Homeಪುಸ್ತಕ ವಿಮರ್ಶೆಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

ಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

- Advertisement -
- Advertisement -

ಪ್ರಿಯ ಮಿತ್ರರಾದ ಗಿರೀಶ್ ತಾಳಿಕಟ್ಟೆ ಅನುವಾದ ಮಾಡಿರುವ, ಮರಲಿನ್ ಮತ್ತು ಮರೈಸ್ ಬೈಲಿ ಅವರು ರಚಿಸಿರುವ ‘ಆ 117 ದಿನಗಳು’ ಪುಸ್ತಕದ ಹಸ್ತಪ್ರತಿಯನ್ನು ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದೆ. ಪ್ರವಾಸಪ್ರಿಯನಾದ ನನಗಿದು ಬಹಳ ಖುಷಿ ಕೊಟ್ಟಿತು. ಸಾಹಸಿಗಳಾದ ಮರಲಿನ್ ಮತ್ತು ಮೈರಸ್ ದಂಪತಿಗಳು ಇಂಗ್ಲೆಂಡಿನಿಂದ ಚಿಕ್ಕದೊಂದು ನಾವೆಯಲ್ಲಿ ಹೊರಟು, ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಸಮುದ್ರಗಳನ್ನು ಹಾಯುತ್ತ, ನಡುವೆ ನಾವೆ ದುರಂತಕ್ಕೊಳಗಾಗಿ, ಜೀವನ್ಮರಣದ ಗಳಿಗೆಗಳನ್ನು ಎದುರಿಸುತ್ತ ಬದುಕಿ ಬಂದ ಕಥೆಯದು. ಅವರು ಪಯಣ ಆರಂಭಿಸಿದ ಮತ್ತು ತಲುಪಿದ ಬಿಂದುಗಳ ನಡುವಿನ ಕಡಲಿನ ಹರಹನ್ನು ಭೂಪಟದಲ್ಲಿ ನೋಡಿದರೆ ದಂಗುಬಡಿಯುತ್ತದೆ. ಈ ಕಥನದಲ್ಲಿ ಪಯಣದ ಪೂರ್ವದಲ್ಲಿ, ಪಯಣದಲ್ಲಿ ಹಾಗೂ ಪಯಣದ ಬಳಿಕ ಅವರ ಬಾಳಿನಲ್ಲಿ ಪ್ರೇಮ ಸಾಹಸ ಆನಂದ ದುಃಖ ಅಗಲಿಕೆಗಳು, ಸಮುದ್ರದ ಅಲೆಗಳಂತೆ ಒಂದಾದಮೇಲೆಒಂದು ಬಂದು ಅಪ್ಪಳಿಸುತ್ತವೆ. ಇದೊಂದು ರೋಚಕವಾದ ಪ್ರವಾಸ ಕಥನ. ಇದನ್ನು ಓದುವಾಗ, ತೇಜಸ್ವಿಯವರ ‘ಮಹಾಪಲಾಯನ’ ನೆನಪಿಗೆ ಬಂದಿತು; ಎವರೆಸ್ಟ್ ಶಿಖರವನ್ನು ಏರಿ ಹಿಮಪಾತಕ್ಕೆ ಸಿಕ್ಕು ಸಾವಿನಿಂದ ಕೂದಲೆಳೆ ಅಂತರದಲ್ಲಿ ಬಚಾವಾಗಿ ಬಂದ ಅಮೆರಿಕನ್ ಪರ್ವತಾರೋಹಿ ಪೇವರ್ ಮೈಕಲ್‌ನ ‘ಥಿನ್ ಏರ್’; ಸುನ್ ಶುಯೆನ್ ಎಂಬ ಇತಿಹಾಸಜ್ಞೆ, ಚೀನಾದಿಂದ ಭಾರತಕ್ಕೆ ಹ್ಯೂಯನ್‌ತ್ಸಾಂಗ್ ಪಯಣಿಸಿದ ಹಾದಿಯಲ್ಲೆ ಪಯಣಿಸುತ್ತ ಬಂದು ಬರೆದ ಕಥನ, ‘ಟೆನ್‌ಥೌಸಂಡ್ ಮೈಲ್ಸ್ ವಿಥೌಟ್ ಕ್ಲೌಡ್’ ಮುಂತಾದ ಕೃತಿಗಳು ಮನಃಪಟಲದ ಮೇಲೆ ಹಾದುಹೋದವು.

ಮೇಲ್ಕಾಣಿಸಿದ ಪ್ರವಾಸ ಕಥನಗಳ ವಿಶಿಷ್ಟತೆಯೆಂದರೆ, ಕೆಲವು ಸಾಹಸಿಗಳಾದ ವ್ಯಕ್ತಿಗಳು ತಮ್ಮ ಜೀವನದಲ್ಲಿ ವಿಶಿಷ್ಟವಾದ ಗುರಿಯನ್ನು ಇಟ್ಟುಕೊಂಡು, ಕಷ್ಟ ಅಪಾಯಗಳಿಂದ ಕೂಡಿರುವ ಹಾದಿಯಲ್ಲಿ ಪಯಣಿಸುವುದು. ಘಾತಕ ತಿರುವುಗಳಲ್ಲಿ ಮೃತ್ಯುವಿನ ಜತೆ ಮುಖಾಬಿಲೆ ಮಾಡುತ್ತ, ಬದುಕಿನ ಹೊಸ ಅನುಭವಗಳಿಗೆ ತೆರೆದುಕೊಳ್ಳುವುದು. ಎಂತಲೇ ಅವರ ಅನುಭವದಿಂದ ಹುಟ್ಟಿದ ಈ ಕೃತಿಗಳು ಕೇವಲ ಹುಚ್ಚುಸಾಹಸಿಗಳು ಮಾಡಿದ ರೋಚಕ ಪ್ರವಾಸ ವರದಿಗಳಾಗಿಲ್ಲ. ದಾರ್ಶನಿಕವಾಗಿ ಮಾನವ ಚೈತನ್ಯದಲ್ಲಿ ಹುದುಗಿರುವ ಅದಮ್ಯ ಸಾಹಸ ಪ್ರವೃತ್ತಿಯನ್ನು ಲೋಕಕ್ಕೆ ಕಾಣಿಸುವ ಕಥನಗಳಾಗಿವೆ. ನೂರರಲ್ಲಿ ಒಬ್ಬರಾಗಿ ಸಾಮಾನ್ಯ ಲಯದ ಬದುಕನ್ನು ಬಾಳಲು ನಿರಾಕರಿಸಿ, ಎಲ್ಲರಿಗಿಂತ ವಿಶಿಷ್ಟವಾದ ಬದುಕನ್ನು ನಡೆಸುವ ವಿಶಿಷ್ಟ ಲೋಕದೃಷ್ಟಿಯುಳ್ಳವರ ಜೀವನಗಾಥೆಗಳಾಗಿವೆ. ಅಪಾರವಾದ ಜೀವನಪ್ರೀತಿಯುಳ್ಳ ವ್ಯಕ್ತಿಗಳು ತಾವು ಹೋಗುವ ಅಪರಿಚಿತ ಎಡೆಯಲ್ಲಿ ಸಿಗುವ ಜನರೊಟ್ಟಿಗೆ ಮನುಷ್ಯ ಸಂಬಂಧ ಬೆಳೆಸುವ ಮಾನವೀಯ ಅಧ್ಯಾಯಗಳಾಗಿವೆ. ಆನಂದದಾಯಕವೂ ಕಠೋರವೂ ಆದ ಬಾನು ಕಡಲು ಕಾಡು ಮರುಭೂಮಿಯಂತಹ ನಿಸರ್ಗದ ಜತೆ ಅನುಸಂಧಾನ ಮಾಡುವ ಪ್ರಯೋಗಗಳಾಗಿವೆ.

ಮರಲಿನ್ ಮತ್ತು ಮರೈಸ್ ಜೋಡಿಯ ಯಾನವನ್ನು ನೋಡುವಾಗ ‘ಜುಗಾರಿ ಕ್ರಾಸ್’ನ ಸುರೇಶ್ ಮತ್ತು ಗೌರಿಯರು ನೆನಪಾದರು. ತೇಜಸ್ವಿಯವರ ಕಥನಗಳಲ್ಲಿ ಪ್ರೇಮಿಗಳು ಮಾಡುವ ಸಾಹಸಗಳಲ್ಲಿ ಗಂಡು ಹೆಚ್ಚು ಕ್ರಿಯಾಶೀಲ, ಧೈರ್ಯಶಾಲಿ. ಮಹಿಳೆ ಅನುಸರಿಸುವವಳು. ಆದರೆ ಈ ಪ್ರವಾಸ ಕಥನ ಬಿಚ್ಚಿಡುವ ಬಾಳಕಡಲಿನಲ್ಲಿ ಕಡೆಗೋಲನ್ನು ಗಂಡು ಕೈಬಿಟ್ಟಾಗಲೆಲ್ಲ ಅದನ್ನು ಎತ್ತಿಕೊಂಡು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಾಳೆ. ನಿಸರ್ಗವು ಸ್ತ್ರೀಯೊಳಗಿನ ಅಪಾರ ಚೈತನ್ಯ ಧೈರ್ಯ ತಾಯ್ತನಗಳನ್ನು ಲೋಕಕ್ಕೆ ಕಾಣಿಸಲೆಂದೇ ಸೃಷ್ಟಿಸಿದ ನಿಗೂಢ ಪ್ರಾಕೃತಿಕ ನಾಟಕದಂತಿದೆ ಇದು. ಈ ದೃಷ್ಟಿಯಿಂದ ಕೃತಿಯನ್ನು ಗಿರೀಶ್ ಹೆಣ್ಣಿಗೆ ಅರ್ಪಿಸುತ್ತ ಆಡಿರುವ ಮಾತುಗಳು ಮಾರ್ಮಿಕವೂ ಅರ್ಥಪೂರ್ಣವೂ ಆಗಿವೆ. ಮರಲಿನ್ ತೀರಿಕೊಂಡ ಬಳಿಕ ಏಕಾಂಗಿಯಾದ ಮರೈಸ್, ಆಕೆಯನ್ನು ನೆನಪಿಸಿಕೊಳ್ಳುತ್ತ ಹೇಳುವುದು ಕೂಡ ಇದಕ್ಕೆ ಪೂರಕವಾಗಿದೆ; ‘ಎಂಥಾ ಸಂಕಷ್ಟ ಎದುರಾದಾಗಲೂ ಮರಲಿನ್ ತನ್ನೊಳಗಿನ ಬದುಕುವ ತುಡಿತವನ್ನು ಕಳೆದುಕೊಳ್ಳಲಿಲ್ಲ. ಆತ್ಮವಿಶ್ವಾಸವನ್ನು ಘಾಸಿ ಮಾಡಿಕೊಳ್ಳಲಿಲ್ಲ. ಹೆಣ್ಣು ಎಂಬ ಆ ಅದ್ಭುತ ಸೃಷ್ಟಿಗೆ ಇರುವ ಶಕ್ತಿಯೇ ಅಂತಹದ್ದು… ಮರಲಿನ್‌ಳನ್ನು ಭೇಟಿಯಾಗುವವರೆಗೆ ಪ್ರೀತಿ ವಾತ್ಸಲ್ಯ ಎಂಬುದೇ ನನಗೆ ತಿಳಿದಿರಲಿಲ್ಲ. ಆಕೆ ನನ್ನ ಬಾಳಿಗೆ ಬೆಳಕಾದಳು. ನನ್ನ ಬದುಕಿಗೆ ಬೇಕಿದ್ದ ಸುಖ, ಸಂತೋಷ, ನೆಮ್ಮದಿ ಧೈರ್ಯ ಎಲ್ಲವನ್ನೂ ತಂದವಳು. ಆಕೆಯಿಲ್ಲದೆ ನಾನು ಅಪೂರ್ಣ’; ಜ್ಞಾನೋದಯ ಸಾಕ್ಷಾತ್ಕಾರ ಎಂದರೆ ಇದುವೇ.

ಗಿರೀಶ್ ತಾಳಿಕಟ್ಟೆ

ಲವಲವಿಕೆಯ ಗದ್ಯ ಲೇಖಕರಾದ ಗಿರೀಶ್ ತಾಳಿಕಟ್ಟೆ ಕೃತಿಯನ್ನು ಸೊಗಸಾಗಿ ಅನುವಾದಿಸಿದ್ದಾರೆ. ಮತೀಯತೆ, ಜಾತೀಯತೆಯಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿರುವ ಭಾರತದ ಹೊಸತಲೆಮಾರಿನ ಹುಡುಗ-ಹುಡುಗಿಯರು ಇಂತಹ ಕಥನಗಳನ್ನು ಓದಬೇಕು; ಇದರಿಂದ ಹೊರಲೋಕದಲ್ಲಿ ಚೈತನ್ಯಶೀಲರಾದ ಜನ ಸಂಪ್ರದಾಯದ ಪಂಕದಲ್ಲಿ ಸಿಕ್ಕಿಕೊಳ್ಳದೆ ಹೇಗೆಲ್ಲ ಬದುಕಿನ ಸಾಹಸಗಳನ್ನು ಮಾಡುವುದಕ್ಕೆ ತುಡಿಯುತ್ತಿದ್ದಾರೆಂದು ತಿಳಿಯುತ್ತದೆ. ದೇಶವನ್ನು ದ್ವೇಷದಿಂದ ಕಟ್ಟಲು ಸಾಧ್ಯವಿಲ್ಲ. ಜ್ಞಾನ ಸಾಹಸ ಪ್ರಯೋಗ ಕ್ರಿಯಾಶೀಲತೆಯಿಂದ ಕಟ್ಟುವುದಕ್ಕೆ ಸಾಧ್ಯ. ಯೂರೋಪು ವಸಾಹತುಶಾಹಿಯಾಗಿ ಏಶಿಯಾ ಆಫ್ರಿಕಾಗಳನ್ನು ವಶಪಡಿಸಿಕೊಂಡು ಮಾಡಿರುವ ಕೃತ್ಯಗಳು ಚಾರಿತ್ರಿಕ ಅಪರಾಧಗಳು ದಿಟ. ಆದರೆ ಅಲ್ಲಿನ ಜನರಲ್ಲಿರುವ ಸಾಹಸಪ್ರವೃತ್ತಿ, ಅನ್ವೇಷಕ ಕುತೂಹಲ, ಸಾವಿಗೆ ಹೆದರದೆ ಕೈಗೊಳ್ಳುವ ಯಾನ, ವಿಜ್ಞಾನ ಮತ್ತು ತಂತ್ರಜ್ಞಾನಗಳು ದೊಡ್ಡ ಮೌಲ್ಯಗಳು. ಶಿವರಾಮ ಕಾರಂತ, ಲಂಕೇಶ್, ತೇಜಸ್ವಿಯವರಿಗೆ ಪಶ್ಚಿಮವು ಸೆಳೆದಿದ್ದೇ ಈ ದಿಸೆಯಲ್ಲಿ. ಈ ಪುಸ್ತಕ ಪ್ರಕಟವಾಗುವ ಕಾಲಕ್ಕೆ ತೇಜಸ್ವಿ ಇದ್ದಿದ್ದರೆ ಖಂಡಿತ ಇಷ್ಟಪಡುತ್ತಿದ್ದರು.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

 


ಇದನ್ನೂ ಓದಿ: ಕವನ; ಕೋಗಿಲೆಗೆ ಸುಖವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...