Homeಮುಖಪುಟ’ಅಕ್ರಮ ವಿದೇಶಿ’ ಹೆಸರಲ್ಲಿ ಒಂದೂವರೆ ವರ್ಷ ಬಂಧನ: ಕೊನೆಗೂ ಭಾರತೀಯರು ಎಂದು ಒಪ್ಪಿಕೊಂಡ ಸರ್ಕಾರ

’ಅಕ್ರಮ ವಿದೇಶಿ’ ಹೆಸರಲ್ಲಿ ಒಂದೂವರೆ ವರ್ಷ ಬಂಧನ: ಕೊನೆಗೂ ಭಾರತೀಯರು ಎಂದು ಒಪ್ಪಿಕೊಂಡ ಸರ್ಕಾರ

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಎಂಬ ಸೇಡು-ದ್ವೇಷದ ಮತ್ತು ರಾಜಕೀಯ ಲಾಭದ ಆಟದಲ್ಲಿ ಲಕ್ಷಾಂತರ ಜನ ಇಂದಿಗೂ ಏದುಸಿರು ಬಿಡುತ್ತಿದ್ದಾರೆ.

- Advertisement -
- Advertisement -

ಅಕ್ರಮ ವಿದೇಶಿಯರು ಎಂದು ಅಸ್ಸಾಂನ ಈ ದಂಪತಿಯನ್ನು ಬಂಧಿಸಿ ಬಂಧನ ಕೇಂದ್ರಕ್ಕೆ ಸೇರಿಸಲಾಗಿತ್ತು. ಎನ್‌ಆರ್‌ಸಿ ಹೆಸರಲ್ಲಿ ಅಸ್ಸಾಂನಲ್ಲಿ ನಡೆದ ದಬ್ಬಾಳಿಕೆಗೆ ಸಾಂಕೇತಿಕದಂತಿದೆ ಈ ಪ್ರಕರಣ. ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಬಂಧನ ಕೇಂದ್ರ(ಡಿಟೆನ್ಸನ್ ಸೆಂಟರ್)ದಲ್ಲಿ ಕಳೆದ ಈ ದಂಪತಿ ಈಗ ತಾವು ಭಾರತೀಯರು ಎಂದು ಪ್ರೂವ್ ಮಾಡಿ ನಿರಾಳರಾಗಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಎಂಬ ಸೇಡು-ದ್ವೇಷದ ಮತ್ತು ರಾಜಕೀಯ ಲಾಭದ ಆಟದಲ್ಲಿ ಲಕ್ಷಾಂತರ ಜನ ಇಂದಿಗೂ ಏದುಸಿರು ಬಿಡುತ್ತಿದ್ದಾರೆ.

’ನಮ್ಮನ್ನು ಅಕ್ರಮ ವಲಸೆಗಾರರು ಎಂದು ನಿರ್ಧರಿಸಿದ್ದರು. ಅದು ಹೇಗೆ ಸಾಧ್ಯ?’ ಎಂಬ ಈ ದಂಪತಿಯ ಪ್ರಶ್ನೆಗೆ ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಬಳಿ ಯಾವ ಉತ್ತರವೂ ಇಲ್ಲ. ಮೊಹಮ್ಮದ್ ನೂರ್ ಹುಸೇನ್ (34) ಮತ್ತು ಶಹೀರಾ ಬೇಗಂ(26) ದಂಪತಿ ಕತೆಯಿದು. ಇವರ ಬಂಧನದ ನಂತರ, ಅವರ ಇಬ್ಬರು ಪುಟ್ಟ ಮಕ್ಕಳಿಗೆ ಆಶ್ರಯವಿಲ್ಲದೇ ಅವರೂ ಡಿಟೆನ್ಸನ್ ಸೆಂಟರ್‌ನಲ್ಲಿ ಕಳೆಯಬೇಕಾಯಿತು. ಇದೀಗ ವಿದೇಶಿಯರ ನ್ಯಾಯಮಂಡಳಿ (ಫಾರೆನರ್‍ಸ್ ಟ್ರಿಬುನಲ್) ಇವರನ್ನು ಭಾರತೀಯರು ಎಂದು ಘೋಷಿಸಿದೆ.

’ನಾವು ಹೆಮ್ಮೆಯ ಭಾರತೀಯರು. ಅಸ್ಸಾಂನವರು. ಅಕ್ರಮವಾಗಿ ಗಡಿ ದಾಟಿದ ಬಾಂಗ್ಲಾದೇಶಿಯರು ಎಂದು ನಮ್ಮನ್ನು ಬಂಧಿಸಿ ಕೊಳೆ ಹಾಕಿದರು. ಇದೆಲ್ಲ ಹೇಗೆ ಸಾಧ್ಯ? ನಾನು ಅಸ್ಸಾಂನಲ್ಲೇ ಜನಿಸಿದವನು’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಎದುರು ತಮ್ಮ ನೋವು-ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಹುಸೇನ್. ಅಸ್ಸಾಂನ ಉದುಲ್‌ಗಿರಿ ಜಿಲ್ಲೆಯ ಲಾಲ್‌ಡಂಗ್ ಗ್ರಾಮದ ಹುಸೇನ್ ಗುವಾಹತಿಯಲ್ಲಿ ರಿಕ್ಷಾ ಎಳೆಯುವ ಕೆಲಸ ಮಾಡುತ್ತಾರೆ. ಹುಸೇನ್‌ರ ಅಜ್ಜ-ಅಜ್ಜಿಯರ ಹೆಸರು 1951 ರ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯಲ್ಲಿದೆ. ಹುಸೇನ್ ತಂದೆಯ ಹೆಸರು (ಹುಸೇನ್ ಅಜ್ಜ-ಅಜ್ಜಿಯರ ಹೆಸರಿನ ಸಮೇತ) 1965 ರ ಮತದಾರರ ಪಟ್ಟಿಯಲ್ಲಿದೆ.

ಇದನ್ನೂ ಓದಿ: ಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

ಹುಸೇನ್ ಪತ್ನಿ ಬೇಗಂ ತಂದೆಯ ಹೆಸರು ಕೂಡ 1951 ರ ಎನ್‌ಆರ್‌ಸಿ ಮತ್ತು 1966 ರ ಮತದಾರರ ಪಟ್ಟಿಯಲ್ಲಿದೆ, ಜೊತೆಗೆ ಕುಟುಂಬದ ಬಳಿ 1958-59 ರ ದಿನಾಂಕಗಳಿರುವ ಭೂ ದಾಖಲೆಗಳು ಇವೆ. ಭಾರತೀಯನೆಂದು ಗುರುತಿಸಲು ಅಸ್ಸಾಂನಲ್ಲಿ ಕಟ್ ಆಫ್ ದಿನಾಂಕ ಮಾರ್ಚ್ 24-1971.
ಇಷ್ಟಿದ್ದರೂ, 2017 ರಲ್ಲಿ ಈ ದಂಪತಿಯ ಭಾರತೀಯತೆಯ ರುಜುವಾತುಗಳನ್ನು ತನಿಖೆ ಮಾಡತೊಡಗಿದ ಗುವಾಹತಿ ಪೊಕೀಸರಿಗೆ ಮೇಲಿನ ಯಾವ ದಾಖಲೆಗಳೂ ಮೌಲ್ಯಯುತ ಅನಿಸಲೇ ಇಲ್ಲ. 2017 ರ ಅಗಸ್ಟ್‌ನಲ್ಲಿ ಬೇಗಂ ಕೇಸನ್ನು ಮತ್ತು 2018 ರ ಜನವರಿಯಲ್ಲಿ ಹುಸೇನ್ ಕೇಸನ್ನು ಫಾರೆನರ್‍ಸ್ ಟ್ರಿಬುನಲ್‌ಗೆ ವರ್ಗಾಯಿಸಲಾಯಿತು. ಅಂದರೆ ಈ ದಂಪತಿ ತಮ್ಮನ್ನು ಭಾರತೀಯರು ಎಂದು ತಾವು ಪ್ರೂವ್ ಮಾಡಿಕೊಳ್ಳಬೇಕು.

’ಅನಕ್ಷರಸ್ಥರಾದ ನಮ್ಮಿಬ್ಬರಿಗೂ ಯಾವುದು ಯಾವುದರ ದಾಖಲೆ ಎಂದು ಗುರುತಿಸುವುದು ಗೊತ್ತಾಗಲಿಲ್ಲ ಮತ್ತು ಮುಂದೇನು ಮಾಡುವುದು ಎಂಬುದೂ ತಿಳಿಯಲಿಲ್ಲ’ ಎನ್ನುತ್ತಾರೆ ಹುಸೇನ್. ಹುಸೇನ್ 4 ಸಾವಿರ ರೂ. ಕೊಟ್ಟು ಒಬ್ಬ ಲಾಯರ್ ಪಡೆದರು. ಆದರೆ ಟ್ರಿಬುನಲ್‌ನಲ್ಲಿ ಅವರ ಪತ್ನಿ ಬೇಗಂ ಪ್ರತಿನಿಧಿಸಲು ಯಾರೂ ಇರಲಿಲ್ಲ. ಅಗಸ್ಟ್ 28-2018 ರಂದು ಕೇಸಿನಿಂದ ಹೊರ ನಡೆದ ಹುಸೇನ್ ಲಾಯರ್, ಮುಂದೆ ಸತತವಾಗಿ ಟ್ರಿಬುನಲ್ ವಿಚಾರಣೆಗೆ ಹಾಜರಾಗಲೇ ಇಲ್ಲ.

ಟ್ರಿಬುನಲ್ ನಲ್ಲಿ ೨ ಲಕ್ಷ ಕೇಸು ಇತ್ಯರ್ಥ. ಫಾರೆನರ್‍ಸ್ ಟ್ರಿಬುನಲ್ ಅರೆ ನ್ಯಾಯಾಂಗೀಯ ಮಂಡಳಿಗಳಾಗಿದ್ದು, ಒಬ್ಬ ವ್ಯಕ್ತಿ ’ಅಕ್ರಮ ವಿದೇಶಿಗ’ ಹೌದೋ ಅಲ್ಲವೋ ಎಂಬ ಅಭಿಪ್ರಾಯ ನೀಡುತ್ತವೆ. ರಾಜ್ಯ ಪೊಲೀಸರು ರೆಫರ್ ಮಾಡಿದ ಕೇಸುಗಳು ಮತ್ತು ಚುನಾವಣಾ ಅಧಿಕಾರಿಗಳು ’ಸಂದೇಹಿತ ಮತದಾರ’ ಎಂದು ಗುರುತಿಸಿದ ಕೇಸುಗಳನ್ನು ಟ್ರಿಬುನಲ್ ವಿಚಾರಣೆ ಮಾಡುತ್ತದೆ. 2020 ರ ಜುಲೈವರೆಗೆ 4.34 ಲಕ್ಷ ಕೇಸುಗಳ ಪೈಕಿ 2 ಲಕ್ಷ ಕೇಸುಗಳನ್ನು ಟ್ರಿಬುನಲ್ ಇತ್ಯರ್ಥ ಮಾಡಿದೆ.

“ಲಾಯರ್ ನನಗೆ ಹೇಳಿದ, ‘ನಿನ್ನಿಂದ ನನ್ನ ಫೀಸ್ ಭರಿಸಲಾಗಲ್ಲ. ಗುವಾಹತಿ ತೊರೆದು ಪರಾರಿಯಾಗು, ಇಲ್ಲವಾದರೆ ಪೊಲೀಸರು ನಿನ್ನನ್ನು ಬಂಧಿಸುತ್ತಾರೆ…..’ ಎಂದು. ಅದಕ್ಕೆ ನಾನು ಹೇಳಿದೆ, ‘ನಾನ್ಯಾಕೆ ಪರಾರಿಯಾಗಲಿ, ನಾನೇನು ತಪ್ಪು ಮಾಡಿರುವೆ’’ ಎಂದು ಹುಸೇನ್ ಅಂದಿನ ಸಂದಿಗ್ಧವನ್ನು ನೆನೆಯುತ್ತಾರೆ. ಮೇ 29-2019 ರಂದು ಟ್ರಿಬುನಲ್ ಬೇಂಗಂರನ್ನು ’ವಿದೇಶಿ’ ಎಂದು ಘೋಷಿಸಿತು. ಮರುವರ್ಷ ಮಾರ್ಚ್ 30 ರಂದು ಹುಸೇನ್‌ಗೂ ’ವಿದೇಶಿ’ ಪಟ್ಟವನ್ನು ಟ್ರಿಬುನಲ್ ಕಟ್ಟಿತು. ವಿದೇಶಿಯರ ಕಾಯ್ದೆ ಸೆಕ್ಷನ್ 9 ರ ಪ್ರಕಾರ, ಒಬ್ಬ ವ್ಯಕ್ತಿ ತಾನು ವಿದೇಶಿಯಲ್ಲ ಎಂದು ಪ್ರೂವ್ ಮಾಡುವ ಜವಾಬ್ದಾರಿ ಆತನ/ಆಕೆಯ ಮೇಲೆಯೇ ಇದೆ. ಹೀಗಾಗಿ ಟ್ರಿಬುನಲ್ ಮುಂದೆ ಹಾಜರಾಗದೇ ಇದ್ದರೆ ಆತ/ಆಕೆ ವಿದೇಶಿ ಎಂದು ನಿರ್ಧರಿತವಾಗಿ ಬಿಡುತ್ತದೆ! ಜೂನ್ 2019 ರಲ್ಲಿ ಈ ದಂಪತಿಯನ್ನು ಬಂಧಿಸಿ ಗೋಲ್ಪಾರಾ ಜಿಲ್ಲೆಯ ಡಿಟೆನ್ಸನ್ ಸೆಂಟರ್‌ಗೆ ತಳ್ಳಿದಾಗ, ಅವರಿಬ್ಬರ ಸುತ್ತಲಿನ ಜಗತ್ತೇ ಕುಸಿದು ಹೋದಂತಾಯಿತು.

ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

”ನಮ್ಮ ಸಂಬಂಧಿಕರು ದೂರದ ಹಳ್ಳಿಯಲ್ಲಿದ್ದ ಕಾರಣ ಮಕ್ಕಳ ಪಾಲನೆ ಮಾಡುವವರು ಯಾರೂ ಇರಲಿಲ್ಲ. ಹೀಗಾಗಿ ನಮ್ಮ 7 ಮತ್ತು 5 ವರ್ಷದ ಮಕ್ಕಳನ್ನು ಡಿಟೆನ್ಸನ್ ಸೆಂಟರ್‌ಗೇ ಕರೆದೊಯ್ದೆವು. ಹಿರಿಮಗ ಶಾಲೆಯನ್ನೂ ತಪ್ಪಿಸಿಕೊಂಡ’’ ಎಂದು ಬೇಂಗಂ ನೆನೆಸಿಕೊಳ್ಳುತಾರೆ. ಜೈಲಿನಲ್ಲಿದ್ದಾಗ ನನ್ನ ಮಕ್ಕಳು ಆಗಾಗ ”ಮನೆಗೆ ಹೋಗೋಣ’’ ಎಂದು ಪೀಡಿಸುತ್ತಲೇ ಇದ್ದರು ಎನ್ನುತ್ತಾರೆ ಬೇಗಂ. ಇಂತಹ ಸಂದರ್ಭದಲ್ಲಿ, ದಂಪತಿಯ ಸಂಬಂಧಿಕರು ಗುವಾಹತಿಯ ಅಮನ್ ವಡುದ್ ಎಂಬ ಮಾನವ ಹಕ್ಕು ವಕೀಲರನ್ನು ಭೇಟಿಯಾಗುತ್ತಾರೆ. ಸಯ್ಯದ್ ಬರ್‍ಹನುರ್ ರೆಹಮಾನ್ ಮತ್ತು ಝಕೀರ್ ಸಯ್ಯದ್ ಎಂಬ ವಕೀಲರೊಂದಿಗೆ ಅಮನ್ ಗುವಾಹತಿ ಹೈಕೋರ್ಟಿನಲ್ಲಿ ಮತ್ತು ಮುಂದೆ ಟ್ರಿಬುನಲ್‌ನಲ್ಲಿ ಈ ದಂಪತಿಯ ಕೇಸನ್ನು ಪ್ರತಿನಿಧಿಸುತ್ತಾರೆ.

“ವಿದೇಶಿ ಎಂಬ ಹಣೆಪಟ್ಟಿ ಪಡೆದ ಎಲ್ಲರಿಗೂ ವಕೀಲರು ಸಿಗುವುದಿಲ್ಲ. ಇದರಿಂದ ನಾಗರಿಕರು ದಿಕ್ಕೆಟ್ಟು ಹೋಗುತ್ತಿದ್ದಾರೆ, ಅವರ ಬಳಿ ಲಾಯರ್ ಫೀಸ್ ಕಟ್ಟಲೂ ಕಾಸು ಇರುವುದಿಲ್ಲ’’ ಎನ್ನುತ್ತಾರೆ ವಕೀಲ ಅಮನ್ ವಡುದ್. 2020 ರ ಅಕ್ಟೋಬರ್ 8 ರಂದು ಫಾರೆನರ್‍ಸ್ ಟ್ರಿಬುನಲ್ ಆದೇಶಗಳನ್ನು ತಳ್ಳಿ ಹಾಕಿದ ಹೈಕೋರ್ಟ್, ಮರು ವಿಚಾರಣೆ ನಡೆಸುವಂತೆ ಟ್ರಿಬುನಲ್‌ಗೆ ಆದೇಶಿಸಿತು. ನಂತರ ಕೆಲ ದಿನಗಳಲ್ಲಿ ದಂಪತಿ ಜಾಮೀನು ಮೇಲೆ ಹೊರ ಬಂದರು. ಅದಾದ ಎರಡು ವಾರಗಳ ನಂತರ 2020 ಡಿಸೆಂಬರ್ 16 ರಂದು ಟ್ರಿಬುನಲ್ ಹುಸೇನ್ ಅವರನ್ನು ಭಾರತೀಯ ಎಂದು ಘೋಷಿಸಿತು.

ಮೊನ್ನೆ ಬುಧವಾರ ಬೇಗಂ ಅವರ ತಲೆಗೆ ಕಟ್ಟಿದ್ದ ’ವಿದೇಶಿ’ ಹಣೆಪಟ್ಟಿಯೂ ಕಳಚಿಬಿದ್ದು, ಅವರೂ ಭಾರತೀಯ ಎಂದು ಘೋಷಣೆಯಾಗಿತು. ಅವತ್ತು ಮೂವರು ಲಾಯರ್‌ಗಳು ಮತ್ತು ಹುಸೇನ್ ಕುಟುಂಬ ಸಂಭ್ರಮಾಚರಣೆ ಮಾಡಿದರು. ಆಗ ವಕೀಲ ಅಮನ್ ವುಡುದ್ ದಂಪತಿಯ 7 ವರ್ಷದ ಹಿರಿಮಗ ಶಹಾಜಹಾನ್‌ಗೆ ಕೇಳಿದರು, ’ಮುಂದೇನಾಗುತ್ತಿಯಾ?’ ಎಂದು. ಏಳು ವರ್ಷದ ಹುಡುಗ ಹೇಳಿತು: ’ಉಕೀಲ್’ (ವಕೀಲ) ಎಂದು!.

ಇದನ್ನೂ ಓದಿ: ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...