Homeಮುಖಪುಟ’ಅಕ್ರಮ ವಿದೇಶಿ’ ಹೆಸರಲ್ಲಿ ಒಂದೂವರೆ ವರ್ಷ ಬಂಧನ: ಕೊನೆಗೂ ಭಾರತೀಯರು ಎಂದು ಒಪ್ಪಿಕೊಂಡ ಸರ್ಕಾರ

’ಅಕ್ರಮ ವಿದೇಶಿ’ ಹೆಸರಲ್ಲಿ ಒಂದೂವರೆ ವರ್ಷ ಬಂಧನ: ಕೊನೆಗೂ ಭಾರತೀಯರು ಎಂದು ಒಪ್ಪಿಕೊಂಡ ಸರ್ಕಾರ

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಎಂಬ ಸೇಡು-ದ್ವೇಷದ ಮತ್ತು ರಾಜಕೀಯ ಲಾಭದ ಆಟದಲ್ಲಿ ಲಕ್ಷಾಂತರ ಜನ ಇಂದಿಗೂ ಏದುಸಿರು ಬಿಡುತ್ತಿದ್ದಾರೆ.

- Advertisement -
- Advertisement -

ಅಕ್ರಮ ವಿದೇಶಿಯರು ಎಂದು ಅಸ್ಸಾಂನ ಈ ದಂಪತಿಯನ್ನು ಬಂಧಿಸಿ ಬಂಧನ ಕೇಂದ್ರಕ್ಕೆ ಸೇರಿಸಲಾಗಿತ್ತು. ಎನ್‌ಆರ್‌ಸಿ ಹೆಸರಲ್ಲಿ ಅಸ್ಸಾಂನಲ್ಲಿ ನಡೆದ ದಬ್ಬಾಳಿಕೆಗೆ ಸಾಂಕೇತಿಕದಂತಿದೆ ಈ ಪ್ರಕರಣ. ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಬಂಧನ ಕೇಂದ್ರ(ಡಿಟೆನ್ಸನ್ ಸೆಂಟರ್)ದಲ್ಲಿ ಕಳೆದ ಈ ದಂಪತಿ ಈಗ ತಾವು ಭಾರತೀಯರು ಎಂದು ಪ್ರೂವ್ ಮಾಡಿ ನಿರಾಳರಾಗಿದ್ದಾರೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಎಂಬ ಸೇಡು-ದ್ವೇಷದ ಮತ್ತು ರಾಜಕೀಯ ಲಾಭದ ಆಟದಲ್ಲಿ ಲಕ್ಷಾಂತರ ಜನ ಇಂದಿಗೂ ಏದುಸಿರು ಬಿಡುತ್ತಿದ್ದಾರೆ.

’ನಮ್ಮನ್ನು ಅಕ್ರಮ ವಲಸೆಗಾರರು ಎಂದು ನಿರ್ಧರಿಸಿದ್ದರು. ಅದು ಹೇಗೆ ಸಾಧ್ಯ?’ ಎಂಬ ಈ ದಂಪತಿಯ ಪ್ರಶ್ನೆಗೆ ಪ್ರಧಾನಿ ಮೋದಿ ಅಥವಾ ಗೃಹ ಸಚಿವ ಅಮಿತ್ ಶಾ ಬಳಿ ಯಾವ ಉತ್ತರವೂ ಇಲ್ಲ. ಮೊಹಮ್ಮದ್ ನೂರ್ ಹುಸೇನ್ (34) ಮತ್ತು ಶಹೀರಾ ಬೇಗಂ(26) ದಂಪತಿ ಕತೆಯಿದು. ಇವರ ಬಂಧನದ ನಂತರ, ಅವರ ಇಬ್ಬರು ಪುಟ್ಟ ಮಕ್ಕಳಿಗೆ ಆಶ್ರಯವಿಲ್ಲದೇ ಅವರೂ ಡಿಟೆನ್ಸನ್ ಸೆಂಟರ್‌ನಲ್ಲಿ ಕಳೆಯಬೇಕಾಯಿತು. ಇದೀಗ ವಿದೇಶಿಯರ ನ್ಯಾಯಮಂಡಳಿ (ಫಾರೆನರ್‍ಸ್ ಟ್ರಿಬುನಲ್) ಇವರನ್ನು ಭಾರತೀಯರು ಎಂದು ಘೋಷಿಸಿದೆ.

’ನಾವು ಹೆಮ್ಮೆಯ ಭಾರತೀಯರು. ಅಸ್ಸಾಂನವರು. ಅಕ್ರಮವಾಗಿ ಗಡಿ ದಾಟಿದ ಬಾಂಗ್ಲಾದೇಶಿಯರು ಎಂದು ನಮ್ಮನ್ನು ಬಂಧಿಸಿ ಕೊಳೆ ಹಾಕಿದರು. ಇದೆಲ್ಲ ಹೇಗೆ ಸಾಧ್ಯ? ನಾನು ಅಸ್ಸಾಂನಲ್ಲೇ ಜನಿಸಿದವನು’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಎದುರು ತಮ್ಮ ನೋವು-ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಹುಸೇನ್. ಅಸ್ಸಾಂನ ಉದುಲ್‌ಗಿರಿ ಜಿಲ್ಲೆಯ ಲಾಲ್‌ಡಂಗ್ ಗ್ರಾಮದ ಹುಸೇನ್ ಗುವಾಹತಿಯಲ್ಲಿ ರಿಕ್ಷಾ ಎಳೆಯುವ ಕೆಲಸ ಮಾಡುತ್ತಾರೆ. ಹುಸೇನ್‌ರ ಅಜ್ಜ-ಅಜ್ಜಿಯರ ಹೆಸರು 1951 ರ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯಲ್ಲಿದೆ. ಹುಸೇನ್ ತಂದೆಯ ಹೆಸರು (ಹುಸೇನ್ ಅಜ್ಜ-ಅಜ್ಜಿಯರ ಹೆಸರಿನ ಸಮೇತ) 1965 ರ ಮತದಾರರ ಪಟ್ಟಿಯಲ್ಲಿದೆ.

ಇದನ್ನೂ ಓದಿ: ಎನ್ನಾರ್ಸಿ, ಸಿಎಬಿ ಹಾಗೂ ಎನ್‍ಪಿಆರ್ ಎನ್ನುವ ಮೂರು ಅಂಕದ ನಾಟಕ

ಹುಸೇನ್ ಪತ್ನಿ ಬೇಗಂ ತಂದೆಯ ಹೆಸರು ಕೂಡ 1951 ರ ಎನ್‌ಆರ್‌ಸಿ ಮತ್ತು 1966 ರ ಮತದಾರರ ಪಟ್ಟಿಯಲ್ಲಿದೆ, ಜೊತೆಗೆ ಕುಟುಂಬದ ಬಳಿ 1958-59 ರ ದಿನಾಂಕಗಳಿರುವ ಭೂ ದಾಖಲೆಗಳು ಇವೆ. ಭಾರತೀಯನೆಂದು ಗುರುತಿಸಲು ಅಸ್ಸಾಂನಲ್ಲಿ ಕಟ್ ಆಫ್ ದಿನಾಂಕ ಮಾರ್ಚ್ 24-1971.
ಇಷ್ಟಿದ್ದರೂ, 2017 ರಲ್ಲಿ ಈ ದಂಪತಿಯ ಭಾರತೀಯತೆಯ ರುಜುವಾತುಗಳನ್ನು ತನಿಖೆ ಮಾಡತೊಡಗಿದ ಗುವಾಹತಿ ಪೊಕೀಸರಿಗೆ ಮೇಲಿನ ಯಾವ ದಾಖಲೆಗಳೂ ಮೌಲ್ಯಯುತ ಅನಿಸಲೇ ಇಲ್ಲ. 2017 ರ ಅಗಸ್ಟ್‌ನಲ್ಲಿ ಬೇಗಂ ಕೇಸನ್ನು ಮತ್ತು 2018 ರ ಜನವರಿಯಲ್ಲಿ ಹುಸೇನ್ ಕೇಸನ್ನು ಫಾರೆನರ್‍ಸ್ ಟ್ರಿಬುನಲ್‌ಗೆ ವರ್ಗಾಯಿಸಲಾಯಿತು. ಅಂದರೆ ಈ ದಂಪತಿ ತಮ್ಮನ್ನು ಭಾರತೀಯರು ಎಂದು ತಾವು ಪ್ರೂವ್ ಮಾಡಿಕೊಳ್ಳಬೇಕು.

’ಅನಕ್ಷರಸ್ಥರಾದ ನಮ್ಮಿಬ್ಬರಿಗೂ ಯಾವುದು ಯಾವುದರ ದಾಖಲೆ ಎಂದು ಗುರುತಿಸುವುದು ಗೊತ್ತಾಗಲಿಲ್ಲ ಮತ್ತು ಮುಂದೇನು ಮಾಡುವುದು ಎಂಬುದೂ ತಿಳಿಯಲಿಲ್ಲ’ ಎನ್ನುತ್ತಾರೆ ಹುಸೇನ್. ಹುಸೇನ್ 4 ಸಾವಿರ ರೂ. ಕೊಟ್ಟು ಒಬ್ಬ ಲಾಯರ್ ಪಡೆದರು. ಆದರೆ ಟ್ರಿಬುನಲ್‌ನಲ್ಲಿ ಅವರ ಪತ್ನಿ ಬೇಗಂ ಪ್ರತಿನಿಧಿಸಲು ಯಾರೂ ಇರಲಿಲ್ಲ. ಅಗಸ್ಟ್ 28-2018 ರಂದು ಕೇಸಿನಿಂದ ಹೊರ ನಡೆದ ಹುಸೇನ್ ಲಾಯರ್, ಮುಂದೆ ಸತತವಾಗಿ ಟ್ರಿಬುನಲ್ ವಿಚಾರಣೆಗೆ ಹಾಜರಾಗಲೇ ಇಲ್ಲ.

ಟ್ರಿಬುನಲ್ ನಲ್ಲಿ ೨ ಲಕ್ಷ ಕೇಸು ಇತ್ಯರ್ಥ. ಫಾರೆನರ್‍ಸ್ ಟ್ರಿಬುನಲ್ ಅರೆ ನ್ಯಾಯಾಂಗೀಯ ಮಂಡಳಿಗಳಾಗಿದ್ದು, ಒಬ್ಬ ವ್ಯಕ್ತಿ ’ಅಕ್ರಮ ವಿದೇಶಿಗ’ ಹೌದೋ ಅಲ್ಲವೋ ಎಂಬ ಅಭಿಪ್ರಾಯ ನೀಡುತ್ತವೆ. ರಾಜ್ಯ ಪೊಲೀಸರು ರೆಫರ್ ಮಾಡಿದ ಕೇಸುಗಳು ಮತ್ತು ಚುನಾವಣಾ ಅಧಿಕಾರಿಗಳು ’ಸಂದೇಹಿತ ಮತದಾರ’ ಎಂದು ಗುರುತಿಸಿದ ಕೇಸುಗಳನ್ನು ಟ್ರಿಬುನಲ್ ವಿಚಾರಣೆ ಮಾಡುತ್ತದೆ. 2020 ರ ಜುಲೈವರೆಗೆ 4.34 ಲಕ್ಷ ಕೇಸುಗಳ ಪೈಕಿ 2 ಲಕ್ಷ ಕೇಸುಗಳನ್ನು ಟ್ರಿಬುನಲ್ ಇತ್ಯರ್ಥ ಮಾಡಿದೆ.

“ಲಾಯರ್ ನನಗೆ ಹೇಳಿದ, ‘ನಿನ್ನಿಂದ ನನ್ನ ಫೀಸ್ ಭರಿಸಲಾಗಲ್ಲ. ಗುವಾಹತಿ ತೊರೆದು ಪರಾರಿಯಾಗು, ಇಲ್ಲವಾದರೆ ಪೊಲೀಸರು ನಿನ್ನನ್ನು ಬಂಧಿಸುತ್ತಾರೆ…..’ ಎಂದು. ಅದಕ್ಕೆ ನಾನು ಹೇಳಿದೆ, ‘ನಾನ್ಯಾಕೆ ಪರಾರಿಯಾಗಲಿ, ನಾನೇನು ತಪ್ಪು ಮಾಡಿರುವೆ’’ ಎಂದು ಹುಸೇನ್ ಅಂದಿನ ಸಂದಿಗ್ಧವನ್ನು ನೆನೆಯುತ್ತಾರೆ. ಮೇ 29-2019 ರಂದು ಟ್ರಿಬುನಲ್ ಬೇಂಗಂರನ್ನು ’ವಿದೇಶಿ’ ಎಂದು ಘೋಷಿಸಿತು. ಮರುವರ್ಷ ಮಾರ್ಚ್ 30 ರಂದು ಹುಸೇನ್‌ಗೂ ’ವಿದೇಶಿ’ ಪಟ್ಟವನ್ನು ಟ್ರಿಬುನಲ್ ಕಟ್ಟಿತು. ವಿದೇಶಿಯರ ಕಾಯ್ದೆ ಸೆಕ್ಷನ್ 9 ರ ಪ್ರಕಾರ, ಒಬ್ಬ ವ್ಯಕ್ತಿ ತಾನು ವಿದೇಶಿಯಲ್ಲ ಎಂದು ಪ್ರೂವ್ ಮಾಡುವ ಜವಾಬ್ದಾರಿ ಆತನ/ಆಕೆಯ ಮೇಲೆಯೇ ಇದೆ. ಹೀಗಾಗಿ ಟ್ರಿಬುನಲ್ ಮುಂದೆ ಹಾಜರಾಗದೇ ಇದ್ದರೆ ಆತ/ಆಕೆ ವಿದೇಶಿ ಎಂದು ನಿರ್ಧರಿತವಾಗಿ ಬಿಡುತ್ತದೆ! ಜೂನ್ 2019 ರಲ್ಲಿ ಈ ದಂಪತಿಯನ್ನು ಬಂಧಿಸಿ ಗೋಲ್ಪಾರಾ ಜಿಲ್ಲೆಯ ಡಿಟೆನ್ಸನ್ ಸೆಂಟರ್‌ಗೆ ತಳ್ಳಿದಾಗ, ಅವರಿಬ್ಬರ ಸುತ್ತಲಿನ ಜಗತ್ತೇ ಕುಸಿದು ಹೋದಂತಾಯಿತು.

ಇದನ್ನೂ ಓದಿ: ಕರೋನಾಕ್ಕೆ ಕೊನೆಯಿದ್ದೀತು, ಆದರೆ ಈ ಮುಸ್ಲಿಮ್ ದ್ವೇಷಕ್ಕೆ ಮದ್ದೇನು?

”ನಮ್ಮ ಸಂಬಂಧಿಕರು ದೂರದ ಹಳ್ಳಿಯಲ್ಲಿದ್ದ ಕಾರಣ ಮಕ್ಕಳ ಪಾಲನೆ ಮಾಡುವವರು ಯಾರೂ ಇರಲಿಲ್ಲ. ಹೀಗಾಗಿ ನಮ್ಮ 7 ಮತ್ತು 5 ವರ್ಷದ ಮಕ್ಕಳನ್ನು ಡಿಟೆನ್ಸನ್ ಸೆಂಟರ್‌ಗೇ ಕರೆದೊಯ್ದೆವು. ಹಿರಿಮಗ ಶಾಲೆಯನ್ನೂ ತಪ್ಪಿಸಿಕೊಂಡ’’ ಎಂದು ಬೇಂಗಂ ನೆನೆಸಿಕೊಳ್ಳುತಾರೆ. ಜೈಲಿನಲ್ಲಿದ್ದಾಗ ನನ್ನ ಮಕ್ಕಳು ಆಗಾಗ ”ಮನೆಗೆ ಹೋಗೋಣ’’ ಎಂದು ಪೀಡಿಸುತ್ತಲೇ ಇದ್ದರು ಎನ್ನುತ್ತಾರೆ ಬೇಗಂ. ಇಂತಹ ಸಂದರ್ಭದಲ್ಲಿ, ದಂಪತಿಯ ಸಂಬಂಧಿಕರು ಗುವಾಹತಿಯ ಅಮನ್ ವಡುದ್ ಎಂಬ ಮಾನವ ಹಕ್ಕು ವಕೀಲರನ್ನು ಭೇಟಿಯಾಗುತ್ತಾರೆ. ಸಯ್ಯದ್ ಬರ್‍ಹನುರ್ ರೆಹಮಾನ್ ಮತ್ತು ಝಕೀರ್ ಸಯ್ಯದ್ ಎಂಬ ವಕೀಲರೊಂದಿಗೆ ಅಮನ್ ಗುವಾಹತಿ ಹೈಕೋರ್ಟಿನಲ್ಲಿ ಮತ್ತು ಮುಂದೆ ಟ್ರಿಬುನಲ್‌ನಲ್ಲಿ ಈ ದಂಪತಿಯ ಕೇಸನ್ನು ಪ್ರತಿನಿಧಿಸುತ್ತಾರೆ.

“ವಿದೇಶಿ ಎಂಬ ಹಣೆಪಟ್ಟಿ ಪಡೆದ ಎಲ್ಲರಿಗೂ ವಕೀಲರು ಸಿಗುವುದಿಲ್ಲ. ಇದರಿಂದ ನಾಗರಿಕರು ದಿಕ್ಕೆಟ್ಟು ಹೋಗುತ್ತಿದ್ದಾರೆ, ಅವರ ಬಳಿ ಲಾಯರ್ ಫೀಸ್ ಕಟ್ಟಲೂ ಕಾಸು ಇರುವುದಿಲ್ಲ’’ ಎನ್ನುತ್ತಾರೆ ವಕೀಲ ಅಮನ್ ವಡುದ್. 2020 ರ ಅಕ್ಟೋಬರ್ 8 ರಂದು ಫಾರೆನರ್‍ಸ್ ಟ್ರಿಬುನಲ್ ಆದೇಶಗಳನ್ನು ತಳ್ಳಿ ಹಾಕಿದ ಹೈಕೋರ್ಟ್, ಮರು ವಿಚಾರಣೆ ನಡೆಸುವಂತೆ ಟ್ರಿಬುನಲ್‌ಗೆ ಆದೇಶಿಸಿತು. ನಂತರ ಕೆಲ ದಿನಗಳಲ್ಲಿ ದಂಪತಿ ಜಾಮೀನು ಮೇಲೆ ಹೊರ ಬಂದರು. ಅದಾದ ಎರಡು ವಾರಗಳ ನಂತರ 2020 ಡಿಸೆಂಬರ್ 16 ರಂದು ಟ್ರಿಬುನಲ್ ಹುಸೇನ್ ಅವರನ್ನು ಭಾರತೀಯ ಎಂದು ಘೋಷಿಸಿತು.

ಮೊನ್ನೆ ಬುಧವಾರ ಬೇಗಂ ಅವರ ತಲೆಗೆ ಕಟ್ಟಿದ್ದ ’ವಿದೇಶಿ’ ಹಣೆಪಟ್ಟಿಯೂ ಕಳಚಿಬಿದ್ದು, ಅವರೂ ಭಾರತೀಯ ಎಂದು ಘೋಷಣೆಯಾಗಿತು. ಅವತ್ತು ಮೂವರು ಲಾಯರ್‌ಗಳು ಮತ್ತು ಹುಸೇನ್ ಕುಟುಂಬ ಸಂಭ್ರಮಾಚರಣೆ ಮಾಡಿದರು. ಆಗ ವಕೀಲ ಅಮನ್ ವುಡುದ್ ದಂಪತಿಯ 7 ವರ್ಷದ ಹಿರಿಮಗ ಶಹಾಜಹಾನ್‌ಗೆ ಕೇಳಿದರು, ’ಮುಂದೇನಾಗುತ್ತಿಯಾ?’ ಎಂದು. ಏಳು ವರ್ಷದ ಹುಡುಗ ಹೇಳಿತು: ’ಉಕೀಲ್’ (ವಕೀಲ) ಎಂದು!.

ಇದನ್ನೂ ಓದಿ: ಅಂದಿನ ಸಾದತ್‌ ಹಸನ್‌ ಮಂಟೋ ಮತ್ತು ಇಂದಿನ ನಾವು…!! : ಇಸ್ಮತ್ ಪಜೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...