Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...