Homeಮುಖಪುಟ’ಅಕ್ರಮ ವಿದೇಶಿ’ ಹೆಸರಲ್ಲಿ ಒಂದೂವರೆ ವರ್ಷ ಬಂಧನ: ಕೊನೆಗೂ ಭಾರತೀಯರು ಎಂದು ಒಪ್ಪಿಕೊಂಡ ಸರ್ಕಾರ

’ಅಕ್ರಮ ವಿದೇಶಿ’ ಹೆಸರಲ್ಲಿ ಒಂದೂವರೆ ವರ್ಷ ಬಂಧನ: ಕೊನೆಗೂ ಭಾರತೀಯರು ಎಂದು ಒಪ್ಪಿಕೊಂಡ ಸರ್ಕಾರ

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಎಂಬ ಸೇಡು-ದ್ವೇಷದ ಮತ್ತು ರಾಜಕೀಯ ಲಾಭದ ಆಟದಲ್ಲಿ ಲಕ್ಷಾಂತರ ಜನ ಇಂದಿಗೂ ಏದುಸಿರು ಬಿಡುತ್ತಿದ್ದಾರೆ.

- Advertisement -
- Advertisement -

ಅಕ್ರಮ ವಿದೇಶಿಯರು ಎಂದು ಅಸ್ಸಾಂನ ಈ ದಂಪತಿಯನ್ನು ಬಂಧಿಸಿ ಬಂಧನ ಕೇಂದ್ರಕ್ಕೆ ಸೇರಿಸಲಾಗಿತ್ತು. ಎನ್‌ಆರ್‌ಸಿ ಹೆಸರಲ್ಲಿ ಅಸ್ಸಾಂನಲ್ಲಿ ನಡೆದ ದಬ್ಬಾಳಿಕೆಗೆ ಸಾಂಕೇತಿಕದಂತಿದೆ ಈ ಪ್ರಕರಣ. ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಬಂಧನ ಕೇಂದ್ರ(ಡಿಟೆನ್ಸನ್ ಸೆಂಟರ್)ದಲ್ಲಿ ಕಳೆದ ಈ ದಂಪತಿ ಈಗ ತಾವು ಭಾರತೀಯರು ಎಂದು ಪ್ರೂವ್ ಮಾಡಿ ನಿರಾಳರಾಗಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಎಂಬ ಸೇಡು-ದ್ವೇಷದ ಮತ್ತು ರಾಜಕೀಯ ಲಾಭದ ಆಟದಲ್ಲಿ ಲಕ್ಷಾಂತರ ಜನ ಇಂದಿಗೂ ಏದುಸಿರು ಬಿಡುತ್ತಿದ್ದಾರೆ.

’ನಮ್ಮನ್ನು ಅಕ್ರಮ ವಲಸೆಗಾರರು ಎಂದು ನಿರ್ಧರಿಸಿದ್ದರು. ಅದು ಹೇಗೆ ಸಾಧ್ಯ?’ ಎಂಬ ಈ ದಂಪತಿಯ ಪ್ರಶ್ನೆಗೆ ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಬಳಿ ಯಾವ ಉತ್ತರವೂ ಇಲ್ಲ. ಮೊಹಮ್ಮದ್ ನೂರ್ ಹುಸೇನ್ (34) ಮತ್ತು ಶಹೀರಾ ಬೇಗಂ(26) ದಂಪತಿ ಕತೆಯಿದು. ಇವರ ಬಂಧನದ ನಂತರ, ಅವರ ಇಬ್ಬರು ಪುಟ್ಟ ಮಕ್ಕಳಿಗೆ ಆಶ್ರಯವಿಲ್ಲದೇ ಅವರೂ ಡಿಟೆನ್ಸನ್ ಸೆಂಟರ್‌ನಲ್ಲಿ ಕಳೆಯಬೇಕಾಯಿತು. ಇದೀಗ ವಿದೇಶಿಯರ ನ್ಯಾಯಮಂಡಳಿ (ಫಾರೆನರ್‍ಸ್ ಟ್ರಿಬುನಲ್) ಇವರನ್ನು ಭಾರತೀಯರು ಎಂದು ಘೋಷಿಸಿದೆ.

’ನಾವು ಹೆಮ್ಮೆಯ ಭಾರತೀಯರು. ಅಸ್ಸಾಂನವರು. ಅಕ್ರಮವಾಗಿ ಗಡಿ ದಾಟಿದ ಬಾಂಗ್ಲಾದೇಶಿಯರು ಎಂದು ನಮ್ಮನ್ನು ಬಂಧಿಸಿ ಕೊಳೆ ಹಾಕಿದರು. ಇದೆಲ್ಲ ಹೇಗೆ ಸಾಧ್ಯ? ನಾನು ಅಸ್ಸಾಂನಲ್ಲೇ ಜನಿಸಿದವನು’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಎದುರು ತಮ್ಮ ನೋವು-ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಹುಸೇನ್. ಅಸ್ಸಾಂನ ಉದುಲ್‌ಗಿರಿ ಜಿಲ್ಲೆಯ ಲಾಲ್‌ಡಂಗ್ ಗ್ರಾಮದ ಹುಸೇನ್ ಗುವಾಹತಿಯಲ್ಲಿ ರಿಕ್ಷಾ ಎಳೆಯುವ ಕೆಲಸ ಮಾಡುತ್ತಾರೆ. ಹುಸೇನ್‌ರ ಅಜ್ಜ-ಅಜ್ಜಿಯರ ಹೆಸರು 1951 ರ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯಲ್ಲಿದೆ. ಹುಸೇನ್ ತಂದೆಯ ಹೆಸರು (ಹುಸೇನ್ ಅಜ್ಜ-ಅಜ್ಜಿಯರ ಹೆಸರಿನ ಸಮೇತ) 1965 ರ ಮತದಾರರ ಪಟ್ಟಿಯಲ್ಲಿದೆ.

ಇದನ್ನೂ ಓದಿ: ಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

ಹುಸೇನ್ ಪತ್ನಿ ಬೇಗಂ ತಂದೆಯ ಹೆಸರು ಕೂಡ 1951 ರ ಎನ್‌ಆರ್‌ಸಿ ಮತ್ತು 1966 ರ ಮತದಾರರ ಪಟ್ಟಿಯಲ್ಲಿದೆ, ಜೊತೆಗೆ ಕುಟುಂಬದ ಬಳಿ 1958-59 ರ ದಿನಾಂಕಗಳಿರುವ ಭೂ ದಾಖಲೆಗಳು ಇವೆ. ಭಾರತೀಯನೆಂದು ಗುರುತಿಸಲು ಅಸ್ಸಾಂನಲ್ಲಿ ಕಟ್ ಆಫ್ ದಿನಾಂಕ ಮಾರ್ಚ್ 24-1971.
ಇಷ್ಟಿದ್ದರೂ, 2017 ರಲ್ಲಿ ಈ ದಂಪತಿಯ ಭಾರತೀಯತೆಯ ರುಜುವಾತುಗಳನ್ನು ತನಿಖೆ ಮಾಡತೊಡಗಿದ ಗುವಾಹತಿ ಪೊಕೀಸರಿಗೆ ಮೇಲಿನ ಯಾವ ದಾಖಲೆಗಳೂ ಮೌಲ್ಯಯುತ ಅನಿಸಲೇ ಇಲ್ಲ. 2017 ರ ಅಗಸ್ಟ್‌ನಲ್ಲಿ ಬೇಗಂ ಕೇಸನ್ನು ಮತ್ತು 2018 ರ ಜನವರಿಯಲ್ಲಿ ಹುಸೇನ್ ಕೇಸನ್ನು ಫಾರೆನರ್‍ಸ್ ಟ್ರಿಬುನಲ್‌ಗೆ ವರ್ಗಾಯಿಸಲಾಯಿತು. ಅಂದರೆ ಈ ದಂಪತಿ ತಮ್ಮನ್ನು ಭಾರತೀಯರು ಎಂದು ತಾವು ಪ್ರೂವ್ ಮಾಡಿಕೊಳ್ಳಬೇಕು.

’ಅನಕ್ಷರಸ್ಥರಾದ ನಮ್ಮಿಬ್ಬರಿಗೂ ಯಾವುದು ಯಾವುದರ ದಾಖಲೆ ಎಂದು ಗುರುತಿಸುವುದು ಗೊತ್ತಾಗಲಿಲ್ಲ ಮತ್ತು ಮುಂದೇನು ಮಾಡುವುದು ಎಂಬುದೂ ತಿಳಿಯಲಿಲ್ಲ’ ಎನ್ನುತ್ತಾರೆ ಹುಸೇನ್. ಹುಸೇನ್ 4 ಸಾವಿರ ರೂ. ಕೊಟ್ಟು ಒಬ್ಬ ಲಾಯರ್ ಪಡೆದರು. ಆದರೆ ಟ್ರಿಬುನಲ್‌ನಲ್ಲಿ ಅವರ ಪತ್ನಿ ಬೇಗಂ ಪ್ರತಿನಿಧಿಸಲು ಯಾರೂ ಇರಲಿಲ್ಲ. ಅಗಸ್ಟ್ 28-2018 ರಂದು ಕೇಸಿನಿಂದ ಹೊರ ನಡೆದ ಹುಸೇನ್ ಲಾಯರ್, ಮುಂದೆ ಸತತವಾಗಿ ಟ್ರಿಬುನಲ್ ವಿಚಾರಣೆಗೆ ಹಾಜರಾಗಲೇ ಇಲ್ಲ.

ಟ್ರಿಬುನಲ್ ನಲ್ಲಿ ೨ ಲಕ್ಷ ಕೇಸು ಇತ್ಯರ್ಥ. ಫಾರೆನರ್‍ಸ್ ಟ್ರಿಬುನಲ್ ಅರೆ ನ್ಯಾಯಾಂಗೀಯ ಮಂಡಳಿಗಳಾಗಿದ್ದು, ಒಬ್ಬ ವ್ಯಕ್ತಿ ’ಅಕ್ರಮ ವಿದೇಶಿಗ’ ಹೌದೋ ಅಲ್ಲವೋ ಎಂಬ ಅಭಿಪ್ರಾಯ ನೀಡುತ್ತವೆ. ರಾಜ್ಯ ಪೊಲೀಸರು ರೆಫರ್ ಮಾಡಿದ ಕೇಸುಗಳು ಮತ್ತು ಚುನಾವಣಾ ಅಧಿಕಾರಿಗಳು ’ಸಂದೇಹಿತ ಮತದಾರ’ ಎಂದು ಗುರುತಿಸಿದ ಕೇಸುಗಳನ್ನು ಟ್ರಿಬುನಲ್ ವಿಚಾರಣೆ ಮಾಡುತ್ತದೆ. 2020 ರ ಜುಲೈವರೆಗೆ 4.34 ಲಕ್ಷ ಕೇಸುಗಳ ಪೈಕಿ 2 ಲಕ್ಷ ಕೇಸುಗಳನ್ನು ಟ್ರಿಬುನಲ್ ಇತ್ಯರ್ಥ ಮಾಡಿದೆ.

“ಲಾಯರ್ ನನಗೆ ಹೇಳಿದ, ‘ನಿನ್ನಿಂದ ನನ್ನ ಫೀಸ್ ಭರಿಸಲಾಗಲ್ಲ. ಗುವಾಹತಿ ತೊರೆದು ಪರಾರಿಯಾಗು, ಇಲ್ಲವಾದರೆ ಪೊಲೀಸರು ನಿನ್ನನ್ನು ಬಂಧಿಸುತ್ತಾರೆ…..’ ಎಂದು. ಅದಕ್ಕೆ ನಾನು ಹೇಳಿದೆ, ‘ನಾನ್ಯಾಕೆ ಪರಾರಿಯಾಗಲಿ, ನಾನೇನು ತಪ್ಪು ಮಾಡಿರುವೆ’’ ಎಂದು ಹುಸೇನ್ ಅಂದಿನ ಸಂದಿಗ್ಧವನ್ನು ನೆನೆಯುತ್ತಾರೆ. ಮೇ 29-2019 ರಂದು ಟ್ರಿಬುನಲ್ ಬೇಂಗಂರನ್ನು ’ವಿದೇಶಿ’ ಎಂದು ಘೋಷಿಸಿತು. ಮರುವರ್ಷ ಮಾರ್ಚ್ 30 ರಂದು ಹುಸೇನ್‌ಗೂ ’ವಿದೇಶಿ’ ಪಟ್ಟವನ್ನು ಟ್ರಿಬುನಲ್ ಕಟ್ಟಿತು. ವಿದೇಶಿಯರ ಕಾಯ್ದೆ ಸೆಕ್ಷನ್ 9 ರ ಪ್ರಕಾರ, ಒಬ್ಬ ವ್ಯಕ್ತಿ ತಾನು ವಿದೇಶಿಯಲ್ಲ ಎಂದು ಪ್ರೂವ್ ಮಾಡುವ ಜವಾಬ್ದಾರಿ ಆತನ/ಆಕೆಯ ಮೇಲೆಯೇ ಇದೆ. ಹೀಗಾಗಿ ಟ್ರಿಬುನಲ್ ಮುಂದೆ ಹಾಜರಾಗದೇ ಇದ್ದರೆ ಆತ/ಆಕೆ ವಿದೇಶಿ ಎಂದು ನಿರ್ಧರಿತವಾಗಿ ಬಿಡುತ್ತದೆ! ಜೂನ್ 2019 ರಲ್ಲಿ ಈ ದಂಪತಿಯನ್ನು ಬಂಧಿಸಿ ಗೋಲ್ಪಾರಾ ಜಿಲ್ಲೆಯ ಡಿಟೆನ್ಸನ್ ಸೆಂಟರ್‌ಗೆ ತಳ್ಳಿದಾಗ, ಅವರಿಬ್ಬರ ಸುತ್ತಲಿನ ಜಗತ್ತೇ ಕುಸಿದು ಹೋದಂತಾಯಿತು.

ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

”ನಮ್ಮ ಸಂಬಂಧಿಕರು ದೂರದ ಹಳ್ಳಿಯಲ್ಲಿದ್ದ ಕಾರಣ ಮಕ್ಕಳ ಪಾಲನೆ ಮಾಡುವವರು ಯಾರೂ ಇರಲಿಲ್ಲ. ಹೀಗಾಗಿ ನಮ್ಮ 7 ಮತ್ತು 5 ವರ್ಷದ ಮಕ್ಕಳನ್ನು ಡಿಟೆನ್ಸನ್ ಸೆಂಟರ್‌ಗೇ ಕರೆದೊಯ್ದೆವು. ಹಿರಿಮಗ ಶಾಲೆಯನ್ನೂ ತಪ್ಪಿಸಿಕೊಂಡ’’ ಎಂದು ಬೇಂಗಂ ನೆನೆಸಿಕೊಳ್ಳುತಾರೆ. ಜೈಲಿನಲ್ಲಿದ್ದಾಗ ನನ್ನ ಮಕ್ಕಳು ಆಗಾಗ ”ಮನೆಗೆ ಹೋಗೋಣ’’ ಎಂದು ಪೀಡಿಸುತ್ತಲೇ ಇದ್ದರು ಎನ್ನುತ್ತಾರೆ ಬೇಗಂ. ಇಂತಹ ಸಂದರ್ಭದಲ್ಲಿ, ದಂಪತಿಯ ಸಂಬಂಧಿಕರು ಗುವಾಹತಿಯ ಅಮನ್ ವಡುದ್ ಎಂಬ ಮಾನವ ಹಕ್ಕು ವಕೀಲರನ್ನು ಭೇಟಿಯಾಗುತ್ತಾರೆ. ಸಯ್ಯದ್ ಬರ್‍ಹನುರ್ ರೆಹಮಾನ್ ಮತ್ತು ಝಕೀರ್ ಸಯ್ಯದ್ ಎಂಬ ವಕೀಲರೊಂದಿಗೆ ಅಮನ್ ಗುವಾಹತಿ ಹೈಕೋರ್ಟಿನಲ್ಲಿ ಮತ್ತು ಮುಂದೆ ಟ್ರಿಬುನಲ್‌ನಲ್ಲಿ ಈ ದಂಪತಿಯ ಕೇಸನ್ನು ಪ್ರತಿನಿಧಿಸುತ್ತಾರೆ.

“ವಿದೇಶಿ ಎಂಬ ಹಣೆಪಟ್ಟಿ ಪಡೆದ ಎಲ್ಲರಿಗೂ ವಕೀಲರು ಸಿಗುವುದಿಲ್ಲ. ಇದರಿಂದ ನಾಗರಿಕರು ದಿಕ್ಕೆಟ್ಟು ಹೋಗುತ್ತಿದ್ದಾರೆ, ಅವರ ಬಳಿ ಲಾಯರ್ ಫೀಸ್ ಕಟ್ಟಲೂ ಕಾಸು ಇರುವುದಿಲ್ಲ’’ ಎನ್ನುತ್ತಾರೆ ವಕೀಲ ಅಮನ್ ವಡುದ್. 2020 ರ ಅಕ್ಟೋಬರ್ 8 ರಂದು ಫಾರೆನರ್‍ಸ್ ಟ್ರಿಬುನಲ್ ಆದೇಶಗಳನ್ನು ತಳ್ಳಿ ಹಾಕಿದ ಹೈಕೋರ್ಟ್, ಮರು ವಿಚಾರಣೆ ನಡೆಸುವಂತೆ ಟ್ರಿಬುನಲ್‌ಗೆ ಆದೇಶಿಸಿತು. ನಂತರ ಕೆಲ ದಿನಗಳಲ್ಲಿ ದಂಪತಿ ಜಾಮೀನು ಮೇಲೆ ಹೊರ ಬಂದರು. ಅದಾದ ಎರಡು ವಾರಗಳ ನಂತರ 2020 ಡಿಸೆಂಬರ್ 16 ರಂದು ಟ್ರಿಬುನಲ್ ಹುಸೇನ್ ಅವರನ್ನು ಭಾರತೀಯ ಎಂದು ಘೋಷಿಸಿತು.

ಮೊನ್ನೆ ಬುಧವಾರ ಬೇಗಂ ಅವರ ತಲೆಗೆ ಕಟ್ಟಿದ್ದ ’ವಿದೇಶಿ’ ಹಣೆಪಟ್ಟಿಯೂ ಕಳಚಿಬಿದ್ದು, ಅವರೂ ಭಾರತೀಯ ಎಂದು ಘೋಷಣೆಯಾಗಿತು. ಅವತ್ತು ಮೂವರು ಲಾಯರ್‌ಗಳು ಮತ್ತು ಹುಸೇನ್ ಕುಟುಂಬ ಸಂಭ್ರಮಾಚರಣೆ ಮಾಡಿದರು. ಆಗ ವಕೀಲ ಅಮನ್ ವುಡುದ್ ದಂಪತಿಯ 7 ವರ್ಷದ ಹಿರಿಮಗ ಶಹಾಜಹಾನ್‌ಗೆ ಕೇಳಿದರು, ’ಮುಂದೇನಾಗುತ್ತಿಯಾ?’ ಎಂದು. ಏಳು ವರ್ಷದ ಹುಡುಗ ಹೇಳಿತು: ’ಉಕೀಲ್’ (ವಕೀಲ) ಎಂದು!.

ಇದನ್ನೂ ಓದಿ: ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...