Homeಅಂಕಣಗಳುಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

- Advertisement -
- Advertisement -

ಪ್ರವಾಸ ಬಹುತೇಕ ಎಲ್ಲರಿಗೂ ಇಷ್ಟ. ಪ್ರತಿ ಪ್ರವಾಸತಾಣಕ್ಕೂ ತನ್ನದೇ ಆದ ವಿಭಿನ್ನತೆ ಮತ್ತು ವಿಶಿಷ್ಟತೆ ಇರುತ್ತದೆ. ಕೆಲವರಿಗೆ ಸಮುದ್ರ ತೀರ ಇಷ್ಟವಾದರೆ ಇನ್ನು ಕೆಲವರಿಗೆ ದೇವಸ್ಥಾನಗಳ ಬಗ್ಗೆ ಒಲವು. ನದಿಗಳು, ಅಣೆಕಟ್ಟೆಗಳು, ಮ್ಯೂಸಿಯಂಗಳು, ಮಂಜು ಬೀಳುವ ಪ್ರದೇಶ, ಬೆಟ್ಟಗುಡ್ಡಗಳು, ಹಿಮಗುಡ್ಡೆ ಹೀಗೆ ಒಬ್ಬೊಬ್ಬರಿಗೂ ತಮ್ಮದೇ ಆಯ್ಕೆಯ ನೆಚ್ಚಿನ ತಾಣಗಳು ಇರುತ್ತವೆ. ಚಾರಣ (ಟ್ರೆಕ್ಕಿಂಗ್) ಕೆಲವರಿಗೆ ಪ್ರೀತಿಪಾತ್ರವಾದರೆ ಮತ್ತೆ ಕೆಲವರಿಗೆ ಬಲು ಕಷ್ಟದ್ದು. ಸಾಹಸಿ ಚಾರಣಿಗರಿಗೆ ಹೇಳಿಮಾಡಿಸಿದ ಜಾಗ ಸಾವನದುರ್ಗ ಬೆಟ್ಟ. ಸಾಹಸಿಗಳು ಮಾತ್ರವಲ್ಲ, ನೀವೆಲ್ಲರೂ ಕೂಡ ನಿಮ್ಮ ಶಕ್ತ್ಯಾನುಸಾರ ಈ ಬೆಟ್ಟ ಹತ್ತಿ ಸಂಭ್ರಮಿಸಬಹುದು. ಆರೋಗ್ಯಕ್ಕೂ ಇದು ಒಳ್ಳೆಯದು. ನಿಮಗೆ ಬೆಟ್ಟ ಹತ್ತುವುದು ಕಷ್ಟ ಮತ್ತು ತೀವ್ರ ತ್ರಾಸದಾಯಕ ಎನಿಸಿದರೆ ತಪ್ಪಿಸಿಕೊಳ್ಳಬೇಕಾದ ದೊಡ್ಡ ಬೆಟ್ಟ ಇದು ಸಾವನದುರ್ಗ.

ಬೆಂಗಳೂರಿನಿಂದ 46 ಕಿ.ಮೀ ದೂರವಿರುವ, ಒಂದು ದಿನದಲ್ಲಿ ಹೋಗಿಬರಬಹುದಾದ ಸ್ಥಳಗಳ ಪಟ್ಟಿಗೆ ಸಾವನದುರ್ಗ ಸೇರುತ್ತದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಈ ಏಕಶಿಲಾ ಬೆಟ್ಟ ಸಮುದ್ರ ಮಟ್ಟದಿಂದ 1226 ಮೀಟರ್ ಎತ್ತರದಲ್ಲಿದೆ. ಬೆಂಗಳೂರಿನಿಂದ ಮಾಗಡಿ ರಸ್ತೆ ಮಾರ್ಗವಾಗಿ ಹೊರಟು, ದೊಡ್ಡ ಆಲದಮರ-ಮಂಚನಬೆಲೆ ಡ್ಯಾಂ ಮಾರ್ಗವಾಗಿ ಸಾವನದುರ್ಗ ತಲುಪಬಹುದು. ನೀವು ಮಂಚನಬೆಲೆ ಅಣೆಕಟ್ಟು ಮಾರ್ಗವಾಗಿ ಹೋದರೆ, ದೊಡ್ಡ ಆಲದಮರ, ಮಂಚನಬೆಲೆ ಅಣೆಕಟ್ಟು ನೋಡುವುದರ ಜೊತೆಗೆ ನಿರ್ಜನ ಕಾನನದ ನಿಶಬ್ದವನ್ನು ಅನುಭವಿಸಬಹುದು. ಕಾರು-ಬೈಕ್‌ನಲ್ಲಿ ಬೆಟ್ಟದ ದಡ ತಲುಪಲು ಒಂದೂವರೆ ಗಂಟೆ ಸಾಕು.

ನೀವು ದಟ್ಟಕಾನನದ ನಡುವಿನ ಸಾವನದುರ್ಗ ಬೆಟ್ಟ ತಲುಪಿದೊಡನೆಯೇ ವಿಸ್ತಾರವಾದ ಉದ್ಯಾನವನವೊಂದು ನಿಮ್ಮನ್ನು ಸ್ವಾಗತಿಸುತ್ತದೆ. ಕೇವಲ 10 ರೂ ಟಿಕೆಟ್ ಇರುವ ಈ ಉದ್ಯಾನವನ ಮಕ್ಕಳಿಗೆ ಆಟವಾಡಲು ಪ್ರಸಕ್ತವಾಗಿದೆ. ವಿಭಿನ್ನ ಗಿಡಮರಗಳು, ಆಟದ ಸಾಮಗ್ರಿಗಳು ಅಲ್ಲಿದ್ದು ಮಕ್ಕಳು ಆಡುತ್ತಿರುವಾಗ, ಹಿರಿಯರಿಗೆ ಗಂಟೆಗಟ್ಟಲೆ ವಿಶ್ರಾಂತಿ ಪಡೆಯಲು ಇದು ಉತ್ತಮ ಸ್ಥಳವೆನಿಸಿದೆ. ಪ್ರಶಾಂತವಾದ ಈ ಸ್ಥಳದಲ್ಲಿ ನೀವು ಧ್ಯಾನಸ್ಥರಾಗಬಹುದು. ಇನ್ನು ಸಾವಂದಿ ವೀರಭದ್ರೇಶ್ವರದೇವಾಲಯ ಮತ್ತು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿದ್ದರೆ ನಂದಿ ದೇವಾಲಯವು ಬೆಟ್ಟದ ತುತ್ತತುದಿಯಲ್ಲಿದೆ.

ನಾನು ಬೈಕಿನಲ್ಲಿ ಬೆಟ್ಟ ತಲುಪಿದೊಡನೆ ಅನ್ನಿಸಿದ್ದು ಇಷ್ಟ ದೊಡ್ಡ ಬೆಟ್ಟವನ್ನು ಹತ್ತಲು ಸಾಧ್ಯವೇ ಎಂದು. ಪಶ್ಚಿಮ ದಿಕ್ಕಿನಿಂದ ಅದು ನೇರಕ್ಕೆ ಬೃಹತ್ ಆಕಾರದಲ್ಲಿ ಕಾಣುತ್ತದೆ. ಇನ್ನು ಸ್ವಲ್ಪ ಹೊತ್ತು ಸುಧಾರಿಸಿಕೊಂಡು, ಮೆಟ್ಟಿಲುಗಳಿಲ್ಲದ ಈ ಬೆಟ್ಟ ಹತ್ತಲು ಆರಂಭಿಸಿದೆ. ಮಾರ್ಗ ತಪ್ಪದಂತೆ ಗುರುತಿನ ಚಿಹ್ನೆಗಳನ್ನು ಹಾಕಲಾಗಿದೆ. ಅವನ್ನು ಅನುಸರಿಸಿಕೊಂಡು ಏರುತ್ತಿದ್ದರೆ ದಾರಿ ಸಾಗುವುದೇ ಇಲ್ಲ. ಒಂದಷ್ಟು ದೂರ ಬೆಟ್ಟ ಹತ್ತಿ ಸುಸ್ತಾಗಿ ಕುಳಿತುಕೊಂಡರೆ ವಿಶಾಲ ಕಾಡು ಗೋಚರಿಸುತ್ತದೆ. ಮತ್ತಷ್ಟು ಹತ್ತಿದರೆ 400-500 ವರ್ಷ ಹಳೆಯ ಕೋಟೆಯೊಂದು ಪ್ರತ್ಯಕ್ಷವಾಗುತ್ತದೆ. ಅಲ್ಲಿಗೆ ಒಂದು ಬೆಟ್ಟ ಮುಕ್ತಾಯವಾಗಿ, ಅಲ್ಲಿಂದ ನಂದಿ ವಿಗ್ರಹವಿರುದ ದೊಡ್ಡ ಬೆಟ್ಟಕ್ಕೆ ದಾರಿಯಿದೆ.

ಆಗಾಗ ವಿಶ್ರಾಂತಿ ಪಡೆದು ಬೆಟ್ಟ ಹತ್ತುವುದು ಸುಲಭವಾದೀತು. ವೃತ್ತಿಪರ ಚಾರಣಿಗರು ಸರಸರನೇ ಬೆಟ್ಟ ಏರಬಹುದು. ಸಾಮಾನ್ಯವಾಗಿ ಪೂರ್ತಿ ಬೆಟ್ಟ ಹತ್ತಲು ಒಂದೂವರೆಯಿಂದ-ಎರಡು ಗಂಟೆಗಳ ಸಮಯ ಬೇಕು. ಕಷ್ಟಪಟ್ಟು ಬೆಟ್ಟ ಪೂರ್ತಿ ಹತ್ತಿದ ಮೇಲಂತೂ ಸುತ್ತಲಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುವುದು ವಿಶಿಷ್ಟ ಅನುಭವವೆಂದು ಬೆಟ್ಟ ಹತ್ತಿರುವವರು ಹೇಳುತ್ತಾರೆ. ನಾನಂತೂ ಮೊದಲ ಬಾರಿಗೆ ಪೂರ್ತಿ ಬೆಟ್ಟ ಹತ್ತಲು ಹೋಗಲಿಲ್ಲ. ಏಕೆಂದರೆ ಬೆಟ್ಟ ಹತ್ತಲು ಬೇಕಿರುವಷ್ಟು ಶಕ್ತಿ ಇಳಿಯಲೂ ಬೇಕಿರುತ್ತದೆ. ಹಾಗಾಗಿ ತೀರಾ ಸುಸ್ತಾಗುವುದು ಬೇಡ ಎಂದು ಈ ಮೊದಲ ಚಾರಣದಲ್ಲಿ, ಬೆಟ್ಟದ ಕೋಟೆಯವರೆಗೆ ಹತ್ತಿ ವಿಶ್ರಾಂತಿಗೆ ಮುಂದಾದೆ.

ಮನೆಮಂದಿಯೆಲ್ಲ ಬೆಟ್ಟ ಹತ್ತುವುದು ಹೆಚ್ಚಿನ ಖುಷಿ ಕೊಡುತ್ತದೆ. ಎಷ್ಟು ಸಾಧ್ಯವೋ ಅಷ್ಟು ಮೇಲೇರಿ ಒಟ್ಟಿಗೆ ಊಟ ಮಾಡಿ, ವಿಶ್ರಾಂತಿ ತೆಗೆದುಕೊಂಡು ಕೆಳಗಿಳಿಯಬಹುದು. ಬೆಟ್ಟದ ಮೇಲೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾದ್ದರಿಂದ ತಿಂಡಿ ಜೊತೆಗೆ ಹೆಚ್ಚು ನೀರು ಒಯ್ಯುವುದು ಕಡ್ಡಾಯ.

ಚಳಿಗಾಲದಲ್ಲಿ ಮಂಜಿನ ಮುಸುಕು ಹೊದ್ದು ಕಂಗೊಳಿಸುವ ಈ ಬೆಟ್ಟದ ತುದಿಯಲ್ಲಿ, ಮಧ್ಯಾಹ್ನ ನಿಂತು ನೋಡಿದರೆ ಮೋಡಗಳು ಇರದಿದ್ದಲ್ಲಿ ಸುತ್ತಲಿನ ಹಲವಾರು ಕೆರೆ ಮತ್ತು ಬೆಟ್ಟಗಳು ಕಾಣಸಿಗುತ್ತವೆ. ಸಾವನದುರ್ಗ ಕಾಡಿನ ಮನೋಹರ ದೃಶ್ಯ ಕಾಣುತ್ತದೆ.

ಸಾವಂಡಿ, ಸಾಮಂತದುರ್ಗ, ಸಾವಿನ ದುರ್ಗ ಎಂದೆಲ್ಲಾ ಕರೆಯಲ್ಪಡುತ್ತಿದ್ದ ಈ ಊರನ್ನು ಹಲವು ರಾಜರು ವಶಪಡಿಸಿಕೊಂಡು ಆಳಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಇದರ ಬಳಿ ಇರುವ ಮಾಗಡಿಯನ್ನು ಕೆಂಪೇಗೌಡರು ಸೇರಿದಂತೆ ಹಲವರು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಟಿಪ್ಪು ಸುಲ್ತಾನ್, ಮೈಸೂರು ಒಡೆಯರು, ಬ್ರಿಟಿಷರು ನಂತರ ಇದನ್ನು ವಶಪಡಿಸಿಕೊಂಡಿದ್ದರು. ಈಗ ಸರ್ಕಾರ ಈ ಕಾಡನ್ನು ರಕ್ಷಿಸುವ ಹೊಣೆ ಹೊತ್ತುಕೊಂಡಿದೆ.

ದಾರಿಯಲ್ಲಿ ಸಿಗುವ ದೊಡ್ಡ ಆಲದ ಮರ ಮಂಚನಬೆಲೆ ಅಣೆಕಟ್ಟಿನ ಆಕರ್ಷಣೆಯ ಜೊತೆಗೆ, ದಾರಿಯುದ್ದಕ್ಕೂ ಘಮ ಘಮ ಫಿಶ್ ಫ್ರೈ ಮಾಡಿಕೊಡುವ ಸಾಲು-ಸಾಲು ಅಂಗಡಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತವೆ. ಮೀನಿನ ರುಚಿ ಸವಿಯುವುದನ್ನು ಮರೆಯದಿರಿ.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...