Homeಮುಖಪುಟಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

ಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

ಮೂರು ದಶಕಗಳ ಕಾಲ ಕೊರಗರ ಸ್ವಾಭಿಮಾನದ ಬದುಕಿಗಾಗಿ ದುಡಿದ ಮತ್ತು 2019ರ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ’ಯನ್ನು ಸ್ವೀಕರಿಸಿದ ಶಕುಂತಲಾ ಕೊರಗ ನೇಜಾರ್‌ರವರ ಮಾತುಗಳು.

- Advertisement -
- Advertisement -

ಎಲೆಮರೆ-30

  • ಅರುಣ್ ಜೋಳದಕೂಡ್ಲಿಗಿ.

ಫೆಬ್ರವರಿ 11, 2020 ರಂದು ಯುನೈಟೆಡ್ ಅರಬ್ ಎಮಿರೈಟ್ಸ್‌ನ ರಾಜಧಾನಿಯಾದ ಅರೇಬಿಯನ್ ಧ್ವೀಪವೊಂದರಲ್ಲಿರುವ ಅಬುದಾಬಿಯಲ್ಲಿ ನಡೆದ ವಿಶ್ವಸಂಸ್ಥೆಯ ಆಯೋಜನೆಯ ವರ್ಣರಂಜಿತ ಕಾರ್ಯಕ್ರಮದಲ್ಲಿ ಉಡುಪಿಯ ನೇಜಾರದ ಕೊರಗ ಸಮುದಾಯದ ಶಕುಂತಲಾ ಅವರು `2019ರ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ’ಯನ್ನು ಸ್ವೀಕರಿಸಿದರು. ಈ ಇದು ಕೊರಗ ಸಮುದಾಯದ ಇತಿಹಾಸದಲ್ಲಿ ಒಂದು ಮಹತ್ವದ ದಿನವಾಗಿ ದಾಖಲಾಯಿತು. ಕಾರಣ ಮೊದಲ ಬಾರಿಗೆ ಕೊರಗ ಸಮುದಾಯದ ಮಹಿಳೆಯೊಬ್ಬರು ವಿದೇಶಕ್ಕೆ ತೆರಳಿ ಇಂತಹದ್ದೊಂದು ಅಂತಾರಾಷ್ಟ್ರೀಯ ಪ್ರಶಸ್ತಿಯೊಂದನ್ನು ಸ್ವೀಕರಿಸಿದರು. ಈ ಪ್ರಶಸ್ತಿಯ ಜಾಡು ಹಿಡಿದು ಹಿಂದಕ್ಕೆ ನಡೆದರೆ 1987 ರಿಂದ ಕೊರಗ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯು ಕೊರಗ ಸಮುದಾಯದಲ್ಲಿ ಮೂಡಿಸಿದ ಸ್ವಾಭಿಮಾನದ ಕಥನವು ಬಿಚ್ಚಿಕೊಳ್ಳುತ್ತದೆ.

ವಿಶ್ವಸಂಸ್ಥೆಯ ಹ್ಯಾಬಿಟ್ಯಾಟ್ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಹಾದುಬರುವುದು ಅಷ್ಟು ಸುಲಭವಲ್ಲ. 195 ದೇಶಗಳ 3000 ಸ್ವಯಂ ಸೇವಾ ಸಂಸ್ಥೆಗಳು ಈ ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು. ಅಂತಿಮ ಸುತ್ತಿಗೆ ಆಯ್ಕೆಯಾದ ಹತ್ತು ಸಂಸ್ಥೆಗಳ ಕಾರ್ಯಗಳ ಬಗ್ಗೆ ಸ್ವತಃ ವಿಶ್ವಸಂಸ್ಥೆಯ ಪ್ರತಿನಿಧಿಗಳು ಭೇಟಿನೀಡಿ ಜನರೊಟ್ಟಿಗೆ ಮಾತಾಡಿ, ಸುಧಾರಣ ಕೆಲಸಗಳನ್ನು ಪರೀಕ್ಷೆಗೆ ಒಳಪಡಿಸುತ್ತಾರೆ. ಈ ವರದಿಯನ್ನು ಆಧರಿಸಿ ಅಂತಿಮವಾಗಿ ನಾಲ್ಕು ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಜಾಗತಿಕ ದಕ್ಷಿಣ ವಿಭಾಗದಿಂದ `ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ’ಗೆ ಗೋಲ್ಡನ್ ಪ್ರಶಸ್ತಿ ಲಭಿಸಿತು. ಭಾರತಕ್ಕೆ ಈತನಕ ನಾಲ್ಕು ಬಾರಿ ಮಾತ್ರ ವಿಶ್ವಸಂಸ್ಥೆಯ ಹ್ಯಾಬಿಟ್ಯಾಟ್ ಪ್ರಶಸ್ತಿ ಬಂದಿದೆ. ವಿಶೇಷವೆಂದರೆ ಈ ಪ್ರಶಸ್ತಿ ಕರ್ನಾಟಕಕ್ಕೆ ಸಿಕ್ಕಿರುವುದು ಇದೇ ಮೊದಲು.

ಹಾಗಾದರೆ ಇಂತಹ ಪ್ರಶಸ್ತಿಗೆ ಭಾಜನವಾದ ಸಂಸ್ಥೆಯ ಕೆಲಸವಾದರೂ ಎಂಥದು ಎನ್ನುವ ಪ್ರಶ್ನೆ ಎದುರು ನಿಲ್ಲುತ್ತದೆ. ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು 1987 ರಿಂದ ರಾಜ್ಯದ ಬುಡಕಟ್ಟು ಸಮುದಾಯಗಳ ಹಕ್ಕೊತ್ತಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕ ಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಕೊರಗರು, ಹಲಸರು, ಗೊಂಡ, ಮಲೆಕುಡಿಯ, ಹಕ್ಕಿಪಿಕ್ಕಿ, ಜೇನುಕುರುಬ, ಬೆಟ್ಟಕುರುಬ, ಎರವ, ಸೋಲಿಗ, ಡೋಂಗ್ರಿ ಗರಾಸಿಯ ಈ ಸಮುದಾಯಗಳನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಜಾಗೃತಗೊಳಿಸಿ ಸ್ವಾಭಿಮಾನದ ಘನತೆಯ ಬದುಕು ರೂಪಿಸಲು ಶ್ರಮಿಸಿದ್ದಕ್ಕೆ ಈ ಪ್ರಶಸ್ತಿಯು ಲಭಿಸಿದೆ.

ಮುಖ್ಯವಾಗಿ ಸಮುದಾಯಗಳ ಜನರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಹಕ್ಕು ಕೊಡಿಸುವುದು, ವಸತಿ ಸೌಲಭ್ಯ, ಜೀವನಾಧಾರಕ್ಕೆ ಮೂಲಭೂತ ಸೌಕರ್ಯ ಒದಗಿಸುವುದು, ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಆರೋಗ್ಯದ ಸೌಲಭ್ಯಗಳನ್ನು ಕೊಡಿಸುವ ಕಾರ್ಯವನ್ನು ಈ ಪ್ರಶಸ್ತಿಯು ಎತ್ತಿ ಹಿಡಿದಿದೆ. ಈ ಕೆಲಸದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಜಂಟಿಯಾಗಿ ಶ್ರಮಿಸಿವೆ. ಇಂತಹ ಜಾಗೃತಿಯ ಚಳವಳಿಯಲ್ಲಿ ಬುಡಕಟ್ಟು ಸಮುದಾಯದ ಸದಸ್ಯರುಗಳು ತೊಡಗಿಸಿಕೊಂಡು ಮೇಲೆ ಬಂದವರಲ್ಲಿ ಶಕುಂತಲಾ ಕೊರಗ ನಜೇರು ಒಬ್ಬರು.

`ಬಾಲ್ಯದಿಂದಲೆ ಕಲ್ಯಾಣಪುರಿ ಗೊರಟ್ಟಿ ಆಸ್ಪತ್ರೆಯಲ್ಲಿ ನಾವು ಬೆಳೆದದ್ದು. ಅಮ್ಮ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಹಾಗಾಗಿ ಆಸ್ಪತ್ರೆಯಲ್ಲೆ ಒಂದು ರೂಮು ಕೊಟ್ಟಿದ್ರು. ಹಂಗಾಗಿ ನಾವು ಅಲ್ಲೇ ರ‍್ತಿದ್ವಿ. ಆಗ ಶಾಲೆಗೆ ಹೋಗೋದು ತೊಂದ್ರೆಯೇನು ಆಗಿರಲಿಲ್ಲ. ನಾವು ಒಂದು ದಿನ ಶಾಲೆಗೆ ಹೋಗದೆ ಇದ್ರೆ ಮನೇಲಿ ಯಾಕೆ ಶಾಲೆಗೆ ಹೋಗಿಲ್ಲ ಎಂದು ಕೇಳುತ್ತಿರಲಿಲ್ಲ. ಹಾಗಾಗಿ ಶಾಲೆಗೆ ಹೋಗೋಕೆ ಅಷ್ಟು ಆಸಕ್ತಿ ತೋರದೆ ಏಳನೆ ತರಗತಿ ಓದಿ ಅರ್ಧಕ್ಕೆ ಬಿಟ್ಟೆ. ನಂತರ ಬಾರ್ಕೂರ್ ನಲ್ಲಿ ಮದ್ವೆ ಆಯ್ತು. ಗಂಡ ಮೊದಲು ಉಡುಪಿಯಲ್ಲಿ ಸ್ಪೀಪರ್ ಕೆಲಸ ಮಾಡತಿದ್ರು. 1993 ರಲ್ಲಿ ದೊಡ್ಡ ಮಗನ ನಂತರ ಎರಡನೆ ಮಗ ಚಿಕ್ಕವನಿದ್ದ. ಆಗ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ಬಾರ್ಕೂರಲ್ಲಿ ಸಂಘಟನೆ ಮಾಡೋಕೆ ಬಂದಿದ್ರು. ನಾವು ಮೊದಲು ಸಂಘಟನೆ ಅಂದ್ರೆ ಹೆರ‍್ತಾ ಇದ್ವಿ. ಗಂಡಸರನ್ನು ಮುಂದೆ ಬಿಟ್ಟು ನಾವು ಹಾಗೆ ಹಿಂದೆ ಇದ್ದುಕೊಂಡು ಸಂಘಟನೆಗೆ ಸೇರಿದೆ. ನಾವು ಒಂದೊAದು ಗ್ರಾಮದಲ್ಲಿ ಹತ್ ಮನೆ, ಇಪ್ಪತ್ ಮನೆಗಳಲ್ಲಿ ಮೀಟಿಂಗ್ ಮಾಡಿ ಅವರಲ್ಲಿ ಸಂಘಟನೆ ಮಾಡ್ತಾ ಇದ್ವಿ. ಮೊದಲು ಅಸ್ಪೃಶ್ಯತೆ ಹೋಗಲಾಡಿಸಲು ಜನರಲ್ಲಿ ಜಾಗೃತಿ ಮೂಡಿಸಿದೆವು’ ಎಂದು ಶಕುಂತಲಾ ಅವರು ತನ್ನ ಹೋರಾಟದ ಹಾದಿಯನ್ನು ನೆನೆಯುತ್ತಾರೆ.

ಶಕುಂತಲಾ ಅವರ ಗಂಡ ಸಂಜೀವ ಕೊರಗ ಕೂಡ ಕೊರಗ ಸಮುದಾಯದ ಜಾಗೃತಿಗಾಗಿ ಬದ್ಧತೆಯಿಂದ ಕೆಲಸ ಮಾಡಿದವರು. ಹಾಗಾಗಿ ಶಕುಂತಲಾ ಅವರ ಚಳವಳಿಯ ಸಾಂಗತ್ಯಕ್ಕೆ ಗಂಡ ಸಂಜೀವರು ಹೆಗಲು ಕೊಟ್ಟಿದ್ದಾರೆ. ಶಕುಂತಲಾ ಏಳನೆಯ ತರಗತಿಯ ತನಕ ಓದಿದರೂ, ಸಂಘಟನೆಗಳು ಕೊಟ್ಟ ಎಚ್ಚರದ ಪರಿಣಾಮ ಇಬ್ಬರು ಮಕ್ಕಳನ್ನು ಉತ್ತಮವಾಗಿ ಓದಿಸಿದ್ದಾರೆ. ದೊಡ್ಡ ಮಗ ಸಂದೀಪ್ ಫಿಸಿಕ್ಸ್ನಲ್ಲಿ ಎಂಎಸ್ಸಿ ಪದವಿ ಪಡೆದು ಈಗ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗ ಮಾಡುತ್ತಿದ್ದರೆ, ಸಣ್ಣ ಮಗ ಸತೀಶ್ ಎಂಟೆಕ್ ಮಾಡಿ ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ದುಡಿಯುತ್ತಿದ್ದಾರೆ. ಇವರ ವಿದ್ಯಾಭ್ಯಾಸದ ಹಿಂದೆ ಶಕುಂತಲಾ ಮತ್ತು ಸಂಜೀವ್ ಅವರ ಅವಿರತ ಶ್ರಮವಿದೆ.

`ಶಕುಂತಲಾ ಸುಮಾರು 30 ವರ್ಷಗಳ ಕಾಲ ಕಲ್ಯಾಣಪುರಿ ಗೊರಟ್ಟಿ ಆಸ್ಪತ್ರೆಯಲ್ಲಿ ಆಯಾ ಕೆಲಸ ನಿರ್ವಹಿಸಿ ಈಗ ನಿವೃತ್ತಿ ಪಡೆದು ಪೂರ್ಣಕಾಲೀನ ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. 1990 ರಿಂದ ಶಕುಂತಲಾ ಅವರ ಕುಟುಂಬ ಕೊರಗರ ಚಳುವಳಿಯಲ್ಲಿ ತೊಡಗಿಸಿಕೊಂಡಿದೆ. ಬಹಳ ಮುಖ್ಯವಾಗಿ ಕೊರಗರ ಭೂಮಿ ಹೋರಾಟ, ಅಜಲು ನಿಶೇಧ ಕಾಯ್ದೆ ಬರುವುದಕ್ಕಾಗಿನ ಹೋರಾಟ, ಗುಣಮಟ್ಟದ ಪೌಷ್ಟಿಕ ಆಹಾರದ ಹೋರಾಟ, ಕುಡಿತ, ದುಶ್ಚಟಗಳ ವಿರುದ್ಧದ ಹೋರಾಟ, ಮಹಿಳೆಯರ ಸ್ವಾಭಿಮಾನದ ಚಳವಳಿ, ಶಿಕ್ಷಣ, ಆರೋಗ್ಯದ ಕೆಲಸಗಳಲ್ಲಿ ಶಕುಂತಲಾ ಮುಂಚೂಣಿಯಲ್ಲಿದ್ದರು’ ಎಂದು `ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ’ಯ ಅಶೋಕ ಅವರು ಹೇಳುತ್ತಾರೆ.

`ನಾವು ಮೂವತ್ತು ವರ್ಷದಿಂದ ಸಂಘಟನೆಯಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಕೆಲಸ ಮಾಡಿದರೂ, ಇನ್ನೂ ಹಳ್ಳಿ ಕಡೆಗಳಲ್ಲಿ ಕೊರಗರನ್ನು ಅಸ್ಪೃಶ್ಯರನ್ನಾಗಿಯೇ ನೋಡಲಾಗುತ್ತಿದೆ. ಅಸ್ಪೃಶ್ಯತೆಯನ್ನು ಜನರು ಒಳ್ಳೆ ಮೈಂಡಲ್ಲಿ ಇಟ್ಕೊಂಡಿದಾರೆ. ಅದು ಹೇಗೆ ನಾಟಿದೆ ಅಂದರೆ ಈ ಕೊರೋನಾ ಬೇಕಾದರೆ ಓಡಿಸಬಹುದು. ಆದರೆ ಅಸ್ಪೃಶ್ಯತೆಯನ್ನು ಓಡಿಸೋಕೆ ಆಗಲ್ಲ. ಆದರೆ ಸಂಘಟನೆಯ ಆರಂಭಕ್ಕೂ ಮುನ್ನ ಮೂರು ದಶಕಗಳ ಹಿಂದಿನ ಕೊರಗರ ಬದುಕನ್ನು ಹೋಲಿಸಿಕೊಂಡರೆ ಸಂಘಟನೆಗಳ ಕೆಲಸದಿಂದ ತುಂಬಾ ಬದಲಾವಣೆಯಾಗಿದೆ. ಡ್ರಾಪ್‌ಔಟ್ ಆದ ಸಬಿತಾ ಎನ್ನುವ ಕೊರಗರ ಹುಡುಗಿಯೊಬ್ಬಳು ಆಶ್ರಮದ ಹಾಸ್ಟೆಲ್‌ನಲ್ಲಿ ಓದು ಮುಂದುವರಿಸಿ ಇಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದಾರೆ. ಹೀಗೆ ಸಂಘಟನೆಗಳು ಕೊರಗ ಸಮುದಾಯದಲ್ಲಿ ಜಾಗೃತಿ ಮೂಡಿಸಿವೆ. ಹತ್ತಾರು ಜನರು ಸೇರಿ ಈ ಸಂಘಟನೆಗಳ ಕೆಲಸದಲ್ಲಿ ದುಡಿದಿದ್ದೇವೆ, ಅದರಲ್ಲಿ ನನ್ನ ಸಣ್ಣ ಪಾಲಿದೆ. ನಾನು ಸಂಘಟನೆಯಲ್ಲಿದ್ದರೂ ಈತನಕ ಅಧ್ಯಕ್ಷೆ ಆಗಿರಲಿಲ್ಲ. ಎರಡು ವರ್ಷಕ್ಕೊಮ್ಮೆ ಸಂಘಟನೆಯ ಅಧ್ಯಕ್ಷಗಿರಿ ಬದಲಾಗೋದ್ರಿಂದ ಎಲ್ಲರ ಒತ್ತಾಯದ ಮೇರೆಗೆ ನಾನು ಅಧ್ಯಕ್ಷೆಯಾದೆ, ನಾನು ಅಧ್ಯಕ್ಷೆಯಾದ ಸಂದರ್ಭದಲ್ಲಿಯೇ ಇಂತಹದ್ದೊಂದು ದೊಡ್ಡ ಪ್ರಶಸ್ತಿ ಬಂದಿದೆ. ಅದು ಈತನಕದ ಎಲ್ಲರ ದುಡಿಮೆಗೆ ಸಿಕ್ಕ ಫಲ ಎಂದು ಶಕುಂತಲಾ ಅವರು ಹೇಳುತ್ತಾರೆ. ತಮ್ಮ ಹೋರಾಟ, ಕೊರಗರ ಬದುಕಿನಲ್ಲಾದ ಬದಲಾವಣೆಯ ಬಗ್ಗೆ ನನಗೆ ಅಷ್ಟು ಗೊತ್ತಾಗಲ್ಲ ಸರ್ ಎನ್ನುವ ಮುಗ್ಧತೆಯಲ್ಲಿಯೇ ಮಾತನಾಡುವ ಶಕುಂತಲಾ ಅವರು ಕೊರಗ ಸಮುದಾಯದ ಈಗಿನ ಯುವಜನತೆಗೆ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...