Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...