Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...