Homeಅಂಕಣಗಳುಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

ಮುತ್ತು ಸುತ್ತು; ಸಾವನದುರ್ಗ: ಪ್ರಪಂಚದ ಅತಿದೊಡ್ಡ ಏಕಶಿಲಾ ಬೆಟ್ಟವಿದು, ಶಕ್ತಿಯಿದ್ದಷ್ಟು ಹತ್ತಿ ನೋಡ!

- Advertisement -
- Advertisement -

ಪ್ರವಾಸ ಬಹುತೇಕ ಎಲ್ಲರಿಗೂ ಇಷ್ಟ. ಪ್ರತಿ ಪ್ರವಾಸತಾಣಕ್ಕೂ ತನ್ನದೇ ಆದ ವಿಭಿನ್ನತೆ ಮತ್ತು ವಿಶಿಷ್ಟತೆ ಇರುತ್ತದೆ. ಕೆಲವರಿಗೆ ಸಮುದ್ರ ತೀರ ಇಷ್ಟವಾದರೆ ಇನ್ನು ಕೆಲವರಿಗೆ ದೇವಸ್ಥಾನಗಳ ಬಗ್ಗೆ ಒಲವು. ನದಿಗಳು, ಅಣೆಕಟ್ಟೆಗಳು, ಮ್ಯೂಸಿಯಂಗಳು, ಮಂಜು ಬೀಳುವ ಪ್ರದೇಶ, ಬೆಟ್ಟಗುಡ್ಡಗಳು, ಹಿಮಗುಡ್ಡೆ ಹೀಗೆ ಒಬ್ಬೊಬ್ಬರಿಗೂ ತಮ್ಮದೇ ಆಯ್ಕೆಯ ನೆಚ್ಚಿನ ತಾಣಗಳು ಇರುತ್ತವೆ. ಚಾರಣ (ಟ್ರೆಕ್ಕಿಂಗ್) ಕೆಲವರಿಗೆ ಪ್ರೀತಿಪಾತ್ರವಾದರೆ ಮತ್ತೆ ಕೆಲವರಿಗೆ ಬಲು ಕಷ್ಟದ್ದು. ಸಾಹಸಿ ಚಾರಣಿಗರಿಗೆ ಹೇಳಿಮಾಡಿಸಿದ ಜಾಗ ಸಾವನದುರ್ಗ ಬೆಟ್ಟ. ಸಾಹಸಿಗಳು ಮಾತ್ರವಲ್ಲ, ನೀವೆಲ್ಲರೂ ಕೂಡ ನಿಮ್ಮ ಶಕ್ತ್ಯಾನುಸಾರ ಈ ಬೆಟ್ಟ ಹತ್ತಿ ಸಂಭ್ರಮಿಸಬಹುದು. ಆರೋಗ್ಯಕ್ಕೂ ಇದು ಒಳ್ಳೆಯದು. ನಿಮಗೆ ಬೆಟ್ಟ ಹತ್ತುವುದು ಕಷ್ಟ ಮತ್ತು ತೀವ್ರ ತ್ರಾಸದಾಯಕ ಎನಿಸಿದರೆ ತಪ್ಪಿಸಿಕೊಳ್ಳಬೇಕಾದ ದೊಡ್ಡ ಬೆಟ್ಟ ಇದು ಸಾವನದುರ್ಗ.

ಬೆಂಗಳೂರಿನಿಂದ 46 ಕಿ.ಮೀ ದೂರವಿರುವ, ಒಂದು ದಿನದಲ್ಲಿ ಹೋಗಿಬರಬಹುದಾದ ಸ್ಥಳಗಳ ಪಟ್ಟಿಗೆ ಸಾವನದುರ್ಗ ಸೇರುತ್ತದೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಈ ಏಕಶಿಲಾ ಬೆಟ್ಟ ಸಮುದ್ರ ಮಟ್ಟದಿಂದ 1226 ಮೀಟರ್ ಎತ್ತರದಲ್ಲಿದೆ. ಬೆಂಗಳೂರಿನಿಂದ ಮಾಗಡಿ ರಸ್ತೆ ಮಾರ್ಗವಾಗಿ ಹೊರಟು, ದೊಡ್ಡ ಆಲದಮರ-ಮಂಚನಬೆಲೆ ಡ್ಯಾಂ ಮಾರ್ಗವಾಗಿ ಸಾವನದುರ್ಗ ತಲುಪಬಹುದು. ನೀವು ಮಂಚನಬೆಲೆ ಅಣೆಕಟ್ಟು ಮಾರ್ಗವಾಗಿ ಹೋದರೆ, ದೊಡ್ಡ ಆಲದಮರ, ಮಂಚನಬೆಲೆ ಅಣೆಕಟ್ಟು ನೋಡುವುದರ ಜೊತೆಗೆ ನಿರ್ಜನ ಕಾನನದ ನಿಶಬ್ದವನ್ನು ಅನುಭವಿಸಬಹುದು. ಕಾರು-ಬೈಕ್‌ನಲ್ಲಿ ಬೆಟ್ಟದ ದಡ ತಲುಪಲು ಒಂದೂವರೆ ಗಂಟೆ ಸಾಕು.

ನೀವು ದಟ್ಟಕಾನನದ ನಡುವಿನ ಸಾವನದುರ್ಗ ಬೆಟ್ಟ ತಲುಪಿದೊಡನೆಯೇ ವಿಸ್ತಾರವಾದ ಉದ್ಯಾನವನವೊಂದು ನಿಮ್ಮನ್ನು ಸ್ವಾಗತಿಸುತ್ತದೆ. ಕೇವಲ 10 ರೂ ಟಿಕೆಟ್ ಇರುವ ಈ ಉದ್ಯಾನವನ ಮಕ್ಕಳಿಗೆ ಆಟವಾಡಲು ಪ್ರಸಕ್ತವಾಗಿದೆ. ವಿಭಿನ್ನ ಗಿಡಮರಗಳು, ಆಟದ ಸಾಮಗ್ರಿಗಳು ಅಲ್ಲಿದ್ದು ಮಕ್ಕಳು ಆಡುತ್ತಿರುವಾಗ, ಹಿರಿಯರಿಗೆ ಗಂಟೆಗಟ್ಟಲೆ ವಿಶ್ರಾಂತಿ ಪಡೆಯಲು ಇದು ಉತ್ತಮ ಸ್ಥಳವೆನಿಸಿದೆ. ಪ್ರಶಾಂತವಾದ ಈ ಸ್ಥಳದಲ್ಲಿ ನೀವು ಧ್ಯಾನಸ್ಥರಾಗಬಹುದು. ಇನ್ನು ಸಾವಂದಿ ವೀರಭದ್ರೇಶ್ವರದೇವಾಲಯ ಮತ್ತು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿದೇವಾಲಯಗಳು ಬೆಟ್ಟದ ತಪ್ಪಲಿನಲ್ಲಿದ್ದರೆ ನಂದಿ ದೇವಾಲಯವು ಬೆಟ್ಟದ ತುತ್ತತುದಿಯಲ್ಲಿದೆ.

ನಾನು ಬೈಕಿನಲ್ಲಿ ಬೆಟ್ಟ ತಲುಪಿದೊಡನೆ ಅನ್ನಿಸಿದ್ದು ಇಷ್ಟ ದೊಡ್ಡ ಬೆಟ್ಟವನ್ನು ಹತ್ತಲು ಸಾಧ್ಯವೇ ಎಂದು. ಪಶ್ಚಿಮ ದಿಕ್ಕಿನಿಂದ ಅದು ನೇರಕ್ಕೆ ಬೃಹತ್ ಆಕಾರದಲ್ಲಿ ಕಾಣುತ್ತದೆ. ಇನ್ನು ಸ್ವಲ್ಪ ಹೊತ್ತು ಸುಧಾರಿಸಿಕೊಂಡು, ಮೆಟ್ಟಿಲುಗಳಿಲ್ಲದ ಈ ಬೆಟ್ಟ ಹತ್ತಲು ಆರಂಭಿಸಿದೆ. ಮಾರ್ಗ ತಪ್ಪದಂತೆ ಗುರುತಿನ ಚಿಹ್ನೆಗಳನ್ನು ಹಾಕಲಾಗಿದೆ. ಅವನ್ನು ಅನುಸರಿಸಿಕೊಂಡು ಏರುತ್ತಿದ್ದರೆ ದಾರಿ ಸಾಗುವುದೇ ಇಲ್ಲ. ಒಂದಷ್ಟು ದೂರ ಬೆಟ್ಟ ಹತ್ತಿ ಸುಸ್ತಾಗಿ ಕುಳಿತುಕೊಂಡರೆ ವಿಶಾಲ ಕಾಡು ಗೋಚರಿಸುತ್ತದೆ. ಮತ್ತಷ್ಟು ಹತ್ತಿದರೆ 400-500 ವರ್ಷ ಹಳೆಯ ಕೋಟೆಯೊಂದು ಪ್ರತ್ಯಕ್ಷವಾಗುತ್ತದೆ. ಅಲ್ಲಿಗೆ ಒಂದು ಬೆಟ್ಟ ಮುಕ್ತಾಯವಾಗಿ, ಅಲ್ಲಿಂದ ನಂದಿ ವಿಗ್ರಹವಿರುದ ದೊಡ್ಡ ಬೆಟ್ಟಕ್ಕೆ ದಾರಿಯಿದೆ.

ಆಗಾಗ ವಿಶ್ರಾಂತಿ ಪಡೆದು ಬೆಟ್ಟ ಹತ್ತುವುದು ಸುಲಭವಾದೀತು. ವೃತ್ತಿಪರ ಚಾರಣಿಗರು ಸರಸರನೇ ಬೆಟ್ಟ ಏರಬಹುದು. ಸಾಮಾನ್ಯವಾಗಿ ಪೂರ್ತಿ ಬೆಟ್ಟ ಹತ್ತಲು ಒಂದೂವರೆಯಿಂದ-ಎರಡು ಗಂಟೆಗಳ ಸಮಯ ಬೇಕು. ಕಷ್ಟಪಟ್ಟು ಬೆಟ್ಟ ಪೂರ್ತಿ ಹತ್ತಿದ ಮೇಲಂತೂ ಸುತ್ತಲಿನ ವಿಹಂಗಮ ನೋಟವನ್ನು ಕಣ್ತುಂಬಿಕೊಳ್ಳುವುದು ವಿಶಿಷ್ಟ ಅನುಭವವೆಂದು ಬೆಟ್ಟ ಹತ್ತಿರುವವರು ಹೇಳುತ್ತಾರೆ. ನಾನಂತೂ ಮೊದಲ ಬಾರಿಗೆ ಪೂರ್ತಿ ಬೆಟ್ಟ ಹತ್ತಲು ಹೋಗಲಿಲ್ಲ. ಏಕೆಂದರೆ ಬೆಟ್ಟ ಹತ್ತಲು ಬೇಕಿರುವಷ್ಟು ಶಕ್ತಿ ಇಳಿಯಲೂ ಬೇಕಿರುತ್ತದೆ. ಹಾಗಾಗಿ ತೀರಾ ಸುಸ್ತಾಗುವುದು ಬೇಡ ಎಂದು ಈ ಮೊದಲ ಚಾರಣದಲ್ಲಿ, ಬೆಟ್ಟದ ಕೋಟೆಯವರೆಗೆ ಹತ್ತಿ ವಿಶ್ರಾಂತಿಗೆ ಮುಂದಾದೆ.

ಮನೆಮಂದಿಯೆಲ್ಲ ಬೆಟ್ಟ ಹತ್ತುವುದು ಹೆಚ್ಚಿನ ಖುಷಿ ಕೊಡುತ್ತದೆ. ಎಷ್ಟು ಸಾಧ್ಯವೋ ಅಷ್ಟು ಮೇಲೇರಿ ಒಟ್ಟಿಗೆ ಊಟ ಮಾಡಿ, ವಿಶ್ರಾಂತಿ ತೆಗೆದುಕೊಂಡು ಕೆಳಗಿಳಿಯಬಹುದು. ಬೆಟ್ಟದ ಮೇಲೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾದ್ದರಿಂದ ತಿಂಡಿ ಜೊತೆಗೆ ಹೆಚ್ಚು ನೀರು ಒಯ್ಯುವುದು ಕಡ್ಡಾಯ.

ಚಳಿಗಾಲದಲ್ಲಿ ಮಂಜಿನ ಮುಸುಕು ಹೊದ್ದು ಕಂಗೊಳಿಸುವ ಈ ಬೆಟ್ಟದ ತುದಿಯಲ್ಲಿ, ಮಧ್ಯಾಹ್ನ ನಿಂತು ನೋಡಿದರೆ ಮೋಡಗಳು ಇರದಿದ್ದಲ್ಲಿ ಸುತ್ತಲಿನ ಹಲವಾರು ಕೆರೆ ಮತ್ತು ಬೆಟ್ಟಗಳು ಕಾಣಸಿಗುತ್ತವೆ. ಸಾವನದುರ್ಗ ಕಾಡಿನ ಮನೋಹರ ದೃಶ್ಯ ಕಾಣುತ್ತದೆ.

ಸಾವಂಡಿ, ಸಾಮಂತದುರ್ಗ, ಸಾವಿನ ದುರ್ಗ ಎಂದೆಲ್ಲಾ ಕರೆಯಲ್ಪಡುತ್ತಿದ್ದ ಈ ಊರನ್ನು ಹಲವು ರಾಜರು ವಶಪಡಿಸಿಕೊಂಡು ಆಳಿದ್ದಾರೆ ಎಂದು ಇತಿಹಾಸ ಹೇಳುತ್ತದೆ. ಇದರ ಬಳಿ ಇರುವ ಮಾಗಡಿಯನ್ನು ಕೆಂಪೇಗೌಡರು ಸೇರಿದಂತೆ ಹಲವರು ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಟಿಪ್ಪು ಸುಲ್ತಾನ್, ಮೈಸೂರು ಒಡೆಯರು, ಬ್ರಿಟಿಷರು ನಂತರ ಇದನ್ನು ವಶಪಡಿಸಿಕೊಂಡಿದ್ದರು. ಈಗ ಸರ್ಕಾರ ಈ ಕಾಡನ್ನು ರಕ್ಷಿಸುವ ಹೊಣೆ ಹೊತ್ತುಕೊಂಡಿದೆ.

ದಾರಿಯಲ್ಲಿ ಸಿಗುವ ದೊಡ್ಡ ಆಲದ ಮರ ಮಂಚನಬೆಲೆ ಅಣೆಕಟ್ಟಿನ ಆಕರ್ಷಣೆಯ ಜೊತೆಗೆ, ದಾರಿಯುದ್ದಕ್ಕೂ ಘಮ ಘಮ ಫಿಶ್ ಫ್ರೈ ಮಾಡಿಕೊಡುವ ಸಾಲು-ಸಾಲು ಅಂಗಡಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತವೆ. ಮೀನಿನ ರುಚಿ ಸವಿಯುವುದನ್ನು ಮರೆಯದಿರಿ.


ಇದನ್ನೂ ಓದಿ: ಮುತ್ತು ಸುತ್ತು: ಟಿಪ್ಪುವಿನ ಪ್ರಸ್ತುತ ಸ್ಥಿತಿ ಸಾರುವ ನಂದಿಬೆಟ್ಟಕ್ಕೊಮ್ಮೆ ಹೋಗಿಬನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...