Homeಮುಖಪುಟವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

- Advertisement -
- Advertisement -

ಭಾರತದ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) 1956ರಲ್ಲಿ ಭಾರತ ಸರ್ಕಾರ ಸ್ಥಾಪಿಸಿದ ಶಾಸನಬದ್ಧ ಸಂಸ್ಥೆ. ದೇಶದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಮಾನದಂಡಗಳನ್ನು ರೂಪಿಸುವುದು ಮತ್ತು ಅವುಗಳ ಜಾರಿಯನ್ನು ಖಚಿತಪಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ವಿಶ್ವವಿದ್ಯಾಲಯದ ಶಿಕ್ಷಣದ ಸಮನ್ವಯ ಮತ್ತು ಗುಣಮಟ್ಟಗಳ ನಿರ್ವಹಣೆಯಲ್ಲಿ ಯುಜಿಸಿ ನಿರ್ಣಾಯಕ ಪಾತ್ರ ವಹಿಸುತ್ತದೆ.

ಸ್ವಾತಂತ್ರ್ಯದ ನಂತರ ಭಾರತವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿತು. ಆದರೆ ಹೀಗೆ ಸ್ಥಾಪಿತವಾದ ಸಂಸ್ಥೆಗಳಲ್ಲಿ ಸ್ಥಿರವಾದ ಶೈಕ್ಷಣಿಕ ಮಾನದಂಡಗಳನ್ನು ರೂಪಿಸುವ ಮತ್ತು ದೇಶಾದ್ಯಂತ ಉನ್ನತ ಶಿಕ್ಷಣದ ಗುಣಮಟ್ಟವನ್ನು ಪ್ರಮಾಣೀಕರಿಸುವ ಅಗತ್ಯವಿತ್ತು. ಇದನ್ನು ಖಚಿತಪಡಿಸಿಕೊಳ್ಳುವ ಹಾಗು ಶೈಕ್ಷಣಿಕ ಗುಣಮಟ್ಟವನ್ನು ಎತ್ತಿಹಿಡಿಯಲು, ಸಂಸ್ಥೆಗಳನ್ನು ಮೌಲ್ಯಮಾಪನ ಮಾಡುವ ಮತ್ತು ಮಾನ್ಯತೆ ನೀಡುವ ಕಾರ್ಯವನ್ನು ನಿರ್ವಹಿಸಲು ಯುಜಿಸಿಯ ಸ್ಥಾಪನೆಯಾಯ್ತು.

ಇದರೊಂದಿಗೆ ದೇಶದ ವೈವಿಧ್ಯಮಯ ಶಿಕ್ಷಣ ವ್ಯವಸ್ಥೆಗೆ ಹಣಕಾಸು ಕೂಡ ಬಹಳ ಮುಖ್ಯವಾಗಿದ್ದು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸಂಪನ್ಮೂಲಗಳ ನ್ಯಾಯಯುತ ಮತ್ತು ಪರಿಣಾಮಕಾರಿ ವಿತರಣೆಯನ್ನು ಮಾಡಲು ಕೂಡ ಕೇಂದ್ರೀಕೃತ ಸಂಸ್ಥೆಯಾಗಿ ಯುಜಿಸಿಯನ್ನು ಸ್ಥಾಪಿಸಲಾಯಿತು.

ಇಷ್ಟೇ ಅಲ್ಲದೆ ಭಾರತದಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಜಾಗತಿಕ ಸ್ಪರ್ಧಾತ್ಮಕತೆ ಮತ್ತು ರಾಷ್ಟ್ರೀಯ ಅಭಿವೃದ್ಧಿ ಗುರಿಗಳತ್ತ ಕೊಂಡೊಯ್ಯುವ ನೀತಿಗಳನ್ನು ಅಭಿವೃದ್ಧಿಪಡಿಸಲು ಚಿಂತಕರ ಚಾವಡಿಯಾಗಿ ಯುಜಿಸಿ ಕಾರ್ಯನಿರ್ವಹಿಸಬೇಕೆಂದು ಉದ್ದೇಶಿಸಲಾಗಿತ್ತು ಹಾಗು ಆರಂಭದ ಬಹುಕಾಲ ಯುಜಿಸಿಯು ಈ ಉದ್ದೇಶಗಳೆಡೆಗೆ ಕಾರ್ಯನಿರ್ವಹಿಸಿತು.

ಇದಲ್ಲದೆ ಪ್ರಾಧ್ಯಾಪಕರ, ಕುಲಪತಿಗಳ ನೇಮಕಾತಿ, ಬಡ್ತಿ, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಹಲವಾರು ವಿದ್ಯಾರ್ಥಿವೇತನಗಳ ಮೂಲಕ ಬೆಂಬಲ ನೀಡಲು ಯುಜಿಸಿ ನಿಯಮಾವಳಿಗಳನ್ನು ರೂಪಿಸಿ ನಿರ್ವಹಿಸುತ್ತದೆ. ಇದರಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಳು ಮತ್ತು ಉಪನ್ಯಾಸಕ ಅರ್ಹತೆಗಳಿಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಕೂಡ ಸೇರಿದೆ. ಇಷ್ಟೇಅಲ್ಲದೆ ಜಾಗತಿಕ ಶೈಕ್ಷಣಿಕ ಪ್ರವೃತ್ತಿಗಳು ಮತ್ತು ರಾಷ್ಟ್ರೀಯ ಆದ್ಯತೆಗಳಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಆಧುನೀಕರಿಸುವ ಮತ್ತು ನವೀಕರಿಸುವಲ್ಲಿ ಯುಜಿಸಿ ಪ್ರಮುಖ ಪಾತ್ರ ವಹಿಸುತ್ತದೆ.

ಹೀಗೆ ನಿರಂತರವಾಗಿ ಉನ್ನತಶಿಕ್ಷಣದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕಾದ ಯುಜಿಸಿಯು ಹಲವಾರು ಬಾರಿ ತನ್ನ ತೀರ್ಮಾನಗಳು ಮತ್ತು ಸಲಹೆಗಳಿಂದಾಗಿ ವಿವಾದಕ್ಕೊಳಗಾಗಿದೆ. ಇದರಲ್ಲಿ ಇತ್ತೀಚಿನ ಸೇರ್ಪಡೆ ಎಂದರೆ ಜನವರಿ 7ರಂದು ಕೇಂದ್ರ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ 2025ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಕರಡು ನಿಯಮಾವಳಿಗಳು. “ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಹಾಗೂ ಪದೋನ್ನತಿಯ ಕನಿಷ್ಟ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು” ಎಂಬ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಶಿಕ್ಷಣದ ಕುರಿತು ರಾಜ್ಯ ಮತ್ತು ಕೇಂದ್ರದ ನಡುವಿನ ಜವಾಬ್ದಾರಿಯನ್ನು ಅಳಿಸಿಹಾಕುವಂತ ಹೊಸ ನಿಯಮಾವಳಿ ಪ್ರಕಟಿಸಿದೆ.

ಭಾರತದಲ್ಲಿನ ಉನ್ನತ ಶಿಕ್ಷಣ ಹಂತದಲ್ಲಿನ ಬೋಧನೆ ಮತ್ತು ಸಂಶೋಧನೆಯ ಗುಣಮಟ್ಟ ಕುಸಿಯುತ್ತಿದೆ ಎಂಬ ನಿರಂತರ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈಗ ತರಲು ಉದ್ದೇಶಿಸಿರುವ ಕೆಲವು ಹೊಸ ನಿಯಮಗಳು ಅದರಲ್ಲಿ ಈ ಕರಡಿನ 10ನೇ ನಿಯಮದಲ್ಲಿ ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ತರುವ ದಿಕ್ಕಿನಲ್ಲಿ ಕೆಲವು ಅಂಶಗಳನ್ನು ಒಕ್ಕೂಟ ಸರ್ಕಾರ ಪ್ರಸ್ತಾಪಿಸಿದೆ. ಆ ನಿಯಮಗಳ ಪ್ರಕಾರ ಇನ್ನು ಮುಂದೆ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ತೀರ್ಮಾನವೇ ನಿರ್ಣಾಯಕವಾಗಲಿದೆ; ಮತ್ತು ಬೋಧನೆಯ ಅನುಭವ ಇಲ್ಲದ “ಖಾಸಗೀ ಉದ್ದಿಮೆಯ ಅನುಭವಿ ವ್ಯಕ್ತಿಯು” ಕೂಡ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ. ಈ ಹಿಂದಿನ ನಿಯಮಾವಳಿಯಲ್ಲಿ ಯಾವುದೇ ವಿಶ್ವವಿದ್ಯಾಲಯದ ಕುಲಪತಿಯಾಗಬೇಕೆಂದರೆ ಅವರು ಮೊದಲು ಬೋಧಕರಾಗಿರಬೇಕಿತ್ತು. ಈ ನಿಯಮವನ್ನು ಪ್ರಸ್ತುತ ಕರಡು ನಿಯಮಾವಳಿಯಲ್ಲಿ ಬದಲಿಸಲಾಗಿದೆ ಮತ್ತು ಈ ಕರಡು ನಿಯಮಾವಳಿಯು ಕುಲಪತಿ ನೇಮಕಾತಿಯಲ್ಲಿ ರಾಜ್ಯ ಸರ್ಕಾರಕ್ಕಿಂತಲೂ ಕೇಂದ್ರ ನೇಮಿಸಿರುವ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರ ನೀಡಿರುತ್ತದೆ.

ತಮಿಳುನಾಡು, ಕೇರಳ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಉಂಟಾಗಿತ್ತು. ಈಗ ಯುಜಿಸಿಯ ನಿಯಮಾವಳಿಗಳು ರಾಜ್ಯ ಸರ್ಕಾರದ ಅಧಿಕಾರವನ್ನೇ ಮೊಟಕುಗೊಳಿಸುವಂತಿದೆ. ಯುಜಿಸಿಯ ಕರಡು ನಿಯಮಾವಳಿಯು ಕೇಂದ್ರ ಮತ್ತು ರಾಜ್ಯಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಹುಟ್ಟುಹಾಕುವ ಸಾಧ್ಯತೆ ಇದೆ.

1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡುವ ಮೂಲಕ ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಸೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಗೆ ನೇಮಕಾತಿ ಅಧಿಕಾರ ಇರುತ್ತದೆ. ಹಾಗೆಯೇ ಪ್ರಾಧ್ಯಾಪಕರುಗಳ ನೇಮಕಾತಿಯಲ್ಲೂ ಕನಿಷ್ಟ ವಿದ್ಯಾರ್ಹತೆಯ ಮಾನದಂಡವನ್ನು ಯುಜಿಸಿ ಹೇಳಿದರೂ ಸರ್ಕಾರಗಳು ನೇಮಕಾತಿ ವಿಧಾನವನ್ನು ತಾವೇ ನಿರ್ಣಯಿಸುತ್ತವೆ; ಉದಾಹರಣೆಗೆ ಈಗ ಕರ್ನಾಟಕದಲ್ಲಿ ಕೆಇಎ ಮೂಲಕ ಲಿಖಿತ ಪರೀಕ್ಷೆಗಳನ್ನು ನಡೆಸಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಲಾಗುತ್ತದೆ; ಸರ್ಕಾರ ಬಯಸಿದರೆ ಇದಕ್ಕೆ ಸಂದರ್ಶನವನ್ನೂ ಸೇರಿಸಬಹುದು- ಇವೆಲ್ಲಾ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ವಿಶ್ವವಿದ್ಯಾನಿಲಯಗಳು ನೇಮಕಾತಿಗೆ ತಮ್ಮದೇ ವಿಧಾನಗಳನ್ನು ಹೊಂದಿವೆ. ಇದನ್ನು ಸಹ ಸರ್ಕಾರವು ಬದಲಿಸಲು ಸಾಧ್ಯ. ಹಾಗೆಯೇ ಯುಜಿಸಿ ಯಾವುದೇ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವ ಅಥವಾ ಮುಚ್ಚುವ ಅಧಿಕಾರ ಹೊಂದಿಲ್ಲ; ಅದು ಸಹ ಆಯಾ ರಾಜ್ಯಗಳ ಅಧಿಕಾರದ ವ್ಯಾಪ್ತಿಗೆ ಬರುತ್ತದೆ.

ಈಗಿನ ಕರಡು ಪ್ರಸ್ತಾಪವು ಸಾಂವಿಧಾನಿಕ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಉನ್ನತ ಶಿಕ್ಷಣದ ಸಂಪೂರ್ಣ ಖಾಸಗೀಕರಣಕ್ಕೆ ಕಾರಣವಾಗಲಿದೆ ಎಂಬ ವಿಮರ್ಶೆಗೆ ಒಳಗಾಗಿದೆ. ಯುಜಿಸಿ ರೂಪಿಸಿರುವ ಕುಲಪತಿಗಳ ನೇಮಕಾತಿ ಕರಡು ನಿಯಮಗಳು ಉನ್ನತ ಶಿಕ್ಷಣದ ಕುರಿತು ರಾಜ್ಯಗಳ ಮೂಲಭೂತ ಹಕ್ಕನ್ನು ಮೊಟಕುಗೊಳಿಸುವ ಗುಣ ಹೊಂದಿದೆ.

ತನ್ನ ರಾಜ್ಯದ ಉನ್ನತ ಶಿಕ್ಷಣದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ರಾಜ್ಯಗಳಿಗೆ ಇರಬೇಕಾಗಿರುವುದು ಪ್ರಜಾತಾಂತ್ರಿಕ ನಿರ್ಣಯ. ಶಿಕ್ಷಣದ ಮೇಲಿನ ರಾಜ್ಯಗಳ ಹಕ್ಕನ್ನೇ ಮೊಟಕುಗೊಳಿಸುವ ಕ್ರಮವು ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ತೀರಾ ಅಪಾಯಕಾರಿ ಎನಿಸುತ್ತದೆ. ಇದರ ಜೊತೆಗೆ ಶೈಕ್ಷಣಿಕ ಹಿನ್ನೆಲೆ ಇಲ್ಲದ ವ್ಯಕ್ತಿ ಕೂಡ ಕುಲಪತಿ ಹುದ್ದೆಗೆ ಅರ್ಹ ವ್ಯಕ್ತಿಯಾಗಿದ್ದಾರೆ ಎಂಬುದು ಚರ್ಚಾರ್ಹವಾಗಿದೆ. ಈಗ ಯಾವ ಅನುಭವವೂ ಇಲ್ಲದ ವ್ಯಕ್ತಿಯನ್ನು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದರೆ ಆ ವ್ಯಕ್ತಿಯಿಂದ ವಿಶ್ವವಿದ್ಯಾಲಯಕ್ಕೆ ಬೇಕಾದ ಶೈಕ್ಷಣಿಕ ನಾಯಕತ್ವ ಮತ್ತು ಶೈಕ್ಷಣಿಕಾಡಳಿತ ಎರಡನ್ನೂ ನೀಡಲು ಸಾಧ್ಯವಾಗುವುದಿಲ್ಲ. ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ನಾಯಕತ್ವಕ್ಕೆ ನೇಮಕವಾದರೆ ಅದೊಂದು ಅಪಕ್ವ ನಡೆಯಾಗುತ್ತದೆ.

ಕರಡು ನಿಯಮಾವಳಿಗಳ ಪ್ರಕಾರ ಸ್ನಾತಕೋತ್ತರ ಪದವಿ ಪಡೆಯದಿದ್ದರೂ, ನೆಟ್ ಅಥವಾ ಕೆಸೆಟ್ ಇಲ್ಲದಿದ್ದರೂ, ನಾಲ್ಕು ವರ್ಷ ಓದಿದ 75 ಶೇ ಅಂಕ ಇರುವ ಪದವೀಧರರು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಿರುತ್ತಾರೆ. ಎಂಜಿನಿಯರಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾಗಲು ಅರ್ಹರು. ಈ ಹಿಂದೆ ಇದ್ದ ಯುಜಿಸಿ 2018ರ ನಿಯಮಾವಳಿ ಪ್ರಕಾರ ಸಹಾಯಕ ಪ್ರಾಧ್ಯಾಪಕರಾಗಲು ಪದವಿ ಮತ್ತು ಸ್ನಾತಕೋತ್ತರ ಪದವಿಯ ಜೊತೆಗೆ ಸಂಬಂಧಿಸಿದ ವಿಷಯದಲ್ಲಿ NET/SLET/PhD ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದರಿಂದ, ವಿಷಯದಲ್ಲಿ ಪರಿಣಿತಿಯನ್ನು ಪಡೆದುಕೊಂಡಿರುವವರು ಆಯ್ಕೆಯಾಗುತ್ತಿದ್ದರು. ಈಗ ಯುಜಿಸಿ ಹೊಸ ನಿಯಮಾವಳಿ ಪ್ರಕಾರ ನವೀನ ಬೋಧನಾ ವಿಧಾನಗಳು, ಡಿಜಿಟಲ್ ರೂಪದಲ್ಲಿ ಪಠ್ಯ ರಚನೆ ಮತ್ತು ಸಂಶೋಧನಾ ನಿಧಿಗೆ ಕೊಡುಗೆಗಳಂತಹ ವೃತ್ತಿಪರ ಸಾಧನೆಗಳನ್ನು ಗುರುತಿಸುವ ನಿಬಂಧನೆಗಳನ್ನು ಪರಿಚಯಿಸುವ ಮೂಲಕ ಕರಡು ಅರ್ಹತೆಗಳ ವ್ಯಾಪ್ತಿಯನ್ನು ಸಡಿಲಗೊಳಿಸಿದೆ. ಬಡ್ತಿಗೆ ಬೇಕಾದ ಮಾನದಂಡಗಳನ್ನು ಕಡಿಮೆ ಮಾಡಿರುವುದು ಸಹ ಶೈಕ್ಷಣಿಕ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಹೊಸ ಮಾರ್ಗಸೂಚಿಗಳು ಅಧ್ಯಾಪಕರ ಬಡ್ತಿಗಾಗಿ ಬಳಸಲಾಗುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆ ಸೂಚಕ ವ್ಯವಸ್ಥೆಯನ್ನು ತೆಗೆದುಹಾಕುತ್ತವೆ.

ಯುಜಿಸಿಯ ಈ ಕರಡು ನಿಯಮಗಳು, ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಉದ್ದೇಶಗಳನ್ನು ಹೇಗಾದರೂ ರಾಜ್ಯಗಳ ಮೇಲೆ ಹೇರಲು ಪ್ರಯತ್ನಿಸುವ ಜೊತೆಗೆ ಕುಲಪತಿ (ವಿಸಿ) ಹುದ್ದೆಯ ಆಯ್ಕೆಯಲ್ಲಿ ಶೈಕ್ಷಣಿಕೇತರರಿಗೆ ಸ್ಥಾನವನ್ನು ಕೊಡಲು ಕೂಡ ಪ್ರಯತ್ನಿಸುತ್ತವೆ.

ಈಗಾಗಲೇ ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಇದನ್ನು ವಿರೋಧಿಸಿ ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಈ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಕೂಡ ವಿರೋಧಿಸಿದ್ದಾರೆ. ಹೈದರಾಬಾದ್‌ನ ಒಬಿಸಿ ವಿಧ್ಯಾರ್ಥಿ ಒಕ್ಕೂಟ ಸಹ ವಿರೋಧಿಸಿದೆ. ಪಶ್ಚಿಮ ಬಂಗಾಳ ಕೂಡ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದೆ. ಪುದುಚೇರಿಯು ಯುಜಿಸಿಯನ್ನು ಭಾಗೀದಾರರ ಸಮಾಲೋಚನೆಗೆ ಕರೆದಿದೆ. ಹೀಗೆ ಪ್ರತಿರೋಧ ಬರುತ್ತಿರುವ ಹಿನ್ನೆಲೆಯಲ್ಲಿ ಯುಜಿಸಿ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುವ ಮತ್ತು ದೇಶದ ಬೋಧನೆ ಮತ್ತು ಸಂಶೋಧನೆಗಳಿಗೆ ಅನುದಾನ ನೀಡಲು ಎಂದೇ ರಚಿತವಾದ ಸಂಸ್ಥೆಯು ಮೊದಲಿನ ಹಾಗೆ ಅನುದಾನ ನೀಡುವುದನ್ನು, ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸ್ಕಾಲರ್ಶಿಪ್ ನೀಡುವುದನ್ನು ಮುಂದುರಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ಮಾರಕ ಎನಿಸುವ ನಿಲುವುಗಳನ್ನು ಪ್ರಕಟಿಸದೆ ದೇಶದ ಸಮಗ್ರ ಶೈಕ್ಷಣಿಕ ಗುಣಮಟ್ಟವನ್ನು, ಬೋಧನೆ ಮತ್ತು ಸಂಶೋಧನೆಗಳಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ವಿಹಿತ.

ಸಂತೋಷ್ ನಾಯಕ್ ಆರ್

ಸಂತೋಷ್ ನಾಯಕ್ ಆರ್
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...