Homeಮುಖಪುಟಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ...

ಮೋದಿ, ಹಿಂದುತ್ವದ ಕಟು ಟೀಕಾಕಾರನನ್ನು ಸಲಹೆಗಾರನನ್ನಾಗಿ ನೇಮಿಸಿಕೊಂಡ ಶಿವರಾಜ್ ಚೌಹಾಣ್: ಟೀಕೆ ನಂತರ ಹಿಂದೆ ಸರಿದ ತುಷಾರ್ ಪಾಂಚಾಲ್‍

ಪಾಂಚಾಲ್‍ ಈ ಹಿಂದೆ ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ...’ ಎಂದು ಟ್ವೀಟ್ ಮಾಡಿದ್ದರು.

- Advertisement -
- Advertisement -

ಮಧ್ಯಪ್ರದೇಶ ಮುಖ್ಯಮಂತ್ರಿ ಬಿಜೆಪಿಯ ಶಿವರಾಜ್‌ ಸಿಂಗ್‍ ಚೌಹಾಣ್‌ರವರ ಸಂವಹನ (ಮಾಧ್ಯಮ) ಸಲಹೆಗಾರರಾಗಿ ತುಷಾರ್ ಪಾಂಚಾಲ್‍ ಅವರನ್ನು ಅಧಿಕೃತವಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ಅವರಿಗೆ ಆಫೀಸರ್ ಆನ್‍ ಸ್ಪೆಷಲ್‍ ಡ್ಯೂಟಿ (ಒಎಸ್‍ಡಿ) ಸ್ಥಾನಮಾನ ನೀಡಲಾಗಿತ್ತು. ಆದರೆ ಇಂದು ಮಧ್ಯಾಹ್ನ ತುಷಾರ್ ಪಾಂಚಾಲ್ ಆ ಹುದ್ದೆ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.

ಆದರೆ ಅವರನ್ನು ಕೂಡಲೇ ತೆಗೆದು ಹಾಕುವಂತೆ ಕಟ್ಟಾ ಆರ್ಎಸ್‍ಎಸ್‍ ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಟ್ವೀಟರ್ ಅಭಿಯಾನವನ್ನೂ ಶುರು ಮಾಡಿದ್ದಾರೆ.

ಏಕೆ ಅಂತೀರಾ? ಹಿಂದೆಲ್ಲ ಮೋದಿ ಮತ್ತು ಹಿಂದುತ್ವದ ವಿರುದ್ಧ ಪಾಂಚಾಲ್‍ ಬರೆದಿದ್ದಾರೆ. ಅವರ ಟ್ವೀಟ್‍ಗಳಂತೂ ಮೋದಿ ಮತ್ತು ಹಿಂದುತ್ವವಾದಿಗಳನ್ನು ಮೊನಚಾಗಿ ತಿವಿಯುವಂತಿವೆ.

ಪಾಂಜಾಲ್ ಅವರ ಹಿಂದಿನ ‘ಹಿಂದುತ್ವ ವಿರೋಧಿ’ ಮತ್ತು ಮೋದಿ ವಿರೋಧಿ ಟ್ವೀಟ್‌ಗಳನ್ನು ಉಲ್ಲೇಖಿಸಿ ಬಿಜೆಪಿ, ಆರ್‌ಎಸ್‌ಎಸ್ ಮುಖಂಡರು, ಬೆಂಬಲಿಗರು ತುಷಾರ್ ಪಾಂಚಾಲ್ ಅವರನ್ನು ಒಎಸ್‌ಡಿ ಸ್ಥಾನದಿಂದ ತೆಗೆದುಹಾಕುವಂತೆ ಸಿಎಂ ಶಿವರಾಜ್ ಚೌಹಾಣ್ ಅವರನ್ನು ಒತ್ತಾಯಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತುಷಾರ್ ಪಾಂಚಾಲ್ ಅವರನ್ನು ತಮ್ಮ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (ಒಎಸ್‍ಡಿ) ನೇಮಕ ಮಾಡಿದ ಒಂದು ದಿನದ ನಂತರ, ಹಲವಾರು ಬಿಜೆಪಿ, ಆರೆಸ್ಸೆಸ್ ಮುಖಂಡರು ಮತ್ತು ಬೆಂಬಲಿಗರು ಟ್ವಿಟರ್‌ನಲ್ಲಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಅನೇಕರು, ಚೌಹಾಣರಿಗೆ ಪಾಂಚಾಲ್‍ರಂತಹ ಜನರು ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರಲ್ಲದೇ, ಪಾಂಚಾಲ್‍ ಅವರನ್ನು “ಮೋದಿ ದ್ವೇಷಿ” ಎಂದೂ ಕರೆದಿದ್ದಾರೆ.

“ಸ್ನೇಹಿತರೇ, ನಿಮ್ಮಲ್ಲಿ ಹಲವರು ನನ್ನನ್ನು ಪರದೆಯ ಹಿಂದೆ ಇರುವ ವ್ಯಕ್ತಿ ಎಂದು ತಿಳಿದಿದ್ದೀರಿ. ನಾನು 2001ರಿಂದ ದೇಶಾದ್ಯಂತ ಅನೇಕ ಸಿಎಂಗಳು ಮತ್ತು ರಾಜಕೀಯ ಮುಖಂಡರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ” ಎಂದು ಪಾಂಚಾಲ್ ಸೋಮವಾರ ಟ್ವೀಟ್ ಮಾಡಿದ್ದಾರೆ.

“ಇಂದು, ನನ್ನ ಹಣೆಬರಹ ನನ್ನನ್ನು ಮುಖ್ಯಮಂತ್ರಿ ಚೌಹಾಣ್‍ ಅವರ ಸಂವಹನ ಸಲಹೆಗಾರನ ಕಚೇರಿಯಲ್ಲಿ ಇರಿಸಿದೆ. ದಯವಿಟ್ಟು ನನಗೆ ಶುಭ ಹಾರೈಸಿ. ಹೆಚ್ಚಿನ ವಿವರಗಳನ್ನು ನಂತರ ನೀಡುವೆ” ಎಂದು ಟ್ವೀಟ್‍ನಲ್ಲಿ ಕೋರಿದ್ದರು.

ಇದಾದ ನಂತರ, ದೆಹಲಿ ಬಿಜೆಪಿ ವಕ್ತಾರ ತಾಜಿಂದರ್ ಬಗ್ಗ ಅವರು ಪಾಂಚಾಲ್ ಅವರ ಹಳೆಯ ಟ್ವೀಟ್‌ನ ಸ್ಕ್ರೀನ್‌ಶಾಟ್ ಅನ್ನು ಪೋಸ್ಟ್ ಮಾಡಿ, ಪಾಂಚಾಲ್ ಅವರಂತಹ “ಜನರು” ಅಗತ್ಯವಿದೆಯೇ ಎಂದು ಸಿಎಂ ಚೌಹಾಣ್ ಅವರನ್ನು ಕೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೆಹಲಿ ರಾಜ್ಯ ಕಾರ್ಯವಾಹಕ ಸದಸ್ಯ ರಾಜೀವ್ ಟುಲಿ ಕೂಡ ಪಾಂಚಾಲ್‍ ಅವರ ಹಳೆಯ ಟ್ವೀಟ್ ಅನ್ನು ಪೋಸ್ಟ್ ಮಾಡಿದ್ದಾರೆ. “ಚೌಹಾನ್ ಶಿವರಾಜ್ ಜಿ ಅವರಿಗೆ ನಿಜವಾಗಿಯೂ ಅಗತ್ಯವಿದೆಯೇ? ಮಧ್ಯಪ್ರದೇಶವು ನಮ್ಮ ಸಿದ್ಧಾಂತ ನಂಬುವ ಪ್ರಖ್ಯಾತ ಪತ್ರಕರ್ತರ ಶ್ರೀಮಂತ ಸಂಸ್ಕೃತಿಯನ್ನು ನೀಡಿದೆ. ಹೀಗಿರುವಾಗ ನಮ್ಮವರಲ್ಲದ ಪಾಂಚಾಲ್‍ ಬೇಕಿತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.

ಇತರ ಕಾರ್ಯಕರ್ತರು ಕೂಡ ಪಾಂಚಾಲ್‍ ಅವರ ಟ್ವೀಟ್‌ಗಳ ಬಗ್ಗೆ ಪೋಸ್ಟ್ ಮಾಡಿ, ಅವರ ನೇಮಕಾತಿಯನ್ನು ಪ್ರಶ್ನಿಸಿದ್ದಾರೆ. ಆದರೂ ಕೆಲವರು ಅವರನ್ನು ಬೆಂಬಲಿಸಿದ್ದಾರೆ.

ಪಾಂಚಾಲ್‍ ಅವರು ಶಿವರಾಜ್ ಸಿಂಗ್ ಚೌಹಾಣ್‌ ಅವರೊಂದಿಗೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದಾರೆ ಮತ್ತು ಅವರ ಸಾಮಾಜಿಕ ಮಾಧ್ಯಮವನ್ನು ಸಹ ನಿರ್ವಹಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

“ಇದು ರಾಜಕೀಯ ಪ್ರೇರಿತ ಅಭಿಯಾನವಲ್ಲದೆ ಮತ್ತೇನಲ್ಲ. ಅವರ ಹಳೆಯ ಟ್ವೀಟ್‌ಗಳನ್ನು ಸಂದರ್ಭವಿಲ್ಲದೆ ಪೋಸ್ಟ್ ಮಾಡಲಾಗಿದೆ. ಅವರು ಚೌಹಾಣ್ ಜೊತೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಯಾವಾಗಲೂ ಪಕ್ಷಕ್ಕೆ ಮೊದಲ ಸ್ಥಾನ ನೀಡುತ್ತಾರೆ” ಎಂದು ಮೂಲವೊಂದು ತಿಳಿಸಿದೆ.

ಮಧ್ಯಪ್ರದೇಶದ ಹಿರಿಯ ಬಿಜೆಪಿ ಮುಖಂಡರ ಪ್ರಕಾರ, 2018ರ ಚುನಾವಣೆಯ ಸಮಯದಲ್ಲಿ ಪಾಂಚಾಲ್‍ ತಂಡವು ಚೌಹಾಣ್ ಮತ್ತು ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ಕಾರ್ಯಗಳನ್ನು ನೋಡಿಕೊಂಡಿತ್ತು.

“ಕೊರೋನಾ ಎರಡನೇ ಅಲೆಯಿಂದ ರಾಜ್ಯ ಹಾನಿಗೊಳಗಾಯಿತು, ಅದು ರಾಜ್ಯ ಸರ್ಕಾರದ ಇಮೇಜ್‍ ಮೇಲೆ ನೇರವಾಗಿ ಪರಿಣಾಮ ಬೀರಿತು. ನಂತರ ಮುಖ್ಯಮಂತ್ರಿ ತುಷಾರ್ ಪಾಂಚಾಲ್ ಅವರನ್ನು ಸಂವಹನ ಸಲಹಾ ವಿಭಾಗದ ಮುಖ್ಯಸ್ಥರನ್ನಾಗಿ ಮಾಡಲು ನಿರ್ಧರಿಸಿದರು. ಮೊದಲಿಲ್ಲದ ಆಕ್ಷೇಪ ಈಗ ಅಧಿಕೃತ ನೇಮಕದ ನಂತರ ಶುರುವಾಗಿದೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಕೂಡ ಈ ವಿಷಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತಿದೆ. “ಶಿವರಾಜ್ ಸಿಂಗ್‍ ಮೋದಿಯ ವಿರುದ್ಧ ಯುದ್ಧ ಮಾಡುತ್ತಿದ್ದಾರೆ! ಏಕೆಂದರೆ, ಮೋದಿಯವರನ್ನು ಅವರ ಹೊಸ ಸಲಹೆಗಾರರು ತೀವ್ರವಾಗಿ ವಿರೋಧಿಸಿದ್ದರು” ಎಂದು ಪಕ್ಷದ ಅಧಿಕೃತ ಹ್ಯಾಂಡಲ್ ಪೋಸ್ಟ್ ಮಾಡಿದೆ. ಮೋದಿಯವರನ್ನು ಸೋಶಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ, ಅವರ ನಿಲುವನ್ನು ಟೀಕಿಸಿದ ಮತ್ತು ಬಿಜೆಪಿಯ ತತ್ವಗಳ ಬಗ್ಗೆ ಅನಿಯಂತ್ರಿತ ಟೀಕೆಗಳನ್ನು ಮಾಡಿದವರನ್ನು ಶಿವರಾಜ್ ಸಿಂಗ್ ಚೌಹಾಣ್ ಅವರು ಒಎಸ್‍ಡಿ ಮಾಡಿದ್ದಾರೆ. ಯೋಗಿಯ ನಂತರ, ಈಗ ಶಿವರಾಜ್ ಮೋದಿಯ ಆಡಳಿತವನ್ನು ದುರ್ಬಲಗೊಳಿಸುತ್ತಾರೆ’ ಎಂದು ಕಾಂಗ್ರೆಸ್‍ ಹೇಳಿದೆ.

ಪಾಂಚಾಲ್‍ ಅವರ ಹಳೆಯ ಟ್ವೀಟ್‍ಗಳು ಮೊನಚಾಗಿವೆ: ‘ಮೋದಿ ಪುಣ್ಯಶಾಲಿ, ಪ್ರಶ್ನೆ ಕೇಳಲು ವಿಪಕ್ಷ ನಾಯಕನಿಲ್ಲ, ಮನೆಯಲ್ಲಿ ಪತ್ನಿಯಿಲ್ಲ…’ ಎಂದು ಈ ಹಿಂದೆ ಟ್ವೀಟ್ ಮಾಡಿದ್ದರು.

‘ದೇಸಿ ಸಾರಾಯಿ ಜೊತೆಗೆ ಗೋಮೂತ್ರ ಮಿಕ್ಸ್ ಮಾಡಿ ಕುಡಿದರೆ ಕೊರೋನಾ ಹೋಗುತ್ತಂತೆ. ಬೇಕಾದವರು ಪರೀಕ್ಷಿಸಿ ಅನುಭವಿಸಿ’ ಎಂದು ರಾಮದೇವ್‍ ಅವರನ್ನು ಟೀಕಿಸಿದ್ದರು.

ತೀವ್ರ ಟೀಕೆಗಳು ಕೇಳಿಬಂದ ನಂತರ “ಸಿಎಂ ಶಿವರಾಜ್‌ಸಿಂಗ್‌ ಚೌಹಾಣ್‌ರವರು ನನಗೆ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸದಿರಲು ನಾನು ನಿರ್ಧರಿಸಿದ್ದೇನೆ. ಈ ನನ್ನ ಅಸಾಮರ್ಥ್ಯವನ್ನು ಸಿಎಂಗೆ ತಿಳಿಸಿದ್ದೇನೆ” ಎಂದು ತುಷಾರ್ ಪಾಂಚಾಲ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ; ‘ಧರ್ಮಯುದ್ಧ ಮಾಡಲು ನನಗೆ ಆಯುಧ ಹಿಡಿದಿರುವವರು ಬೇಕಿದೆ’: ಬಹಿರಂಗ ಭಯೋತ್ಪಾದನೆಗೆ ಕರೆ ನೀಡಿದ ಯತಿ ನರಸಿಂಗಾನಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...