Homeಅಂಕಣಗಳುಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

- Advertisement -
- Advertisement -

ಪ್ರವಾಸ ಬಹುತೇಕ ಎಲ್ಲರಿಗೂ ಇಷ್ಟ. ಪ್ರತಿ ಪ್ರವಾಸತಾಣಕ್ಕೂ ತನ್ನದೇ ಆದ ವಿಭಿನ್ನತೆ ಮತ್ತು ವಿಶಿಷ್ಟತೆ ಇರುತ್ತದೆ. ಕೆಲವರಿಗೆ ಸಮುದ್ರ ತೀರ ಇಷ್ಟವಾದರೆ ಇನ್ನು ಕೆಲವರಿಗೆ ದೇವಸ್ಥಾನಗಳ ಬಗ್ಗೆ ಒಲವು. ನದಿಗಳು, ಅಣೆಕಟ್ಟೆಗಳು, ಮ್ಯೂಸಿಯಂಗಳು, ಮಂಜು ಬೀಳುವ ಪ್ರದೇಶ, ಬೆಟ್ಟಗುಡ್ಡಗಳು, ಹಿಮಗುಡ್ಡೆ ಹೀಗೆ ಒಬ್ಬೊಬ್ಬರಿಗೂ ತಮ್ಮದೇ ಆಯ್ಕೆಯ ನೆಚ್ಚಿನ ತಾಣಗಳು ಇರುತ್ತವೆ. ಚಾರಣ (ಟ್ರೆಕ್ಕಿಂಗ್) ಕೆಲವರಿಗೆ ಪ್ರೀತಿಪಾತ್ರವಾದರೆ ಮತ್ತೆ ಕೆಲವರಿಗೆ ಬಲು ಕಷ್ಟದ್ದು. ಸಾಹಸಿ ಚಾರಣಿಗರಿಗೆ ಹೇಳಿಮಾಡಿಸಿದ ಜಾಗ ಸಾವನದುರ್ಗ ಬೆಟ್ಟ. ಸಾಹಸಿಗಳು ಮಾತ್ರವಲ್ಲ, ನೀವೆಲ್ಲರೂ ಕೂಡ ನಿಮ್ಮ ಶಕ್ತ್ಯಾನುಸಾರ ಈ ಬೆಟ್ಟ ಹತ್ತಿ ಸಂಭ್ರಮಿಸಬಹುದು. ಆರೋಗ್ಯಕ್ಕೂ ಇದು ಒಳ್ಳೆಯದು. ನಿಮಗೆ ಬೆಟ್ಟ ಹತ್ತುವುದು ಕಷ್ಟ ಮತ್ತು ತೀವ್ರ ತ್ರಾಸದಾಯಕ ಎನಿಸಿದರೆ ತಪ್ಪಿಸಿಕೊಳ್ಳಬೇಕಾದ ದೊಡ್ಡ ಬೆಟ್ಟ ಇದು ಸಾವನದುರ್ಗ.

ಬೆಂಗಳೂರಿನಿಂದ 46 ಕಿ.ಮೀ ದೂರವಿರುವ, ಒಂದು ದಿನದಲ್ಲಿ ಹೋಗಿಬರಬಹುದಾದ ಸ್ಥಳಗಳ ಪಟ್ಟಿಗೆ ಸಾವನದುರ್ಗ ಸೇರುತ್ತದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಈ ಏಕಶಿಲಾ ಬೆಟ್ಟ ಸಮುದ್ರ ಮಟ್ಟದಿಂದ 1226 ಮೀಟರ್ ಎತ್ತರದಲ್ಲಿದೆ. ಬೆಂಗಳೂರಿನಿಂದ ಮಾಗಡಿ ರಸ್ತೆ ಮಾರ್ಗವಾಗಿ ಹೊರಟು, ದೊಡ್ಡ ಆಲದಮರ-ಮಂಚನಬೆಲೆ ಡ್ಯಾಂ ಮಾರ್ಗವಾಗಿ ಸಾವನದುರ್ಗ ತಲುಪಬಹುದು. ನೀವು ಮಂಚನಬೆಲೆ ಅಣೆಕಟ್ಟು ಮಾರ್ಗವಾಗಿ ಹೋದರೆ, ದೊಡ್ಡ ಆಲದಮರ, ಮಂಚನಬೆಲೆ ಅಣೆಕಟ್ಟು ನೋಡುವುದರ ಜೊತೆಗೆ ನಿರ್ಜನ ಕಾನನದ ನಿಶಬ್ದವನ್ನು ಅನುಭವಿಸಬಹುದು. ಕಾರು-ಬೈಕ್‌ನಲ್ಲಿ ಬೆಟ್ಟದ ದಡ ತಲುಪಲು ಒಂದೂವರೆ ಗಂಟೆ ಸಾಕು.

ನೀವು ದಟ್ಟಕಾನನದ ನಡುವಿನ ಸಾವನದುರ್ಗ ಬೆಟ್ಟ ತಲುಪಿದೊಡನೆಯೇ ವಿಸ್ತಾರವಾದ ಉದ್ಯಾನವನವೊಂದು ನಿಮ್ಮನ್ನು ಸ್ವಾಗತಿಸುತ್ತದೆ. ಕೇವಲ 10 ರೂ ಟಿಕೆಟ್ ಇರುವ ಈ ಉದ್ಯಾನವನ ಮಕ್ಕಳಿಗೆ ಆಟವಾಡಲು ಪ್ರಸಕ್ತವಾಗಿದೆ. ವಿಭಿನ್ನ ಗಿಡಮರಗಳು, ಆಟದ ಸಾಮಗ್ರಿಗಳು ಅಲ್ಲಿದ್ದು ಮಕ್ಕಳು ಆಡುತ್ತಿರುವಾಗ, ಹಿರಿಯರಿಗೆ ಗಂಟೆಗಟ್ಟಲೆ ವಿಶ್ರಾಂತಿ ಪಡೆಯಲು ಇದು ಉತ್ತಮ ಸ್ಥಳವೆನಿಸಿದೆ. ಪ್ರಶಾಂತವಾದ ಈ ಸ್ಥಳದಲ್ಲಿ ನೀವು ಧ್ಯಾನಸ್ಥರಾಗಬಹುದು. ಇನ್ನು ಸಾವಂದಿ ವೀರಭದ್ರೇಶ್ವರದೇವಾಲಯ ಮತ್ತು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿದ್ದರೆ ನಂದಿ ದೇವಾಲಯವು ಬೆಟ್ಟದ ತುತ್ತತುದಿಯಲ್ಲಿದೆ.

ನಾನು ಬೈಕಿನಲ್ಲಿ ಬೆಟ್ಟ ತಲುಪಿದೊಡನೆ ಅನ್ನಿಸಿದ್ದು ಇಷ್ಟ ದೊಡ್ಡ ಬೆಟ್ಟವನ್ನು ಹತ್ತಲು ಸಾಧ್ಯವೇ ಎಂದು. ಪಶ್ಚಿಮ ದಿಕ್ಕಿನಿಂದ ಅದು ನೇರಕ್ಕೆ ಬೃಹತ್ ಆಕಾರದಲ್ಲಿ ಕಾಣುತ್ತದೆ. ಇನ್ನು ಸ್ವಲ್ಪ ಹೊತ್ತು ಸುಧಾರಿಸಿಕೊಂಡು, ಮೆಟ್ಟಿಲುಗಳಿಲ್ಲದ ಈ ಬೆಟ್ಟ ಹತ್ತಲು ಆರಂಭಿಸಿದೆ. ಮಾರ್ಗ ತಪ್ಪದಂತೆ ಗುರುತಿನ ಚಿಹ್ನೆಗಳನ್ನು ಹಾಕಲಾಗಿದೆ. ಅವನ್ನು ಅನುಸರಿಸಿಕೊಂಡು ಏರುತ್ತಿದ್ದರೆ ದಾರಿ ಸಾಗುವುದೇ ಇಲ್ಲ. ಒಂದಷ್ಟು ದೂರ ಬೆಟ್ಟ ಹತ್ತಿ ಸುಸ್ತಾಗಿ ಕುಳಿತುಕೊಂಡರೆ ವಿಶಾಲ ಕಾಡು ಗೋಚರಿಸುತ್ತದೆ. ಮತ್ತಷ್ಟು ಹತ್ತಿದರೆ 400-500 ವರ್ಷ ಹಳೆಯ ಕೋಟೆಯೊಂದು ಪ್ರತ್ಯಕ್ಷವಾಗುತ್ತದೆ. ಅಲ್ಲಿಗೆ ಒಂದು ಬೆಟ್ಟ ಮುಕ್ತಾಯವಾಗಿ, ಅಲ್ಲಿಂದ ನಂದಿ ವಿಗ್ರಹವಿರುದ ದೊಡ್ಡ ಬೆಟ್ಟಕ್ಕೆ ದಾರಿಯಿದೆ.

ಆಗಾಗ ವಿಶ್ರಾಂತಿ ಪಡೆದು ಬೆಟ್ಟ ಹತ್ತುವುದು ಸುಲಭವಾದೀತು. ವೃತ್ತಿಪರ ಚಾರಣಿಗರು ಸರಸರನೇ ಬೆಟ್ಟ ಏರಬಹುದು. ಸಾಮಾನ್ಯವಾಗಿ ಪೂರ್ತಿ ಬೆಟ್ಟ ಹತ್ತಲು ಒಂದೂವರೆಯಿಂದ-ಎರಡು ಗಂಟೆಗಳ ಸಮಯ ಬೇಕು. ಕಷ್ಟಪಟ್ಟು ಬೆಟ್ಟ ಪೂರ್ತಿ ಹತ್ತಿದ ಮೇಲಂತೂ ಸುತ್ತಲಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುವುದು ವಿಶಿಷ್ಟ ಅನುಭವವೆಂದು ಬೆಟ್ಟ ಹತ್ತಿರುವವರು ಹೇಳುತ್ತಾರೆ. ನಾನಂತೂ ಮೊದಲ ಬಾರಿಗೆ ಪೂರ್ತಿ ಬೆಟ್ಟ ಹತ್ತಲು ಹೋಗಲಿಲ್ಲ. ಏಕೆಂದರೆ ಬೆಟ್ಟ ಹತ್ತಲು ಬೇಕಿರುವಷ್ಟು ಶಕ್ತಿ ಇಳಿಯಲೂ ಬೇಕಿರುತ್ತದೆ. ಹಾಗಾಗಿ ತೀರಾ ಸುಸ್ತಾಗುವುದು ಬೇಡ ಎಂದು ಈ ಮೊದಲ ಚಾರಣದಲ್ಲಿ, ಬೆಟ್ಟದ ಕೋಟೆಯವರೆಗೆ ಹತ್ತಿ ವಿಶ್ರಾಂತಿಗೆ ಮುಂದಾದೆ.

ಮನೆಮಂದಿಯೆಲ್ಲ ಬೆಟ್ಟ ಹತ್ತುವುದು ಹೆಚ್ಚಿನ ಖುಷಿ ಕೊಡುತ್ತದೆ. ಎಷ್ಟು ಸಾಧ್ಯವೋ ಅಷ್ಟು ಮೇಲೇರಿ ಒಟ್ಟಿಗೆ ಊಟ ಮಾಡಿ, ವಿಶ್ರಾಂತಿ ತೆಗೆದುಕೊಂಡು ಕೆಳಗಿಳಿಯಬಹುದು. ಬೆಟ್ಟದ ಮೇಲೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾದ್ದರಿಂದ ತಿಂಡಿ ಜೊತೆಗೆ ಹೆಚ್ಚು ನೀರು ಒಯ್ಯುವುದು ಕಡ್ಡಾಯ.

ಚಳಿಗಾಲದಲ್ಲಿ ಮಂಜಿನ ಮುಸುಕು ಹೊದ್ದು ಕಂಗೊಳಿಸುವ ಈ ಬೆಟ್ಟದ ತುದಿಯಲ್ಲಿ, ಮಧ್ಯಾಹ್ನ ನಿಂತು ನೋಡಿದರೆ ಮೋಡಗಳು ಇರದಿದ್ದಲ್ಲಿ ಸುತ್ತಲಿನ ಹಲವಾರು ಕೆರೆ ಮತ್ತು ಬೆಟ್ಟಗಳು ಕಾಣಸಿಗುತ್ತವೆ. ಸಾವನದುರ್ಗ ಕಾಡಿನ ಮನೋಹರ ದೃಶ್ಯ ಕಾಣುತ್ತದೆ.

ಸಾವಂಡಿ, ಸಾಮಂತದುರ್ಗ, ಸಾವಿನ ದುರ್ಗ ಎಂದೆಲ್ಲಾ ಕರೆಯಲ್ಪಡುತ್ತಿದ್ದ ಈ ಊರನ್ನು ಹಲವು ರಾಜರು ವಶಪಡಿಸಿಕೊಂಡು ಆಳಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಇದರ ಬಳಿ ಇರುವ ಮಾಗಡಿಯನ್ನು ಕೆಂಪೇಗೌಡರು ಸೇರಿದಂತೆ ಹಲವರು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಟಿಪ್ಪು ಸುಲ್ತಾನ್, ಮೈಸೂರು ಒಡೆಯರು, ಬ್ರಿಟಿಷರು ನಂತರ ಇದನ್ನು ವಶಪಡಿಸಿಕೊಂಡಿದ್ದರು. ಈಗ ಸರ್ಕಾರ ಈ ಕಾಡನ್ನು ರಕ್ಷಿಸುವ ಹೊಣೆ ಹೊತ್ತುಕೊಂಡಿದೆ.

ದಾರಿಯಲ್ಲಿ ಸಿಗುವ ದೊಡ್ಡ ಆಲದ ಮರ ಮಂಚನಬೆಲೆ ಅಣೆಕಟ್ಟಿನ ಆಕರ್ಷಣೆಯ ಜೊತೆಗೆ, ದಾರಿಯುದ್ದಕ್ಕೂ ಘಮ ಘಮ ಫಿಶ್ ಫ್ರೈ ಮಾಡಿಕೊಡುವ ಸಾಲು-ಸಾಲು ಅಂಗಡಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತವೆ. ಮೀನಿನ ರುಚಿ ಸವಿಯುವುದನ್ನು ಮರೆಯದಿರಿ.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...