Homeನ್ಯಾಯ ಪಥಮತ್ತೊಮ್ಮೆ ಬಯಲಾದ ಚಕ್ರವರ್ತಿ ಸೂಲಿಬೆಲೆ*ಯ ಅಸಲೀಯತ್ತು : ದಿನೂ ಸ.ಚಂ

ಮತ್ತೊಮ್ಮೆ ಬಯಲಾದ ಚಕ್ರವರ್ತಿ ಸೂಲಿಬೆಲೆ*ಯ ಅಸಲೀಯತ್ತು : ದಿನೂ ಸ.ಚಂ

- Advertisement -
- Advertisement -

‘ನನ್ನ ಹೆಸರು ಮಹಮದ್, ನಾನೊಬ್ಬ ಅತ್ಯಾಚಾರಿ’ ಎಂದು ಬರೆದ, ಶಾದ್‍ನಗರದ  ದುಷ್ಕೃತ್ಯದ ಒಬ್ಬ ಆರೋಪಿಯ ಫೋಟೋ ಇರುವ ಪೋಸ್ಟರ್ ಒಂದನ್ನು ಚಕ್ರವರ್ತಿ ಸೂಲಿಬೆಲೆ ಟ್ವಿಟರ್‍ನಲ್ಲಿ ಶೇರ್ ಮಾಡಿದ್ದರು. ಅವರ ಉದ್ದೇಶ ಸ್ಪಷ್ಟವಾಗಿತ್ತು. ಪಶುವೈದ್ಯೆ ದಿಶಾರ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ಹುಟ್ಟಿಕೊಂಡ ಜನಾಕ್ರೋಶವನ್ನು ಒಂದು ಸಮುದಾಯದ ಮೇಲಿನ ದ್ವೇಷಕ್ಕಾಗಿ ಬಳಸಿಕೊಳ್ಳುವುದು.

ಹೈದರಾಬಾದ್‍ನ ಪಶುವೈದ್ಯೆ ‘ದಿಶಾ’ರ ಅತ್ಯಾಚಾರ ಮತ್ತು ಕೊಲೆ ಇಡೀ ದೇಶದ ಆತ್ಮಸಾಕ್ಷಿಯನ್ನು ಅಲುಗಾಡಿಸಿಬಿಟ್ಟಿದೆ. ಚಿಂತಕುಂಟ ಚನ್ನಕೇಶವುಲು, ಜೊಲ್ಲು ಶಿವ, ಮಹಮದ್ ಆರಿಫ್ ಮತ್ತು ಜೊಲ್ಲುನವೀನ್ ಎಂಬ ನಾಲ್ವರು ಶಾದ್‍ನಗರದಲ್ಲಿ ನವೆಂಬರ್ 27ರಂದು ದಿಶಾಗೆ ನೆರವು ನೀಡುವ ನೆಪದಲ್ಲಿ ಅಪಹರಿಸಿ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ನಡೆಸಿ, ಉಸಿರುಗಟ್ಟಿಸಿ ಕೊಂದು, ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ದೇಶದಲ್ಲಿ ದಿನನಿತ್ಯ ನೂರಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಲೇ ಇವೆ. ಆದರೆ ಕೆಲವು ಘಟನೆಗಳ ಭೀಕರತೆ ಇಡೀ ದೇಶದ ಗಮನ ಸೆಳೆಯುತ್ತವೆ, ಜನಾಕ್ರೋಶಕ್ಕೆ ಕಾರಣವಾಗುತ್ತವೆ. ದಿಶಾ ಪ್ರಕರಣದ ಭೀಕರತೆ ಇಡೀ ನಾಗರಿಕ ಪ್ರಪಂಚವನ್ನು ಅಲುಗಾಡಿಸಿಬಿಟ್ಟಿದೆ. ದೆಹಲಿಯ ನಿರ್ಭಯಾ ಪ್ರಕರಣ, ಕಥುವಾದ ಆಸಿಫಾ ಪ್ರಕರಣಗಳು ನಡೆದಾಗಲೂ ಇದೇ ರೀತಿಯ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು.

ದಿಶಾ ಕೊಲೆಗಡುಕರಿಗೆ ನಡುರಸ್ತೆಯಲ್ಲಿ ನೇಣು ಹಾಕಬೇಕು, ಕಲ್ಲು ಹೊಡೆದು ಸಾಯಿಸಬೇಕು, ಬೆಂಕಿ ಹಚ್ಚಿ ಕೊಲ್ಲಬೇಕು, ಮರ್ಮಾಂಗವನ್ನು ಕತ್ತರಿಸಬೇಕು ಎಂದು ಸಾಮಾನ್ಯ ಜನರು ಅಭಿಪ್ರಾಯಪಡುತ್ತಿದ್ದಾರೆ. ಈ ತರದ ಯಾವುದೇ ಶಿಕ್ಷಾವಿಧಾನ ನಮ್ಮಲ್ಲಿಲ್ಲ. ಆದರೆ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಜನರ ಆಕ್ರೋಶ ದಿನೇದಿನೇ ಹೆಚ್ಚುತ್ತಲಿದೆ ಮತ್ತು ಅತ್ಯಾಚಾರದಂಥ ಪ್ರಕರಣಗಳನ್ನು ಸರ್ಕಾರ ಮತ್ತು ನ್ಯಾಯವ್ಯವಸ್ಥೆ ನಿರ್ವಹಿಸುತ್ತಿರುವ ಸ್ಥಿತಿಯ ಕುರಿತು ಅವರಿಗೆ ತೀವ್ರವಾದ ಅಸಮಾಧಾನವಿದೆ.

ದಿಶಾ ಸಾವು ಹೀಗೆ ದೇಶವನ್ನು ಕಂಗೆಡಿಸಿದ್ದರೆ, ಕೆಲವು ಅಮಾನವೀಯ ಮತ್ತು ಲಜ್ಜೆಗೇಡಿ ಶಕ್ತಿಗಳು ತಮ್ಮ ಹುನ್ನಾಕ್ಕೆ ಬಳಸಿಕೊಳ್ಳಲು ಅನುವಾದರು. ಇವು ಹೆಣ ಬೀಳುವುದನ್ನೇ ಕಾಯುವ ರಣಹದ್ದುಗಳು. ಇವರಿಗೆ ನೈತಿಕತೆಯ ಯಾವ ಗಡಿಗುರುತುಗಳು ಇಲ್ಲ, ಮಾನವೀಯತೆಯೆಂಬುದರ ಅರ್ಥವೂ ತಿಳಿದಿಲ್ಲ. ಅವರಿಗೆ ತಮ್ಮ ಅಜೆಂಡಾಗಳು ಕಾರ್ಯರೂಪಕ್ಕೆ ಬರಬೇಕು ಅಷ್ಟೆ.

‘ನನ್ನ ಹೆಸರು ಮಹಮದ್, ನಾನೊಬ್ಬ ಅತ್ಯಾಚಾರಿ’ ಎಂದು ಬರೆದ, ಶಾದ್‍ನಗರದ  ದುಷ್ಕೃತ್ಯದ ಒಬ್ಬ ಆರೋಪಿಯ ಫೋಟೋ ಇರುವ ಪೋಸ್ಟರ್ ಒಂದನ್ನು ಚಕ್ರವರ್ತಿ ಸೂಲಿಬೆಲೆ ಟ್ವಿಟರ್‍ನಲ್ಲಿ ಶೇರ್ ಮಾಡಿದ್ದರು. ಅವರ ಉದ್ದೇಶ ಸ್ಪಷ್ಟವಾಗಿತ್ತು. ಪಶುವೈದ್ಯೆ ದಿಶಾರ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ಹುಟ್ಟಿಕೊಂಡ ಜನಾಕ್ರೋಶವನ್ನು ಒಂದು ಸಮುದಾಯದ ಮೇಲಿನ ದ್ವೇಷಕ್ಕಾಗಿ ಬಳಸಿಕೊಳ್ಳುವುದು.

ಇದಕ್ಕಿಂತ ಹೀನ ಆಲೋಚನೆಯೂ ಈ ಟ್ವೀಟ್ ಹಿಂದೆ ಕೆಲಸ ಮಾಡಿದೆ. ಮಹಮದ್ ಆರಿಫ್ ಎಂಬ ಆರೋಪಿಯ ಪೂರ್ಣ ಹೆಸರು ಬರೆಯದೆ ಮಹಮದ್ ಎಂದಷ್ಟೇ ಬರೆಯಲಾಗಿದೆ. ಈ ಮೂಲಕ ಮುಸ್ಲಿಮರನ್ನು ಕೆರಳಿಸುವುದು, ಅವರ ಉದ್ದೇಶ. ಆದರೆ ಅವರ ಲೆಕ್ಕಾಚಾರ ತಪ್ಪಿಹೋಯಿತು. ಈ ಕುಚೇಷ್ಟೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವತ್ರಿಕ ಟೀಕೆ ವ್ಯಕ್ತವಾಯಿತು.

ಅತ್ಯಾಚಾರವಾಗಿರುವುದು ನಿಜ, ಎಲ್ಲರಿಗೂ ತಮ್ಮ ಸಿಟ್ಟು ತೋಡಿಕೊಳ್ಳುವ ಹಕ್ಕು ಇದೆ. ಆದರೆ ಸೂಲಿಬೆಲೆಯವರಿಗೆ ಯಾಕೆ ಈ ಸೆಲೆಕ್ಟಿವ್ ಸಿಟ್ಟು? ಆರಿಫ್ ಹೊರತುಪಡಿಸಿ ಇನ್ನುಳಿದ ಮೂವರ ಮೇಲೆ ಯಾಕೆ ಮಮಕಾರ? ಆರಿಫ್‍ನನ್ನು ನೇಣಿಗೇರಿಸಬೇಕು, ಉಳಿದ ಶಿವ, ನವೀನ, ಚನ್ನಕೇಶವರನ್ನು ಏನು ಮಾಡಬೇಕು? ಇದೇ ಪ್ರಶ್ನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಕೇಳಲಾಗುತ್ತಿದೆ. ಉಳಿದ ಮೂವರು ರೇಪಿಸ್ಟರನ್ನು ನಿಮ್ಮ ನಮೋ ಬ್ರಿಗೇಡ್‍ಗೆ ಸೇರಿಸಿಕೊಳ್ಳುತ್ತೀರಾ ಸೂಲಿಬೆಲೆಯವರೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಆ ಮೂವರು ನಿಮ್ಮ ರಕ್ತಸಂಬಂಧಿಗಳಿರಬಹುದು, ಅದಕ್ಕೆ ಅವರಿಗೆ ನೇಣುಶಿಕ್ಷೆ ಕೇಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.

ಇದು ಸೂಲಿಬೆಲೆ ಒಬ್ಬಾತನ ಪ್ರಶ್ನೆಯಲ್ಲ. ಇದೇ ಥರ ಯೋಚಿಸುವ ಹಿಂಡುಹಿಂಡೇ ಜಾಲತಾಣಗಳಲ್ಲಿ ಕಾಣಸಿಗುತ್ತವೆ. ದಿಶಾ ಅತ್ಯಾಚಾರ-ಕೊಲೆ ನಡೆದಿರುವುದು ಶಾದ್‍ನಗರದಲ್ಲಿ ಎಂದು ಗೊತ್ತಾಗುತ್ತಿದ್ದಂತೆ ಅದು ಮುಸ್ಲಿಂ ಬಾಹುಳ್ಯದ ಪ್ರದೇಶ, ಅದಕ್ಕೆ ರೇಪ್ ನಡೆದಿದೆ ಎಂದು ಕೆಲವರು ಬರೆದುಕೊಂಡರು. ಪೋಸ್ಟ್ ಕಾರ್ಡ್ ಎಂಬ ದ್ವೇಷಜನಕರು ಆರೋಪಿಗಳಲ್ಲಿ ಒಬ್ಬನಾದ ಜೊಲ್ಲು ನವೀನನ ಹೆಸರನ್ನು ಬೇಕೆಂದೇ ಅನ್ವರ್ ನವೀನ್ ಎಂದು ತಿದ್ದಿ ಪೋಸ್ಟ್ ಗಳನ್ನು ಹಾಕಿದರು.

ಬಲಪಂಥೀಯ ಪೇಜ್‍ಗಳಲ್ಲಿ ಮಹಮದ್ ಆರಿಫ್ ಮತ್ತು ಮೂವರು ಸಂಗಡಿಗರು ಎಂದೇ ಬರೆಯಲಾಯಿತು, ಉಳಿದ ಮೂವರ ಹೆಸರುಗಳನ್ನು ಪ್ರಜ್ಞಾಪೂರ್ವಕವಾಗಿ ಮುಚ್ಚಿಡಲಾಯಿತು. ಸಾರ್ವಜನಿಕರ ಆಕ್ರೋಶವೆಲ್ಲ ಒಂದು ಸಮುದಾಯದ ಮೇಲೆ ಕೇಂದ್ರೀಕರಣವಾಗಲಿ ಎಂಬುದು ಇವರೆಲ್ಲರ ಸ್ಪಷ್ಟ ಹುನ್ನಾರವಾಗಿತ್ತು.  ಎಷ್ಟೋ ಬಾರಿ ಈ ತಂಡಗಳು ಜನರನ್ನು ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದವು, ಆದರೆ ಈ ಬಾರಿ ಹಾಗೆ ಆಗಲಿಲ್ಲ. ದಿಶಾ ಪ್ರಕರಣವನ್ನು ಮುಸ್ಲಿಮರ ಮೇಲಿನ ದ್ವೇಷಕ್ಕೆ ಬಳಸಿಕೊಳ್ಳುವ ಇವರ ದುಷ್ಟಯತ್ನ ವಿಫಲವಾಗಿದ್ದಷ್ಟೇ ಅಲ್ಲ, ತಾವೇ ಸಾರ್ವಜನಿಕ ನಿಂದನೆಗೆ ಗುರಿಯಾಗುವಂತೆ ಆಯಿತು. ಸ್ವತಃ ಚಕ್ರವರ್ತಿ ಸೂಲಿಬೆಲೆಯವರ ಅನುಯಾಯಿಗಳೇ ಈ ಬಾರಿ ತಿರುಗಿಬಿದ್ದು ಪ್ರಶ್ನಿಸತೊಡಗಿದರು.

ಚಕ್ರವರ್ತಿ ಸೂಲಿಬೆಲೆಯನ್ನು ಚಿಂತಕ, ವಾಗ್ಮಿ ಇತ್ಯಾದಿ ಹೆಸರಿನಿಂದ ಗುರುತಿಸಲಾಗುತ್ತದೆ.ಯಾವಾಗ ನರೇಂದ್ರ ಮೋದಿ ಭಾರತ ರಾಜಕಾರಣದ ಮುಖ್ಯಭೂಮಿಕೆಗೆ ಬಂದರೋ, ಆಗ ಸೂಲಿಬೆಲೆಯಂಥ ಪೇಯ್ಡ್ ಭಾಷಣಕಾರರ ಅಗತ್ಯವಿತ್ತು. ಸೂಲಿಬೆಲೆ ತಡಮಾಡದೆ ನಮೋ ಬ್ರಿಗೇಡ್ ಕಟ್ಟಿದರು. ಊರೂರು ಸುತ್ತಿದರು. ನರೇಂದ್ರ ಮೋದಿ ಚಹಾ ಮಾರುತ್ತಿದ್ದ ಘಟನೆಗಳನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸಿದರು. ದೇಶದ ಸೈನಿಕರಿಗೆ ಬಾಲನರೇಂದ್ರ ಪುಕ್ಕಟೆಯಾಗಿ ಚಹಾ ನೀಡಿದ್ದರಿಂದ ಹಿಡಿದು, ಹಿಮಾಲಯದಲ್ಲಿ ತಪಸ್ಸು ಮಾಡಲು ಹೋದ ಅನುಭವಗಳವರೆಗೆ ಸ್ವತಃ ನರೇಂದ್ರ ಮೋದಿಯವರೇ ನಾಚಿಕೊಳ್ಳುವಂತೆ ಕಥೆಗಳನ್ನು ಕಟ್ಟಿ ಹೇಳತೊಡಗಿದರು. ಆಗ ಹುಟ್ಟಿಕೊಂಡಿದ್ದೇ ಸೂಲಿಬೆಲೆ-ಗುರುಮೂರ್ತಿ ಜೋಡಿಯ ಚಿನ್ನದ ರಸ್ತೆಯ ಥಿಯರಿಗಳು.

ಬರೀ ಅಷ್ಟೇ ಆಗಿದ್ದರೆ ಪರವಾಗಿಲ್ಲ. ಮುಸ್ಲಿಂ ದ್ವೇಷವನ್ನು ಹಬ್ಬಿಸುವುದನ್ನೇ ಕಾಯಕವಾಗಿಸಿಕೊಂಡರು.  ಪೋಸ್ಟ್ ಕಾರ್ಡ್ ಪೇಜ್‍ಗಳನ್ನು ಗಮನಿಸಿ. ಅದರ ತುಂಬೆಲ್ಲ ಮುಸ್ಲಿಂ ದ್ವೇಷದ ಪೋಸ್ಟ್ ರುಗಳು, ಬರಹಗಳೇ ಕಣ್ಣಿಗೆ ರಾಚುತ್ತವೆ. ಮುಸ್ಲಿಂ ಸಮುದಾಯದ ಹೆಸರಿನವರು ಯಾವುದಾದರೂ ಅಪರಾಧ ಪ್ರಕರಣಗಳಲ್ಲಿ ಕಾಣಿಸಿಕೊಂಡರೆ ಇವರಿಗೆ ಹಬ್ಬ. ಹುಡುಹುಡುಕಿ ಅಂಥವನ್ನು ತಂದು ಪ್ರಚೋದನೆಯ ಧಾಟಿಯಲ್ಲಿ ಬರೆಯಲಾಯಿತು. ಸೂಲಿಬೆಲೆಯಂಥವರ ಬಾಯಿಗಳಿಗೆ ಬಿಡುವಿಲ್ಲದ ಕೆಲಸ. ಅರ್ನಾಬ್ ಗೋಸ್ವಾಮಿಯಂಥ ಪೇಯ್ಡ್ ಪತ್ರಕರ್ತರ ಪ್ರೈಂ ಟೈಮ್ ಡಿಬೇಟುಗಳಿಗೆ ಬೇರೆ ವಿಷಯಗಳೇ ಬೇಡವಾದವು.

ದಿಶಾ ಪ್ರಕರಣದಲ್ಲೂ ಇದನ್ನೇ ಮಾಡಲು ಹೋಗಿ ಚಕ್ರವರ್ತಿ ಸೂಲಿಬೆಲೆ ಸಿಕ್ಕಿಬಿದ್ದಿದ್ದಾರೆ. ಸೂಲಿಬೆಲೆಯವರೇ, ನೀವು ನಿಜವಾದ ಹಿಂದುತ್ವವಾದಿಯಾಗಿದ್ದರೆ, ದೇವಸ್ಥಾನದ ಆಸ್ತಿ ಉಳಿಸಲು ಹೊರಟ ಮಂಗಳೂರಿನ ವಿನಾಯಕ ಬಾಳಿಗರ ಕೊಲೆಗಡುಕರ ಬೆಂಬಲಕ್ಕೆ ನಿಲ್ಲುತ್ತಿರಲಿಲ್ಲ ಎಂದು ಅವರ ಅಭಿಮಾನಿಗಳೇ ವಿಡಿಯೋ ಮಾಡಿ ಜಾಡಿಸುತ್ತಿದ್ದಾರೆ.

ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ, ಸತ್ತ ವ್ಯಕ್ತಿ ಹಿಂದೂವಾಗಿದ್ದರಿಂದ ಸಂಸದ (ಹಾಲಿ ಬಿಜೆಪಿಯ ರಾಜ್ಯ ಅಧ್ಯಕ್ಷ) ಕಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊಲೆಯನ್ನು ಮುಸ್ಲಿಮರೇ ಮಾಡಿದ್ದೆಂದು ಸಾರಿದ ಕಟೀಲ್ ಇದರಿಂದ ಮಂಗಳೂರಿಗೆ ಬೆಂಕಿ ಹಚ್ಚಿ ಉರಿಸಲಾಗುತ್ತದೆ ಎಂದು ಗುಡುಗಿದರು. ನಂತರ ಕೊಲೆಗಾರ್ತಿ ಮೃತ ವ್ಯಕ್ತಿಯ ತಂಗಿ ಮತ್ತು ಕಟೀಲ್ ನೇತೃತ್ವದ ಪ್ರತಿಭಟನೆಯಲ್ಲೇ ಪಾಲ್ಗೊಂಡಿದ್ದಳು ಎಂದು ಪೊಲೀಸರು ಬಂಧಿಸಿದರು! ಇಂತಹ ಹತ್ತಾರು ಪ್ರಕರಣಗಳು ಕೇವಲ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿ ನಡೆದಿವೆ. ಅದೇ ಸಂದರ್ಭದಲ್ಲಿ ಭೀಕರವಾದ ಕೊಲೆ ಅಥವಾ ಅತ್ಯಾಚಾರಕ್ಕೊಳಗಾದ ವ್ಯಕ್ತಿಗಳು ಮುಸ್ಲಿಮರಾಗಿದ್ದರೆ ಈ ಪರಿವಾರವು ಉಸಿರೆತ್ತುವುದೇ ಇಲ್ಲ. ಬದಲಿಗೆ ಕಥುವಾ ಪ್ರಕರಣದಲ್ಲಿ ಅತ್ಯಂತ ಭೀಕರವಾದ ಅತ್ಯಾಚಾರಕ್ಕೊಳಗಾದ ಬಾಲೆಯ ಪ್ರಕರಣದ ಆರೋಪಿಗಳ ಪರ ಧರ್ಮರಕ್ಷಕರು ನಿಂತಿದ್ದರು! ಇನ್ನೂ ಹೇಳಬೇಕೆಂದರೆ, ಹಿಂದೂ ಪುರುಷರಿಂದ ಹಿಂದೂ ಹುಡುಗಿಯರು ಅತ್ಯಾಚಾರಕ್ಕೆ ಒಳಗಾದಾಗಲೂ ಅದಿವರಿಗೆ ಸಮಸ್ಯೆಯೂ ಅಲ್ಲ, ದನಿಯೇಳುವುದು ಇಲ್ಲ.

ಸೂ.ರಂ. ರಾಮಯ್ಯನವರಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಸೂಲಿಬೆಲೆ ಗ್ರಾಮ ಹೊಸಕೋಟೆ ತಾಲೂಕಿನ ವಿಶಿಷ್ಟ ಹಳ್ಳಿ. ಮಿಥುನ್ ಚಕ್ರವರ್ತಿ ಎಂಬ ವಿಕೃತ ವ್ಯಕ್ತಿಯ ಅನ್ವರ್ಥವಾಗಿ ಅದು ಬಳಕೆಯಲ್ಲಿರುವುದರಿಂದ ಗುರುತಿಗಾಗಿ ಬಳಸಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಅದು ಏನು ಅಂತ ಸುದ್ದಿ ಮಾಡ್ತಿರ್ರಿ ಅದು ದಿಶಾ ಅಲ್ಲ ಪ್ರಿಯಾಂಕಾ ರೆಡ್ಡಿ, ಅದು ಸರಿಯಾಗಿ ಗೊತ್ತಿಲ್ಲ , ನೀವು ಮತ್ತೊಬ್ಬರ ಬಗ್ಗೆ ಹೇಳ್ತೀರಾ?

    • ಭಾರತದ ಕಾನೂನಿನ ಪ್ರಕಾರ ಅತ್ಯಾಚಾರ ಸಂತ್ರಸ್ತೆಯ ಮೂಲ ಹೆಸರು, ಫೋಟೊ ಇತ್ಯಾದಿಗಳನ್ನು ಪ್ರಕಟಿಸಬಾರದು. ಹಾಗಾಗಿ ಹೆಸರು ಬದಲಿಸಿದ್ದೇವೆ.

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...