Homeಮುಖಪುಟವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

- Advertisement -
- Advertisement -

ಭಾರತದ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) 1956ರಲ್ಲಿ ಭಾರತ ಸರ್ಕಾರ ಸ್ಥಾಪಿಸಿದ ಶಾಸನಬದ್ಧ ಸಂಸ್ಥೆ. ದೇಶದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಮಾನದಂಡಗಳನ್ನು ರೂಪಿಸುವುದು ಮತ್ತು ಅವುಗಳ ಜಾರಿಯನ್ನು ಖಚಿತಪಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ವಿಶ್ವವಿದ್ಯಾಲಯದ ಶಿಕ್ಷಣದ ಸಮನ್ವಯ ಮತ್ತು ಗುಣಮಟ್ಟಗಳ ನಿರ್ವಹಣೆಯಲ್ಲಿ ಯುಜಿಸಿ ನಿರ್ಣಾಯಕ ಪಾತ್ರ ವಹಿಸುತ್ತದೆ.

ಸ್ವಾತಂತ್ರ್ಯದ ನಂತರ ಭಾರತವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿತು. ಆದರೆ ಹೀಗೆ ಸ್ಥಾಪಿತವಾದ ಸಂಸ್ಥೆಗಳಲ್ಲಿ ಸ್ಥಿರವಾದ ಶೈಕ್ಷಣಿಕ ಮಾನದಂಡಗಳನ್ನು ರೂಪಿಸುವ ಮತ್ತು ದೇಶಾದ್ಯಂತ ಉನ್ನತ ಶಿಕ್ಷಣದ ಗುಣಮಟ್ಟವನ್ನು ಪ್ರಮಾಣೀಕರಿಸುವ ಅಗತ್ಯವಿತ್ತು. ಇದನ್ನು ಖಚಿತಪಡಿಸಿಕೊಳ್ಳುವ ಹಾಗು ಶೈಕ್ಷಣಿಕ ಗುಣಮಟ್ಟವನ್ನು ಎತ್ತಿಹಿಡಿಯಲು, ಸಂಸ್ಥೆಗಳನ್ನು ಮೌಲ್ಯಮಾಪನ ಮಾಡುವ ಮತ್ತು ಮಾನ್ಯತೆ ನೀಡುವ ಕಾರ್ಯವನ್ನು ನಿರ್ವಹಿಸಲು ಯುಜಿಸಿಯ ಸ್ಥಾಪನೆಯಾಯ್ತು.

ಇದರೊಂದಿಗೆ ದೇಶದ ವೈವಿಧ್ಯಮಯ ಶಿಕ್ಷಣ ವ್ಯವಸ್ಥೆಗೆ ಹಣಕಾಸು ಕೂಡ ಬಹಳ ಮುಖ್ಯವಾಗಿದ್ದು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸಂಪನ್ಮೂಲಗಳ ನ್ಯಾಯಯುತ ಮತ್ತು ಪರಿಣಾಮಕಾರಿ ವಿತರಣೆಯನ್ನು ಮಾಡಲು ಕೂಡ ಕೇಂದ್ರೀಕೃತ ಸಂಸ್ಥೆಯಾಗಿ ಯುಜಿಸಿಯನ್ನು ಸ್ಥಾಪಿಸಲಾಯಿತು.

ಇಷ್ಟೇ ಅಲ್ಲದೆ ಭಾರತದಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಜಾಗತಿಕ ಸ್ಪರ್ಧಾತ್ಮಕತೆ ಮತ್ತು ರಾಷ್ಟ್ರೀಯ ಅಭಿವೃದ್ಧಿ ಗುರಿಗಳತ್ತ ಕೊಂಡೊಯ್ಯುವ ನೀತಿಗಳನ್ನು ಅಭಿವೃದ್ಧಿಪಡಿಸಲು ಚಿಂತಕರ ಚಾವಡಿಯಾಗಿ ಯುಜಿಸಿ ಕಾರ್ಯನಿರ್ವಹಿಸಬೇಕೆಂದು ಉದ್ದೇಶಿಸಲಾಗಿತ್ತು ಹಾಗು ಆರಂಭದ ಬಹುಕಾಲ ಯುಜಿಸಿಯು ಈ ಉದ್ದೇಶಗಳೆಡೆಗೆ ಕಾರ್ಯನಿರ್ವಹಿಸಿತು.

ಇದಲ್ಲದೆ ಪ್ರಾಧ್ಯಾಪಕರ, ಕುಲಪತಿಗಳ ನೇಮಕಾತಿ, ಬಡ್ತಿ, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಹಲವಾರು ವಿದ್ಯಾರ್ಥಿವೇತನಗಳ ಮೂಲಕ ಬೆಂಬಲ ನೀಡಲು ಯುಜಿಸಿ ನಿಯಮಾವಳಿಗಳನ್ನು ರೂಪಿಸಿ ನಿರ್ವಹಿಸುತ್ತದೆ. ಇದರಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಳು ಮತ್ತು ಉಪನ್ಯಾಸಕ ಅರ್ಹತೆಗಳಿಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಕೂಡ ಸೇರಿದೆ. ಇಷ್ಟೇಅಲ್ಲದೆ ಜಾಗತಿಕ ಶೈಕ್ಷಣಿಕ ಪ್ರವೃತ್ತಿಗಳು ಮತ್ತು ರಾಷ್ಟ್ರೀಯ ಆದ್ಯತೆಗಳಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಆಧುನೀಕರಿಸುವ ಮತ್ತು ನವೀಕರಿಸುವಲ್ಲಿ ಯುಜಿಸಿ ಪ್ರಮುಖ ಪಾತ್ರ ವಹಿಸುತ್ತದೆ.

ಹೀಗೆ ನಿರಂತರವಾಗಿ ಉನ್ನತಶಿಕ್ಷಣದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕಾದ ಯುಜಿಸಿಯು ಹಲವಾರು ಬಾರಿ ತನ್ನ ತೀರ್ಮಾನಗಳು ಮತ್ತು ಸಲಹೆಗಳಿಂದಾಗಿ ವಿವಾದಕ್ಕೊಳಗಾಗಿದೆ. ಇದರಲ್ಲಿ ಇತ್ತೀಚಿನ ಸೇರ್ಪಡೆ ಎಂದರೆ ಜನವರಿ 7ರಂದು ಕೇಂದ್ರ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ 2025ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಕರಡು ನಿಯಮಾವಳಿಗಳು. “ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಹಾಗೂ ಪದೋನ್ನತಿಯ ಕನಿಷ್ಟ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು” ಎಂಬ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಶಿಕ್ಷಣದ ಕುರಿತು ರಾಜ್ಯ ಮತ್ತು ಕೇಂದ್ರದ ನಡುವಿನ ಜವಾಬ್ದಾರಿಯನ್ನು ಅಳಿಸಿಹಾಕುವಂತ ಹೊಸ ನಿಯಮಾವಳಿ ಪ್ರಕಟಿಸಿದೆ.

ಭಾರತದಲ್ಲಿನ ಉನ್ನತ ಶಿಕ್ಷಣ ಹಂತದಲ್ಲಿನ ಬೋಧನೆ ಮತ್ತು ಸಂಶೋಧನೆಯ ಗುಣಮಟ್ಟ ಕುಸಿಯುತ್ತಿದೆ ಎಂಬ ನಿರಂತರ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈಗ ತರಲು ಉದ್ದೇಶಿಸಿರುವ ಕೆಲವು ಹೊಸ ನಿಯಮಗಳು ಅದರಲ್ಲಿ ಈ ಕರಡಿನ 10ನೇ ನಿಯಮದಲ್ಲಿ ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ತರುವ ದಿಕ್ಕಿನಲ್ಲಿ ಕೆಲವು ಅಂಶಗಳನ್ನು ಒಕ್ಕೂಟ ಸರ್ಕಾರ ಪ್ರಸ್ತಾಪಿಸಿದೆ. ಆ ನಿಯಮಗಳ ಪ್ರಕಾರ ಇನ್ನು ಮುಂದೆ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ತೀರ್ಮಾನವೇ ನಿರ್ಣಾಯಕವಾಗಲಿದೆ; ಮತ್ತು ಬೋಧನೆಯ ಅನುಭವ ಇಲ್ಲದ “ಖಾಸಗೀ ಉದ್ದಿಮೆಯ ಅನುಭವಿ ವ್ಯಕ್ತಿಯು” ಕೂಡ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ. ಈ ಹಿಂದಿನ ನಿಯಮಾವಳಿಯಲ್ಲಿ ಯಾವುದೇ ವಿಶ್ವವಿದ್ಯಾಲಯದ ಕುಲಪತಿಯಾಗಬೇಕೆಂದರೆ ಅವರು ಮೊದಲು ಬೋಧಕರಾಗಿರಬೇಕಿತ್ತು. ಈ ನಿಯಮವನ್ನು ಪ್ರಸ್ತುತ ಕರಡು ನಿಯಮಾವಳಿಯಲ್ಲಿ ಬದಲಿಸಲಾಗಿದೆ ಮತ್ತು ಈ ಕರಡು ನಿಯಮಾವಳಿಯು ಕುಲಪತಿ ನೇಮಕಾತಿಯಲ್ಲಿ ರಾಜ್ಯ ಸರ್ಕಾರಕ್ಕಿಂತಲೂ ಕೇಂದ್ರ ನೇಮಿಸಿರುವ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರ ನೀಡಿರುತ್ತದೆ.

ತಮಿಳುನಾಡು, ಕೇರಳ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಉಂಟಾಗಿತ್ತು. ಈಗ ಯುಜಿಸಿಯ ನಿಯಮಾವಳಿಗಳು ರಾಜ್ಯ ಸರ್ಕಾರದ ಅಧಿಕಾರವನ್ನೇ ಮೊಟಕುಗೊಳಿಸುವಂತಿದೆ. ಯುಜಿಸಿಯ ಕರಡು ನಿಯಮಾವಳಿಯು ಕೇಂದ್ರ ಮತ್ತು ರಾಜ್ಯಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಹುಟ್ಟುಹಾಕುವ ಸಾಧ್ಯತೆ ಇದೆ.

1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡುವ ಮೂಲಕ ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಸೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಗೆ ನೇಮಕಾತಿ ಅಧಿಕಾರ ಇರುತ್ತದೆ. ಹಾಗೆಯೇ ಪ್ರಾಧ್ಯಾಪಕರುಗಳ ನೇಮಕಾತಿಯಲ್ಲೂ ಕನಿಷ್ಟ ವಿದ್ಯಾರ್ಹತೆಯ ಮಾನದಂಡವನ್ನು ಯುಜಿಸಿ ಹೇಳಿದರೂ ಸರ್ಕಾರಗಳು ನೇಮಕಾತಿ ವಿಧಾನವನ್ನು ತಾವೇ ನಿರ್ಣಯಿಸುತ್ತವೆ; ಉದಾಹರಣೆಗೆ ಈಗ ಕರ್ನಾಟಕದಲ್ಲಿ ಕೆಇಎ ಮೂಲಕ ಲಿಖಿತ ಪರೀಕ್ಷೆಗಳನ್ನು ನಡೆಸಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಲಾಗುತ್ತದೆ; ಸರ್ಕಾರ ಬಯಸಿದರೆ ಇದಕ್ಕೆ ಸಂದರ್ಶನವನ್ನೂ ಸೇರಿಸಬಹುದು- ಇವೆಲ್ಲಾ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ವಿಶ್ವವಿದ್ಯಾನಿಲಯಗಳು ನೇಮಕಾತಿಗೆ ತಮ್ಮದೇ ವಿಧಾನಗಳನ್ನು ಹೊಂದಿವೆ. ಇದನ್ನು ಸಹ ಸರ್ಕಾರವು ಬದಲಿಸಲು ಸಾಧ್ಯ. ಹಾಗೆಯೇ ಯುಜಿಸಿ ಯಾವುದೇ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವ ಅಥವಾ ಮುಚ್ಚುವ ಅಧಿಕಾರ ಹೊಂದಿಲ್ಲ; ಅದು ಸಹ ಆಯಾ ರಾಜ್ಯಗಳ ಅಧಿಕಾರದ ವ್ಯಾಪ್ತಿಗೆ ಬರುತ್ತದೆ.

ಈಗಿನ ಕರಡು ಪ್ರಸ್ತಾಪವು ಸಾಂವಿಧಾನಿಕ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಉನ್ನತ ಶಿಕ್ಷಣದ ಸಂಪೂರ್ಣ ಖಾಸಗೀಕರಣಕ್ಕೆ ಕಾರಣವಾಗಲಿದೆ ಎಂಬ ವಿಮರ್ಶೆಗೆ ಒಳಗಾಗಿದೆ. ಯುಜಿಸಿ ರೂಪಿಸಿರುವ ಕುಲಪತಿಗಳ ನೇಮಕಾತಿ ಕರಡು ನಿಯಮಗಳು ಉನ್ನತ ಶಿಕ್ಷಣದ ಕುರಿತು ರಾಜ್ಯಗಳ ಮೂಲಭೂತ ಹಕ್ಕನ್ನು ಮೊಟಕುಗೊಳಿಸುವ ಗುಣ ಹೊಂದಿದೆ.

ತನ್ನ ರಾಜ್ಯದ ಉನ್ನತ ಶಿಕ್ಷಣದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ರಾಜ್ಯಗಳಿಗೆ ಇರಬೇಕಾಗಿರುವುದು ಪ್ರಜಾತಾಂತ್ರಿಕ ನಿರ್ಣಯ. ಶಿಕ್ಷಣದ ಮೇಲಿನ ರಾಜ್ಯಗಳ ಹಕ್ಕನ್ನೇ ಮೊಟಕುಗೊಳಿಸುವ ಕ್ರಮವು ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ತೀರಾ ಅಪಾಯಕಾರಿ ಎನಿಸುತ್ತದೆ. ಇದರ ಜೊತೆಗೆ ಶೈಕ್ಷಣಿಕ ಹಿನ್ನೆಲೆ ಇಲ್ಲದ ವ್ಯಕ್ತಿ ಕೂಡ ಕುಲಪತಿ ಹುದ್ದೆಗೆ ಅರ್ಹ ವ್ಯಕ್ತಿಯಾಗಿದ್ದಾರೆ ಎಂಬುದು ಚರ್ಚಾರ್ಹವಾಗಿದೆ. ಈಗ ಯಾವ ಅನುಭವವೂ ಇಲ್ಲದ ವ್ಯಕ್ತಿಯನ್ನು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದರೆ ಆ ವ್ಯಕ್ತಿಯಿಂದ ವಿಶ್ವವಿದ್ಯಾಲಯಕ್ಕೆ ಬೇಕಾದ ಶೈಕ್ಷಣಿಕ ನಾಯಕತ್ವ ಮತ್ತು ಶೈಕ್ಷಣಿಕಾಡಳಿತ ಎರಡನ್ನೂ ನೀಡಲು ಸಾಧ್ಯವಾಗುವುದಿಲ್ಲ. ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ನಾಯಕತ್ವಕ್ಕೆ ನೇಮಕವಾದರೆ ಅದೊಂದು ಅಪಕ್ವ ನಡೆಯಾಗುತ್ತದೆ.

ಕರಡು ನಿಯಮಾವಳಿಗಳ ಪ್ರಕಾರ ಸ್ನಾತಕೋತ್ತರ ಪದವಿ ಪಡೆಯದಿದ್ದರೂ, ನೆಟ್ ಅಥವಾ ಕೆಸೆಟ್ ಇಲ್ಲದಿದ್ದರೂ, ನಾಲ್ಕು ವರ್ಷ ಓದಿದ 75 ಶೇ ಅಂಕ ಇರುವ ಪದವೀಧರರು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಿರುತ್ತಾರೆ. ಎಂಜಿನಿಯರಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾಗಲು ಅರ್ಹರು. ಈ ಹಿಂದೆ ಇದ್ದ ಯುಜಿಸಿ 2018ರ ನಿಯಮಾವಳಿ ಪ್ರಕಾರ ಸಹಾಯಕ ಪ್ರಾಧ್ಯಾಪಕರಾಗಲು ಪದವಿ ಮತ್ತು ಸ್ನಾತಕೋತ್ತರ ಪದವಿಯ ಜೊತೆಗೆ ಸಂಬಂಧಿಸಿದ ವಿಷಯದಲ್ಲಿ NET/SLET/PhD ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದರಿಂದ, ವಿಷಯದಲ್ಲಿ ಪರಿಣಿತಿಯನ್ನು ಪಡೆದುಕೊಂಡಿರುವವರು ಆಯ್ಕೆಯಾಗುತ್ತಿದ್ದರು. ಈಗ ಯುಜಿಸಿ ಹೊಸ ನಿಯಮಾವಳಿ ಪ್ರಕಾರ ನವೀನ ಬೋಧನಾ ವಿಧಾನಗಳು, ಡಿಜಿಟಲ್ ರೂಪದಲ್ಲಿ ಪಠ್ಯ ರಚನೆ ಮತ್ತು ಸಂಶೋಧನಾ ನಿಧಿಗೆ ಕೊಡುಗೆಗಳಂತಹ ವೃತ್ತಿಪರ ಸಾಧನೆಗಳನ್ನು ಗುರುತಿಸುವ ನಿಬಂಧನೆಗಳನ್ನು ಪರಿಚಯಿಸುವ ಮೂಲಕ ಕರಡು ಅರ್ಹತೆಗಳ ವ್ಯಾಪ್ತಿಯನ್ನು ಸಡಿಲಗೊಳಿಸಿದೆ. ಬಡ್ತಿಗೆ ಬೇಕಾದ ಮಾನದಂಡಗಳನ್ನು ಕಡಿಮೆ ಮಾಡಿರುವುದು ಸಹ ಶೈಕ್ಷಣಿಕ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಹೊಸ ಮಾರ್ಗಸೂಚಿಗಳು ಅಧ್ಯಾಪಕರ ಬಡ್ತಿಗಾಗಿ ಬಳಸಲಾಗುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆ ಸೂಚಕ ವ್ಯವಸ್ಥೆಯನ್ನು ತೆಗೆದುಹಾಕುತ್ತವೆ.

ಯುಜಿಸಿಯ ಈ ಕರಡು ನಿಯಮಗಳು, ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಉದ್ದೇಶಗಳನ್ನು ಹೇಗಾದರೂ ರಾಜ್ಯಗಳ ಮೇಲೆ ಹೇರಲು ಪ್ರಯತ್ನಿಸುವ ಜೊತೆಗೆ ಕುಲಪತಿ (ವಿಸಿ) ಹುದ್ದೆಯ ಆಯ್ಕೆಯಲ್ಲಿ ಶೈಕ್ಷಣಿಕೇತರರಿಗೆ ಸ್ಥಾನವನ್ನು ಕೊಡಲು ಕೂಡ ಪ್ರಯತ್ನಿಸುತ್ತವೆ.

ಈಗಾಗಲೇ ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಇದನ್ನು ವಿರೋಧಿಸಿ ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಈ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಕೂಡ ವಿರೋಧಿಸಿದ್ದಾರೆ. ಹೈದರಾಬಾದ್‌ನ ಒಬಿಸಿ ವಿಧ್ಯಾರ್ಥಿ ಒಕ್ಕೂಟ ಸಹ ವಿರೋಧಿಸಿದೆ. ಪಶ್ಚಿಮ ಬಂಗಾಳ ಕೂಡ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದೆ. ಪುದುಚೇರಿಯು ಯುಜಿಸಿಯನ್ನು ಭಾಗೀದಾರರ ಸಮಾಲೋಚನೆಗೆ ಕರೆದಿದೆ. ಹೀಗೆ ಪ್ರತಿರೋಧ ಬರುತ್ತಿರುವ ಹಿನ್ನೆಲೆಯಲ್ಲಿ ಯುಜಿಸಿ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುವ ಮತ್ತು ದೇಶದ ಬೋಧನೆ ಮತ್ತು ಸಂಶೋಧನೆಗಳಿಗೆ ಅನುದಾನ ನೀಡಲು ಎಂದೇ ರಚಿತವಾದ ಸಂಸ್ಥೆಯು ಮೊದಲಿನ ಹಾಗೆ ಅನುದಾನ ನೀಡುವುದನ್ನು, ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸ್ಕಾಲರ್ಶಿಪ್ ನೀಡುವುದನ್ನು ಮುಂದುರಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ಮಾರಕ ಎನಿಸುವ ನಿಲುವುಗಳನ್ನು ಪ್ರಕಟಿಸದೆ ದೇಶದ ಸಮಗ್ರ ಶೈಕ್ಷಣಿಕ ಗುಣಮಟ್ಟವನ್ನು, ಬೋಧನೆ ಮತ್ತು ಸಂಶೋಧನೆಗಳಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ವಿಹಿತ.

ಸಂತೋಷ್ ನಾಯಕ್ ಆರ್

ಸಂತೋಷ್ ನಾಯಕ್ ಆರ್
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...