Homeಅಂಕಣಗಳುಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

- Advertisement -
- Advertisement -

ಪ್ರವಾಸ ಬಹುತೇಕ ಎಲ್ಲರಿಗೂ ಇಷ್ಟ. ಪ್ರತಿ ಪ್ರವಾಸತಾಣಕ್ಕೂ ತನ್ನದೇ ಆದ ವಿಭಿನ್ನತೆ ಮತ್ತು ವಿಶಿಷ್ಟತೆ ಇರುತ್ತದೆ. ಕೆಲವರಿಗೆ ಸಮುದ್ರ ತೀರ ಇಷ್ಟವಾದರೆ ಇನ್ನು ಕೆಲವರಿಗೆ ದೇವಸ್ಥಾನಗಳ ಬಗ್ಗೆ ಒಲವು. ನದಿಗಳು, ಅಣೆಕಟ್ಟೆಗಳು, ಮ್ಯೂಸಿಯಂಗಳು, ಮಂಜು ಬೀಳುವ ಪ್ರದೇಶ, ಬೆಟ್ಟಗುಡ್ಡಗಳು, ಹಿಮಗುಡ್ಡೆ ಹೀಗೆ ಒಬ್ಬೊಬ್ಬರಿಗೂ ತಮ್ಮದೇ ಆಯ್ಕೆಯ ನೆಚ್ಚಿನ ತಾಣಗಳು ಇರುತ್ತವೆ. ಚಾರಣ (ಟ್ರೆಕ್ಕಿಂಗ್) ಕೆಲವರಿಗೆ ಪ್ರೀತಿಪಾತ್ರವಾದರೆ ಮತ್ತೆ ಕೆಲವರಿಗೆ ಬಲು ಕಷ್ಟದ್ದು. ಸಾಹಸಿ ಚಾರಣಿಗರಿಗೆ ಹೇಳಿಮಾಡಿಸಿದ ಜಾಗ ಸಾವನದುರ್ಗ ಬೆಟ್ಟ. ಸಾಹಸಿಗಳು ಮಾತ್ರವಲ್ಲ, ನೀವೆಲ್ಲರೂ ಕೂಡ ನಿಮ್ಮ ಶಕ್ತ್ಯಾನುಸಾರ ಈ ಬೆಟ್ಟ ಹತ್ತಿ ಸಂಭ್ರಮಿಸಬಹುದು. ಆರೋಗ್ಯಕ್ಕೂ ಇದು ಒಳ್ಳೆಯದು. ನಿಮಗೆ ಬೆಟ್ಟ ಹತ್ತುವುದು ಕಷ್ಟ ಮತ್ತು ತೀವ್ರ ತ್ರಾಸದಾಯಕ ಎನಿಸಿದರೆ ತಪ್ಪಿಸಿಕೊಳ್ಳಬೇಕಾದ ದೊಡ್ಡ ಬೆಟ್ಟ ಇದು ಸಾವನದುರ್ಗ.

ಬೆಂಗಳೂರಿನಿಂದ 46 ಕಿ.ಮೀ ದೂರವಿರುವ, ಒಂದು ದಿನದಲ್ಲಿ ಹೋಗಿಬರಬಹುದಾದ ಸ್ಥಳಗಳ ಪಟ್ಟಿಗೆ ಸಾವನದುರ್ಗ ಸೇರುತ್ತದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಈ ಏಕಶಿಲಾ ಬೆಟ್ಟ ಸಮುದ್ರ ಮಟ್ಟದಿಂದ 1226 ಮೀಟರ್ ಎತ್ತರದಲ್ಲಿದೆ. ಬೆಂಗಳೂರಿನಿಂದ ಮಾಗಡಿ ರಸ್ತೆ ಮಾರ್ಗವಾಗಿ ಹೊರಟು, ದೊಡ್ಡ ಆಲದಮರ-ಮಂಚನಬೆಲೆ ಡ್ಯಾಂ ಮಾರ್ಗವಾಗಿ ಸಾವನದುರ್ಗ ತಲುಪಬಹುದು. ನೀವು ಮಂಚನಬೆಲೆ ಅಣೆಕಟ್ಟು ಮಾರ್ಗವಾಗಿ ಹೋದರೆ, ದೊಡ್ಡ ಆಲದಮರ, ಮಂಚನಬೆಲೆ ಅಣೆಕಟ್ಟು ನೋಡುವುದರ ಜೊತೆಗೆ ನಿರ್ಜನ ಕಾನನದ ನಿಶಬ್ದವನ್ನು ಅನುಭವಿಸಬಹುದು. ಕಾರು-ಬೈಕ್‌ನಲ್ಲಿ ಬೆಟ್ಟದ ದಡ ತಲುಪಲು ಒಂದೂವರೆ ಗಂಟೆ ಸಾಕು.

ನೀವು ದಟ್ಟಕಾನನದ ನಡುವಿನ ಸಾವನದುರ್ಗ ಬೆಟ್ಟ ತಲುಪಿದೊಡನೆಯೇ ವಿಸ್ತಾರವಾದ ಉದ್ಯಾನವನವೊಂದು ನಿಮ್ಮನ್ನು ಸ್ವಾಗತಿಸುತ್ತದೆ. ಕೇವಲ 10 ರೂ ಟಿಕೆಟ್ ಇರುವ ಈ ಉದ್ಯಾನವನ ಮಕ್ಕಳಿಗೆ ಆಟವಾಡಲು ಪ್ರಸಕ್ತವಾಗಿದೆ. ವಿಭಿನ್ನ ಗಿಡಮರಗಳು, ಆಟದ ಸಾಮಗ್ರಿಗಳು ಅಲ್ಲಿದ್ದು ಮಕ್ಕಳು ಆಡುತ್ತಿರುವಾಗ, ಹಿರಿಯರಿಗೆ ಗಂಟೆಗಟ್ಟಲೆ ವಿಶ್ರಾಂತಿ ಪಡೆಯಲು ಇದು ಉತ್ತಮ ಸ್ಥಳವೆನಿಸಿದೆ. ಪ್ರಶಾಂತವಾದ ಈ ಸ್ಥಳದಲ್ಲಿ ನೀವು ಧ್ಯಾನಸ್ಥರಾಗಬಹುದು. ಇನ್ನು ಸಾವಂದಿ ವೀರಭದ್ರೇಶ್ವರದೇವಾಲಯ ಮತ್ತು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿದ್ದರೆ ನಂದಿ ದೇವಾಲಯವು ಬೆಟ್ಟದ ತುತ್ತತುದಿಯಲ್ಲಿದೆ.

ನಾನು ಬೈಕಿನಲ್ಲಿ ಬೆಟ್ಟ ತಲುಪಿದೊಡನೆ ಅನ್ನಿಸಿದ್ದು ಇಷ್ಟ ದೊಡ್ಡ ಬೆಟ್ಟವನ್ನು ಹತ್ತಲು ಸಾಧ್ಯವೇ ಎಂದು. ಪಶ್ಚಿಮ ದಿಕ್ಕಿನಿಂದ ಅದು ನೇರಕ್ಕೆ ಬೃಹತ್ ಆಕಾರದಲ್ಲಿ ಕಾಣುತ್ತದೆ. ಇನ್ನು ಸ್ವಲ್ಪ ಹೊತ್ತು ಸುಧಾರಿಸಿಕೊಂಡು, ಮೆಟ್ಟಿಲುಗಳಿಲ್ಲದ ಈ ಬೆಟ್ಟ ಹತ್ತಲು ಆರಂಭಿಸಿದೆ. ಮಾರ್ಗ ತಪ್ಪದಂತೆ ಗುರುತಿನ ಚಿಹ್ನೆಗಳನ್ನು ಹಾಕಲಾಗಿದೆ. ಅವನ್ನು ಅನುಸರಿಸಿಕೊಂಡು ಏರುತ್ತಿದ್ದರೆ ದಾರಿ ಸಾಗುವುದೇ ಇಲ್ಲ. ಒಂದಷ್ಟು ದೂರ ಬೆಟ್ಟ ಹತ್ತಿ ಸುಸ್ತಾಗಿ ಕುಳಿತುಕೊಂಡರೆ ವಿಶಾಲ ಕಾಡು ಗೋಚರಿಸುತ್ತದೆ. ಮತ್ತಷ್ಟು ಹತ್ತಿದರೆ 400-500 ವರ್ಷ ಹಳೆಯ ಕೋಟೆಯೊಂದು ಪ್ರತ್ಯಕ್ಷವಾಗುತ್ತದೆ. ಅಲ್ಲಿಗೆ ಒಂದು ಬೆಟ್ಟ ಮುಕ್ತಾಯವಾಗಿ, ಅಲ್ಲಿಂದ ನಂದಿ ವಿಗ್ರಹವಿರುದ ದೊಡ್ಡ ಬೆಟ್ಟಕ್ಕೆ ದಾರಿಯಿದೆ.

ಆಗಾಗ ವಿಶ್ರಾಂತಿ ಪಡೆದು ಬೆಟ್ಟ ಹತ್ತುವುದು ಸುಲಭವಾದೀತು. ವೃತ್ತಿಪರ ಚಾರಣಿಗರು ಸರಸರನೇ ಬೆಟ್ಟ ಏರಬಹುದು. ಸಾಮಾನ್ಯವಾಗಿ ಪೂರ್ತಿ ಬೆಟ್ಟ ಹತ್ತಲು ಒಂದೂವರೆಯಿಂದ-ಎರಡು ಗಂಟೆಗಳ ಸಮಯ ಬೇಕು. ಕಷ್ಟಪಟ್ಟು ಬೆಟ್ಟ ಪೂರ್ತಿ ಹತ್ತಿದ ಮೇಲಂತೂ ಸುತ್ತಲಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುವುದು ವಿಶಿಷ್ಟ ಅನುಭವವೆಂದು ಬೆಟ್ಟ ಹತ್ತಿರುವವರು ಹೇಳುತ್ತಾರೆ. ನಾನಂತೂ ಮೊದಲ ಬಾರಿಗೆ ಪೂರ್ತಿ ಬೆಟ್ಟ ಹತ್ತಲು ಹೋಗಲಿಲ್ಲ. ಏಕೆಂದರೆ ಬೆಟ್ಟ ಹತ್ತಲು ಬೇಕಿರುವಷ್ಟು ಶಕ್ತಿ ಇಳಿಯಲೂ ಬೇಕಿರುತ್ತದೆ. ಹಾಗಾಗಿ ತೀರಾ ಸುಸ್ತಾಗುವುದು ಬೇಡ ಎಂದು ಈ ಮೊದಲ ಚಾರಣದಲ್ಲಿ, ಬೆಟ್ಟದ ಕೋಟೆಯವರೆಗೆ ಹತ್ತಿ ವಿಶ್ರಾಂತಿಗೆ ಮುಂದಾದೆ.

ಮನೆಮಂದಿಯೆಲ್ಲ ಬೆಟ್ಟ ಹತ್ತುವುದು ಹೆಚ್ಚಿನ ಖುಷಿ ಕೊಡುತ್ತದೆ. ಎಷ್ಟು ಸಾಧ್ಯವೋ ಅಷ್ಟು ಮೇಲೇರಿ ಒಟ್ಟಿಗೆ ಊಟ ಮಾಡಿ, ವಿಶ್ರಾಂತಿ ತೆಗೆದುಕೊಂಡು ಕೆಳಗಿಳಿಯಬಹುದು. ಬೆಟ್ಟದ ಮೇಲೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾದ್ದರಿಂದ ತಿಂಡಿ ಜೊತೆಗೆ ಹೆಚ್ಚು ನೀರು ಒಯ್ಯುವುದು ಕಡ್ಡಾಯ.

ಚಳಿಗಾಲದಲ್ಲಿ ಮಂಜಿನ ಮುಸುಕು ಹೊದ್ದು ಕಂಗೊಳಿಸುವ ಈ ಬೆಟ್ಟದ ತುದಿಯಲ್ಲಿ, ಮಧ್ಯಾಹ್ನ ನಿಂತು ನೋಡಿದರೆ ಮೋಡಗಳು ಇರದಿದ್ದಲ್ಲಿ ಸುತ್ತಲಿನ ಹಲವಾರು ಕೆರೆ ಮತ್ತು ಬೆಟ್ಟಗಳು ಕಾಣಸಿಗುತ್ತವೆ. ಸಾವನದುರ್ಗ ಕಾಡಿನ ಮನೋಹರ ದೃಶ್ಯ ಕಾಣುತ್ತದೆ.

ಸಾವಂಡಿ, ಸಾಮಂತದುರ್ಗ, ಸಾವಿನ ದುರ್ಗ ಎಂದೆಲ್ಲಾ ಕರೆಯಲ್ಪಡುತ್ತಿದ್ದ ಈ ಊರನ್ನು ಹಲವು ರಾಜರು ವಶಪಡಿಸಿಕೊಂಡು ಆಳಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಇದರ ಬಳಿ ಇರುವ ಮಾಗಡಿಯನ್ನು ಕೆಂಪೇಗೌಡರು ಸೇರಿದಂತೆ ಹಲವರು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಟಿಪ್ಪು ಸುಲ್ತಾನ್, ಮೈಸೂರು ಒಡೆಯರು, ಬ್ರಿಟಿಷರು ನಂತರ ಇದನ್ನು ವಶಪಡಿಸಿಕೊಂಡಿದ್ದರು. ಈಗ ಸರ್ಕಾರ ಈ ಕಾಡನ್ನು ರಕ್ಷಿಸುವ ಹೊಣೆ ಹೊತ್ತುಕೊಂಡಿದೆ.

ದಾರಿಯಲ್ಲಿ ಸಿಗುವ ದೊಡ್ಡ ಆಲದ ಮರ ಮಂಚನಬೆಲೆ ಅಣೆಕಟ್ಟಿನ ಆಕರ್ಷಣೆಯ ಜೊತೆಗೆ, ದಾರಿಯುದ್ದಕ್ಕೂ ಘಮ ಘಮ ಫಿಶ್ ಫ್ರೈ ಮಾಡಿಕೊಡುವ ಸಾಲು-ಸಾಲು ಅಂಗಡಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತವೆ. ಮೀನಿನ ರುಚಿ ಸವಿಯುವುದನ್ನು ಮರೆಯದಿರಿ.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...