Homeಮುಖಪುಟಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ...

ಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ ತುಷಾರ್ ಪಾಂಚಾಲ್‍

ಪಾಂಚಾಲ್‍ ಈ ಹಿಂದೆ ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ...’ ಎಂದು ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಧ್ಯಪ್ರದೇಶ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್‌ ಸಿಂಗ್‍ ಚೌಹಾಣ್‌ರವರ ಸಂವಹನ (ಮಾಧ್ಯಮ) ಸಲಹೆಗಾರರಾಗಿ ತುಷಾರ್ ಪಾಂಚಾಲ್‍ ಅವರನ್ನು ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆ ಆಫೀಸರ್ ಆನ್‍ ಸ್ಪೆಷಲ್‍ ಡ್ಯೂಟಿ (ಒಎಸ್‍ಡಿ) ಸ್ಥಾನಮಾನ ನೀಡಲಾಗಿತ್ತು. ಆದರೆ ಇಂದು ಮಧ್ಯಾಹ್ನ ತುಷಾರ್ ಪಾಂಚಾಲ್ ಆ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.

ಆದರೆ ಅವರನ್ನು ಕೂಡಲೇ ತೆಗೆದು ಹಾಕುವಂತೆ ಕಟ್ಟಾ ಆರ್ಎಸ್‍ಎಸ್‍ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟ್ವೀಟರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.

ಏಕೆ ಅಂತೀರಾ? ಹಿಂದೆಲ್ಲ ಮೋದಿ ಮತ್ತು ಹಿಂದುತ್ವದ ವಿರುದ್ಧ ಪಾಂಚಾಲ್‍ ಬರೆದಿದ್ದಾರೆ. ಅವರ ಟ್ವೀಟ್‍ಗಳಂತೂ ಮೋದಿ ಮತ್ತು ಹಿಂದುತ್ವವಾದಿಗಳನ್ನು ಮೊನಚಾಗಿ ತಿವಿಯುವಂತಿವೆ.

ಪಾಂಜಾಲ್ ಅವರ ಹಿಂದಿನ ‘ಹಿಂದುತ್ವ ವಿರೋಧಿ’ ಮತ್ತು ಮೋದಿ ವಿರೋಧಿ ಟ್ವೀಟ್‌ಗಳನ್ನು ಉಲ್ಲೇಖಿಸಿ ಬಿಜೆಪಿ, ಆರ್‌ಎಸ್‌ಎಸ್ ಮುಖಂಡರು, ಬೆಂಬಲಿಗರು ತುಷಾರ್ ಪಾಂಚಾಲ್ ಅವರನ್ನು ಒಎಸ್‌ಡಿ ಸ್ಥಾನದಿಂದ ತೆಗೆದುಹಾಕುವಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ಒತ್ತಾಯಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತುಷಾರ್ ಪಾಂಚಾಲ್ ಅವರನ್ನು ತಮ್ಮ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‍ಡಿ) ನೇಮಕ ಮಾಡಿದ ಒಂದು ದಿನದ ನಂತರ, ಹಲವಾರು ಬಿಜೆಪಿ, ಆರೆಸ್ಸೆಸ್ ಮುಖಂಡರು ಮತ್ತು ಬೆಂಬಲಿಗರು ಟ್ವಿಟರ್‌ನಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅನೇಕರು, ಚೌಹಾಣರಿಗೆ ಪಾಂಚಾಲ್‍ರಂತಹ ಜನರು ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರಲ್ಲದೇ, ಪಾಂಚಾಲ್‍ ಅವರನ್ನು “ಮೋದಿ ದ್ವೇಷಿ” ಎಂದೂ ಕರೆದಿದ್ದಾರೆ.

“ಸ್ನೇಹಿತರೇ, ನಿಮ್ಮಲ್ಲಿ ಹಲವರು ನನ್ನನ್ನು ಪರದೆಯ ಹಿಂದೆ ಇರುವ ವ್ಯಕ್ತಿ ಎಂದು ತಿಳಿದಿದ್ದೀರಿ. ನಾನು 2001ರಿಂದ ದೇಶಾದ್ಯಂತ ಅನೇಕ ಸಿಎಂಗಳು ಮತ್ತು ರಾಜಕೀಯ ಮುಖಂಡರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ” ಎಂದು ಪಾಂಚಾಲ್ ಸೋಮವಾರ ಟ್ವೀಟ್ ಮಾಡಿದ್ದಾರೆ.

“ಇಂದು, ನನ್ನ ಹಣೆಬರಹ ನನ್ನನ್ನು ಮುಖ್ಯಮಂತ್ರಿ ಚೌಹಾಣ್‍ ಅವರ ಸಂವಹನ ಸಲಹೆಗಾರನ ಕಚೇರಿಯಲ್ಲಿ ಇರಿಸಿದೆ. ದಯವಿಟ್ಟು ನನಗೆ ಶುಭ ಹಾರೈಸಿ. ಹೆಚ್ಚಿನ ವಿವರಗಳನ್ನು ನಂತರ ನೀಡುವೆ” ಎಂದು ಟ್ವೀಟ್‍ನಲ್ಲಿ ಕೋರಿದ್ದರು.

ಇದಾದ ನಂತರ, ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗ ಅವರು ಪಾಂಚಾಲ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಪೋಸ್ಟ್ ಮಾಡಿ, ಪಾಂಚಾಲ್ ಅವರಂತಹ “ಜನರು” ಅಗತ್ಯವಿದೆಯೇ ಎಂದು ಸಿಎಂ ಚೌಹಾಣ್ ಅವರನ್ನು ಕೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೆಹಲಿ ರಾಜ್ಯ ಕಾರ್ಯವಾಹಕ ಸದಸ್ಯ ರಾಜೀವ್ ಟುಲಿ ಕೂಡ ಪಾಂಚಾಲ್‍ ಅವರ ಹಳೆಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಚೌಹಾನ್ ಶಿವರಾಜ್ ಜಿ ಅವರಿಗೆ ನಿಜವಾಗಿಯೂ ಅಗತ್ಯವಿದೆಯೇ? ಮಧ್ಯಪ್ರದೇಶವು ನಮ್ಮ ಸಿದ್ಧಾಂತ ನಂಬುವ ಪ್ರಖ್ಯಾತ ಪತ್ರಕರ್ತರ ಶ್ರೀಮಂತ ಸಂಸ್ಕೃತಿಯನ್ನು ನೀಡಿದೆ. ಹೀಗಿರುವಾಗ ನಮ್ಮವರಲ್ಲದ ಪಾಂಚಾಲ್‍ ಬೇಕಿತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇತರ ಕಾರ್ಯಕರ್ತರು ಕೂಡ ಪಾಂಚಾಲ್‍ ಅವರ ಟ್ವೀಟ್‌ಗಳ ಬಗ್ಗೆ ಪೋಸ್ಟ್ ಮಾಡಿ, ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಆದರೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ.

ಪಾಂಚಾಲ್‍ ಅವರು ಶಿವರಾಜ್ ಸಿಂಗ್ ಚೌಹಾಣ್‌ ಅವರೊಂದಿಗೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

“ಇದು ರಾಜಕೀಯ ಪ್ರೇರಿತ ಅಭಿಯಾನವಲ್ಲದೆ ಮತ್ತೇನಲ್ಲ. ಅವರ ಹಳೆಯ ಟ್ವೀಟ್‌ಗಳನ್ನು ಸಂದರ್ಭವಿಲ್ಲದೆ ಪೋಸ್ಟ್ ಮಾಡಲಾಗಿದೆ. ಅವರು ಚೌಹಾಣ್ ಜೊತೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಯಾವಾಗಲೂ ಪಕ್ಷಕ್ಕೆ ಮೊದಲ ಸ್ಥಾನ ನೀಡುತ್ತಾರೆ” ಎಂದು ಮೂಲವೊಂದು ತಿಳಿಸಿದೆ.

ಮಧ್ಯಪ್ರದೇಶದ ಹಿರಿಯ ಬಿಜೆಪಿ ಮುಖಂಡರ ಪ್ರಕಾರ, 2018ರ ಚುನಾವಣೆಯ ಸಮಯದಲ್ಲಿ ಪಾಂಚಾಲ್‍ ತಂಡವು ಚೌಹಾಣ್ ಮತ್ತು ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯಗಳನ್ನು ನೋಡಿಕೊಂಡಿತ್ತು.

“ಕೊರೋನಾ ಎರಡನೇ ಅಲೆಯಿಂದ ರಾಜ್ಯ ಹಾನಿಗೊಳಗಾಯಿತು, ಅದು ರಾಜ್ಯ ಸರ್ಕಾರದ ಇಮೇಜ್‍ ಮೇಲೆ ನೇರವಾಗಿ ಪರಿಣಾಮ ಬೀರಿತು. ನಂತರ ಮುಖ್ಯಮಂತ್ರಿ ತುಷಾರ್ ಪಾಂಚಾಲ್ ಅವರನ್ನು ಸಂವಹನ ಸಲಹಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದರು. ಮೊದಲಿಲ್ಲದ ಆಕ್ಷೇಪ ಈಗ ಅಧಿಕೃತ ನೇಮಕದ ನಂತರ ಶುರುವಾಗಿದೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತಿದೆ. “ಶಿವರಾಜ್ ಸಿಂಗ್‍ ಮೋದಿಯ ವಿರುದ್ಧ ಯುದ್ಧ ಮಾಡುತ್ತಿದ್ದಾರೆ! ಏಕೆಂದರೆ, ಮೋದಿಯವರನ್ನು ಅವರ ಹೊಸ ಸಲಹೆಗಾರರು ತೀವ್ರವಾಗಿ ವಿರೋಧಿಸಿದ್ದರು” ಎಂದು ಪಕ್ಷದ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದೆ. ಮೋದಿಯವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ, ಅವರ ನಿಲುವನ್ನು ಟೀಕಿಸಿದ ಮತ್ತು ಬಿಜೆಪಿಯ ತತ್ವಗಳ ಬಗ್ಗೆ ಅನಿಯಂತ್ರಿತ ಟೀಕೆಗಳನ್ನು ಮಾಡಿದವರನ್ನು ಶಿವರಾಜ್ ಸಿಂಗ್ ಚೌಹಾಣ್ ಅವರು ಒಎಸ್‍ಡಿ ಮಾಡಿದ್ದಾರೆ. ಯೋಗಿಯ ನಂತರ, ಈಗ ಶಿವರಾಜ್ ಮೋದಿಯ ಆಡಳಿತವನ್ನು ದುರ್ಬಲಗೊಳಿಸುತ್ತಾರೆ’ ಎಂದು ಕಾಂಗ್ರೆಸ್‍ ಹೇಳಿದೆ.

ಪಾಂಚಾಲ್‍ ಅವರ ಹಳೆಯ ಟ್ವೀಟ್‍ಗಳು ಮೊನಚಾಗಿವೆ: ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ…’ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

‘ದೇಸಿ ಸಾರಾಯಿ ಜೊತೆಗೆ ಗೋಮೂತ್ರ ಮಿಕ್ಸ್ ಮಾಡಿ ಕುಡಿದರೆ ಕೊರೋನಾ ಹೋಗುತ್ತಂತೆ. ಬೇಕಾದವರು ಪರೀಕ್ಷಿಸಿ ಅನುಭವಿಸಿ’ ಎಂದು ರಾಮದೇವ್‍ ಅವರನ್ನು ಟೀಕಿಸಿದ್ದರು.

ತೀವ್ರ ಟೀಕೆಗಳು ಕೇಳಿಬಂದ ನಂತರ “ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌ರವರು ನನಗೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ಈ ನನ್ನ ಅಸಾಮರ್ಥ್ಯವನ್ನು ಸಿಎಂಗೆ ತಿಳಿಸಿದ್ದೇನೆ” ಎಂದು ತುಷಾರ್ ಪಾಂಚಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...