Homeಮುಖಪುಟವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

- Advertisement -
- Advertisement -

ಭಾರತದ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) 1956ರಲ್ಲಿ ಭಾರತ ಸರ್ಕಾರ ಸ್ಥಾಪಿಸಿದ ಶಾಸನಬದ್ಧ ಸಂಸ್ಥೆ. ದೇಶದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಮಾನದಂಡಗಳನ್ನು ರೂಪಿಸುವುದು ಮತ್ತು ಅವುಗಳ ಜಾರಿಯನ್ನು ಖಚಿತಪಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ವಿಶ್ವವಿದ್ಯಾಲಯದ ಶಿಕ್ಷಣದ ಸಮನ್ವಯ ಮತ್ತು ಗುಣಮಟ್ಟಗಳ ನಿರ್ವಹಣೆಯಲ್ಲಿ ಯುಜಿಸಿ ನಿರ್ಣಾಯಕ ಪಾತ್ರ ವಹಿಸುತ್ತದೆ.

ಸ್ವಾತಂತ್ರ್ಯದ ನಂತರ ಭಾರತವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿತು. ಆದರೆ ಹೀಗೆ ಸ್ಥಾಪಿತವಾದ ಸಂಸ್ಥೆಗಳಲ್ಲಿ ಸ್ಥಿರವಾದ ಶೈಕ್ಷಣಿಕ ಮಾನದಂಡಗಳನ್ನು ರೂಪಿಸುವ ಮತ್ತು ದೇಶಾದ್ಯಂತ ಉನ್ನತ ಶಿಕ್ಷಣದ ಗುಣಮಟ್ಟವನ್ನು ಪ್ರಮಾಣೀಕರಿಸುವ ಅಗತ್ಯವಿತ್ತು. ಇದನ್ನು ಖಚಿತಪಡಿಸಿಕೊಳ್ಳುವ ಹಾಗು ಶೈಕ್ಷಣಿಕ ಗುಣಮಟ್ಟವನ್ನು ಎತ್ತಿಹಿಡಿಯಲು, ಸಂಸ್ಥೆಗಳನ್ನು ಮೌಲ್ಯಮಾಪನ ಮಾಡುವ ಮತ್ತು ಮಾನ್ಯತೆ ನೀಡುವ ಕಾರ್ಯವನ್ನು ನಿರ್ವಹಿಸಲು ಯುಜಿಸಿಯ ಸ್ಥಾಪನೆಯಾಯ್ತು.

ಇದರೊಂದಿಗೆ ದೇಶದ ವೈವಿಧ್ಯಮಯ ಶಿಕ್ಷಣ ವ್ಯವಸ್ಥೆಗೆ ಹಣಕಾಸು ಕೂಡ ಬಹಳ ಮುಖ್ಯವಾಗಿದ್ದು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸಂಪನ್ಮೂಲಗಳ ನ್ಯಾಯಯುತ ಮತ್ತು ಪರಿಣಾಮಕಾರಿ ವಿತರಣೆಯನ್ನು ಮಾಡಲು ಕೂಡ ಕೇಂದ್ರೀಕೃತ ಸಂಸ್ಥೆಯಾಗಿ ಯುಜಿಸಿಯನ್ನು ಸ್ಥಾಪಿಸಲಾಯಿತು.

ಇಷ್ಟೇ ಅಲ್ಲದೆ ಭಾರತದಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಜಾಗತಿಕ ಸ್ಪರ್ಧಾತ್ಮಕತೆ ಮತ್ತು ರಾಷ್ಟ್ರೀಯ ಅಭಿವೃದ್ಧಿ ಗುರಿಗಳತ್ತ ಕೊಂಡೊಯ್ಯುವ ನೀತಿಗಳನ್ನು ಅಭಿವೃದ್ಧಿಪಡಿಸಲು ಚಿಂತಕರ ಚಾವಡಿಯಾಗಿ ಯುಜಿಸಿ ಕಾರ್ಯನಿರ್ವಹಿಸಬೇಕೆಂದು ಉದ್ದೇಶಿಸಲಾಗಿತ್ತು ಹಾಗು ಆರಂಭದ ಬಹುಕಾಲ ಯುಜಿಸಿಯು ಈ ಉದ್ದೇಶಗಳೆಡೆಗೆ ಕಾರ್ಯನಿರ್ವಹಿಸಿತು.

ಇದಲ್ಲದೆ ಪ್ರಾಧ್ಯಾಪಕರ, ಕುಲಪತಿಗಳ ನೇಮಕಾತಿ, ಬಡ್ತಿ, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಹಲವಾರು ವಿದ್ಯಾರ್ಥಿವೇತನಗಳ ಮೂಲಕ ಬೆಂಬಲ ನೀಡಲು ಯುಜಿಸಿ ನಿಯಮಾವಳಿಗಳನ್ನು ರೂಪಿಸಿ ನಿರ್ವಹಿಸುತ್ತದೆ. ಇದರಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಳು ಮತ್ತು ಉಪನ್ಯಾಸಕ ಅರ್ಹತೆಗಳಿಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಕೂಡ ಸೇರಿದೆ. ಇಷ್ಟೇಅಲ್ಲದೆ ಜಾಗತಿಕ ಶೈಕ್ಷಣಿಕ ಪ್ರವೃತ್ತಿಗಳು ಮತ್ತು ರಾಷ್ಟ್ರೀಯ ಆದ್ಯತೆಗಳಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಆಧುನೀಕರಿಸುವ ಮತ್ತು ನವೀಕರಿಸುವಲ್ಲಿ ಯುಜಿಸಿ ಪ್ರಮುಖ ಪಾತ್ರ ವಹಿಸುತ್ತದೆ.

ಹೀಗೆ ನಿರಂತರವಾಗಿ ಉನ್ನತಶಿಕ್ಷಣದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕಾದ ಯುಜಿಸಿಯು ಹಲವಾರು ಬಾರಿ ತನ್ನ ತೀರ್ಮಾನಗಳು ಮತ್ತು ಸಲಹೆಗಳಿಂದಾಗಿ ವಿವಾದಕ್ಕೊಳಗಾಗಿದೆ. ಇದರಲ್ಲಿ ಇತ್ತೀಚಿನ ಸೇರ್ಪಡೆ ಎಂದರೆ ಜನವರಿ 7ರಂದು ಕೇಂದ್ರ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ 2025ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಕರಡು ನಿಯಮಾವಳಿಗಳು. “ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಹಾಗೂ ಪದೋನ್ನತಿಯ ಕನಿಷ್ಟ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು” ಎಂಬ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಶಿಕ್ಷಣದ ಕುರಿತು ರಾಜ್ಯ ಮತ್ತು ಕೇಂದ್ರದ ನಡುವಿನ ಜವಾಬ್ದಾರಿಯನ್ನು ಅಳಿಸಿಹಾಕುವಂತ ಹೊಸ ನಿಯಮಾವಳಿ ಪ್ರಕಟಿಸಿದೆ.

ಭಾರತದಲ್ಲಿನ ಉನ್ನತ ಶಿಕ್ಷಣ ಹಂತದಲ್ಲಿನ ಬೋಧನೆ ಮತ್ತು ಸಂಶೋಧನೆಯ ಗುಣಮಟ್ಟ ಕುಸಿಯುತ್ತಿದೆ ಎಂಬ ನಿರಂತರ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈಗ ತರಲು ಉದ್ದೇಶಿಸಿರುವ ಕೆಲವು ಹೊಸ ನಿಯಮಗಳು ಅದರಲ್ಲಿ ಈ ಕರಡಿನ 10ನೇ ನಿಯಮದಲ್ಲಿ ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ತರುವ ದಿಕ್ಕಿನಲ್ಲಿ ಕೆಲವು ಅಂಶಗಳನ್ನು ಒಕ್ಕೂಟ ಸರ್ಕಾರ ಪ್ರಸ್ತಾಪಿಸಿದೆ. ಆ ನಿಯಮಗಳ ಪ್ರಕಾರ ಇನ್ನು ಮುಂದೆ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ತೀರ್ಮಾನವೇ ನಿರ್ಣಾಯಕವಾಗಲಿದೆ; ಮತ್ತು ಬೋಧನೆಯ ಅನುಭವ ಇಲ್ಲದ “ಖಾಸಗೀ ಉದ್ದಿಮೆಯ ಅನುಭವಿ ವ್ಯಕ್ತಿಯು” ಕೂಡ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ. ಈ ಹಿಂದಿನ ನಿಯಮಾವಳಿಯಲ್ಲಿ ಯಾವುದೇ ವಿಶ್ವವಿದ್ಯಾಲಯದ ಕುಲಪತಿಯಾಗಬೇಕೆಂದರೆ ಅವರು ಮೊದಲು ಬೋಧಕರಾಗಿರಬೇಕಿತ್ತು. ಈ ನಿಯಮವನ್ನು ಪ್ರಸ್ತುತ ಕರಡು ನಿಯಮಾವಳಿಯಲ್ಲಿ ಬದಲಿಸಲಾಗಿದೆ ಮತ್ತು ಈ ಕರಡು ನಿಯಮಾವಳಿಯು ಕುಲಪತಿ ನೇಮಕಾತಿಯಲ್ಲಿ ರಾಜ್ಯ ಸರ್ಕಾರಕ್ಕಿಂತಲೂ ಕೇಂದ್ರ ನೇಮಿಸಿರುವ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರ ನೀಡಿರುತ್ತದೆ.

ತಮಿಳುನಾಡು, ಕೇರಳ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಉಂಟಾಗಿತ್ತು. ಈಗ ಯುಜಿಸಿಯ ನಿಯಮಾವಳಿಗಳು ರಾಜ್ಯ ಸರ್ಕಾರದ ಅಧಿಕಾರವನ್ನೇ ಮೊಟಕುಗೊಳಿಸುವಂತಿದೆ. ಯುಜಿಸಿಯ ಕರಡು ನಿಯಮಾವಳಿಯು ಕೇಂದ್ರ ಮತ್ತು ರಾಜ್ಯಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಹುಟ್ಟುಹಾಕುವ ಸಾಧ್ಯತೆ ಇದೆ.

1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡುವ ಮೂಲಕ ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಸೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಗೆ ನೇಮಕಾತಿ ಅಧಿಕಾರ ಇರುತ್ತದೆ. ಹಾಗೆಯೇ ಪ್ರಾಧ್ಯಾಪಕರುಗಳ ನೇಮಕಾತಿಯಲ್ಲೂ ಕನಿಷ್ಟ ವಿದ್ಯಾರ್ಹತೆಯ ಮಾನದಂಡವನ್ನು ಯುಜಿಸಿ ಹೇಳಿದರೂ ಸರ್ಕಾರಗಳು ನೇಮಕಾತಿ ವಿಧಾನವನ್ನು ತಾವೇ ನಿರ್ಣಯಿಸುತ್ತವೆ; ಉದಾಹರಣೆಗೆ ಈಗ ಕರ್ನಾಟಕದಲ್ಲಿ ಕೆಇಎ ಮೂಲಕ ಲಿಖಿತ ಪರೀಕ್ಷೆಗಳನ್ನು ನಡೆಸಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಲಾಗುತ್ತದೆ; ಸರ್ಕಾರ ಬಯಸಿದರೆ ಇದಕ್ಕೆ ಸಂದರ್ಶನವನ್ನೂ ಸೇರಿಸಬಹುದು- ಇವೆಲ್ಲಾ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ವಿಶ್ವವಿದ್ಯಾನಿಲಯಗಳು ನೇಮಕಾತಿಗೆ ತಮ್ಮದೇ ವಿಧಾನಗಳನ್ನು ಹೊಂದಿವೆ. ಇದನ್ನು ಸಹ ಸರ್ಕಾರವು ಬದಲಿಸಲು ಸಾಧ್ಯ. ಹಾಗೆಯೇ ಯುಜಿಸಿ ಯಾವುದೇ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವ ಅಥವಾ ಮುಚ್ಚುವ ಅಧಿಕಾರ ಹೊಂದಿಲ್ಲ; ಅದು ಸಹ ಆಯಾ ರಾಜ್ಯಗಳ ಅಧಿಕಾರದ ವ್ಯಾಪ್ತಿಗೆ ಬರುತ್ತದೆ.

ಈಗಿನ ಕರಡು ಪ್ರಸ್ತಾಪವು ಸಾಂವಿಧಾನಿಕ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಉನ್ನತ ಶಿಕ್ಷಣದ ಸಂಪೂರ್ಣ ಖಾಸಗೀಕರಣಕ್ಕೆ ಕಾರಣವಾಗಲಿದೆ ಎಂಬ ವಿಮರ್ಶೆಗೆ ಒಳಗಾಗಿದೆ. ಯುಜಿಸಿ ರೂಪಿಸಿರುವ ಕುಲಪತಿಗಳ ನೇಮಕಾತಿ ಕರಡು ನಿಯಮಗಳು ಉನ್ನತ ಶಿಕ್ಷಣದ ಕುರಿತು ರಾಜ್ಯಗಳ ಮೂಲಭೂತ ಹಕ್ಕನ್ನು ಮೊಟಕುಗೊಳಿಸುವ ಗುಣ ಹೊಂದಿದೆ.

ತನ್ನ ರಾಜ್ಯದ ಉನ್ನತ ಶಿಕ್ಷಣದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ರಾಜ್ಯಗಳಿಗೆ ಇರಬೇಕಾಗಿರುವುದು ಪ್ರಜಾತಾಂತ್ರಿಕ ನಿರ್ಣಯ. ಶಿಕ್ಷಣದ ಮೇಲಿನ ರಾಜ್ಯಗಳ ಹಕ್ಕನ್ನೇ ಮೊಟಕುಗೊಳಿಸುವ ಕ್ರಮವು ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ತೀರಾ ಅಪಾಯಕಾರಿ ಎನಿಸುತ್ತದೆ. ಇದರ ಜೊತೆಗೆ ಶೈಕ್ಷಣಿಕ ಹಿನ್ನೆಲೆ ಇಲ್ಲದ ವ್ಯಕ್ತಿ ಕೂಡ ಕುಲಪತಿ ಹುದ್ದೆಗೆ ಅರ್ಹ ವ್ಯಕ್ತಿಯಾಗಿದ್ದಾರೆ ಎಂಬುದು ಚರ್ಚಾರ್ಹವಾಗಿದೆ. ಈಗ ಯಾವ ಅನುಭವವೂ ಇಲ್ಲದ ವ್ಯಕ್ತಿಯನ್ನು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದರೆ ಆ ವ್ಯಕ್ತಿಯಿಂದ ವಿಶ್ವವಿದ್ಯಾಲಯಕ್ಕೆ ಬೇಕಾದ ಶೈಕ್ಷಣಿಕ ನಾಯಕತ್ವ ಮತ್ತು ಶೈಕ್ಷಣಿಕಾಡಳಿತ ಎರಡನ್ನೂ ನೀಡಲು ಸಾಧ್ಯವಾಗುವುದಿಲ್ಲ. ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ನಾಯಕತ್ವಕ್ಕೆ ನೇಮಕವಾದರೆ ಅದೊಂದು ಅಪಕ್ವ ನಡೆಯಾಗುತ್ತದೆ.

ಕರಡು ನಿಯಮಾವಳಿಗಳ ಪ್ರಕಾರ ಸ್ನಾತಕೋತ್ತರ ಪದವಿ ಪಡೆಯದಿದ್ದರೂ, ನೆಟ್ ಅಥವಾ ಕೆಸೆಟ್ ಇಲ್ಲದಿದ್ದರೂ, ನಾಲ್ಕು ವರ್ಷ ಓದಿದ 75 ಶೇ ಅಂಕ ಇರುವ ಪದವೀಧರರು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಿರುತ್ತಾರೆ. ಎಂಜಿನಿಯರಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾಗಲು ಅರ್ಹರು. ಈ ಹಿಂದೆ ಇದ್ದ ಯುಜಿಸಿ 2018ರ ನಿಯಮಾವಳಿ ಪ್ರಕಾರ ಸಹಾಯಕ ಪ್ರಾಧ್ಯಾಪಕರಾಗಲು ಪದವಿ ಮತ್ತು ಸ್ನಾತಕೋತ್ತರ ಪದವಿಯ ಜೊತೆಗೆ ಸಂಬಂಧಿಸಿದ ವಿಷಯದಲ್ಲಿ NET/SLET/PhD ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದರಿಂದ, ವಿಷಯದಲ್ಲಿ ಪರಿಣಿತಿಯನ್ನು ಪಡೆದುಕೊಂಡಿರುವವರು ಆಯ್ಕೆಯಾಗುತ್ತಿದ್ದರು. ಈಗ ಯುಜಿಸಿ ಹೊಸ ನಿಯಮಾವಳಿ ಪ್ರಕಾರ ನವೀನ ಬೋಧನಾ ವಿಧಾನಗಳು, ಡಿಜಿಟಲ್ ರೂಪದಲ್ಲಿ ಪಠ್ಯ ರಚನೆ ಮತ್ತು ಸಂಶೋಧನಾ ನಿಧಿಗೆ ಕೊಡುಗೆಗಳಂತಹ ವೃತ್ತಿಪರ ಸಾಧನೆಗಳನ್ನು ಗುರುತಿಸುವ ನಿಬಂಧನೆಗಳನ್ನು ಪರಿಚಯಿಸುವ ಮೂಲಕ ಕರಡು ಅರ್ಹತೆಗಳ ವ್ಯಾಪ್ತಿಯನ್ನು ಸಡಿಲಗೊಳಿಸಿದೆ. ಬಡ್ತಿಗೆ ಬೇಕಾದ ಮಾನದಂಡಗಳನ್ನು ಕಡಿಮೆ ಮಾಡಿರುವುದು ಸಹ ಶೈಕ್ಷಣಿಕ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಹೊಸ ಮಾರ್ಗಸೂಚಿಗಳು ಅಧ್ಯಾಪಕರ ಬಡ್ತಿಗಾಗಿ ಬಳಸಲಾಗುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆ ಸೂಚಕ ವ್ಯವಸ್ಥೆಯನ್ನು ತೆಗೆದುಹಾಕುತ್ತವೆ.

ಯುಜಿಸಿಯ ಈ ಕರಡು ನಿಯಮಗಳು, ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಉದ್ದೇಶಗಳನ್ನು ಹೇಗಾದರೂ ರಾಜ್ಯಗಳ ಮೇಲೆ ಹೇರಲು ಪ್ರಯತ್ನಿಸುವ ಜೊತೆಗೆ ಕುಲಪತಿ (ವಿಸಿ) ಹುದ್ದೆಯ ಆಯ್ಕೆಯಲ್ಲಿ ಶೈಕ್ಷಣಿಕೇತರರಿಗೆ ಸ್ಥಾನವನ್ನು ಕೊಡಲು ಕೂಡ ಪ್ರಯತ್ನಿಸುತ್ತವೆ.

ಈಗಾಗಲೇ ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಇದನ್ನು ವಿರೋಧಿಸಿ ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಈ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಕೂಡ ವಿರೋಧಿಸಿದ್ದಾರೆ. ಹೈದರಾಬಾದ್‌ನ ಒಬಿಸಿ ವಿಧ್ಯಾರ್ಥಿ ಒಕ್ಕೂಟ ಸಹ ವಿರೋಧಿಸಿದೆ. ಪಶ್ಚಿಮ ಬಂಗಾಳ ಕೂಡ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದೆ. ಪುದುಚೇರಿಯು ಯುಜಿಸಿಯನ್ನು ಭಾಗೀದಾರರ ಸಮಾಲೋಚನೆಗೆ ಕರೆದಿದೆ. ಹೀಗೆ ಪ್ರತಿರೋಧ ಬರುತ್ತಿರುವ ಹಿನ್ನೆಲೆಯಲ್ಲಿ ಯುಜಿಸಿ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುವ ಮತ್ತು ದೇಶದ ಬೋಧನೆ ಮತ್ತು ಸಂಶೋಧನೆಗಳಿಗೆ ಅನುದಾನ ನೀಡಲು ಎಂದೇ ರಚಿತವಾದ ಸಂಸ್ಥೆಯು ಮೊದಲಿನ ಹಾಗೆ ಅನುದಾನ ನೀಡುವುದನ್ನು, ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸ್ಕಾಲರ್ಶಿಪ್ ನೀಡುವುದನ್ನು ಮುಂದುರಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ಮಾರಕ ಎನಿಸುವ ನಿಲುವುಗಳನ್ನು ಪ್ರಕಟಿಸದೆ ದೇಶದ ಸಮಗ್ರ ಶೈಕ್ಷಣಿಕ ಗುಣಮಟ್ಟವನ್ನು, ಬೋಧನೆ ಮತ್ತು ಸಂಶೋಧನೆಗಳಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ವಿಹಿತ.

ಸಂತೋಷ್ ನಾಯಕ್ ಆರ್

ಸಂತೋಷ್ ನಾಯಕ್ ಆರ್
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...