದಾಯದ ಪಂಕದಲ್ಲಿ ಸಿಕ್ಕಿಕೊಳ್ಳದೆ ಹೇಗೆಲ್ಲ ಬದುಕಿನ ಸಾಹಸಗಳನ್ನು ಮಾಡುವುದಕ್ಕೆ ತುಡಿಯುತ್ತಿದ್ದಾರೆಂದು ತಿಳಿಯುತ್ತದೆ. ದೇಶವನ್ನು ದ್ವೇಷದಿಂದ ಕಟ್ಟಲು ಸಾಧ್ಯವಿಲ್ಲ. ಜ್ಞಾನ ಸಾಹಸ ಪ್ರಯೋಗ ಕ್ರಿಯಾಶೀಲತೆಯಿಂದ ಕಟ್ಟುವುದಕ್ಕೆ ಸಾಧ್ಯ. ಯೂರೋಪು ವಸಾಹತುಶಾಹಿಯಾಗಿ ಏಶಿಯಾ ಆಫ್ರಿಕಾಗಳನ್ನು ವಶಪಡಿಸಿಕೊಂಡು ಮಾಡಿರುವ ಕೃತ್ಯಗಳು ಚಾರಿತ್ರಿಕ ಅಪರಾಧಗಳು ದಿಟ. ಆದರೆ ಅಲ್ಲಿನ ಜನರಲ್ಲಿರುವ ಸಾಹಸಪ್ರವೃತ್ತಿ, ಅನ್ವೇಷಕ ಕುತೂಹಲ, ಸಾವಿಗೆ ಹೆದರದೆ ಕೈಗೊಳ್ಳುವ ಯಾನ, ವಿಜ್ಞಾನ ಮತ್ತು ತಂತ್ರಜ್ಞಾನಗಳು ದೊಡ್ಡ ಮೌಲ್ಯಗಳು. ಶಿವರಾಮ ಕಾರಂತ, ಲಂಕೇಶ್, ತೇಜಸ್ವಿಯವರಿಗೆ ಪಶ್ಚಿಮವು ಸೆಳೆದಿದ್ದೇ ಈ ದಿಸೆಯಲ್ಲಿ. ಈ ಪುಸ್ತಕ ಪ್ರಕಟವಾಗುವ ಕಾಲಕ್ಕೆ ತೇಜಸ್ವಿ ಇದ್ದಿದ್ದರೆ ಖಂಡಿತ ಇಷ್ಟಪಡುತ್ತಿದ್ದರು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...