Homeಕ್ರೀಡೆಕ್ರಿಕೆಟ್ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ...

ಒಂದು ನೋಬಾಲ್ ಕಥೆ: ಕೊಹ್ಲಿ ಫ್ರೀ ಹಿಟ್ ಬಾಲ್‌ನಲ್ಲಿ ಬೌಲ್ಡ್ ಆಗಿ ಬೈಸ್ ರನ್ ಪಡೆದುದರ ಕುರಿತು ಮುಗಿಯದ ಚರ್ಚೆ

- Advertisement -
- Advertisement -

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಗಾದೆ ಮಾತಿನಂತೆ ಟಿ20 ವಿಶ್ವಕಪ್ ಕ್ರಿಕೆಟ್‌ನ ಭಾರತ-ಪಾಕಿಸ್ತಾನ ಎದುರಿನ ಸೂಪರ್ 12 ಹಂತದ ಪಂದ್ಯ ಮುಗಿದರೂ ಅದರ ಕುರಿತ ಚರ್ಚೆಗಳು ಮಾತ್ರ ನಿಂತಿಲ್ಲ. ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದ ಆ ಪಂದ್ಯ ಕೊನೆಯ ಓವರ್‌ನ ಕೊನೆಯ ಬಾಲ್‌ವರೆಗೂ ಸಾಗಿ ಅಂತಿಮವಾಗಿ ಭಾರತ ತಂಡ ಗೆಲುವಿನ ನಗೆ ಬೀರಿತು. ಕೊನೆಯ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಎಸೆದ ನೋಬಾಲ್ ಒಂದು ಇಡೀ ಪಂದ್ಯದ ದಿಕ್ಕು ಬದಲಿಸಿಬಿಟ್ಟಿತು. ಆದರೆ ಪಾಕಿಸ್ತಾನ ತಂಡವು ಅದು ನೋಬಾಲ್ ಅಲ್ಲವೆಂದು ವಾದಿಸಿತು. ಅಷ್ಟು ಮಾತ್ರವಲ್ಲದೆ ನೋಬಾಲ್ ಕಾರಣಕ್ಕೆ ನೀಡಲಾದ ಫ್ರೀ ಹಿಟ್‌ನಲ್ಲಿ ಕೊಹ್ಲಿ ಬೌಲ್ಡ್ ಆದ ನಂತರ ಬೈಸ್ ರೂಪದಲ್ಲಿ ಮೂರು ರನ್ ಓಡಿದರು. ಅದನ್ನು ಡೆಡ್ ಬಾಲ್ ಎಂದು ಪರಿಗಣಿಸಬೇಕು ಮತ್ತು ಬೈಸ್‌ ರನ್ ನೀಡಬಾರದು ಎಂದು ಪಾಕ್ ಆಟಗಾರರು ವಾದಿಸಿದರೂ ಅಂಪೈರ್ ಪುರಸ್ಕರಿಸಲಿಲ್ಲ. ಈ ಕುರಿತು ಚರ್ಚೆಗಳು ಮುಂದುವರೆದಿವೆ.

ನಿಯಮಗಳ ಪ್ರಕಾರ ಫ್ರಿಹಿಟ್ ಬಾಲ್‌ನಲ್ಲಿ ರನ್‌ ಔಟ್ ಹೊರತುಪಡಿಸಿ ಉಳಿದ ಔಟ್‌ಗಳಿಗೆ ಅವಕಾಶವಿಲ್ಲ. ಅದೇ ರೀತಿ ಬೌಲ್ಡ್ ಆದಾಗ ಬಾಲ್ ಚಲನೆಯಲ್ಲಿರುವವರೆಗೂ ರನ್ ಗಳಿಸುವ ಅವಕಾಶವಿದೆ ಎಂದು ಐಸಿಸಿ ನಿಯಮಗಳು ಹೇಳುತ್ತವೆ. ಈ ವಿಷಯದ ಕುರಿತು ತಜ್ಞ ಅಂಪೈರ್ ಎಂದು ಖ್ಯಾತಿ ಪಡೆದ ಸೈಮನ್ ಟಫೆಲ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ರಾತ್ರಿ ಎಂಸಿಜಿಯಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ರೋಚಕ ಕ್ಲೈಮ್ಯಾಕ್ಸ್ ನಂತರ “ಕೊಹ್ಲಿ ಫ್ರೀ ಹಿಟ್‌ನಲ್ಲಿ ಬೌಲ್ಡ್ ಆದಾಗ ಭಾರತ ಗಳಿಸಿದ ಬೈಸ್ ರನ್‌ಗಳ ಕುರಿತು ವಿವರಿಸಲು ಅನೇಕರು ನನ್ನನ್ನು ಕೇಳಿದ್ದಾರೆ” ಎಂದು ಸೈಮನ್ ಟೌಫೆಲ್ ಲಿಂಕ್ಡ್‌ಇನ್‌ನಲ್ಲಿ ಬರೆದಿದ್ದಾರೆ.

“ಐಸಿಸಿ ನಿಯಮಗಳ ಪ್ರಕಾರ ಆ ಪಂದ್ಯದಲ್ಲಿ ಸ್ಟಂಪ್‌ಗೆ ಬಡಿದ ಬಾಲ್ ಥರ್ಡ್ ಮ್ಯಾನ್‌ ಕಡೆ ಚಲಿಸಿತು. ಆಗ ಬ್ಯಾಟರ್‌ಗಳು ಮೂರು ರನ್ ಗಳಿಸಿದಾಗ ಬೈ ಸಿಗ್ನಲ್ ನೀಡಿದ ಅಂಪೈರ್ ನಿರ್ಧಾರ ಸರಿಯಾಗಿದೆ. ಫ್ರೀ ಹಿಟ್‌ ಬಾಲ್‌ನಲ್ಲಿ ಸ್ಟ್ರೈಕರ್ ಬೌಲ್ಡ್ ಆಗಲು ಸಾಧ್ಯವಿಲ್ಲ. ಆದ್ದರಿಂದ ಅದು ಡೆಡ್ ಬಾಲ್ ಅಲ್ಲ. ಬಾಲ್ ಇನ್ನೂ ಆಟದಲ್ಲಿದ್ದರಿಮದ ಬೈಸ್‌ ನೀಡುವುದು ನಿಯಮಗಳ ಅಡಿ ಸರಿಯಾದ ಕ್ರಮವಾಗಿದೆ” ಎಂದು ಅವರು ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಆ ಒಂದು ನೋಬಾಲ್‌ನಿಂದಾಗಿ ಸಾಕಷ್ಟು ಚರ್ಚೆಗಳು ನಡೆದವು ಮತ್ತು ಪಾಕ್ ಆ ಪಂದ್ಯವನ್ನು ಕಳೆದುಕೊಂಡಿತು. ಇಲ್ಲದಿದ್ದಲ್ಲಿ ವಿರಾಟ್ ಕೊಹ್ಲಿಯವರು ಬೌಲ್ಡ್ ಆದದ್ದು ಆನಂತರ ಮೂರು ರನ್ ಬೈಸ್ ರೂಪದಲ್ಲಿ ಸಿಕ್ಕಿದ್ದು ಸಾಧ್ಯವಾಗುತ್ತಿರಲಿಲ್ಲ. ಒಟ್ಟಿನಲ್ಲಿ ಆ ಪಂದ್ಯ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತು. ಹಾಗಾಗಿಯೇ ಆಸ್ಟ್ರೇಲಿಯಾದ ಆಟಗಾರ ಮಿಷೆಲ್ ಮಾರ್ಶ್ “ಇಲ್ಲಿಗೆ ವಿಶ್ವಕಪ್ ಟೂರ್ನಿ ನಿಲ್ಲಿಸಿ ಬಿಡೋಣ. ಏಕೆಂದರೆ ಪಾಕ್-ಭಾರತ ಪಂದ್ಯಕ್ಕಿಂತ ಹೆಚ್ಚಿನ ಮನರಂಜನೆ ನೀಡಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: ಟಿ20 ವಿಶ್ವಕಪ್ ಕ್ರಿಕೆಟ್: ಭಾರತಕ್ಕೆ ಪಾಕ್ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಕೊನೆಯ 8 ಎಸೆತಗಳು ಹೀಗಿದ್ದವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...