Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...