Homeಮುಖಪುಟವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಚಟುವಟಿಕೆಗಳು ಮತ್ತು ವಿವಾದಗಳು

- Advertisement -
- Advertisement -

ಭಾರತದ ವಿಶ್ವವಿದ್ಯಾಲಯ ಅನುದಾನ ಆಯೋಗ (UGC) 1956ರಲ್ಲಿ ಭಾರತ ಸರ್ಕಾರ ಸ್ಥಾಪಿಸಿದ ಶಾಸನಬದ್ಧ ಸಂಸ್ಥೆ. ದೇಶದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಮಾನದಂಡಗಳನ್ನು ರೂಪಿಸುವುದು ಮತ್ತು ಅವುಗಳ ಜಾರಿಯನ್ನು ಖಚಿತಪಡಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ವಿಶ್ವವಿದ್ಯಾಲಯದ ಶಿಕ್ಷಣದ ಸಮನ್ವಯ ಮತ್ತು ಗುಣಮಟ್ಟಗಳ ನಿರ್ವಹಣೆಯಲ್ಲಿ ಯುಜಿಸಿ ನಿರ್ಣಾಯಕ ಪಾತ್ರ ವಹಿಸುತ್ತದೆ.

ಸ್ವಾತಂತ್ರ್ಯದ ನಂತರ ಭಾರತವು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿತು. ಆದರೆ ಹೀಗೆ ಸ್ಥಾಪಿತವಾದ ಸಂಸ್ಥೆಗಳಲ್ಲಿ ಸ್ಥಿರವಾದ ಶೈಕ್ಷಣಿಕ ಮಾನದಂಡಗಳನ್ನು ರೂಪಿಸುವ ಮತ್ತು ದೇಶಾದ್ಯಂತ ಉನ್ನತ ಶಿಕ್ಷಣದ ಗುಣಮಟ್ಟವನ್ನು ಪ್ರಮಾಣೀಕರಿಸುವ ಅಗತ್ಯವಿತ್ತು. ಇದನ್ನು ಖಚಿತಪಡಿಸಿಕೊಳ್ಳುವ ಹಾಗು ಶೈಕ್ಷಣಿಕ ಗುಣಮಟ್ಟವನ್ನು ಎತ್ತಿಹಿಡಿಯಲು, ಸಂಸ್ಥೆಗಳನ್ನು ಮೌಲ್ಯಮಾಪನ ಮಾಡುವ ಮತ್ತು ಮಾನ್ಯತೆ ನೀಡುವ ಕಾರ್ಯವನ್ನು ನಿರ್ವಹಿಸಲು ಯುಜಿಸಿಯ ಸ್ಥಾಪನೆಯಾಯ್ತು.

ಇದರೊಂದಿಗೆ ದೇಶದ ವೈವಿಧ್ಯಮಯ ಶಿಕ್ಷಣ ವ್ಯವಸ್ಥೆಗೆ ಹಣಕಾಸು ಕೂಡ ಬಹಳ ಮುಖ್ಯವಾಗಿದ್ದು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಸಂಪನ್ಮೂಲಗಳ ನ್ಯಾಯಯುತ ಮತ್ತು ಪರಿಣಾಮಕಾರಿ ವಿತರಣೆಯನ್ನು ಮಾಡಲು ಕೂಡ ಕೇಂದ್ರೀಕೃತ ಸಂಸ್ಥೆಯಾಗಿ ಯುಜಿಸಿಯನ್ನು ಸ್ಥಾಪಿಸಲಾಯಿತು.

ಇಷ್ಟೇ ಅಲ್ಲದೆ ಭಾರತದಲ್ಲಿ ಉನ್ನತ ಶಿಕ್ಷಣ ಕ್ಷೇತ್ರವನ್ನು ಜಾಗತಿಕ ಸ್ಪರ್ಧಾತ್ಮಕತೆ ಮತ್ತು ರಾಷ್ಟ್ರೀಯ ಅಭಿವೃದ್ಧಿ ಗುರಿಗಳತ್ತ ಕೊಂಡೊಯ್ಯುವ ನೀತಿಗಳನ್ನು ಅಭಿವೃದ್ಧಿಪಡಿಸಲು ಚಿಂತಕರ ಚಾವಡಿಯಾಗಿ ಯುಜಿಸಿ ಕಾರ್ಯನಿರ್ವಹಿಸಬೇಕೆಂದು ಉದ್ದೇಶಿಸಲಾಗಿತ್ತು ಹಾಗು ಆರಂಭದ ಬಹುಕಾಲ ಯುಜಿಸಿಯು ಈ ಉದ್ದೇಶಗಳೆಡೆಗೆ ಕಾರ್ಯನಿರ್ವಹಿಸಿತು.

ಇದಲ್ಲದೆ ಪ್ರಾಧ್ಯಾಪಕರ, ಕುಲಪತಿಗಳ ನೇಮಕಾತಿ, ಬಡ್ತಿ, ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಹಲವಾರು ವಿದ್ಯಾರ್ಥಿವೇತನಗಳ ಮೂಲಕ ಬೆಂಬಲ ನೀಡಲು ಯುಜಿಸಿ ನಿಯಮಾವಳಿಗಳನ್ನು ರೂಪಿಸಿ ನಿರ್ವಹಿಸುತ್ತದೆ. ಇದರಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಳು ಮತ್ತು ಉಪನ್ಯಾಸಕ ಅರ್ಹತೆಗಳಿಗಾಗಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಕೂಡ ಸೇರಿದೆ. ಇಷ್ಟೇಅಲ್ಲದೆ ಜಾಗತಿಕ ಶೈಕ್ಷಣಿಕ ಪ್ರವೃತ್ತಿಗಳು ಮತ್ತು ರಾಷ್ಟ್ರೀಯ ಆದ್ಯತೆಗಳಿಗೆ ಅನುಗುಣವಾಗಿ ಪಠ್ಯಕ್ರಮವನ್ನು ಆಧುನೀಕರಿಸುವ ಮತ್ತು ನವೀಕರಿಸುವಲ್ಲಿ ಯುಜಿಸಿ ಪ್ರಮುಖ ಪಾತ್ರ ವಹಿಸುತ್ತದೆ.

ಹೀಗೆ ನಿರಂತರವಾಗಿ ಉನ್ನತಶಿಕ್ಷಣದ ಬೆನ್ನೆಲುಬಾಗಿ ಕಾರ್ಯನಿರ್ವಹಿಸಬೇಕಾದ ಯುಜಿಸಿಯು ಹಲವಾರು ಬಾರಿ ತನ್ನ ತೀರ್ಮಾನಗಳು ಮತ್ತು ಸಲಹೆಗಳಿಂದಾಗಿ ವಿವಾದಕ್ಕೊಳಗಾಗಿದೆ. ಇದರಲ್ಲಿ ಇತ್ತೀಚಿನ ಸೇರ್ಪಡೆ ಎಂದರೆ ಜನವರಿ 7ರಂದು ಕೇಂದ್ರ ಶಿಕ್ಷಣ ಸಚಿವರು ಬಿಡುಗಡೆ ಮಾಡಿದ 2025ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಕರಡು ನಿಯಮಾವಳಿಗಳು. “ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಹಾಗೂ ಪದೋನ್ನತಿಯ ಕನಿಷ್ಟ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು” ಎಂಬ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಶಿಕ್ಷಣದ ಕುರಿತು ರಾಜ್ಯ ಮತ್ತು ಕೇಂದ್ರದ ನಡುವಿನ ಜವಾಬ್ದಾರಿಯನ್ನು ಅಳಿಸಿಹಾಕುವಂತ ಹೊಸ ನಿಯಮಾವಳಿ ಪ್ರಕಟಿಸಿದೆ.

ಭಾರತದಲ್ಲಿನ ಉನ್ನತ ಶಿಕ್ಷಣ ಹಂತದಲ್ಲಿನ ಬೋಧನೆ ಮತ್ತು ಸಂಶೋಧನೆಯ ಗುಣಮಟ್ಟ ಕುಸಿಯುತ್ತಿದೆ ಎಂಬ ನಿರಂತರ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈಗ ತರಲು ಉದ್ದೇಶಿಸಿರುವ ಕೆಲವು ಹೊಸ ನಿಯಮಗಳು ಅದರಲ್ಲಿ ಈ ಕರಡಿನ 10ನೇ ನಿಯಮದಲ್ಲಿ ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ಹಲವು ಬದಲಾವಣೆಗಳನ್ನು ತರುವ ದಿಕ್ಕಿನಲ್ಲಿ ಕೆಲವು ಅಂಶಗಳನ್ನು ಒಕ್ಕೂಟ ಸರ್ಕಾರ ಪ್ರಸ್ತಾಪಿಸಿದೆ. ಆ ನಿಯಮಗಳ ಪ್ರಕಾರ ಇನ್ನು ಮುಂದೆ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ತೀರ್ಮಾನವೇ ನಿರ್ಣಾಯಕವಾಗಲಿದೆ; ಮತ್ತು ಬೋಧನೆಯ ಅನುಭವ ಇಲ್ಲದ “ಖಾಸಗೀ ಉದ್ದಿಮೆಯ ಅನುಭವಿ ವ್ಯಕ್ತಿಯು” ಕೂಡ ಕುಲಪತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ. ಈ ಹಿಂದಿನ ನಿಯಮಾವಳಿಯಲ್ಲಿ ಯಾವುದೇ ವಿಶ್ವವಿದ್ಯಾಲಯದ ಕುಲಪತಿಯಾಗಬೇಕೆಂದರೆ ಅವರು ಮೊದಲು ಬೋಧಕರಾಗಿರಬೇಕಿತ್ತು. ಈ ನಿಯಮವನ್ನು ಪ್ರಸ್ತುತ ಕರಡು ನಿಯಮಾವಳಿಯಲ್ಲಿ ಬದಲಿಸಲಾಗಿದೆ ಮತ್ತು ಈ ಕರಡು ನಿಯಮಾವಳಿಯು ಕುಲಪತಿ ನೇಮಕಾತಿಯಲ್ಲಿ ರಾಜ್ಯ ಸರ್ಕಾರಕ್ಕಿಂತಲೂ ಕೇಂದ್ರ ನೇಮಿಸಿರುವ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರ ನೀಡಿರುತ್ತದೆ.

ತಮಿಳುನಾಡು, ಕೇರಳ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಮತ್ತು ರಾಜ್ಯಪಾಲರ ನಡುವೆ ಸಂಘರ್ಷ ಉಂಟಾಗಿತ್ತು. ಈಗ ಯುಜಿಸಿಯ ನಿಯಮಾವಳಿಗಳು ರಾಜ್ಯ ಸರ್ಕಾರದ ಅಧಿಕಾರವನ್ನೇ ಮೊಟಕುಗೊಳಿಸುವಂತಿದೆ. ಯುಜಿಸಿಯ ಕರಡು ನಿಯಮಾವಳಿಯು ಕೇಂದ್ರ ಮತ್ತು ರಾಜ್ಯಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಹುಟ್ಟುಹಾಕುವ ಸಾಧ್ಯತೆ ಇದೆ.

1976ರಲ್ಲಿ ಸಂವಿಧಾನಕ್ಕೆ 42ನೇ ತಿದ್ದುಪಡಿ ಮಾಡುವ ಮೂಲಕ ಶಿಕ್ಷಣವನ್ನು ಸಮವರ್ತಿ ಪಟ್ಟಿಗೆ ಸೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಗೆ ನೇಮಕಾತಿ ಅಧಿಕಾರ ಇರುತ್ತದೆ. ಹಾಗೆಯೇ ಪ್ರಾಧ್ಯಾಪಕರುಗಳ ನೇಮಕಾತಿಯಲ್ಲೂ ಕನಿಷ್ಟ ವಿದ್ಯಾರ್ಹತೆಯ ಮಾನದಂಡವನ್ನು ಯುಜಿಸಿ ಹೇಳಿದರೂ ಸರ್ಕಾರಗಳು ನೇಮಕಾತಿ ವಿಧಾನವನ್ನು ತಾವೇ ನಿರ್ಣಯಿಸುತ್ತವೆ; ಉದಾಹರಣೆಗೆ ಈಗ ಕರ್ನಾಟಕದಲ್ಲಿ ಕೆಇಎ ಮೂಲಕ ಲಿಖಿತ ಪರೀಕ್ಷೆಗಳನ್ನು ನಡೆಸಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಲಾಗುತ್ತದೆ; ಸರ್ಕಾರ ಬಯಸಿದರೆ ಇದಕ್ಕೆ ಸಂದರ್ಶನವನ್ನೂ ಸೇರಿಸಬಹುದು- ಇವೆಲ್ಲಾ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ವಿಶ್ವವಿದ್ಯಾನಿಲಯಗಳು ನೇಮಕಾತಿಗೆ ತಮ್ಮದೇ ವಿಧಾನಗಳನ್ನು ಹೊಂದಿವೆ. ಇದನ್ನು ಸಹ ಸರ್ಕಾರವು ಬದಲಿಸಲು ಸಾಧ್ಯ. ಹಾಗೆಯೇ ಯುಜಿಸಿ ಯಾವುದೇ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸುವ ಅಥವಾ ಮುಚ್ಚುವ ಅಧಿಕಾರ ಹೊಂದಿಲ್ಲ; ಅದು ಸಹ ಆಯಾ ರಾಜ್ಯಗಳ ಅಧಿಕಾರದ ವ್ಯಾಪ್ತಿಗೆ ಬರುತ್ತದೆ.

ಈಗಿನ ಕರಡು ಪ್ರಸ್ತಾಪವು ಸಾಂವಿಧಾನಿಕ ಒಕ್ಕೂಟ ವ್ಯವಸ್ಥೆಗೆ ಮಾರಕ ಮತ್ತು ಉನ್ನತ ಶಿಕ್ಷಣದ ಸಂಪೂರ್ಣ ಖಾಸಗೀಕರಣಕ್ಕೆ ಕಾರಣವಾಗಲಿದೆ ಎಂಬ ವಿಮರ್ಶೆಗೆ ಒಳಗಾಗಿದೆ. ಯುಜಿಸಿ ರೂಪಿಸಿರುವ ಕುಲಪತಿಗಳ ನೇಮಕಾತಿ ಕರಡು ನಿಯಮಗಳು ಉನ್ನತ ಶಿಕ್ಷಣದ ಕುರಿತು ರಾಜ್ಯಗಳ ಮೂಲಭೂತ ಹಕ್ಕನ್ನು ಮೊಟಕುಗೊಳಿಸುವ ಗುಣ ಹೊಂದಿದೆ.

ತನ್ನ ರಾಜ್ಯದ ಉನ್ನತ ಶಿಕ್ಷಣದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ರಾಜ್ಯಗಳಿಗೆ ಇರಬೇಕಾಗಿರುವುದು ಪ್ರಜಾತಾಂತ್ರಿಕ ನಿರ್ಣಯ. ಶಿಕ್ಷಣದ ಮೇಲಿನ ರಾಜ್ಯಗಳ ಹಕ್ಕನ್ನೇ ಮೊಟಕುಗೊಳಿಸುವ ಕ್ರಮವು ಶಿಕ್ಷಣದ ಭವಿಷ್ಯದ ದೃಷ್ಟಿಯಿಂದ ತೀರಾ ಅಪಾಯಕಾರಿ ಎನಿಸುತ್ತದೆ. ಇದರ ಜೊತೆಗೆ ಶೈಕ್ಷಣಿಕ ಹಿನ್ನೆಲೆ ಇಲ್ಲದ ವ್ಯಕ್ತಿ ಕೂಡ ಕುಲಪತಿ ಹುದ್ದೆಗೆ ಅರ್ಹ ವ್ಯಕ್ತಿಯಾಗಿದ್ದಾರೆ ಎಂಬುದು ಚರ್ಚಾರ್ಹವಾಗಿದೆ. ಈಗ ಯಾವ ಅನುಭವವೂ ಇಲ್ಲದ ವ್ಯಕ್ತಿಯನ್ನು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದರೆ ಆ ವ್ಯಕ್ತಿಯಿಂದ ವಿಶ್ವವಿದ್ಯಾಲಯಕ್ಕೆ ಬೇಕಾದ ಶೈಕ್ಷಣಿಕ ನಾಯಕತ್ವ ಮತ್ತು ಶೈಕ್ಷಣಿಕಾಡಳಿತ ಎರಡನ್ನೂ ನೀಡಲು ಸಾಧ್ಯವಾಗುವುದಿಲ್ಲ. ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ನಾಯಕತ್ವಕ್ಕೆ ನೇಮಕವಾದರೆ ಅದೊಂದು ಅಪಕ್ವ ನಡೆಯಾಗುತ್ತದೆ.

ಕರಡು ನಿಯಮಾವಳಿಗಳ ಪ್ರಕಾರ ಸ್ನಾತಕೋತ್ತರ ಪದವಿ ಪಡೆಯದಿದ್ದರೂ, ನೆಟ್ ಅಥವಾ ಕೆಸೆಟ್ ಇಲ್ಲದಿದ್ದರೂ, ನಾಲ್ಕು ವರ್ಷ ಓದಿದ 75 ಶೇ ಅಂಕ ಇರುವ ಪದವೀಧರರು ಸಹಾಯಕ ಪ್ರಾಧ್ಯಾಪಕರಾಗಲು ಅರ್ಹರಿರುತ್ತಾರೆ. ಎಂಜಿನಿಯರಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಆಯ್ಕೆಯಾಗಲು ಅರ್ಹರು. ಈ ಹಿಂದೆ ಇದ್ದ ಯುಜಿಸಿ 2018ರ ನಿಯಮಾವಳಿ ಪ್ರಕಾರ ಸಹಾಯಕ ಪ್ರಾಧ್ಯಾಪಕರಾಗಲು ಪದವಿ ಮತ್ತು ಸ್ನಾತಕೋತ್ತರ ಪದವಿಯ ಜೊತೆಗೆ ಸಂಬಂಧಿಸಿದ ವಿಷಯದಲ್ಲಿ NET/SLET/PhD ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದರಿಂದ, ವಿಷಯದಲ್ಲಿ ಪರಿಣಿತಿಯನ್ನು ಪಡೆದುಕೊಂಡಿರುವವರು ಆಯ್ಕೆಯಾಗುತ್ತಿದ್ದರು. ಈಗ ಯುಜಿಸಿ ಹೊಸ ನಿಯಮಾವಳಿ ಪ್ರಕಾರ ನವೀನ ಬೋಧನಾ ವಿಧಾನಗಳು, ಡಿಜಿಟಲ್ ರೂಪದಲ್ಲಿ ಪಠ್ಯ ರಚನೆ ಮತ್ತು ಸಂಶೋಧನಾ ನಿಧಿಗೆ ಕೊಡುಗೆಗಳಂತಹ ವೃತ್ತಿಪರ ಸಾಧನೆಗಳನ್ನು ಗುರುತಿಸುವ ನಿಬಂಧನೆಗಳನ್ನು ಪರಿಚಯಿಸುವ ಮೂಲಕ ಕರಡು ಅರ್ಹತೆಗಳ ವ್ಯಾಪ್ತಿಯನ್ನು ಸಡಿಲಗೊಳಿಸಿದೆ. ಬಡ್ತಿಗೆ ಬೇಕಾದ ಮಾನದಂಡಗಳನ್ನು ಕಡಿಮೆ ಮಾಡಿರುವುದು ಸಹ ಶೈಕ್ಷಣಿಕ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಹೊಸ ಮಾರ್ಗಸೂಚಿಗಳು ಅಧ್ಯಾಪಕರ ಬಡ್ತಿಗಾಗಿ ಬಳಸಲಾಗುತ್ತಿದ್ದ ಶೈಕ್ಷಣಿಕ ಕಾರ್ಯಕ್ಷಮತೆ ಸೂಚಕ ವ್ಯವಸ್ಥೆಯನ್ನು ತೆಗೆದುಹಾಕುತ್ತವೆ.

ಯುಜಿಸಿಯ ಈ ಕರಡು ನಿಯಮಗಳು, ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಉದ್ದೇಶಗಳನ್ನು ಹೇಗಾದರೂ ರಾಜ್ಯಗಳ ಮೇಲೆ ಹೇರಲು ಪ್ರಯತ್ನಿಸುವ ಜೊತೆಗೆ ಕುಲಪತಿ (ವಿಸಿ) ಹುದ್ದೆಯ ಆಯ್ಕೆಯಲ್ಲಿ ಶೈಕ್ಷಣಿಕೇತರರಿಗೆ ಸ್ಥಾನವನ್ನು ಕೊಡಲು ಕೂಡ ಪ್ರಯತ್ನಿಸುತ್ತವೆ.

ಈಗಾಗಲೇ ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಇದನ್ನು ವಿರೋಧಿಸಿ ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಈ ಕರಡು ನಿಯಮಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಕೂಡ ವಿರೋಧಿಸಿದ್ದಾರೆ. ಹೈದರಾಬಾದ್‌ನ ಒಬಿಸಿ ವಿಧ್ಯಾರ್ಥಿ ಒಕ್ಕೂಟ ಸಹ ವಿರೋಧಿಸಿದೆ. ಪಶ್ಚಿಮ ಬಂಗಾಳ ಕೂಡ ತನ್ನ ಅಸಮ್ಮತಿಯನ್ನು ವ್ಯಕ್ತಪಡಿಸಿದೆ. ಪುದುಚೇರಿಯು ಯುಜಿಸಿಯನ್ನು ಭಾಗೀದಾರರ ಸಮಾಲೋಚನೆಗೆ ಕರೆದಿದೆ. ಹೀಗೆ ಪ್ರತಿರೋಧ ಬರುತ್ತಿರುವ ಹಿನ್ನೆಲೆಯಲ್ಲಿ ಯುಜಿಸಿ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆಯುವ ಮತ್ತು ದೇಶದ ಬೋಧನೆ ಮತ್ತು ಸಂಶೋಧನೆಗಳಿಗೆ ಅನುದಾನ ನೀಡಲು ಎಂದೇ ರಚಿತವಾದ ಸಂಸ್ಥೆಯು ಮೊದಲಿನ ಹಾಗೆ ಅನುದಾನ ನೀಡುವುದನ್ನು, ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸ್ಕಾಲರ್ಶಿಪ್ ನೀಡುವುದನ್ನು ಮುಂದುರಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ಮಾರಕ ಎನಿಸುವ ನಿಲುವುಗಳನ್ನು ಪ್ರಕಟಿಸದೆ ದೇಶದ ಸಮಗ್ರ ಶೈಕ್ಷಣಿಕ ಗುಣಮಟ್ಟವನ್ನು, ಬೋಧನೆ ಮತ್ತು ಸಂಶೋಧನೆಗಳಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ವಿಹಿತ.

ಸಂತೋಷ್ ನಾಯಕ್ ಆರ್

ಸಂತೋಷ್ ನಾಯಕ್ ಆರ್
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...