Homeಮುಖಪುಟಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ...

ಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ ತುಷಾರ್ ಪಾಂಚಾಲ್‍

ಪಾಂಚಾಲ್‍ ಈ ಹಿಂದೆ ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ...’ ಎಂದು ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಧ್ಯಪ್ರದೇಶ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್‌ ಸಿಂಗ್‍ ಚೌಹಾಣ್‌ರವರ ಸಂವಹನ (ಮಾಧ್ಯಮ) ಸಲಹೆಗಾರರಾಗಿ ತುಷಾರ್ ಪಾಂಚಾಲ್‍ ಅವರನ್ನು ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆ ಆಫೀಸರ್ ಆನ್‍ ಸ್ಪೆಷಲ್‍ ಡ್ಯೂಟಿ (ಒಎಸ್‍ಡಿ) ಸ್ಥಾನಮಾನ ನೀಡಲಾಗಿತ್ತು. ಆದರೆ ಇಂದು ಮಧ್ಯಾಹ್ನ ತುಷಾರ್ ಪಾಂಚಾಲ್ ಆ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.

ಆದರೆ ಅವರನ್ನು ಕೂಡಲೇ ತೆಗೆದು ಹಾಕುವಂತೆ ಕಟ್ಟಾ ಆರ್ಎಸ್‍ಎಸ್‍ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟ್ವೀಟರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.

ಏಕೆ ಅಂತೀರಾ? ಹಿಂದೆಲ್ಲ ಮೋದಿ ಮತ್ತು ಹಿಂದುತ್ವದ ವಿರುದ್ಧ ಪಾಂಚಾಲ್‍ ಬರೆದಿದ್ದಾರೆ. ಅವರ ಟ್ವೀಟ್‍ಗಳಂತೂ ಮೋದಿ ಮತ್ತು ಹಿಂದುತ್ವವಾದಿಗಳನ್ನು ಮೊನಚಾಗಿ ತಿವಿಯುವಂತಿವೆ.

ಪಾಂಜಾಲ್ ಅವರ ಹಿಂದಿನ ‘ಹಿಂದುತ್ವ ವಿರೋಧಿ’ ಮತ್ತು ಮೋದಿ ವಿರೋಧಿ ಟ್ವೀಟ್‌ಗಳನ್ನು ಉಲ್ಲೇಖಿಸಿ ಬಿಜೆಪಿ, ಆರ್‌ಎಸ್‌ಎಸ್ ಮುಖಂಡರು, ಬೆಂಬಲಿಗರು ತುಷಾರ್ ಪಾಂಚಾಲ್ ಅವರನ್ನು ಒಎಸ್‌ಡಿ ಸ್ಥಾನದಿಂದ ತೆಗೆದುಹಾಕುವಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ಒತ್ತಾಯಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತುಷಾರ್ ಪಾಂಚಾಲ್ ಅವರನ್ನು ತಮ್ಮ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‍ಡಿ) ನೇಮಕ ಮಾಡಿದ ಒಂದು ದಿನದ ನಂತರ, ಹಲವಾರು ಬಿಜೆಪಿ, ಆರೆಸ್ಸೆಸ್ ಮುಖಂಡರು ಮತ್ತು ಬೆಂಬಲಿಗರು ಟ್ವಿಟರ್‌ನಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅನೇಕರು, ಚೌಹಾಣರಿಗೆ ಪಾಂಚಾಲ್‍ರಂತಹ ಜನರು ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರಲ್ಲದೇ, ಪಾಂಚಾಲ್‍ ಅವರನ್ನು “ಮೋದಿ ದ್ವೇಷಿ” ಎಂದೂ ಕರೆದಿದ್ದಾರೆ.

“ಸ್ನೇಹಿತರೇ, ನಿಮ್ಮಲ್ಲಿ ಹಲವರು ನನ್ನನ್ನು ಪರದೆಯ ಹಿಂದೆ ಇರುವ ವ್ಯಕ್ತಿ ಎಂದು ತಿಳಿದಿದ್ದೀರಿ. ನಾನು 2001ರಿಂದ ದೇಶಾದ್ಯಂತ ಅನೇಕ ಸಿಎಂಗಳು ಮತ್ತು ರಾಜಕೀಯ ಮುಖಂಡರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ” ಎಂದು ಪಾಂಚಾಲ್ ಸೋಮವಾರ ಟ್ವೀಟ್ ಮಾಡಿದ್ದಾರೆ.

“ಇಂದು, ನನ್ನ ಹಣೆಬರಹ ನನ್ನನ್ನು ಮುಖ್ಯಮಂತ್ರಿ ಚೌಹಾಣ್‍ ಅವರ ಸಂವಹನ ಸಲಹೆಗಾರನ ಕಚೇರಿಯಲ್ಲಿ ಇರಿಸಿದೆ. ದಯವಿಟ್ಟು ನನಗೆ ಶುಭ ಹಾರೈಸಿ. ಹೆಚ್ಚಿನ ವಿವರಗಳನ್ನು ನಂತರ ನೀಡುವೆ” ಎಂದು ಟ್ವೀಟ್‍ನಲ್ಲಿ ಕೋರಿದ್ದರು.

ಇದಾದ ನಂತರ, ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗ ಅವರು ಪಾಂಚಾಲ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಪೋಸ್ಟ್ ಮಾಡಿ, ಪಾಂಚಾಲ್ ಅವರಂತಹ “ಜನರು” ಅಗತ್ಯವಿದೆಯೇ ಎಂದು ಸಿಎಂ ಚೌಹಾಣ್ ಅವರನ್ನು ಕೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೆಹಲಿ ರಾಜ್ಯ ಕಾರ್ಯವಾಹಕ ಸದಸ್ಯ ರಾಜೀವ್ ಟುಲಿ ಕೂಡ ಪಾಂಚಾಲ್‍ ಅವರ ಹಳೆಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಚೌಹಾನ್ ಶಿವರಾಜ್ ಜಿ ಅವರಿಗೆ ನಿಜವಾಗಿಯೂ ಅಗತ್ಯವಿದೆಯೇ? ಮಧ್ಯಪ್ರದೇಶವು ನಮ್ಮ ಸಿದ್ಧಾಂತ ನಂಬುವ ಪ್ರಖ್ಯಾತ ಪತ್ರಕರ್ತರ ಶ್ರೀಮಂತ ಸಂಸ್ಕೃತಿಯನ್ನು ನೀಡಿದೆ. ಹೀಗಿರುವಾಗ ನಮ್ಮವರಲ್ಲದ ಪಾಂಚಾಲ್‍ ಬೇಕಿತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇತರ ಕಾರ್ಯಕರ್ತರು ಕೂಡ ಪಾಂಚಾಲ್‍ ಅವರ ಟ್ವೀಟ್‌ಗಳ ಬಗ್ಗೆ ಪೋಸ್ಟ್ ಮಾಡಿ, ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಆದರೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ.

ಪಾಂಚಾಲ್‍ ಅವರು ಶಿವರಾಜ್ ಸಿಂಗ್ ಚೌಹಾಣ್‌ ಅವರೊಂದಿಗೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

“ಇದು ರಾಜಕೀಯ ಪ್ರೇರಿತ ಅಭಿಯಾನವಲ್ಲದೆ ಮತ್ತೇನಲ್ಲ. ಅವರ ಹಳೆಯ ಟ್ವೀಟ್‌ಗಳನ್ನು ಸಂದರ್ಭವಿಲ್ಲದೆ ಪೋಸ್ಟ್ ಮಾಡಲಾಗಿದೆ. ಅವರು ಚೌಹಾಣ್ ಜೊತೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಯಾವಾಗಲೂ ಪಕ್ಷಕ್ಕೆ ಮೊದಲ ಸ್ಥಾನ ನೀಡುತ್ತಾರೆ” ಎಂದು ಮೂಲವೊಂದು ತಿಳಿಸಿದೆ.

ಮಧ್ಯಪ್ರದೇಶದ ಹಿರಿಯ ಬಿಜೆಪಿ ಮುಖಂಡರ ಪ್ರಕಾರ, 2018ರ ಚುನಾವಣೆಯ ಸಮಯದಲ್ಲಿ ಪಾಂಚಾಲ್‍ ತಂಡವು ಚೌಹಾಣ್ ಮತ್ತು ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯಗಳನ್ನು ನೋಡಿಕೊಂಡಿತ್ತು.

“ಕೊರೋನಾ ಎರಡನೇ ಅಲೆಯಿಂದ ರಾಜ್ಯ ಹಾನಿಗೊಳಗಾಯಿತು, ಅದು ರಾಜ್ಯ ಸರ್ಕಾರದ ಇಮೇಜ್‍ ಮೇಲೆ ನೇರವಾಗಿ ಪರಿಣಾಮ ಬೀರಿತು. ನಂತರ ಮುಖ್ಯಮಂತ್ರಿ ತುಷಾರ್ ಪಾಂಚಾಲ್ ಅವರನ್ನು ಸಂವಹನ ಸಲಹಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದರು. ಮೊದಲಿಲ್ಲದ ಆಕ್ಷೇಪ ಈಗ ಅಧಿಕೃತ ನೇಮಕದ ನಂತರ ಶುರುವಾಗಿದೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತಿದೆ. “ಶಿವರಾಜ್ ಸಿಂಗ್‍ ಮೋದಿಯ ವಿರುದ್ಧ ಯುದ್ಧ ಮಾಡುತ್ತಿದ್ದಾರೆ! ಏಕೆಂದರೆ, ಮೋದಿಯವರನ್ನು ಅವರ ಹೊಸ ಸಲಹೆಗಾರರು ತೀವ್ರವಾಗಿ ವಿರೋಧಿಸಿದ್ದರು” ಎಂದು ಪಕ್ಷದ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದೆ. ಮೋದಿಯವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ, ಅವರ ನಿಲುವನ್ನು ಟೀಕಿಸಿದ ಮತ್ತು ಬಿಜೆಪಿಯ ತತ್ವಗಳ ಬಗ್ಗೆ ಅನಿಯಂತ್ರಿತ ಟೀಕೆಗಳನ್ನು ಮಾಡಿದವರನ್ನು ಶಿವರಾಜ್ ಸಿಂಗ್ ಚೌಹಾಣ್ ಅವರು ಒಎಸ್‍ಡಿ ಮಾಡಿದ್ದಾರೆ. ಯೋಗಿಯ ನಂತರ, ಈಗ ಶಿವರಾಜ್ ಮೋದಿಯ ಆಡಳಿತವನ್ನು ದುರ್ಬಲಗೊಳಿಸುತ್ತಾರೆ’ ಎಂದು ಕಾಂಗ್ರೆಸ್‍ ಹೇಳಿದೆ.

ಪಾಂಚಾಲ್‍ ಅವರ ಹಳೆಯ ಟ್ವೀಟ್‍ಗಳು ಮೊನಚಾಗಿವೆ: ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ…’ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

‘ದೇಸಿ ಸಾರಾಯಿ ಜೊತೆಗೆ ಗೋಮೂತ್ರ ಮಿಕ್ಸ್ ಮಾಡಿ ಕುಡಿದರೆ ಕೊರೋನಾ ಹೋಗುತ್ತಂತೆ. ಬೇಕಾದವರು ಪರೀಕ್ಷಿಸಿ ಅನುಭವಿಸಿ’ ಎಂದು ರಾಮದೇವ್‍ ಅವರನ್ನು ಟೀಕಿಸಿದ್ದರು.

ತೀವ್ರ ಟೀಕೆಗಳು ಕೇಳಿಬಂದ ನಂತರ “ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌ರವರು ನನಗೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ಈ ನನ್ನ ಅಸಾಮರ್ಥ್ಯವನ್ನು ಸಿಎಂಗೆ ತಿಳಿಸಿದ್ದೇನೆ” ಎಂದು ತುಷಾರ್ ಪಾಂಚಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...