Homeಮುಖಪುಟಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ...

ಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ ತುಷಾರ್ ಪಾಂಚಾಲ್‍

ಪಾಂಚಾಲ್‍ ಈ ಹಿಂದೆ ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ...’ ಎಂದು ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಧ್ಯಪ್ರದೇಶ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್‌ ಸಿಂಗ್‍ ಚೌಹಾಣ್‌ರವರ ಸಂವಹನ (ಮಾಧ್ಯಮ) ಸಲಹೆಗಾರರಾಗಿ ತುಷಾರ್ ಪಾಂಚಾಲ್‍ ಅವರನ್ನು ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆ ಆಫೀಸರ್ ಆನ್‍ ಸ್ಪೆಷಲ್‍ ಡ್ಯೂಟಿ (ಒಎಸ್‍ಡಿ) ಸ್ಥಾನಮಾನ ನೀಡಲಾಗಿತ್ತು. ಆದರೆ ಇಂದು ಮಧ್ಯಾಹ್ನ ತುಷಾರ್ ಪಾಂಚಾಲ್ ಆ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.

ಆದರೆ ಅವರನ್ನು ಕೂಡಲೇ ತೆಗೆದು ಹಾಕುವಂತೆ ಕಟ್ಟಾ ಆರ್ಎಸ್‍ಎಸ್‍ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟ್ವೀಟರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.

ಏಕೆ ಅಂತೀರಾ? ಹಿಂದೆಲ್ಲ ಮೋದಿ ಮತ್ತು ಹಿಂದುತ್ವದ ವಿರುದ್ಧ ಪಾಂಚಾಲ್‍ ಬರೆದಿದ್ದಾರೆ. ಅವರ ಟ್ವೀಟ್‍ಗಳಂತೂ ಮೋದಿ ಮತ್ತು ಹಿಂದುತ್ವವಾದಿಗಳನ್ನು ಮೊನಚಾಗಿ ತಿವಿಯುವಂತಿವೆ.

ಪಾಂಜಾಲ್ ಅವರ ಹಿಂದಿನ ‘ಹಿಂದುತ್ವ ವಿರೋಧಿ’ ಮತ್ತು ಮೋದಿ ವಿರೋಧಿ ಟ್ವೀಟ್‌ಗಳನ್ನು ಉಲ್ಲೇಖಿಸಿ ಬಿಜೆಪಿ, ಆರ್‌ಎಸ್‌ಎಸ್ ಮುಖಂಡರು, ಬೆಂಬಲಿಗರು ತುಷಾರ್ ಪಾಂಚಾಲ್ ಅವರನ್ನು ಒಎಸ್‌ಡಿ ಸ್ಥಾನದಿಂದ ತೆಗೆದುಹಾಕುವಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ಒತ್ತಾಯಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತುಷಾರ್ ಪಾಂಚಾಲ್ ಅವರನ್ನು ತಮ್ಮ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‍ಡಿ) ನೇಮಕ ಮಾಡಿದ ಒಂದು ದಿನದ ನಂತರ, ಹಲವಾರು ಬಿಜೆಪಿ, ಆರೆಸ್ಸೆಸ್ ಮುಖಂಡರು ಮತ್ತು ಬೆಂಬಲಿಗರು ಟ್ವಿಟರ್‌ನಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅನೇಕರು, ಚೌಹಾಣರಿಗೆ ಪಾಂಚಾಲ್‍ರಂತಹ ಜನರು ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರಲ್ಲದೇ, ಪಾಂಚಾಲ್‍ ಅವರನ್ನು “ಮೋದಿ ದ್ವೇಷಿ” ಎಂದೂ ಕರೆದಿದ್ದಾರೆ.

“ಸ್ನೇಹಿತರೇ, ನಿಮ್ಮಲ್ಲಿ ಹಲವರು ನನ್ನನ್ನು ಪರದೆಯ ಹಿಂದೆ ಇರುವ ವ್ಯಕ್ತಿ ಎಂದು ತಿಳಿದಿದ್ದೀರಿ. ನಾನು 2001ರಿಂದ ದೇಶಾದ್ಯಂತ ಅನೇಕ ಸಿಎಂಗಳು ಮತ್ತು ರಾಜಕೀಯ ಮುಖಂಡರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ” ಎಂದು ಪಾಂಚಾಲ್ ಸೋಮವಾರ ಟ್ವೀಟ್ ಮಾಡಿದ್ದಾರೆ.

“ಇಂದು, ನನ್ನ ಹಣೆಬರಹ ನನ್ನನ್ನು ಮುಖ್ಯಮಂತ್ರಿ ಚೌಹಾಣ್‍ ಅವರ ಸಂವಹನ ಸಲಹೆಗಾರನ ಕಚೇರಿಯಲ್ಲಿ ಇರಿಸಿದೆ. ದಯವಿಟ್ಟು ನನಗೆ ಶುಭ ಹಾರೈಸಿ. ಹೆಚ್ಚಿನ ವಿವರಗಳನ್ನು ನಂತರ ನೀಡುವೆ” ಎಂದು ಟ್ವೀಟ್‍ನಲ್ಲಿ ಕೋರಿದ್ದರು.

ಇದಾದ ನಂತರ, ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗ ಅವರು ಪಾಂಚಾಲ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಪೋಸ್ಟ್ ಮಾಡಿ, ಪಾಂಚಾಲ್ ಅವರಂತಹ “ಜನರು” ಅಗತ್ಯವಿದೆಯೇ ಎಂದು ಸಿಎಂ ಚೌಹಾಣ್ ಅವರನ್ನು ಕೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೆಹಲಿ ರಾಜ್ಯ ಕಾರ್ಯವಾಹಕ ಸದಸ್ಯ ರಾಜೀವ್ ಟುಲಿ ಕೂಡ ಪಾಂಚಾಲ್‍ ಅವರ ಹಳೆಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಚೌಹಾನ್ ಶಿವರಾಜ್ ಜಿ ಅವರಿಗೆ ನಿಜವಾಗಿಯೂ ಅಗತ್ಯವಿದೆಯೇ? ಮಧ್ಯಪ್ರದೇಶವು ನಮ್ಮ ಸಿದ್ಧಾಂತ ನಂಬುವ ಪ್ರಖ್ಯಾತ ಪತ್ರಕರ್ತರ ಶ್ರೀಮಂತ ಸಂಸ್ಕೃತಿಯನ್ನು ನೀಡಿದೆ. ಹೀಗಿರುವಾಗ ನಮ್ಮವರಲ್ಲದ ಪಾಂಚಾಲ್‍ ಬೇಕಿತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇತರ ಕಾರ್ಯಕರ್ತರು ಕೂಡ ಪಾಂಚಾಲ್‍ ಅವರ ಟ್ವೀಟ್‌ಗಳ ಬಗ್ಗೆ ಪೋಸ್ಟ್ ಮಾಡಿ, ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಆದರೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ.

ಪಾಂಚಾಲ್‍ ಅವರು ಶಿವರಾಜ್ ಸಿಂಗ್ ಚೌಹಾಣ್‌ ಅವರೊಂದಿಗೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

“ಇದು ರಾಜಕೀಯ ಪ್ರೇರಿತ ಅಭಿಯಾನವಲ್ಲದೆ ಮತ್ತೇನಲ್ಲ. ಅವರ ಹಳೆಯ ಟ್ವೀಟ್‌ಗಳನ್ನು ಸಂದರ್ಭವಿಲ್ಲದೆ ಪೋಸ್ಟ್ ಮಾಡಲಾಗಿದೆ. ಅವರು ಚೌಹಾಣ್ ಜೊತೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಯಾವಾಗಲೂ ಪಕ್ಷಕ್ಕೆ ಮೊದಲ ಸ್ಥಾನ ನೀಡುತ್ತಾರೆ” ಎಂದು ಮೂಲವೊಂದು ತಿಳಿಸಿದೆ.

ಮಧ್ಯಪ್ರದೇಶದ ಹಿರಿಯ ಬಿಜೆಪಿ ಮುಖಂಡರ ಪ್ರಕಾರ, 2018ರ ಚುನಾವಣೆಯ ಸಮಯದಲ್ಲಿ ಪಾಂಚಾಲ್‍ ತಂಡವು ಚೌಹಾಣ್ ಮತ್ತು ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯಗಳನ್ನು ನೋಡಿಕೊಂಡಿತ್ತು.

“ಕೊರೋನಾ ಎರಡನೇ ಅಲೆಯಿಂದ ರಾಜ್ಯ ಹಾನಿಗೊಳಗಾಯಿತು, ಅದು ರಾಜ್ಯ ಸರ್ಕಾರದ ಇಮೇಜ್‍ ಮೇಲೆ ನೇರವಾಗಿ ಪರಿಣಾಮ ಬೀರಿತು. ನಂತರ ಮುಖ್ಯಮಂತ್ರಿ ತುಷಾರ್ ಪಾಂಚಾಲ್ ಅವರನ್ನು ಸಂವಹನ ಸಲಹಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದರು. ಮೊದಲಿಲ್ಲದ ಆಕ್ಷೇಪ ಈಗ ಅಧಿಕೃತ ನೇಮಕದ ನಂತರ ಶುರುವಾಗಿದೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತಿದೆ. “ಶಿವರಾಜ್ ಸಿಂಗ್‍ ಮೋದಿಯ ವಿರುದ್ಧ ಯುದ್ಧ ಮಾಡುತ್ತಿದ್ದಾರೆ! ಏಕೆಂದರೆ, ಮೋದಿಯವರನ್ನು ಅವರ ಹೊಸ ಸಲಹೆಗಾರರು ತೀವ್ರವಾಗಿ ವಿರೋಧಿಸಿದ್ದರು” ಎಂದು ಪಕ್ಷದ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದೆ. ಮೋದಿಯವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ, ಅವರ ನಿಲುವನ್ನು ಟೀಕಿಸಿದ ಮತ್ತು ಬಿಜೆಪಿಯ ತತ್ವಗಳ ಬಗ್ಗೆ ಅನಿಯಂತ್ರಿತ ಟೀಕೆಗಳನ್ನು ಮಾಡಿದವರನ್ನು ಶಿವರಾಜ್ ಸಿಂಗ್ ಚೌಹಾಣ್ ಅವರು ಒಎಸ್‍ಡಿ ಮಾಡಿದ್ದಾರೆ. ಯೋಗಿಯ ನಂತರ, ಈಗ ಶಿವರಾಜ್ ಮೋದಿಯ ಆಡಳಿತವನ್ನು ದುರ್ಬಲಗೊಳಿಸುತ್ತಾರೆ’ ಎಂದು ಕಾಂಗ್ರೆಸ್‍ ಹೇಳಿದೆ.

ಪಾಂಚಾಲ್‍ ಅವರ ಹಳೆಯ ಟ್ವೀಟ್‍ಗಳು ಮೊನಚಾಗಿವೆ: ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ…’ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

‘ದೇಸಿ ಸಾರಾಯಿ ಜೊತೆಗೆ ಗೋಮೂತ್ರ ಮಿಕ್ಸ್ ಮಾಡಿ ಕುಡಿದರೆ ಕೊರೋನಾ ಹೋಗುತ್ತಂತೆ. ಬೇಕಾದವರು ಪರೀಕ್ಷಿಸಿ ಅನುಭವಿಸಿ’ ಎಂದು ರಾಮದೇವ್‍ ಅವರನ್ನು ಟೀಕಿಸಿದ್ದರು.

ತೀವ್ರ ಟೀಕೆಗಳು ಕೇಳಿಬಂದ ನಂತರ “ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌ರವರು ನನಗೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ಈ ನನ್ನ ಅಸಾಮರ್ಥ್ಯವನ್ನು ಸಿಎಂಗೆ ತಿಳಿಸಿದ್ದೇನೆ” ಎಂದು ತುಷಾರ್ ಪಾಂಚಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...