Homeನ್ಯಾಯ ಪಥಮತ್ತೊಮ್ಮೆ ಬಯಲಾದ ಚಕ್ರವರ್ತಿ ಸೂಲಿಬೆಲೆ*ಯ ಅಸಲೀಯತ್ತು : ದಿನೂ ಸ.ಚಂ

ಮತ್ತೊಮ್ಮೆ ಬಯಲಾದ ಚಕ್ರವರ್ತಿ ಸೂಲಿಬೆಲೆ*ಯ ಅಸಲೀಯತ್ತು : ದಿನೂ ಸ.ಚಂ

- Advertisement -
- Advertisement -

‘ನನ್ನ ಹೆಸರು ಮಹಮದ್, ನಾನೊಬ್ಬ ಅತ್ಯಾಚಾರಿ’ ಎಂದು ಬರೆದ, ಶಾದ್‍ನಗರದ  ದುಷ್ಕೃತ್ಯದ ಒಬ್ಬ ಆರೋಪಿಯ ಫೋಟೋ ಇರುವ ಪೋಸ್ಟರ್ ಒಂದನ್ನು ಚಕ್ರವರ್ತಿ ಸೂಲಿಬೆಲೆ ಟ್ವಿಟರ್‍ನಲ್ಲಿ ಶೇರ್ ಮಾಡಿದ್ದರು. ಅವರ ಉದ್ದೇಶ ಸ್ಪಷ್ಟವಾಗಿತ್ತು. ಪಶುವೈದ್ಯೆ ದಿಶಾರ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ಹುಟ್ಟಿಕೊಂಡ ಜನಾಕ್ರೋಶವನ್ನು ಒಂದು ಸಮುದಾಯದ ಮೇಲಿನ ದ್ವೇಷಕ್ಕಾಗಿ ಬಳಸಿಕೊಳ್ಳುವುದು.

ಹೈದರಾಬಾದ್‍ನ ಪಶುವೈದ್ಯೆ ‘ದಿಶಾ’ರ ಅತ್ಯಾಚಾರ ಮತ್ತು ಕೊಲೆ ಇಡೀ ದೇಶದ ಆತ್ಮಸಾಕ್ಷಿಯನ್ನು ಅಲುಗಾಡಿಸಿಬಿಟ್ಟಿದೆ. ಚಿಂತಕುಂಟ ಚನ್ನಕೇಶವುಲು, ಜೊಲ್ಲು ಶಿವ, ಮಹಮದ್ ಆರಿಫ್ ಮತ್ತು ಜೊಲ್ಲುನವೀನ್ ಎಂಬ ನಾಲ್ವರು ಶಾದ್‍ನಗರದಲ್ಲಿ ನವೆಂಬರ್ 27ರಂದು ದಿಶಾಗೆ ನೆರವು ನೀಡುವ ನೆಪದಲ್ಲಿ ಅಪಹರಿಸಿ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ನಡೆಸಿ, ಉಸಿರುಗಟ್ಟಿಸಿ ಕೊಂದು, ಬೆಂಕಿ ಹಚ್ಚಿ ಸುಟ್ಟಿದ್ದಾರೆ.

ದೇಶದಲ್ಲಿ ದಿನನಿತ್ಯ ನೂರಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು ನಡೆಯುತ್ತಲೇ ಇವೆ. ಆದರೆ ಕೆಲವು ಘಟನೆಗಳ ಭೀಕರತೆ ಇಡೀ ದೇಶದ ಗಮನ ಸೆಳೆಯುತ್ತವೆ, ಜನಾಕ್ರೋಶಕ್ಕೆ ಕಾರಣವಾಗುತ್ತವೆ. ದಿಶಾ ಪ್ರಕರಣದ ಭೀಕರತೆ ಇಡೀ ನಾಗರಿಕ ಪ್ರಪಂಚವನ್ನು ಅಲುಗಾಡಿಸಿಬಿಟ್ಟಿದೆ. ದೆಹಲಿಯ ನಿರ್ಭಯಾ ಪ್ರಕರಣ, ಕಥುವಾದ ಆಸಿಫಾ ಪ್ರಕರಣಗಳು ನಡೆದಾಗಲೂ ಇದೇ ರೀತಿಯ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು.

ದಿಶಾ ಕೊಲೆಗಡುಕರಿಗೆ ನಡುರಸ್ತೆಯಲ್ಲಿ ನೇಣು ಹಾಕಬೇಕು, ಕಲ್ಲು ಹೊಡೆದು ಸಾಯಿಸಬೇಕು, ಬೆಂಕಿ ಹಚ್ಚಿ ಕೊಲ್ಲಬೇಕು, ಮರ್ಮಾಂಗವನ್ನು ಕತ್ತರಿಸಬೇಕು ಎಂದು ಸಾಮಾನ್ಯ ಜನರು ಅಭಿಪ್ರಾಯಪಡುತ್ತಿದ್ದಾರೆ. ಈ ತರದ ಯಾವುದೇ ಶಿಕ್ಷಾವಿಧಾನ ನಮ್ಮಲ್ಲಿಲ್ಲ. ಆದರೆ ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಜನರ ಆಕ್ರೋಶ ದಿನೇದಿನೇ ಹೆಚ್ಚುತ್ತಲಿದೆ ಮತ್ತು ಅತ್ಯಾಚಾರದಂಥ ಪ್ರಕರಣಗಳನ್ನು ಸರ್ಕಾರ ಮತ್ತು ನ್ಯಾಯವ್ಯವಸ್ಥೆ ನಿರ್ವಹಿಸುತ್ತಿರುವ ಸ್ಥಿತಿಯ ಕುರಿತು ಅವರಿಗೆ ತೀವ್ರವಾದ ಅಸಮಾಧಾನವಿದೆ.

ದಿಶಾ ಸಾವು ಹೀಗೆ ದೇಶವನ್ನು ಕಂಗೆಡಿಸಿದ್ದರೆ, ಕೆಲವು ಅಮಾನವೀಯ ಮತ್ತು ಲಜ್ಜೆಗೇಡಿ ಶಕ್ತಿಗಳು ತಮ್ಮ ಹುನ್ನಾಕ್ಕೆ ಬಳಸಿಕೊಳ್ಳಲು ಅನುವಾದರು. ಇವು ಹೆಣ ಬೀಳುವುದನ್ನೇ ಕಾಯುವ ರಣಹದ್ದುಗಳು. ಇವರಿಗೆ ನೈತಿಕತೆಯ ಯಾವ ಗಡಿಗುರುತುಗಳು ಇಲ್ಲ, ಮಾನವೀಯತೆಯೆಂಬುದರ ಅರ್ಥವೂ ತಿಳಿದಿಲ್ಲ. ಅವರಿಗೆ ತಮ್ಮ ಅಜೆಂಡಾಗಳು ಕಾರ್ಯರೂಪಕ್ಕೆ ಬರಬೇಕು ಅಷ್ಟೆ.

‘ನನ್ನ ಹೆಸರು ಮಹಮದ್, ನಾನೊಬ್ಬ ಅತ್ಯಾಚಾರಿ’ ಎಂದು ಬರೆದ, ಶಾದ್‍ನಗರದ  ದುಷ್ಕೃತ್ಯದ ಒಬ್ಬ ಆರೋಪಿಯ ಫೋಟೋ ಇರುವ ಪೋಸ್ಟರ್ ಒಂದನ್ನು ಚಕ್ರವರ್ತಿ ಸೂಲಿಬೆಲೆ ಟ್ವಿಟರ್‍ನಲ್ಲಿ ಶೇರ್ ಮಾಡಿದ್ದರು. ಅವರ ಉದ್ದೇಶ ಸ್ಪಷ್ಟವಾಗಿತ್ತು. ಪಶುವೈದ್ಯೆ ದಿಶಾರ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಂತರ ಹುಟ್ಟಿಕೊಂಡ ಜನಾಕ್ರೋಶವನ್ನು ಒಂದು ಸಮುದಾಯದ ಮೇಲಿನ ದ್ವೇಷಕ್ಕಾಗಿ ಬಳಸಿಕೊಳ್ಳುವುದು.

ಇದಕ್ಕಿಂತ ಹೀನ ಆಲೋಚನೆಯೂ ಈ ಟ್ವೀಟ್ ಹಿಂದೆ ಕೆಲಸ ಮಾಡಿದೆ. ಮಹಮದ್ ಆರಿಫ್ ಎಂಬ ಆರೋಪಿಯ ಪೂರ್ಣ ಹೆಸರು ಬರೆಯದೆ ಮಹಮದ್ ಎಂದಷ್ಟೇ ಬರೆಯಲಾಗಿದೆ. ಈ ಮೂಲಕ ಮುಸ್ಲಿಮರನ್ನು ಕೆರಳಿಸುವುದು, ಅವರ ಉದ್ದೇಶ. ಆದರೆ ಅವರ ಲೆಕ್ಕಾಚಾರ ತಪ್ಪಿಹೋಯಿತು. ಈ ಕುಚೇಷ್ಟೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವತ್ರಿಕ ಟೀಕೆ ವ್ಯಕ್ತವಾಯಿತು.

ಅತ್ಯಾಚಾರವಾಗಿರುವುದು ನಿಜ, ಎಲ್ಲರಿಗೂ ತಮ್ಮ ಸಿಟ್ಟು ತೋಡಿಕೊಳ್ಳುವ ಹಕ್ಕು ಇದೆ. ಆದರೆ ಸೂಲಿಬೆಲೆಯವರಿಗೆ ಯಾಕೆ ಈ ಸೆಲೆಕ್ಟಿವ್ ಸಿಟ್ಟು? ಆರಿಫ್ ಹೊರತುಪಡಿಸಿ ಇನ್ನುಳಿದ ಮೂವರ ಮೇಲೆ ಯಾಕೆ ಮಮಕಾರ? ಆರಿಫ್‍ನನ್ನು ನೇಣಿಗೇರಿಸಬೇಕು, ಉಳಿದ ಶಿವ, ನವೀನ, ಚನ್ನಕೇಶವರನ್ನು ಏನು ಮಾಡಬೇಕು? ಇದೇ ಪ್ರಶ್ನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಕೇಳಲಾಗುತ್ತಿದೆ. ಉಳಿದ ಮೂವರು ರೇಪಿಸ್ಟರನ್ನು ನಿಮ್ಮ ನಮೋ ಬ್ರಿಗೇಡ್‍ಗೆ ಸೇರಿಸಿಕೊಳ್ಳುತ್ತೀರಾ ಸೂಲಿಬೆಲೆಯವರೇ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಆ ಮೂವರು ನಿಮ್ಮ ರಕ್ತಸಂಬಂಧಿಗಳಿರಬಹುದು, ಅದಕ್ಕೆ ಅವರಿಗೆ ನೇಣುಶಿಕ್ಷೆ ಕೇಳುತ್ತಿಲ್ಲ ಎಂದು ಹೇಳುತ್ತಿದ್ದಾರೆ.

ಇದು ಸೂಲಿಬೆಲೆ ಒಬ್ಬಾತನ ಪ್ರಶ್ನೆಯಲ್ಲ. ಇದೇ ಥರ ಯೋಚಿಸುವ ಹಿಂಡುಹಿಂಡೇ ಜಾಲತಾಣಗಳಲ್ಲಿ ಕಾಣಸಿಗುತ್ತವೆ. ದಿಶಾ ಅತ್ಯಾಚಾರ-ಕೊಲೆ ನಡೆದಿರುವುದು ಶಾದ್‍ನಗರದಲ್ಲಿ ಎಂದು ಗೊತ್ತಾಗುತ್ತಿದ್ದಂತೆ ಅದು ಮುಸ್ಲಿಂ ಬಾಹುಳ್ಯದ ಪ್ರದೇಶ, ಅದಕ್ಕೆ ರೇಪ್ ನಡೆದಿದೆ ಎಂದು ಕೆಲವರು ಬರೆದುಕೊಂಡರು. ಪೋಸ್ಟ್ ಕಾರ್ಡ್ ಎಂಬ ದ್ವೇಷಜನಕರು ಆರೋಪಿಗಳಲ್ಲಿ ಒಬ್ಬನಾದ ಜೊಲ್ಲು ನವೀನನ ಹೆಸರನ್ನು ಬೇಕೆಂದೇ ಅನ್ವರ್ ನವೀನ್ ಎಂದು ತಿದ್ದಿ ಪೋಸ್ಟ್ ಗಳನ್ನು ಹಾಕಿದರು.

ಬಲಪಂಥೀಯ ಪೇಜ್‍ಗಳಲ್ಲಿ ಮಹಮದ್ ಆರಿಫ್ ಮತ್ತು ಮೂವರು ಸಂಗಡಿಗರು ಎಂದೇ ಬರೆಯಲಾಯಿತು, ಉಳಿದ ಮೂವರ ಹೆಸರುಗಳನ್ನು ಪ್ರಜ್ಞಾಪೂರ್ವಕವಾಗಿ ಮುಚ್ಚಿಡಲಾಯಿತು. ಸಾರ್ವಜನಿಕರ ಆಕ್ರೋಶವೆಲ್ಲ ಒಂದು ಸಮುದಾಯದ ಮೇಲೆ ಕೇಂದ್ರೀಕರಣವಾಗಲಿ ಎಂಬುದು ಇವರೆಲ್ಲರ ಸ್ಪಷ್ಟ ಹುನ್ನಾರವಾಗಿತ್ತು.  ಎಷ್ಟೋ ಬಾರಿ ಈ ತಂಡಗಳು ಜನರನ್ನು ದಾರಿ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದವು, ಆದರೆ ಈ ಬಾರಿ ಹಾಗೆ ಆಗಲಿಲ್ಲ. ದಿಶಾ ಪ್ರಕರಣವನ್ನು ಮುಸ್ಲಿಮರ ಮೇಲಿನ ದ್ವೇಷಕ್ಕೆ ಬಳಸಿಕೊಳ್ಳುವ ಇವರ ದುಷ್ಟಯತ್ನ ವಿಫಲವಾಗಿದ್ದಷ್ಟೇ ಅಲ್ಲ, ತಾವೇ ಸಾರ್ವಜನಿಕ ನಿಂದನೆಗೆ ಗುರಿಯಾಗುವಂತೆ ಆಯಿತು. ಸ್ವತಃ ಚಕ್ರವರ್ತಿ ಸೂಲಿಬೆಲೆಯವರ ಅನುಯಾಯಿಗಳೇ ಈ ಬಾರಿ ತಿರುಗಿಬಿದ್ದು ಪ್ರಶ್ನಿಸತೊಡಗಿದರು.

ಚಕ್ರವರ್ತಿ ಸೂಲಿಬೆಲೆಯನ್ನು ಚಿಂತಕ, ವಾಗ್ಮಿ ಇತ್ಯಾದಿ ಹೆಸರಿನಿಂದ ಗುರುತಿಸಲಾಗುತ್ತದೆ.ಯಾವಾಗ ನರೇಂದ್ರ ಮೋದಿ ಭಾರತ ರಾಜಕಾರಣದ ಮುಖ್ಯಭೂಮಿಕೆಗೆ ಬಂದರೋ, ಆಗ ಸೂಲಿಬೆಲೆಯಂಥ ಪೇಯ್ಡ್ ಭಾಷಣಕಾರರ ಅಗತ್ಯವಿತ್ತು. ಸೂಲಿಬೆಲೆ ತಡಮಾಡದೆ ನಮೋ ಬ್ರಿಗೇಡ್ ಕಟ್ಟಿದರು. ಊರೂರು ಸುತ್ತಿದರು. ನರೇಂದ್ರ ಮೋದಿ ಚಹಾ ಮಾರುತ್ತಿದ್ದ ಘಟನೆಗಳನ್ನು ಕಣ್ಣಿಗೆ ಕಟ್ಟುವಂತೆ ವರ್ಣಿಸಿದರು. ದೇಶದ ಸೈನಿಕರಿಗೆ ಬಾಲನರೇಂದ್ರ ಪುಕ್ಕಟೆಯಾಗಿ ಚಹಾ ನೀಡಿದ್ದರಿಂದ ಹಿಡಿದು, ಹಿಮಾಲಯದಲ್ಲಿ ತಪಸ್ಸು ಮಾಡಲು ಹೋದ ಅನುಭವಗಳವರೆಗೆ ಸ್ವತಃ ನರೇಂದ್ರ ಮೋದಿಯವರೇ ನಾಚಿಕೊಳ್ಳುವಂತೆ ಕಥೆಗಳನ್ನು ಕಟ್ಟಿ ಹೇಳತೊಡಗಿದರು. ಆಗ ಹುಟ್ಟಿಕೊಂಡಿದ್ದೇ ಸೂಲಿಬೆಲೆ-ಗುರುಮೂರ್ತಿ ಜೋಡಿಯ ಚಿನ್ನದ ರಸ್ತೆಯ ಥಿಯರಿಗಳು.

ಬರೀ ಅಷ್ಟೇ ಆಗಿದ್ದರೆ ಪರವಾಗಿಲ್ಲ. ಮುಸ್ಲಿಂ ದ್ವೇಷವನ್ನು ಹಬ್ಬಿಸುವುದನ್ನೇ ಕಾಯಕವಾಗಿಸಿಕೊಂಡರು.  ಪೋಸ್ಟ್ ಕಾರ್ಡ್ ಪೇಜ್‍ಗಳನ್ನು ಗಮನಿಸಿ. ಅದರ ತುಂಬೆಲ್ಲ ಮುಸ್ಲಿಂ ದ್ವೇಷದ ಪೋಸ್ಟ್ ರುಗಳು, ಬರಹಗಳೇ ಕಣ್ಣಿಗೆ ರಾಚುತ್ತವೆ. ಮುಸ್ಲಿಂ ಸಮುದಾಯದ ಹೆಸರಿನವರು ಯಾವುದಾದರೂ ಅಪರಾಧ ಪ್ರಕರಣಗಳಲ್ಲಿ ಕಾಣಿಸಿಕೊಂಡರೆ ಇವರಿಗೆ ಹಬ್ಬ. ಹುಡುಹುಡುಕಿ ಅಂಥವನ್ನು ತಂದು ಪ್ರಚೋದನೆಯ ಧಾಟಿಯಲ್ಲಿ ಬರೆಯಲಾಯಿತು. ಸೂಲಿಬೆಲೆಯಂಥವರ ಬಾಯಿಗಳಿಗೆ ಬಿಡುವಿಲ್ಲದ ಕೆಲಸ. ಅರ್ನಾಬ್ ಗೋಸ್ವಾಮಿಯಂಥ ಪೇಯ್ಡ್ ಪತ್ರಕರ್ತರ ಪ್ರೈಂ ಟೈಮ್ ಡಿಬೇಟುಗಳಿಗೆ ಬೇರೆ ವಿಷಯಗಳೇ ಬೇಡವಾದವು.

ದಿಶಾ ಪ್ರಕರಣದಲ್ಲೂ ಇದನ್ನೇ ಮಾಡಲು ಹೋಗಿ ಚಕ್ರವರ್ತಿ ಸೂಲಿಬೆಲೆ ಸಿಕ್ಕಿಬಿದ್ದಿದ್ದಾರೆ. ಸೂಲಿಬೆಲೆಯವರೇ, ನೀವು ನಿಜವಾದ ಹಿಂದುತ್ವವಾದಿಯಾಗಿದ್ದರೆ, ದೇವಸ್ಥಾನದ ಆಸ್ತಿ ಉಳಿಸಲು ಹೊರಟ ಮಂಗಳೂರಿನ ವಿನಾಯಕ ಬಾಳಿಗರ ಕೊಲೆಗಡುಕರ ಬೆಂಬಲಕ್ಕೆ ನಿಲ್ಲುತ್ತಿರಲಿಲ್ಲ ಎಂದು ಅವರ ಅಭಿಮಾನಿಗಳೇ ವಿಡಿಯೋ ಮಾಡಿ ಜಾಡಿಸುತ್ತಿದ್ದಾರೆ.

ಮಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ, ಸತ್ತ ವ್ಯಕ್ತಿ ಹಿಂದೂವಾಗಿದ್ದರಿಂದ ಸಂಸದ (ಹಾಲಿ ಬಿಜೆಪಿಯ ರಾಜ್ಯ ಅಧ್ಯಕ್ಷ) ಕಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊಲೆಯನ್ನು ಮುಸ್ಲಿಮರೇ ಮಾಡಿದ್ದೆಂದು ಸಾರಿದ ಕಟೀಲ್ ಇದರಿಂದ ಮಂಗಳೂರಿಗೆ ಬೆಂಕಿ ಹಚ್ಚಿ ಉರಿಸಲಾಗುತ್ತದೆ ಎಂದು ಗುಡುಗಿದರು. ನಂತರ ಕೊಲೆಗಾರ್ತಿ ಮೃತ ವ್ಯಕ್ತಿಯ ತಂಗಿ ಮತ್ತು ಕಟೀಲ್ ನೇತೃತ್ವದ ಪ್ರತಿಭಟನೆಯಲ್ಲೇ ಪಾಲ್ಗೊಂಡಿದ್ದಳು ಎಂದು ಪೊಲೀಸರು ಬಂಧಿಸಿದರು! ಇಂತಹ ಹತ್ತಾರು ಪ್ರಕರಣಗಳು ಕೇವಲ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿ ನಡೆದಿವೆ. ಅದೇ ಸಂದರ್ಭದಲ್ಲಿ ಭೀಕರವಾದ ಕೊಲೆ ಅಥವಾ ಅತ್ಯಾಚಾರಕ್ಕೊಳಗಾದ ವ್ಯಕ್ತಿಗಳು ಮುಸ್ಲಿಮರಾಗಿದ್ದರೆ ಈ ಪರಿವಾರವು ಉಸಿರೆತ್ತುವುದೇ ಇಲ್ಲ. ಬದಲಿಗೆ ಕಥುವಾ ಪ್ರಕರಣದಲ್ಲಿ ಅತ್ಯಂತ ಭೀಕರವಾದ ಅತ್ಯಾಚಾರಕ್ಕೊಳಗಾದ ಬಾಲೆಯ ಪ್ರಕರಣದ ಆರೋಪಿಗಳ ಪರ ಧರ್ಮರಕ್ಷಕರು ನಿಂತಿದ್ದರು! ಇನ್ನೂ ಹೇಳಬೇಕೆಂದರೆ, ಹಿಂದೂ ಪುರುಷರಿಂದ ಹಿಂದೂ ಹುಡುಗಿಯರು ಅತ್ಯಾಚಾರಕ್ಕೆ ಒಳಗಾದಾಗಲೂ ಅದಿವರಿಗೆ ಸಮಸ್ಯೆಯೂ ಅಲ್ಲ, ದನಿಯೇಳುವುದು ಇಲ್ಲ.

ಸೂ.ರಂ. ರಾಮಯ್ಯನವರಂತಹ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಸೂಲಿಬೆಲೆ ಗ್ರಾಮ ಹೊಸಕೋಟೆ ತಾಲೂಕಿನ ವಿಶಿಷ್ಟ ಹಳ್ಳಿ. ಮಿಥುನ್ ಚಕ್ರವರ್ತಿ ಎಂಬ ವಿಕೃತ ವ್ಯಕ್ತಿಯ ಅನ್ವರ್ಥವಾಗಿ ಅದು ಬಳಕೆಯಲ್ಲಿರುವುದರಿಂದ ಗುರುತಿಗಾಗಿ ಬಳಸಿದ್ದೇವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಅದು ಏನು ಅಂತ ಸುದ್ದಿ ಮಾಡ್ತಿರ್ರಿ ಅದು ದಿಶಾ ಅಲ್ಲ ಪ್ರಿಯಾಂಕಾ ರೆಡ್ಡಿ, ಅದು ಸರಿಯಾಗಿ ಗೊತ್ತಿಲ್ಲ , ನೀವು ಮತ್ತೊಬ್ಬರ ಬಗ್ಗೆ ಹೇಳ್ತೀರಾ?

    • ಭಾರತದ ಕಾನೂನಿನ ಪ್ರಕಾರ ಅತ್ಯಾಚಾರ ಸಂತ್ರಸ್ತೆಯ ಮೂಲ ಹೆಸರು, ಫೋಟೊ ಇತ್ಯಾದಿಗಳನ್ನು ಪ್ರಕಟಿಸಬಾರದು. ಹಾಗಾಗಿ ಹೆಸರು ಬದಲಿಸಿದ್ದೇವೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....