Homeಪುಸ್ತಕ ವಿಮರ್ಶೆಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

ಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

- Advertisement -
- Advertisement -

ಪ್ರಿಯ ಮಿತ್ರರಾದ ಗಿರೀಶ್ ತಾಳಿಕಟ್ಟೆ ಅನುವಾದ ಮಾಡಿರುವ, ಮರಲಿನ್ ಮತ್ತು ಮರೈಸ್ ಬೈಲಿ ಅವರು ರಚಿಸಿರುವ ‘ಆ 117 ದಿನಗಳು’ ಪುಸ್ತಕದ ಹಸ್ತಪ್ರತಿಯನ್ನು ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದೆ. ಪ್ರವಾಸಪ್ರಿಯನಾದ ನನಗಿದು ಬಹಳ ಖುಷಿ ಕೊಟ್ಟಿತು. ಸಾಹಸಿಗಳಾದ ಮರಲಿನ್ ಮತ್ತು ಮೈರಸ್ ದಂಪತಿಗಳು ಇಂಗ್ಲೆಂಡಿನಿಂದ ಚಿಕ್ಕದೊಂದು ನಾವೆಯಲ್ಲಿ ಹೊರಟು, ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಸಮುದ್ರಗಳನ್ನು ಹಾಯುತ್ತ, ನಡುವೆ ನಾವೆ ದುರಂತಕ್ಕೊಳಗಾಗಿ, ಜೀವನ್ಮರಣದ ಗಳಿಗೆಗಳನ್ನು ಎದುರಿಸುತ್ತ ಬದುಕಿ ಬಂದ ಕಥೆಯದು. ಅವರು ಪಯಣ ಆರಂಭಿಸಿದ ಮತ್ತು ತಲುಪಿದ ಬಿಂದುಗಳ ನಡುವಿನ ಕಡಲಿನ ಹರಹನ್ನು ಭೂಪಟದಲ್ಲಿ ನೋಡಿದರೆ ದಂಗುಬಡಿಯುತ್ತದೆ. ಈ ಕಥನದಲ್ಲಿ ಪಯಣದ ಪೂರ್ವದಲ್ಲಿ, ಪಯಣದಲ್ಲಿ ಹಾಗೂ ಪಯಣದ ಬಳಿಕ ಅವರ ಬಾಳಿನಲ್ಲಿ ಪ್ರೇಮ ಸಾಹಸ ಆನಂದ ದುಃಖ ಅಗಲಿಕೆಗಳು, ಸಮುದ್ರದ ಅಲೆಗಳಂತೆ ಒಂದಾದಮೇಲೆಒಂದು ಬಂದು ಅಪ್ಪಳಿಸುತ್ತವೆ. ಇದೊಂದು ರೋಚಕವಾದ ಪ್ರವಾಸ ಕಥನ. ಇದನ್ನು ಓದುವಾಗ, ತೇಜಸ್ವಿಯವರ ‘ಮಹಾಪಲಾಯನ’ ನೆನಪಿಗೆ ಬಂದಿತು; ಎವರೆಸ್ಟ್ ಶಿಖರವನ್ನು ಏರಿ ಹಿಮಪಾತಕ್ಕೆ ಸಿಕ್ಕು ಸಾವಿನಿಂದ ಕೂದಲೆಳೆ ಅಂತರದಲ್ಲಿ ಬಚಾವಾಗಿ ಬಂದ ಅಮೆರಿಕನ್ ಪರ್ವತಾರೋಹಿ ಪೇವರ್ ಮೈಕಲ್‌ನ ‘ಥಿನ್ ಏರ್’; ಸುನ್ ಶುಯೆನ್ ಎಂಬ ಇತಿಹಾಸಜ್ಞೆ, ಚೀನಾದಿಂದ ಭಾರತಕ್ಕೆ ಹ್ಯೂಯನ್‌ತ್ಸಾಂಗ್ ಪಯಣಿಸಿದ ಹಾದಿಯಲ್ಲೆ ಪಯಣಿಸುತ್ತ ಬಂದು ಬರೆದ ಕಥನ, ‘ಟೆನ್‌ಥೌಸಂಡ್ ಮೈಲ್ಸ್ ವಿಥೌಟ್ ಕ್ಲೌಡ್’ ಮುಂತಾದ ಕೃತಿಗಳು ಮನಃಪಟಲದ ಮೇಲೆ ಹಾದುಹೋದವು.

ಮೇಲ್ಕಾಣಿಸಿದ ಪ್ರವಾಸ ಕಥನಗಳ ವಿಶಿಷ್ಟತೆಯೆಂದರೆ, ಕೆಲವು ಸಾಹಸಿಗಳಾದ ವ್ಯಕ್ತಿಗಳು ತಮ್ಮ ಜೀವನದಲ್ಲಿ ವಿಶಿಷ್ಟವಾದ ಗುರಿಯನ್ನು ಇಟ್ಟುಕೊಂಡು, ಕಷ್ಟ ಅಪಾಯಗಳಿಂದ ಕೂಡಿರುವ ಹಾದಿಯಲ್ಲಿ ಪಯಣಿಸುವುದು. ಘಾತಕ ತಿರುವುಗಳಲ್ಲಿ ಮೃತ್ಯುವಿನ ಜತೆ ಮುಖಾಬಿಲೆ ಮಾಡುತ್ತ, ಬದುಕಿನ ಹೊಸ ಅನುಭವಗಳಿಗೆ ತೆರೆದುಕೊಳ್ಳುವುದು. ಎಂತಲೇ ಅವರ ಅನುಭವದಿಂದ ಹುಟ್ಟಿದ ಈ ಕೃತಿಗಳು ಕೇವಲ ಹುಚ್ಚುಸಾಹಸಿಗಳು ಮಾಡಿದ ರೋಚಕ ಪ್ರವಾಸ ವರದಿಗಳಾಗಿಲ್ಲ. ದಾರ್ಶನಿಕವಾಗಿ ಮಾನವ ಚೈತನ್ಯದಲ್ಲಿ ಹುದುಗಿರುವ ಅದಮ್ಯ ಸಾಹಸ ಪ್ರವೃತ್ತಿಯನ್ನು ಲೋಕಕ್ಕೆ ಕಾಣಿಸುವ ಕಥನಗಳಾಗಿವೆ. ನೂರರಲ್ಲಿ ಒಬ್ಬರಾಗಿ ಸಾಮಾನ್ಯ ಲಯದ ಬದುಕನ್ನು ಬಾಳಲು ನಿರಾಕರಿಸಿ, ಎಲ್ಲರಿಗಿಂತ ವಿಶಿಷ್ಟವಾದ ಬದುಕನ್ನು ನಡೆಸುವ ವಿಶಿಷ್ಟ ಲೋಕದೃಷ್ಟಿಯುಳ್ಳವರ ಜೀವನಗಾಥೆಗಳಾಗಿವೆ. ಅಪಾರವಾದ ಜೀವನಪ್ರೀತಿಯುಳ್ಳ ವ್ಯಕ್ತಿಗಳು ತಾವು ಹೋಗುವ ಅಪರಿಚಿತ ಎಡೆಯಲ್ಲಿ ಸಿಗುವ ಜನರೊಟ್ಟಿಗೆ ಮನುಷ್ಯ ಸಂಬಂಧ ಬೆಳೆಸುವ ಮಾನವೀಯ ಅಧ್ಯಾಯಗಳಾಗಿವೆ. ಆನಂದದಾಯಕವೂ ಕಠೋರವೂ ಆದ ಬಾನು ಕಡಲು ಕಾಡು ಮರುಭೂಮಿಯಂತಹ ನಿಸರ್ಗದ ಜತೆ ಅನುಸಂಧಾನ ಮಾಡುವ ಪ್ರಯೋಗಗಳಾಗಿವೆ.

ಮರಲಿನ್ ಮತ್ತು ಮರೈಸ್ ಜೋಡಿಯ ಯಾನವನ್ನು ನೋಡುವಾಗ ‘ಜುಗಾರಿ ಕ್ರಾಸ್’ನ ಸುರೇಶ್ ಮತ್ತು ಗೌರಿಯರು ನೆನಪಾದರು. ತೇಜಸ್ವಿಯವರ ಕಥನಗಳಲ್ಲಿ ಪ್ರೇಮಿಗಳು ಮಾಡುವ ಸಾಹಸಗಳಲ್ಲಿ ಗಂಡು ಹೆಚ್ಚು ಕ್ರಿಯಾಶೀಲ, ಧೈರ್ಯಶಾಲಿ. ಮಹಿಳೆ ಅನುಸರಿಸುವವಳು. ಆದರೆ ಈ ಪ್ರವಾಸ ಕಥನ ಬಿಚ್ಚಿಡುವ ಬಾಳಕಡಲಿನಲ್ಲಿ ಕಡೆಗೋಲನ್ನು ಗಂಡು ಕೈಬಿಟ್ಟಾಗಲೆಲ್ಲ ಅದನ್ನು ಎತ್ತಿಕೊಂಡು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಾಳೆ. ನಿಸರ್ಗವು ಸ್ತ್ರೀಯೊಳಗಿನ ಅಪಾರ ಚೈತನ್ಯ ಧೈರ್ಯ ತಾಯ್ತನಗಳನ್ನು ಲೋಕಕ್ಕೆ ಕಾಣಿಸಲೆಂದೇ ಸೃಷ್ಟಿಸಿದ ನಿಗೂಢ ಪ್ರಾಕೃತಿಕ ನಾಟಕದಂತಿದೆ ಇದು. ಈ ದೃಷ್ಟಿಯಿಂದ ಕೃತಿಯನ್ನು ಗಿರೀಶ್ ಹೆಣ್ಣಿಗೆ ಅರ್ಪಿಸುತ್ತ ಆಡಿರುವ ಮಾತುಗಳು ಮಾರ್ಮಿಕವೂ ಅರ್ಥಪೂರ್ಣವೂ ಆಗಿವೆ. ಮರಲಿನ್ ತೀರಿಕೊಂಡ ಬಳಿಕ ಏಕಾಂಗಿಯಾದ ಮರೈಸ್, ಆಕೆಯನ್ನು ನೆನಪಿಸಿಕೊಳ್ಳುತ್ತ ಹೇಳುವುದು ಕೂಡ ಇದಕ್ಕೆ ಪೂರಕವಾಗಿದೆ; ‘ಎಂಥಾ ಸಂಕಷ್ಟ ಎದುರಾದಾಗಲೂ ಮರಲಿನ್ ತನ್ನೊಳಗಿನ ಬದುಕುವ ತುಡಿತವನ್ನು ಕಳೆದುಕೊಳ್ಳಲಿಲ್ಲ. ಆತ್ಮವಿಶ್ವಾಸವನ್ನು ಘಾಸಿ ಮಾಡಿಕೊಳ್ಳಲಿಲ್ಲ. ಹೆಣ್ಣು ಎಂಬ ಆ ಅದ್ಭುತ ಸೃಷ್ಟಿಗೆ ಇರುವ ಶಕ್ತಿಯೇ ಅಂತಹದ್ದು… ಮರಲಿನ್‌ಳನ್ನು ಭೇಟಿಯಾಗುವವರೆಗೆ ಪ್ರೀತಿ ವಾತ್ಸಲ್ಯ ಎಂಬುದೇ ನನಗೆ ತಿಳಿದಿರಲಿಲ್ಲ. ಆಕೆ ನನ್ನ ಬಾಳಿಗೆ ಬೆಳಕಾದಳು. ನನ್ನ ಬದುಕಿಗೆ ಬೇಕಿದ್ದ ಸುಖ, ಸಂತೋಷ, ನೆಮ್ಮದಿ ಧೈರ್ಯ ಎಲ್ಲವನ್ನೂ ತಂದವಳು. ಆಕೆಯಿಲ್ಲದೆ ನಾನು ಅಪೂರ್ಣ’; ಜ್ಞಾನೋದಯ ಸಾಕ್ಷಾತ್ಕಾರ ಎಂದರೆ ಇದುವೇ.

ಗಿರೀಶ್ ತಾಳಿಕಟ್ಟೆ

ಲವಲವಿಕೆಯ ಗದ್ಯ ಲೇಖಕರಾದ ಗಿರೀಶ್ ತಾಳಿಕಟ್ಟೆ ಕೃತಿಯನ್ನು ಸೊಗಸಾಗಿ ಅನುವಾದಿಸಿದ್ದಾರೆ. ಮತೀಯತೆ, ಜಾತೀಯತೆಯಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿರುವ ಭಾರತದ ಹೊಸತಲೆಮಾರಿನ ಹುಡುಗ-ಹುಡುಗಿಯರು ಇಂತಹ ಕಥನಗಳನ್ನು ಓದಬೇಕು; ಇದರಿಂದ ಹೊರಲೋಕದಲ್ಲಿ ಚೈತನ್ಯಶೀಲರಾದ ಜನ ಸಂಪ್ರದಾಯದ ಪಂಕದಲ್ಲಿ ಸಿಕ್ಕಿಕೊಳ್ಳದೆ ಹೇಗೆಲ್ಲ ಬದುಕಿನ ಸಾಹಸಗಳನ್ನು ಮಾಡುವುದಕ್ಕೆ ತುಡಿಯುತ್ತಿದ್ದಾರೆಂದು ತಿಳಿಯುತ್ತದೆ. ದೇಶವನ್ನು ದ್ವೇಷದಿಂದ ಕಟ್ಟಲು ಸಾಧ್ಯವಿಲ್ಲ. ಜ್ಞಾನ ಸಾಹಸ ಪ್ರಯೋಗ ಕ್ರಿಯಾಶೀಲತೆಯಿಂದ ಕಟ್ಟುವುದಕ್ಕೆ ಸಾಧ್ಯ. ಯೂರೋಪು ವಸಾಹತುಶಾಹಿಯಾಗಿ ಏಶಿಯಾ ಆಫ್ರಿಕಾಗಳನ್ನು ವಶಪಡಿಸಿಕೊಂಡು ಮಾಡಿರುವ ಕೃತ್ಯಗಳು ಚಾರಿತ್ರಿಕ ಅಪರಾಧಗಳು ದಿಟ. ಆದರೆ ಅಲ್ಲಿನ ಜನರಲ್ಲಿರುವ ಸಾಹಸಪ್ರವೃತ್ತಿ, ಅನ್ವೇಷಕ ಕುತೂಹಲ, ಸಾವಿಗೆ ಹೆದರದೆ ಕೈಗೊಳ್ಳುವ ಯಾನ, ವಿಜ್ಞಾನ ಮತ್ತು ತಂತ್ರಜ್ಞಾನಗಳು ದೊಡ್ಡ ಮೌಲ್ಯಗಳು. ಶಿವರಾಮ ಕಾರಂತ, ಲಂಕೇಶ್, ತೇಜಸ್ವಿಯವರಿಗೆ ಪಶ್ಚಿಮವು ಸೆಳೆದಿದ್ದೇ ಈ ದಿಸೆಯಲ್ಲಿ. ಈ ಪುಸ್ತಕ ಪ್ರಕಟವಾಗುವ ಕಾಲಕ್ಕೆ ತೇಜಸ್ವಿ ಇದ್ದಿದ್ದರೆ ಖಂಡಿತ ಇಷ್ಟಪಡುತ್ತಿದ್ದರು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...