Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...