Homeಪುಸ್ತಕ ವಿಮರ್ಶೆಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

ಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

- Advertisement -
- Advertisement -

ಪ್ರಿಯ ಮಿತ್ರರಾದ ಗಿರೀಶ್ ತಾಳಿಕಟ್ಟೆ ಅನುವಾದ ಮಾಡಿರುವ, ಮರಲಿನ್ ಮತ್ತು ಮರೈಸ್ ಬೈಲಿ ಅವರು ರಚಿಸಿರುವ ‘ಆ 117 ದಿನಗಳು’ ಪುಸ್ತಕದ ಹಸ್ತಪ್ರತಿಯನ್ನು ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದೆ. ಪ್ರವಾಸಪ್ರಿಯನಾದ ನನಗಿದು ಬಹಳ ಖುಷಿ ಕೊಟ್ಟಿತು. ಸಾಹಸಿಗಳಾದ ಮರಲಿನ್ ಮತ್ತು ಮೈರಸ್ ದಂಪತಿಗಳು ಇಂಗ್ಲೆಂಡಿನಿಂದ ಚಿಕ್ಕದೊಂದು ನಾವೆಯಲ್ಲಿ ಹೊರಟು, ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಸಮುದ್ರಗಳನ್ನು ಹಾಯುತ್ತ, ನಡುವೆ ನಾವೆ ದುರಂತಕ್ಕೊಳಗಾಗಿ, ಜೀವನ್ಮರಣದ ಗಳಿಗೆಗಳನ್ನು ಎದುರಿಸುತ್ತ ಬದುಕಿ ಬಂದ ಕಥೆಯದು. ಅವರು ಪಯಣ ಆರಂಭಿಸಿದ ಮತ್ತು ತಲುಪಿದ ಬಿಂದುಗಳ ನಡುವಿನ ಕಡಲಿನ ಹರಹನ್ನು ಭೂಪಟದಲ್ಲಿ ನೋಡಿದರೆ ದಂಗುಬಡಿಯುತ್ತದೆ. ಈ ಕಥನದಲ್ಲಿ ಪಯಣದ ಪೂರ್ವದಲ್ಲಿ, ಪಯಣದಲ್ಲಿ ಹಾಗೂ ಪಯಣದ ಬಳಿಕ ಅವರ ಬಾಳಿನಲ್ಲಿ ಪ್ರೇಮ ಸಾಹಸ ಆನಂದ ದುಃಖ ಅಗಲಿಕೆಗಳು, ಸಮುದ್ರದ ಅಲೆಗಳಂತೆ ಒಂದಾದಮೇಲೆಒಂದು ಬಂದು ಅಪ್ಪಳಿಸುತ್ತವೆ. ಇದೊಂದು ರೋಚಕವಾದ ಪ್ರವಾಸ ಕಥನ. ಇದನ್ನು ಓದುವಾಗ, ತೇಜಸ್ವಿಯವರ ‘ಮಹಾಪಲಾಯನ’ ನೆನಪಿಗೆ ಬಂದಿತು; ಎವರೆಸ್ಟ್ ಶಿಖರವನ್ನು ಏರಿ ಹಿಮಪಾತಕ್ಕೆ ಸಿಕ್ಕು ಸಾವಿನಿಂದ ಕೂದಲೆಳೆ ಅಂತರದಲ್ಲಿ ಬಚಾವಾಗಿ ಬಂದ ಅಮೆರಿಕನ್ ಪರ್ವತಾರೋಹಿ ಪೇವರ್ ಮೈಕಲ್‌ನ ‘ಥಿನ್ ಏರ್’; ಸುನ್ ಶುಯೆನ್ ಎಂಬ ಇತಿಹಾಸಜ್ಞೆ, ಚೀನಾದಿಂದ ಭಾರತಕ್ಕೆ ಹ್ಯೂಯನ್‌ತ್ಸಾಂಗ್ ಪಯಣಿಸಿದ ಹಾದಿಯಲ್ಲೆ ಪಯಣಿಸುತ್ತ ಬಂದು ಬರೆದ ಕಥನ, ‘ಟೆನ್‌ಥೌಸಂಡ್ ಮೈಲ್ಸ್ ವಿಥೌಟ್ ಕ್ಲೌಡ್’ ಮುಂತಾದ ಕೃತಿಗಳು ಮನಃಪಟಲದ ಮೇಲೆ ಹಾದುಹೋದವು.

ಮೇಲ್ಕಾಣಿಸಿದ ಪ್ರವಾಸ ಕಥನಗಳ ವಿಶಿಷ್ಟತೆಯೆಂದರೆ, ಕೆಲವು ಸಾಹಸಿಗಳಾದ ವ್ಯಕ್ತಿಗಳು ತಮ್ಮ ಜೀವನದಲ್ಲಿ ವಿಶಿಷ್ಟವಾದ ಗುರಿಯನ್ನು ಇಟ್ಟುಕೊಂಡು, ಕಷ್ಟ ಅಪಾಯಗಳಿಂದ ಕೂಡಿರುವ ಹಾದಿಯಲ್ಲಿ ಪಯಣಿಸುವುದು. ಘಾತಕ ತಿರುವುಗಳಲ್ಲಿ ಮೃತ್ಯುವಿನ ಜತೆ ಮುಖಾಬಿಲೆ ಮಾಡುತ್ತ, ಬದುಕಿನ ಹೊಸ ಅನುಭವಗಳಿಗೆ ತೆರೆದುಕೊಳ್ಳುವುದು. ಎಂತಲೇ ಅವರ ಅನುಭವದಿಂದ ಹುಟ್ಟಿದ ಈ ಕೃತಿಗಳು ಕೇವಲ ಹುಚ್ಚುಸಾಹಸಿಗಳು ಮಾಡಿದ ರೋಚಕ ಪ್ರವಾಸ ವರದಿಗಳಾಗಿಲ್ಲ. ದಾರ್ಶನಿಕವಾಗಿ ಮಾನವ ಚೈತನ್ಯದಲ್ಲಿ ಹುದುಗಿರುವ ಅದಮ್ಯ ಸಾಹಸ ಪ್ರವೃತ್ತಿಯನ್ನು ಲೋಕಕ್ಕೆ ಕಾಣಿಸುವ ಕಥನಗಳಾಗಿವೆ. ನೂರರಲ್ಲಿ ಒಬ್ಬರಾಗಿ ಸಾಮಾನ್ಯ ಲಯದ ಬದುಕನ್ನು ಬಾಳಲು ನಿರಾಕರಿಸಿ, ಎಲ್ಲರಿಗಿಂತ ವಿಶಿಷ್ಟವಾದ ಬದುಕನ್ನು ನಡೆಸುವ ವಿಶಿಷ್ಟ ಲೋಕದೃಷ್ಟಿಯುಳ್ಳವರ ಜೀವನಗಾಥೆಗಳಾಗಿವೆ. ಅಪಾರವಾದ ಜೀವನಪ್ರೀತಿಯುಳ್ಳ ವ್ಯಕ್ತಿಗಳು ತಾವು ಹೋಗುವ ಅಪರಿಚಿತ ಎಡೆಯಲ್ಲಿ ಸಿಗುವ ಜನರೊಟ್ಟಿಗೆ ಮನುಷ್ಯ ಸಂಬಂಧ ಬೆಳೆಸುವ ಮಾನವೀಯ ಅಧ್ಯಾಯಗಳಾಗಿವೆ. ಆನಂದದಾಯಕವೂ ಕಠೋರವೂ ಆದ ಬಾನು ಕಡಲು ಕಾಡು ಮರುಭೂಮಿಯಂತಹ ನಿಸರ್ಗದ ಜತೆ ಅನುಸಂಧಾನ ಮಾಡುವ ಪ್ರಯೋಗಗಳಾಗಿವೆ.

ಮರಲಿನ್ ಮತ್ತು ಮರೈಸ್ ಜೋಡಿಯ ಯಾನವನ್ನು ನೋಡುವಾಗ ‘ಜುಗಾರಿ ಕ್ರಾಸ್’ನ ಸುರೇಶ್ ಮತ್ತು ಗೌರಿಯರು ನೆನಪಾದರು. ತೇಜಸ್ವಿಯವರ ಕಥನಗಳಲ್ಲಿ ಪ್ರೇಮಿಗಳು ಮಾಡುವ ಸಾಹಸಗಳಲ್ಲಿ ಗಂಡು ಹೆಚ್ಚು ಕ್ರಿಯಾಶೀಲ, ಧೈರ್ಯಶಾಲಿ. ಮಹಿಳೆ ಅನುಸರಿಸುವವಳು. ಆದರೆ ಈ ಪ್ರವಾಸ ಕಥನ ಬಿಚ್ಚಿಡುವ ಬಾಳಕಡಲಿನಲ್ಲಿ ಕಡೆಗೋಲನ್ನು ಗಂಡು ಕೈಬಿಟ್ಟಾಗಲೆಲ್ಲ ಅದನ್ನು ಎತ್ತಿಕೊಂಡು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಾಳೆ. ನಿಸರ್ಗವು ಸ್ತ್ರೀಯೊಳಗಿನ ಅಪಾರ ಚೈತನ್ಯ ಧೈರ್ಯ ತಾಯ್ತನಗಳನ್ನು ಲೋಕಕ್ಕೆ ಕಾಣಿಸಲೆಂದೇ ಸೃಷ್ಟಿಸಿದ ನಿಗೂಢ ಪ್ರಾಕೃತಿಕ ನಾಟಕದಂತಿದೆ ಇದು. ಈ ದೃಷ್ಟಿಯಿಂದ ಕೃತಿಯನ್ನು ಗಿರೀಶ್ ಹೆಣ್ಣಿಗೆ ಅರ್ಪಿಸುತ್ತ ಆಡಿರುವ ಮಾತುಗಳು ಮಾರ್ಮಿಕವೂ ಅರ್ಥಪೂರ್ಣವೂ ಆಗಿವೆ. ಮರಲಿನ್ ತೀರಿಕೊಂಡ ಬಳಿಕ ಏಕಾಂಗಿಯಾದ ಮರೈಸ್, ಆಕೆಯನ್ನು ನೆನಪಿಸಿಕೊಳ್ಳುತ್ತ ಹೇಳುವುದು ಕೂಡ ಇದಕ್ಕೆ ಪೂರಕವಾಗಿದೆ; ‘ಎಂಥಾ ಸಂಕಷ್ಟ ಎದುರಾದಾಗಲೂ ಮರಲಿನ್ ತನ್ನೊಳಗಿನ ಬದುಕುವ ತುಡಿತವನ್ನು ಕಳೆದುಕೊಳ್ಳಲಿಲ್ಲ. ಆತ್ಮವಿಶ್ವಾಸವನ್ನು ಘಾಸಿ ಮಾಡಿಕೊಳ್ಳಲಿಲ್ಲ. ಹೆಣ್ಣು ಎಂಬ ಆ ಅದ್ಭುತ ಸೃಷ್ಟಿಗೆ ಇರುವ ಶಕ್ತಿಯೇ ಅಂತಹದ್ದು… ಮರಲಿನ್‌ಳನ್ನು ಭೇಟಿಯಾಗುವವರೆಗೆ ಪ್ರೀತಿ ವಾತ್ಸಲ್ಯ ಎಂಬುದೇ ನನಗೆ ತಿಳಿದಿರಲಿಲ್ಲ. ಆಕೆ ನನ್ನ ಬಾಳಿಗೆ ಬೆಳಕಾದಳು. ನನ್ನ ಬದುಕಿಗೆ ಬೇಕಿದ್ದ ಸುಖ, ಸಂತೋಷ, ನೆಮ್ಮದಿ ಧೈರ್ಯ ಎಲ್ಲವನ್ನೂ ತಂದವಳು. ಆಕೆಯಿಲ್ಲದೆ ನಾನು ಅಪೂರ್ಣ’; ಜ್ಞಾನೋದಯ ಸಾಕ್ಷಾತ್ಕಾರ ಎಂದರೆ ಇದುವೇ.

ಗಿರೀಶ್ ತಾಳಿಕಟ್ಟೆ

ಲವಲವಿಕೆಯ ಗದ್ಯ ಲೇಖಕರಾದ ಗಿರೀಶ್ ತಾಳಿಕಟ್ಟೆ ಕೃತಿಯನ್ನು ಸೊಗಸಾಗಿ ಅನುವಾದಿಸಿದ್ದಾರೆ. ಮತೀಯತೆ, ಜಾತೀಯತೆಯಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿರುವ ಭಾರತದ ಹೊಸತಲೆಮಾರಿನ ಹುಡುಗ-ಹುಡುಗಿಯರು ಇಂತಹ ಕಥನಗಳನ್ನು ಓದಬೇಕು; ಇದರಿಂದ ಹೊರಲೋಕದಲ್ಲಿ ಚೈತನ್ಯಶೀಲರಾದ ಜನ ಸಂಪ್ರದಾಯದ ಪಂಕದಲ್ಲಿ ಸಿಕ್ಕಿಕೊಳ್ಳದೆ ಹೇಗೆಲ್ಲ ಬದುಕಿನ ಸಾಹಸಗಳನ್ನು ಮಾಡುವುದಕ್ಕೆ ತುಡಿಯುತ್ತಿದ್ದಾರೆಂದು ತಿಳಿಯುತ್ತದೆ. ದೇಶವನ್ನು ದ್ವೇಷದಿಂದ ಕಟ್ಟಲು ಸಾಧ್ಯವಿಲ್ಲ. ಜ್ಞಾನ ಸಾಹಸ ಪ್ರಯೋಗ ಕ್ರಿಯಾಶೀಲತೆಯಿಂದ ಕಟ್ಟುವುದಕ್ಕೆ ಸಾಧ್ಯ. ಯೂರೋಪು ವಸಾಹತುಶಾಹಿಯಾಗಿ ಏಶಿಯಾ ಆಫ್ರಿಕಾಗಳನ್ನು ವಶಪಡಿಸಿಕೊಂಡು ಮಾಡಿರುವ ಕೃತ್ಯಗಳು ಚಾರಿತ್ರಿಕ ಅಪರಾಧಗಳು ದಿಟ. ಆದರೆ ಅಲ್ಲಿನ ಜನರಲ್ಲಿರುವ ಸಾಹಸಪ್ರವೃತ್ತಿ, ಅನ್ವೇಷಕ ಕುತೂಹಲ, ಸಾವಿಗೆ ಹೆದರದೆ ಕೈಗೊಳ್ಳುವ ಯಾನ, ವಿಜ್ಞಾನ ಮತ್ತು ತಂತ್ರಜ್ಞಾನಗಳು ದೊಡ್ಡ ಮೌಲ್ಯಗಳು. ಶಿವರಾಮ ಕಾರಂತ, ಲಂಕೇಶ್, ತೇಜಸ್ವಿಯವರಿಗೆ ಪಶ್ಚಿಮವು ಸೆಳೆದಿದ್ದೇ ಈ ದಿಸೆಯಲ್ಲಿ. ಈ ಪುಸ್ತಕ ಪ್ರಕಟವಾಗುವ ಕಾಲಕ್ಕೆ ತೇಜಸ್ವಿ ಇದ್ದಿದ್ದರೆ ಖಂಡಿತ ಇಷ್ಟಪಡುತ್ತಿದ್ದರು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...