Homeಮುಖಪುಟಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

ಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

ಮೂರು ದಶಕಗಳ ಕಾಲ ಕೊರಗರ ಸ್ವಾಭಿಮಾನದ ಬದುಕಿಗಾಗಿ ದುಡಿದ ಮತ್ತು 2019ರ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ’ಯನ್ನು ಸ್ವೀಕರಿಸಿದ ಶಕುಂತಲಾ ಕೊರಗ ನೇಜಾರ್‌ರವರ ಮಾತುಗಳು.

- Advertisement -
- Advertisement -

ಎಲೆಮರೆ-30

  • ಅರುಣ್ ಜೋಳದಕೂಡ್ಲಿಗಿ.

ಫೆಬ್ರವರಿ 11, 2020 ರಂದು ಯುನೈಟೆಡ್ ಅರಬ್ ಎಮಿರೈಟ್ಸ್‌ನ ರಾಜಧಾನಿಯಾದ ಅರೇಬಿಯನ್ ಧ್ವೀಪವೊಂದರಲ್ಲಿರುವ ಅಬುದಾಬಿಯಲ್ಲಿ ನಡೆದ ವಿಶ್ವಸಂಸ್ಥೆಯ ಆಯೋಜನೆಯ ವರ್ಣರಂಜಿತ ಕಾರ್ಯಕ್ರಮದಲ್ಲಿ ಉಡುಪಿಯ ನೇಜಾರದ ಕೊರಗ ಸಮುದಾಯದ ಶಕುಂತಲಾ ಅವರು `2019ರ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ’ಯನ್ನು ಸ್ವೀಕರಿಸಿದರು. ಈ ಇದು ಕೊರಗ ಸಮುದಾಯದ ಇತಿಹಾಸದಲ್ಲಿ ಒಂದು ಮಹತ್ವದ ದಿನವಾಗಿ ದಾಖಲಾಯಿತು. ಕಾರಣ ಮೊದಲ ಬಾರಿಗೆ ಕೊರಗ ಸಮುದಾಯದ ಮಹಿಳೆಯೊಬ್ಬರು ವಿದೇಶಕ್ಕೆ ತೆರಳಿ ಇಂತಹದ್ದೊಂದು ಅಂತಾರಾಷ್ಟ್ರೀಯ ಪ್ರಶಸ್ತಿಯೊಂದನ್ನು ಸ್ವೀಕರಿಸಿದರು. ಈ ಪ್ರಶಸ್ತಿಯ ಜಾಡು ಹಿಡಿದು ಹಿಂದಕ್ಕೆ ನಡೆದರೆ 1987 ರಿಂದ ಕೊರಗ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯು ಕೊರಗ ಸಮುದಾಯದಲ್ಲಿ ಮೂಡಿಸಿದ ಸ್ವಾಭಿಮಾನದ ಕಥನವು ಬಿಚ್ಚಿಕೊಳ್ಳುತ್ತದೆ.

ವಿಶ್ವಸಂಸ್ಥೆಯ ಹ್ಯಾಬಿಟ್ಯಾಟ್ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಹಾದುಬರುವುದು ಅಷ್ಟು ಸುಲಭವಲ್ಲ. 195 ದೇಶಗಳ 3000 ಸ್ವಯಂ ಸೇವಾ ಸಂಸ್ಥೆಗಳು ಈ ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು. ಅಂತಿಮ ಸುತ್ತಿಗೆ ಆಯ್ಕೆಯಾದ ಹತ್ತು ಸಂಸ್ಥೆಗಳ ಕಾರ್ಯಗಳ ಬಗ್ಗೆ ಸ್ವತಃ ವಿಶ್ವಸಂಸ್ಥೆಯ ಪ್ರತಿನಿಧಿಗಳು ಭೇಟಿನೀಡಿ ಜನರೊಟ್ಟಿಗೆ ಮಾತಾಡಿ, ಸುಧಾರಣ ಕೆಲಸಗಳನ್ನು ಪರೀಕ್ಷೆಗೆ ಒಳಪಡಿಸುತ್ತಾರೆ. ಈ ವರದಿಯನ್ನು ಆಧರಿಸಿ ಅಂತಿಮವಾಗಿ ನಾಲ್ಕು ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಜಾಗತಿಕ ದಕ್ಷಿಣ ವಿಭಾಗದಿಂದ `ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ’ಗೆ ಗೋಲ್ಡನ್ ಪ್ರಶಸ್ತಿ ಲಭಿಸಿತು. ಭಾರತಕ್ಕೆ ಈತನಕ ನಾಲ್ಕು ಬಾರಿ ಮಾತ್ರ ವಿಶ್ವಸಂಸ್ಥೆಯ ಹ್ಯಾಬಿಟ್ಯಾಟ್ ಪ್ರಶಸ್ತಿ ಬಂದಿದೆ. ವಿಶೇಷವೆಂದರೆ ಈ ಪ್ರಶಸ್ತಿ ಕರ್ನಾಟಕಕ್ಕೆ ಸಿಕ್ಕಿರುವುದು ಇದೇ ಮೊದಲು.

ಹಾಗಾದರೆ ಇಂತಹ ಪ್ರಶಸ್ತಿಗೆ ಭಾಜನವಾದ ಸಂಸ್ಥೆಯ ಕೆಲಸವಾದರೂ ಎಂಥದು ಎನ್ನುವ ಪ್ರಶ್ನೆ ಎದುರು ನಿಲ್ಲುತ್ತದೆ. ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು 1987 ರಿಂದ ರಾಜ್ಯದ ಬುಡಕಟ್ಟು ಸಮುದಾಯಗಳ ಹಕ್ಕೊತ್ತಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕ ಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಕೊರಗರು, ಹಲಸರು, ಗೊಂಡ, ಮಲೆಕುಡಿಯ, ಹಕ್ಕಿಪಿಕ್ಕಿ, ಜೇನುಕುರುಬ, ಬೆಟ್ಟಕುರುಬ, ಎರವ, ಸೋಲಿಗ, ಡೋಂಗ್ರಿ ಗರಾಸಿಯ ಈ ಸಮುದಾಯಗಳನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಜಾಗೃತಗೊಳಿಸಿ ಸ್ವಾಭಿಮಾನದ ಘನತೆಯ ಬದುಕು ರೂಪಿಸಲು ಶ್ರಮಿಸಿದ್ದಕ್ಕೆ ಈ ಪ್ರಶಸ್ತಿಯು ಲಭಿಸಿದೆ.

ಮುಖ್ಯವಾಗಿ ಸಮುದಾಯಗಳ ಜನರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಹಕ್ಕು ಕೊಡಿಸುವುದು, ವಸತಿ ಸೌಲಭ್ಯ, ಜೀವನಾಧಾರಕ್ಕೆ ಮೂಲಭೂತ ಸೌಕರ್ಯ ಒದಗಿಸುವುದು, ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಆರೋಗ್ಯದ ಸೌಲಭ್ಯಗಳನ್ನು ಕೊಡಿಸುವ ಕಾರ್ಯವನ್ನು ಈ ಪ್ರಶಸ್ತಿಯು ಎತ್ತಿ ಹಿಡಿದಿದೆ. ಈ ಕೆಲಸದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಜಂಟಿಯಾಗಿ ಶ್ರಮಿಸಿವೆ. ಇಂತಹ ಜಾಗೃತಿಯ ಚಳವಳಿಯಲ್ಲಿ ಬುಡಕಟ್ಟು ಸಮುದಾಯದ ಸದಸ್ಯರುಗಳು ತೊಡಗಿಸಿಕೊಂಡು ಮೇಲೆ ಬಂದವರಲ್ಲಿ ಶಕುಂತಲಾ ಕೊರಗ ನಜೇರು ಒಬ್ಬರು.

`ಬಾಲ್ಯದಿಂದಲೆ ಕಲ್ಯಾಣಪುರಿ ಗೊರಟ್ಟಿ ಆಸ್ಪತ್ರೆಯಲ್ಲಿ ನಾವು ಬೆಳೆದದ್ದು. ಅಮ್ಮ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಹಾಗಾಗಿ ಆಸ್ಪತ್ರೆಯಲ್ಲೆ ಒಂದು ರೂಮು ಕೊಟ್ಟಿದ್ರು. ಹಂಗಾಗಿ ನಾವು ಅಲ್ಲೇ ರ‍್ತಿದ್ವಿ. ಆಗ ಶಾಲೆಗೆ ಹೋಗೋದು ತೊಂದ್ರೆಯೇನು ಆಗಿರಲಿಲ್ಲ. ನಾವು ಒಂದು ದಿನ ಶಾಲೆಗೆ ಹೋಗದೆ ಇದ್ರೆ ಮನೇಲಿ ಯಾಕೆ ಶಾಲೆಗೆ ಹೋಗಿಲ್ಲ ಎಂದು ಕೇಳುತ್ತಿರಲಿಲ್ಲ. ಹಾಗಾಗಿ ಶಾಲೆಗೆ ಹೋಗೋಕೆ ಅಷ್ಟು ಆಸಕ್ತಿ ತೋರದೆ ಏಳನೆ ತರಗತಿ ಓದಿ ಅರ್ಧಕ್ಕೆ ಬಿಟ್ಟೆ. ನಂತರ ಬಾರ್ಕೂರ್ ನಲ್ಲಿ ಮದ್ವೆ ಆಯ್ತು. ಗಂಡ ಮೊದಲು ಉಡುಪಿಯಲ್ಲಿ ಸ್ಪೀಪರ್ ಕೆಲಸ ಮಾಡತಿದ್ರು. 1993 ರಲ್ಲಿ ದೊಡ್ಡ ಮಗನ ನಂತರ ಎರಡನೆ ಮಗ ಚಿಕ್ಕವನಿದ್ದ. ಆಗ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ಬಾರ್ಕೂರಲ್ಲಿ ಸಂಘಟನೆ ಮಾಡೋಕೆ ಬಂದಿದ್ರು. ನಾವು ಮೊದಲು ಸಂಘಟನೆ ಅಂದ್ರೆ ಹೆರ‍್ತಾ ಇದ್ವಿ. ಗಂಡಸರನ್ನು ಮುಂದೆ ಬಿಟ್ಟು ನಾವು ಹಾಗೆ ಹಿಂದೆ ಇದ್ದುಕೊಂಡು ಸಂಘಟನೆಗೆ ಸೇರಿದೆ. ನಾವು ಒಂದೊAದು ಗ್ರಾಮದಲ್ಲಿ ಹತ್ ಮನೆ, ಇಪ್ಪತ್ ಮನೆಗಳಲ್ಲಿ ಮೀಟಿಂಗ್ ಮಾಡಿ ಅವರಲ್ಲಿ ಸಂಘಟನೆ ಮಾಡ್ತಾ ಇದ್ವಿ. ಮೊದಲು ಅಸ್ಪೃಶ್ಯತೆ ಹೋಗಲಾಡಿಸಲು ಜನರಲ್ಲಿ ಜಾಗೃತಿ ಮೂಡಿಸಿದೆವು’ ಎಂದು ಶಕುಂತಲಾ ಅವರು ತನ್ನ ಹೋರಾಟದ ಹಾದಿಯನ್ನು ನೆನೆಯುತ್ತಾರೆ.

ಶಕುಂತಲಾ ಅವರ ಗಂಡ ಸಂಜೀವ ಕೊರಗ ಕೂಡ ಕೊರಗ ಸಮುದಾಯದ ಜಾಗೃತಿಗಾಗಿ ಬದ್ಧತೆಯಿಂದ ಕೆಲಸ ಮಾಡಿದವರು. ಹಾಗಾಗಿ ಶಕುಂತಲಾ ಅವರ ಚಳವಳಿಯ ಸಾಂಗತ್ಯಕ್ಕೆ ಗಂಡ ಸಂಜೀವರು ಹೆಗಲು ಕೊಟ್ಟಿದ್ದಾರೆ. ಶಕುಂತಲಾ ಏಳನೆಯ ತರಗತಿಯ ತನಕ ಓದಿದರೂ, ಸಂಘಟನೆಗಳು ಕೊಟ್ಟ ಎಚ್ಚರದ ಪರಿಣಾಮ ಇಬ್ಬರು ಮಕ್ಕಳನ್ನು ಉತ್ತಮವಾಗಿ ಓದಿಸಿದ್ದಾರೆ. ದೊಡ್ಡ ಮಗ ಸಂದೀಪ್ ಫಿಸಿಕ್ಸ್ನಲ್ಲಿ ಎಂಎಸ್ಸಿ ಪದವಿ ಪಡೆದು ಈಗ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗ ಮಾಡುತ್ತಿದ್ದರೆ, ಸಣ್ಣ ಮಗ ಸತೀಶ್ ಎಂಟೆಕ್ ಮಾಡಿ ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ದುಡಿಯುತ್ತಿದ್ದಾರೆ. ಇವರ ವಿದ್ಯಾಭ್ಯಾಸದ ಹಿಂದೆ ಶಕುಂತಲಾ ಮತ್ತು ಸಂಜೀವ್ ಅವರ ಅವಿರತ ಶ್ರಮವಿದೆ.

`ಶಕುಂತಲಾ ಸುಮಾರು 30 ವರ್ಷಗಳ ಕಾಲ ಕಲ್ಯಾಣಪುರಿ ಗೊರಟ್ಟಿ ಆಸ್ಪತ್ರೆಯಲ್ಲಿ ಆಯಾ ಕೆಲಸ ನಿರ್ವಹಿಸಿ ಈಗ ನಿವೃತ್ತಿ ಪಡೆದು ಪೂರ್ಣಕಾಲೀನ ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. 1990 ರಿಂದ ಶಕುಂತಲಾ ಅವರ ಕುಟುಂಬ ಕೊರಗರ ಚಳುವಳಿಯಲ್ಲಿ ತೊಡಗಿಸಿಕೊಂಡಿದೆ. ಬಹಳ ಮುಖ್ಯವಾಗಿ ಕೊರಗರ ಭೂಮಿ ಹೋರಾಟ, ಅಜಲು ನಿಶೇಧ ಕಾಯ್ದೆ ಬರುವುದಕ್ಕಾಗಿನ ಹೋರಾಟ, ಗುಣಮಟ್ಟದ ಪೌಷ್ಟಿಕ ಆಹಾರದ ಹೋರಾಟ, ಕುಡಿತ, ದುಶ್ಚಟಗಳ ವಿರುದ್ಧದ ಹೋರಾಟ, ಮಹಿಳೆಯರ ಸ್ವಾಭಿಮಾನದ ಚಳವಳಿ, ಶಿಕ್ಷಣ, ಆರೋಗ್ಯದ ಕೆಲಸಗಳಲ್ಲಿ ಶಕುಂತಲಾ ಮುಂಚೂಣಿಯಲ್ಲಿದ್ದರು’ ಎಂದು `ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ’ಯ ಅಶೋಕ ಅವರು ಹೇಳುತ್ತಾರೆ.

`ನಾವು ಮೂವತ್ತು ವರ್ಷದಿಂದ ಸಂಘಟನೆಯಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಕೆಲಸ ಮಾಡಿದರೂ, ಇನ್ನೂ ಹಳ್ಳಿ ಕಡೆಗಳಲ್ಲಿ ಕೊರಗರನ್ನು ಅಸ್ಪೃಶ್ಯರನ್ನಾಗಿಯೇ ನೋಡಲಾಗುತ್ತಿದೆ. ಅಸ್ಪೃಶ್ಯತೆಯನ್ನು ಜನರು ಒಳ್ಳೆ ಮೈಂಡಲ್ಲಿ ಇಟ್ಕೊಂಡಿದಾರೆ. ಅದು ಹೇಗೆ ನಾಟಿದೆ ಅಂದರೆ ಈ ಕೊರೋನಾ ಬೇಕಾದರೆ ಓಡಿಸಬಹುದು. ಆದರೆ ಅಸ್ಪೃಶ್ಯತೆಯನ್ನು ಓಡಿಸೋಕೆ ಆಗಲ್ಲ. ಆದರೆ ಸಂಘಟನೆಯ ಆರಂಭಕ್ಕೂ ಮುನ್ನ ಮೂರು ದಶಕಗಳ ಹಿಂದಿನ ಕೊರಗರ ಬದುಕನ್ನು ಹೋಲಿಸಿಕೊಂಡರೆ ಸಂಘಟನೆಗಳ ಕೆಲಸದಿಂದ ತುಂಬಾ ಬದಲಾವಣೆಯಾಗಿದೆ. ಡ್ರಾಪ್‌ಔಟ್ ಆದ ಸಬಿತಾ ಎನ್ನುವ ಕೊರಗರ ಹುಡುಗಿಯೊಬ್ಬಳು ಆಶ್ರಮದ ಹಾಸ್ಟೆಲ್‌ನಲ್ಲಿ ಓದು ಮುಂದುವರಿಸಿ ಇಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದಾರೆ. ಹೀಗೆ ಸಂಘಟನೆಗಳು ಕೊರಗ ಸಮುದಾಯದಲ್ಲಿ ಜಾಗೃತಿ ಮೂಡಿಸಿವೆ. ಹತ್ತಾರು ಜನರು ಸೇರಿ ಈ ಸಂಘಟನೆಗಳ ಕೆಲಸದಲ್ಲಿ ದುಡಿದಿದ್ದೇವೆ, ಅದರಲ್ಲಿ ನನ್ನ ಸಣ್ಣ ಪಾಲಿದೆ. ನಾನು ಸಂಘಟನೆಯಲ್ಲಿದ್ದರೂ ಈತನಕ ಅಧ್ಯಕ್ಷೆ ಆಗಿರಲಿಲ್ಲ. ಎರಡು ವರ್ಷಕ್ಕೊಮ್ಮೆ ಸಂಘಟನೆಯ ಅಧ್ಯಕ್ಷಗಿರಿ ಬದಲಾಗೋದ್ರಿಂದ ಎಲ್ಲರ ಒತ್ತಾಯದ ಮೇರೆಗೆ ನಾನು ಅಧ್ಯಕ್ಷೆಯಾದೆ, ನಾನು ಅಧ್ಯಕ್ಷೆಯಾದ ಸಂದರ್ಭದಲ್ಲಿಯೇ ಇಂತಹದ್ದೊಂದು ದೊಡ್ಡ ಪ್ರಶಸ್ತಿ ಬಂದಿದೆ. ಅದು ಈತನಕದ ಎಲ್ಲರ ದುಡಿಮೆಗೆ ಸಿಕ್ಕ ಫಲ ಎಂದು ಶಕುಂತಲಾ ಅವರು ಹೇಳುತ್ತಾರೆ. ತಮ್ಮ ಹೋರಾಟ, ಕೊರಗರ ಬದುಕಿನಲ್ಲಾದ ಬದಲಾವಣೆಯ ಬಗ್ಗೆ ನನಗೆ ಅಷ್ಟು ಗೊತ್ತಾಗಲ್ಲ ಸರ್ ಎನ್ನುವ ಮುಗ್ಧತೆಯಲ್ಲಿಯೇ ಮಾತನಾಡುವ ಶಕುಂತಲಾ ಅವರು ಕೊರಗ ಸಮುದಾಯದ ಈಗಿನ ಯುವಜನತೆಗೆ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...