Homeಮುಖಪುಟಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ...

ಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ ತುಷಾರ್ ಪಾಂಚಾಲ್‍

ಪಾಂಚಾಲ್‍ ಈ ಹಿಂದೆ ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ...’ ಎಂದು ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಧ್ಯಪ್ರದೇಶ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್‌ ಸಿಂಗ್‍ ಚೌಹಾಣ್‌ರವರ ಸಂವಹನ (ಮಾಧ್ಯಮ) ಸಲಹೆಗಾರರಾಗಿ ತುಷಾರ್ ಪಾಂಚಾಲ್‍ ಅವರನ್ನು ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆ ಆಫೀಸರ್ ಆನ್‍ ಸ್ಪೆಷಲ್‍ ಡ್ಯೂಟಿ (ಒಎಸ್‍ಡಿ) ಸ್ಥಾನಮಾನ ನೀಡಲಾಗಿತ್ತು. ಆದರೆ ಇಂದು ಮಧ್ಯಾಹ್ನ ತುಷಾರ್ ಪಾಂಚಾಲ್ ಆ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.

ಆದರೆ ಅವರನ್ನು ಕೂಡಲೇ ತೆಗೆದು ಹಾಕುವಂತೆ ಕಟ್ಟಾ ಆರ್ಎಸ್‍ಎಸ್‍ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟ್ವೀಟರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.

ಏಕೆ ಅಂತೀರಾ? ಹಿಂದೆಲ್ಲ ಮೋದಿ ಮತ್ತು ಹಿಂದುತ್ವದ ವಿರುದ್ಧ ಪಾಂಚಾಲ್‍ ಬರೆದಿದ್ದಾರೆ. ಅವರ ಟ್ವೀಟ್‍ಗಳಂತೂ ಮೋದಿ ಮತ್ತು ಹಿಂದುತ್ವವಾದಿಗಳನ್ನು ಮೊನಚಾಗಿ ತಿವಿಯುವಂತಿವೆ.

ಪಾಂಜಾಲ್ ಅವರ ಹಿಂದಿನ ‘ಹಿಂದುತ್ವ ವಿರೋಧಿ’ ಮತ್ತು ಮೋದಿ ವಿರೋಧಿ ಟ್ವೀಟ್‌ಗಳನ್ನು ಉಲ್ಲೇಖಿಸಿ ಬಿಜೆಪಿ, ಆರ್‌ಎಸ್‌ಎಸ್ ಮುಖಂಡರು, ಬೆಂಬಲಿಗರು ತುಷಾರ್ ಪಾಂಚಾಲ್ ಅವರನ್ನು ಒಎಸ್‌ಡಿ ಸ್ಥಾನದಿಂದ ತೆಗೆದುಹಾಕುವಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ಒತ್ತಾಯಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತುಷಾರ್ ಪಾಂಚಾಲ್ ಅವರನ್ನು ತಮ್ಮ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‍ಡಿ) ನೇಮಕ ಮಾಡಿದ ಒಂದು ದಿನದ ನಂತರ, ಹಲವಾರು ಬಿಜೆಪಿ, ಆರೆಸ್ಸೆಸ್ ಮುಖಂಡರು ಮತ್ತು ಬೆಂಬಲಿಗರು ಟ್ವಿಟರ್‌ನಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅನೇಕರು, ಚೌಹಾಣರಿಗೆ ಪಾಂಚಾಲ್‍ರಂತಹ ಜನರು ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರಲ್ಲದೇ, ಪಾಂಚಾಲ್‍ ಅವರನ್ನು “ಮೋದಿ ದ್ವೇಷಿ” ಎಂದೂ ಕರೆದಿದ್ದಾರೆ.

“ಸ್ನೇಹಿತರೇ, ನಿಮ್ಮಲ್ಲಿ ಹಲವರು ನನ್ನನ್ನು ಪರದೆಯ ಹಿಂದೆ ಇರುವ ವ್ಯಕ್ತಿ ಎಂದು ತಿಳಿದಿದ್ದೀರಿ. ನಾನು 2001ರಿಂದ ದೇಶಾದ್ಯಂತ ಅನೇಕ ಸಿಎಂಗಳು ಮತ್ತು ರಾಜಕೀಯ ಮುಖಂಡರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ” ಎಂದು ಪಾಂಚಾಲ್ ಸೋಮವಾರ ಟ್ವೀಟ್ ಮಾಡಿದ್ದಾರೆ.

“ಇಂದು, ನನ್ನ ಹಣೆಬರಹ ನನ್ನನ್ನು ಮುಖ್ಯಮಂತ್ರಿ ಚೌಹಾಣ್‍ ಅವರ ಸಂವಹನ ಸಲಹೆಗಾರನ ಕಚೇರಿಯಲ್ಲಿ ಇರಿಸಿದೆ. ದಯವಿಟ್ಟು ನನಗೆ ಶುಭ ಹಾರೈಸಿ. ಹೆಚ್ಚಿನ ವಿವರಗಳನ್ನು ನಂತರ ನೀಡುವೆ” ಎಂದು ಟ್ವೀಟ್‍ನಲ್ಲಿ ಕೋರಿದ್ದರು.

ಇದಾದ ನಂತರ, ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗ ಅವರು ಪಾಂಚಾಲ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಪೋಸ್ಟ್ ಮಾಡಿ, ಪಾಂಚಾಲ್ ಅವರಂತಹ “ಜನರು” ಅಗತ್ಯವಿದೆಯೇ ಎಂದು ಸಿಎಂ ಚೌಹಾಣ್ ಅವರನ್ನು ಕೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೆಹಲಿ ರಾಜ್ಯ ಕಾರ್ಯವಾಹಕ ಸದಸ್ಯ ರಾಜೀವ್ ಟುಲಿ ಕೂಡ ಪಾಂಚಾಲ್‍ ಅವರ ಹಳೆಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಚೌಹಾನ್ ಶಿವರಾಜ್ ಜಿ ಅವರಿಗೆ ನಿಜವಾಗಿಯೂ ಅಗತ್ಯವಿದೆಯೇ? ಮಧ್ಯಪ್ರದೇಶವು ನಮ್ಮ ಸಿದ್ಧಾಂತ ನಂಬುವ ಪ್ರಖ್ಯಾತ ಪತ್ರಕರ್ತರ ಶ್ರೀಮಂತ ಸಂಸ್ಕೃತಿಯನ್ನು ನೀಡಿದೆ. ಹೀಗಿರುವಾಗ ನಮ್ಮವರಲ್ಲದ ಪಾಂಚಾಲ್‍ ಬೇಕಿತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇತರ ಕಾರ್ಯಕರ್ತರು ಕೂಡ ಪಾಂಚಾಲ್‍ ಅವರ ಟ್ವೀಟ್‌ಗಳ ಬಗ್ಗೆ ಪೋಸ್ಟ್ ಮಾಡಿ, ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಆದರೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ.

ಪಾಂಚಾಲ್‍ ಅವರು ಶಿವರಾಜ್ ಸಿಂಗ್ ಚೌಹಾಣ್‌ ಅವರೊಂದಿಗೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

“ಇದು ರಾಜಕೀಯ ಪ್ರೇರಿತ ಅಭಿಯಾನವಲ್ಲದೆ ಮತ್ತೇನಲ್ಲ. ಅವರ ಹಳೆಯ ಟ್ವೀಟ್‌ಗಳನ್ನು ಸಂದರ್ಭವಿಲ್ಲದೆ ಪೋಸ್ಟ್ ಮಾಡಲಾಗಿದೆ. ಅವರು ಚೌಹಾಣ್ ಜೊತೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಯಾವಾಗಲೂ ಪಕ್ಷಕ್ಕೆ ಮೊದಲ ಸ್ಥಾನ ನೀಡುತ್ತಾರೆ” ಎಂದು ಮೂಲವೊಂದು ತಿಳಿಸಿದೆ.

ಮಧ್ಯಪ್ರದೇಶದ ಹಿರಿಯ ಬಿಜೆಪಿ ಮುಖಂಡರ ಪ್ರಕಾರ, 2018ರ ಚುನಾವಣೆಯ ಸಮಯದಲ್ಲಿ ಪಾಂಚಾಲ್‍ ತಂಡವು ಚೌಹಾಣ್ ಮತ್ತು ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯಗಳನ್ನು ನೋಡಿಕೊಂಡಿತ್ತು.

“ಕೊರೋನಾ ಎರಡನೇ ಅಲೆಯಿಂದ ರಾಜ್ಯ ಹಾನಿಗೊಳಗಾಯಿತು, ಅದು ರಾಜ್ಯ ಸರ್ಕಾರದ ಇಮೇಜ್‍ ಮೇಲೆ ನೇರವಾಗಿ ಪರಿಣಾಮ ಬೀರಿತು. ನಂತರ ಮುಖ್ಯಮಂತ್ರಿ ತುಷಾರ್ ಪಾಂಚಾಲ್ ಅವರನ್ನು ಸಂವಹನ ಸಲಹಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದರು. ಮೊದಲಿಲ್ಲದ ಆಕ್ಷೇಪ ಈಗ ಅಧಿಕೃತ ನೇಮಕದ ನಂತರ ಶುರುವಾಗಿದೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತಿದೆ. “ಶಿವರಾಜ್ ಸಿಂಗ್‍ ಮೋದಿಯ ವಿರುದ್ಧ ಯುದ್ಧ ಮಾಡುತ್ತಿದ್ದಾರೆ! ಏಕೆಂದರೆ, ಮೋದಿಯವರನ್ನು ಅವರ ಹೊಸ ಸಲಹೆಗಾರರು ತೀವ್ರವಾಗಿ ವಿರೋಧಿಸಿದ್ದರು” ಎಂದು ಪಕ್ಷದ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದೆ. ಮೋದಿಯವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ, ಅವರ ನಿಲುವನ್ನು ಟೀಕಿಸಿದ ಮತ್ತು ಬಿಜೆಪಿಯ ತತ್ವಗಳ ಬಗ್ಗೆ ಅನಿಯಂತ್ರಿತ ಟೀಕೆಗಳನ್ನು ಮಾಡಿದವರನ್ನು ಶಿವರಾಜ್ ಸಿಂಗ್ ಚೌಹಾಣ್ ಅವರು ಒಎಸ್‍ಡಿ ಮಾಡಿದ್ದಾರೆ. ಯೋಗಿಯ ನಂತರ, ಈಗ ಶಿವರಾಜ್ ಮೋದಿಯ ಆಡಳಿತವನ್ನು ದುರ್ಬಲಗೊಳಿಸುತ್ತಾರೆ’ ಎಂದು ಕಾಂಗ್ರೆಸ್‍ ಹೇಳಿದೆ.

ಪಾಂಚಾಲ್‍ ಅವರ ಹಳೆಯ ಟ್ವೀಟ್‍ಗಳು ಮೊನಚಾಗಿವೆ: ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ…’ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

‘ದೇಸಿ ಸಾರಾಯಿ ಜೊತೆಗೆ ಗೋಮೂತ್ರ ಮಿಕ್ಸ್ ಮಾಡಿ ಕುಡಿದರೆ ಕೊರೋನಾ ಹೋಗುತ್ತಂತೆ. ಬೇಕಾದವರು ಪರೀಕ್ಷಿಸಿ ಅನುಭವಿಸಿ’ ಎಂದು ರಾಮದೇವ್‍ ಅವರನ್ನು ಟೀಕಿಸಿದ್ದರು.

ತೀವ್ರ ಟೀಕೆಗಳು ಕೇಳಿಬಂದ ನಂತರ “ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌ರವರು ನನಗೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ಈ ನನ್ನ ಅಸಾಮರ್ಥ್ಯವನ್ನು ಸಿಎಂಗೆ ತಿಳಿಸಿದ್ದೇನೆ” ಎಂದು ತುಷಾರ್ ಪಾಂಚಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...