Homeಮುಖಪುಟಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

ಕೊರೋನವನ್ನಾದರೂ ಓಡಿಸಬಹುದು, ಈ ಅಸ್ಪೃಶ್ಯತೆಯನ್ನು ಓಡಿಸೋಕಾಗಲ್ಲ: ಶಕುಂತಲಾ ಕೊರಗ ನೇಜಾರ್

ಮೂರು ದಶಕಗಳ ಕಾಲ ಕೊರಗರ ಸ್ವಾಭಿಮಾನದ ಬದುಕಿಗಾಗಿ ದುಡಿದ ಮತ್ತು 2019ರ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ’ಯನ್ನು ಸ್ವೀಕರಿಸಿದ ಶಕುಂತಲಾ ಕೊರಗ ನೇಜಾರ್‌ರವರ ಮಾತುಗಳು.

- Advertisement -
- Advertisement -

ಎಲೆಮರೆ-30

  • ಅರುಣ್ ಜೋಳದಕೂಡ್ಲಿಗಿ.

ಫೆಬ್ರವರಿ 11, 2020 ರಂದು ಯುನೈಟೆಡ್ ಅರಬ್ ಎಮಿರೈಟ್ಸ್‌ನ ರಾಜಧಾನಿಯಾದ ಅರೇಬಿಯನ್ ಧ್ವೀಪವೊಂದರಲ್ಲಿರುವ ಅಬುದಾಬಿಯಲ್ಲಿ ನಡೆದ ವಿಶ್ವಸಂಸ್ಥೆಯ ಆಯೋಜನೆಯ ವರ್ಣರಂಜಿತ ಕಾರ್ಯಕ್ರಮದಲ್ಲಿ ಉಡುಪಿಯ ನೇಜಾರದ ಕೊರಗ ಸಮುದಾಯದ ಶಕುಂತಲಾ ಅವರು `2019ರ ವಿಶ್ವಸಂಸ್ಥೆ ಹ್ಯಾಬಿಟ್ಯಾಟ್ ಪ್ರಶಸ್ತಿ’ಯನ್ನು ಸ್ವೀಕರಿಸಿದರು. ಈ ಇದು ಕೊರಗ ಸಮುದಾಯದ ಇತಿಹಾಸದಲ್ಲಿ ಒಂದು ಮಹತ್ವದ ದಿನವಾಗಿ ದಾಖಲಾಯಿತು. ಕಾರಣ ಮೊದಲ ಬಾರಿಗೆ ಕೊರಗ ಸಮುದಾಯದ ಮಹಿಳೆಯೊಬ್ಬರು ವಿದೇಶಕ್ಕೆ ತೆರಳಿ ಇಂತಹದ್ದೊಂದು ಅಂತಾರಾಷ್ಟ್ರೀಯ ಪ್ರಶಸ್ತಿಯೊಂದನ್ನು ಸ್ವೀಕರಿಸಿದರು. ಈ ಪ್ರಶಸ್ತಿಯ ಜಾಡು ಹಿಡಿದು ಹಿಂದಕ್ಕೆ ನಡೆದರೆ 1987 ರಿಂದ ಕೊರಗ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯು ಕೊರಗ ಸಮುದಾಯದಲ್ಲಿ ಮೂಡಿಸಿದ ಸ್ವಾಭಿಮಾನದ ಕಥನವು ಬಿಚ್ಚಿಕೊಳ್ಳುತ್ತದೆ.

ವಿಶ್ವಸಂಸ್ಥೆಯ ಹ್ಯಾಬಿಟ್ಯಾಟ್ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಹಾದುಬರುವುದು ಅಷ್ಟು ಸುಲಭವಲ್ಲ. 195 ದೇಶಗಳ 3000 ಸ್ವಯಂ ಸೇವಾ ಸಂಸ್ಥೆಗಳು ಈ ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು. ಅಂತಿಮ ಸುತ್ತಿಗೆ ಆಯ್ಕೆಯಾದ ಹತ್ತು ಸಂಸ್ಥೆಗಳ ಕಾರ್ಯಗಳ ಬಗ್ಗೆ ಸ್ವತಃ ವಿಶ್ವಸಂಸ್ಥೆಯ ಪ್ರತಿನಿಧಿಗಳು ಭೇಟಿನೀಡಿ ಜನರೊಟ್ಟಿಗೆ ಮಾತಾಡಿ, ಸುಧಾರಣ ಕೆಲಸಗಳನ್ನು ಪರೀಕ್ಷೆಗೆ ಒಳಪಡಿಸುತ್ತಾರೆ. ಈ ವರದಿಯನ್ನು ಆಧರಿಸಿ ಅಂತಿಮವಾಗಿ ನಾಲ್ಕು ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಜಾಗತಿಕ ದಕ್ಷಿಣ ವಿಭಾಗದಿಂದ `ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ’ಗೆ ಗೋಲ್ಡನ್ ಪ್ರಶಸ್ತಿ ಲಭಿಸಿತು. ಭಾರತಕ್ಕೆ ಈತನಕ ನಾಲ್ಕು ಬಾರಿ ಮಾತ್ರ ವಿಶ್ವಸಂಸ್ಥೆಯ ಹ್ಯಾಬಿಟ್ಯಾಟ್ ಪ್ರಶಸ್ತಿ ಬಂದಿದೆ. ವಿಶೇಷವೆಂದರೆ ಈ ಪ್ರಶಸ್ತಿ ಕರ್ನಾಟಕಕ್ಕೆ ಸಿಕ್ಕಿರುವುದು ಇದೇ ಮೊದಲು.

ಹಾಗಾದರೆ ಇಂತಹ ಪ್ರಶಸ್ತಿಗೆ ಭಾಜನವಾದ ಸಂಸ್ಥೆಯ ಕೆಲಸವಾದರೂ ಎಂಥದು ಎನ್ನುವ ಪ್ರಶ್ನೆ ಎದುರು ನಿಲ್ಲುತ್ತದೆ. ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು 1987 ರಿಂದ ರಾಜ್ಯದ ಬುಡಕಟ್ಟು ಸಮುದಾಯಗಳ ಹಕ್ಕೊತ್ತಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕ ಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಕೊರಗರು, ಹಲಸರು, ಗೊಂಡ, ಮಲೆಕುಡಿಯ, ಹಕ್ಕಿಪಿಕ್ಕಿ, ಜೇನುಕುರುಬ, ಬೆಟ್ಟಕುರುಬ, ಎರವ, ಸೋಲಿಗ, ಡೋಂಗ್ರಿ ಗರಾಸಿಯ ಈ ಸಮುದಾಯಗಳನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಜಾಗೃತಗೊಳಿಸಿ ಸ್ವಾಭಿಮಾನದ ಘನತೆಯ ಬದುಕು ರೂಪಿಸಲು ಶ್ರಮಿಸಿದ್ದಕ್ಕೆ ಈ ಪ್ರಶಸ್ತಿಯು ಲಭಿಸಿದೆ.

ಮುಖ್ಯವಾಗಿ ಸಮುದಾಯಗಳ ಜನರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಭೂಮಿಹಕ್ಕು ಕೊಡಿಸುವುದು, ವಸತಿ ಸೌಲಭ್ಯ, ಜೀವನಾಧಾರಕ್ಕೆ ಮೂಲಭೂತ ಸೌಕರ್ಯ ಒದಗಿಸುವುದು, ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಆರೋಗ್ಯದ ಸೌಲಭ್ಯಗಳನ್ನು ಕೊಡಿಸುವ ಕಾರ್ಯವನ್ನು ಈ ಪ್ರಶಸ್ತಿಯು ಎತ್ತಿ ಹಿಡಿದಿದೆ. ಈ ಕೆಲಸದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಜಂಟಿಯಾಗಿ ಶ್ರಮಿಸಿವೆ. ಇಂತಹ ಜಾಗೃತಿಯ ಚಳವಳಿಯಲ್ಲಿ ಬುಡಕಟ್ಟು ಸಮುದಾಯದ ಸದಸ್ಯರುಗಳು ತೊಡಗಿಸಿಕೊಂಡು ಮೇಲೆ ಬಂದವರಲ್ಲಿ ಶಕುಂತಲಾ ಕೊರಗ ನಜೇರು ಒಬ್ಬರು.

`ಬಾಲ್ಯದಿಂದಲೆ ಕಲ್ಯಾಣಪುರಿ ಗೊರಟ್ಟಿ ಆಸ್ಪತ್ರೆಯಲ್ಲಿ ನಾವು ಬೆಳೆದದ್ದು. ಅಮ್ಮ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಹಾಗಾಗಿ ಆಸ್ಪತ್ರೆಯಲ್ಲೆ ಒಂದು ರೂಮು ಕೊಟ್ಟಿದ್ರು. ಹಂಗಾಗಿ ನಾವು ಅಲ್ಲೇ ರ‍್ತಿದ್ವಿ. ಆಗ ಶಾಲೆಗೆ ಹೋಗೋದು ತೊಂದ್ರೆಯೇನು ಆಗಿರಲಿಲ್ಲ. ನಾವು ಒಂದು ದಿನ ಶಾಲೆಗೆ ಹೋಗದೆ ಇದ್ರೆ ಮನೇಲಿ ಯಾಕೆ ಶಾಲೆಗೆ ಹೋಗಿಲ್ಲ ಎಂದು ಕೇಳುತ್ತಿರಲಿಲ್ಲ. ಹಾಗಾಗಿ ಶಾಲೆಗೆ ಹೋಗೋಕೆ ಅಷ್ಟು ಆಸಕ್ತಿ ತೋರದೆ ಏಳನೆ ತರಗತಿ ಓದಿ ಅರ್ಧಕ್ಕೆ ಬಿಟ್ಟೆ. ನಂತರ ಬಾರ್ಕೂರ್ ನಲ್ಲಿ ಮದ್ವೆ ಆಯ್ತು. ಗಂಡ ಮೊದಲು ಉಡುಪಿಯಲ್ಲಿ ಸ್ಪೀಪರ್ ಕೆಲಸ ಮಾಡತಿದ್ರು. 1993 ರಲ್ಲಿ ದೊಡ್ಡ ಮಗನ ನಂತರ ಎರಡನೆ ಮಗ ಚಿಕ್ಕವನಿದ್ದ. ಆಗ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ ಬಾರ್ಕೂರಲ್ಲಿ ಸಂಘಟನೆ ಮಾಡೋಕೆ ಬಂದಿದ್ರು. ನಾವು ಮೊದಲು ಸಂಘಟನೆ ಅಂದ್ರೆ ಹೆರ‍್ತಾ ಇದ್ವಿ. ಗಂಡಸರನ್ನು ಮುಂದೆ ಬಿಟ್ಟು ನಾವು ಹಾಗೆ ಹಿಂದೆ ಇದ್ದುಕೊಂಡು ಸಂಘಟನೆಗೆ ಸೇರಿದೆ. ನಾವು ಒಂದೊAದು ಗ್ರಾಮದಲ್ಲಿ ಹತ್ ಮನೆ, ಇಪ್ಪತ್ ಮನೆಗಳಲ್ಲಿ ಮೀಟಿಂಗ್ ಮಾಡಿ ಅವರಲ್ಲಿ ಸಂಘಟನೆ ಮಾಡ್ತಾ ಇದ್ವಿ. ಮೊದಲು ಅಸ್ಪೃಶ್ಯತೆ ಹೋಗಲಾಡಿಸಲು ಜನರಲ್ಲಿ ಜಾಗೃತಿ ಮೂಡಿಸಿದೆವು’ ಎಂದು ಶಕುಂತಲಾ ಅವರು ತನ್ನ ಹೋರಾಟದ ಹಾದಿಯನ್ನು ನೆನೆಯುತ್ತಾರೆ.

ಶಕುಂತಲಾ ಅವರ ಗಂಡ ಸಂಜೀವ ಕೊರಗ ಕೂಡ ಕೊರಗ ಸಮುದಾಯದ ಜಾಗೃತಿಗಾಗಿ ಬದ್ಧತೆಯಿಂದ ಕೆಲಸ ಮಾಡಿದವರು. ಹಾಗಾಗಿ ಶಕುಂತಲಾ ಅವರ ಚಳವಳಿಯ ಸಾಂಗತ್ಯಕ್ಕೆ ಗಂಡ ಸಂಜೀವರು ಹೆಗಲು ಕೊಟ್ಟಿದ್ದಾರೆ. ಶಕುಂತಲಾ ಏಳನೆಯ ತರಗತಿಯ ತನಕ ಓದಿದರೂ, ಸಂಘಟನೆಗಳು ಕೊಟ್ಟ ಎಚ್ಚರದ ಪರಿಣಾಮ ಇಬ್ಬರು ಮಕ್ಕಳನ್ನು ಉತ್ತಮವಾಗಿ ಓದಿಸಿದ್ದಾರೆ. ದೊಡ್ಡ ಮಗ ಸಂದೀಪ್ ಫಿಸಿಕ್ಸ್ನಲ್ಲಿ ಎಂಎಸ್ಸಿ ಪದವಿ ಪಡೆದು ಈಗ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಉದ್ಯೋಗ ಮಾಡುತ್ತಿದ್ದರೆ, ಸಣ್ಣ ಮಗ ಸತೀಶ್ ಎಂಟೆಕ್ ಮಾಡಿ ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ದುಡಿಯುತ್ತಿದ್ದಾರೆ. ಇವರ ವಿದ್ಯಾಭ್ಯಾಸದ ಹಿಂದೆ ಶಕುಂತಲಾ ಮತ್ತು ಸಂಜೀವ್ ಅವರ ಅವಿರತ ಶ್ರಮವಿದೆ.

`ಶಕುಂತಲಾ ಸುಮಾರು 30 ವರ್ಷಗಳ ಕಾಲ ಕಲ್ಯಾಣಪುರಿ ಗೊರಟ್ಟಿ ಆಸ್ಪತ್ರೆಯಲ್ಲಿ ಆಯಾ ಕೆಲಸ ನಿರ್ವಹಿಸಿ ಈಗ ನಿವೃತ್ತಿ ಪಡೆದು ಪೂರ್ಣಕಾಲೀನ ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. 1990 ರಿಂದ ಶಕುಂತಲಾ ಅವರ ಕುಟುಂಬ ಕೊರಗರ ಚಳುವಳಿಯಲ್ಲಿ ತೊಡಗಿಸಿಕೊಂಡಿದೆ. ಬಹಳ ಮುಖ್ಯವಾಗಿ ಕೊರಗರ ಭೂಮಿ ಹೋರಾಟ, ಅಜಲು ನಿಶೇಧ ಕಾಯ್ದೆ ಬರುವುದಕ್ಕಾಗಿನ ಹೋರಾಟ, ಗುಣಮಟ್ಟದ ಪೌಷ್ಟಿಕ ಆಹಾರದ ಹೋರಾಟ, ಕುಡಿತ, ದುಶ್ಚಟಗಳ ವಿರುದ್ಧದ ಹೋರಾಟ, ಮಹಿಳೆಯರ ಸ್ವಾಭಿಮಾನದ ಚಳವಳಿ, ಶಿಕ್ಷಣ, ಆರೋಗ್ಯದ ಕೆಲಸಗಳಲ್ಲಿ ಶಕುಂತಲಾ ಮುಂಚೂಣಿಯಲ್ಲಿದ್ದರು’ ಎಂದು `ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆ’ಯ ಅಶೋಕ ಅವರು ಹೇಳುತ್ತಾರೆ.

`ನಾವು ಮೂವತ್ತು ವರ್ಷದಿಂದ ಸಂಘಟನೆಯಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಕೆಲಸ ಮಾಡಿದರೂ, ಇನ್ನೂ ಹಳ್ಳಿ ಕಡೆಗಳಲ್ಲಿ ಕೊರಗರನ್ನು ಅಸ್ಪೃಶ್ಯರನ್ನಾಗಿಯೇ ನೋಡಲಾಗುತ್ತಿದೆ. ಅಸ್ಪೃಶ್ಯತೆಯನ್ನು ಜನರು ಒಳ್ಳೆ ಮೈಂಡಲ್ಲಿ ಇಟ್ಕೊಂಡಿದಾರೆ. ಅದು ಹೇಗೆ ನಾಟಿದೆ ಅಂದರೆ ಈ ಕೊರೋನಾ ಬೇಕಾದರೆ ಓಡಿಸಬಹುದು. ಆದರೆ ಅಸ್ಪೃಶ್ಯತೆಯನ್ನು ಓಡಿಸೋಕೆ ಆಗಲ್ಲ. ಆದರೆ ಸಂಘಟನೆಯ ಆರಂಭಕ್ಕೂ ಮುನ್ನ ಮೂರು ದಶಕಗಳ ಹಿಂದಿನ ಕೊರಗರ ಬದುಕನ್ನು ಹೋಲಿಸಿಕೊಂಡರೆ ಸಂಘಟನೆಗಳ ಕೆಲಸದಿಂದ ತುಂಬಾ ಬದಲಾವಣೆಯಾಗಿದೆ. ಡ್ರಾಪ್‌ಔಟ್ ಆದ ಸಬಿತಾ ಎನ್ನುವ ಕೊರಗರ ಹುಡುಗಿಯೊಬ್ಬಳು ಆಶ್ರಮದ ಹಾಸ್ಟೆಲ್‌ನಲ್ಲಿ ಓದು ಮುಂದುವರಿಸಿ ಇಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದಾರೆ. ಹೀಗೆ ಸಂಘಟನೆಗಳು ಕೊರಗ ಸಮುದಾಯದಲ್ಲಿ ಜಾಗೃತಿ ಮೂಡಿಸಿವೆ. ಹತ್ತಾರು ಜನರು ಸೇರಿ ಈ ಸಂಘಟನೆಗಳ ಕೆಲಸದಲ್ಲಿ ದುಡಿದಿದ್ದೇವೆ, ಅದರಲ್ಲಿ ನನ್ನ ಸಣ್ಣ ಪಾಲಿದೆ. ನಾನು ಸಂಘಟನೆಯಲ್ಲಿದ್ದರೂ ಈತನಕ ಅಧ್ಯಕ್ಷೆ ಆಗಿರಲಿಲ್ಲ. ಎರಡು ವರ್ಷಕ್ಕೊಮ್ಮೆ ಸಂಘಟನೆಯ ಅಧ್ಯಕ್ಷಗಿರಿ ಬದಲಾಗೋದ್ರಿಂದ ಎಲ್ಲರ ಒತ್ತಾಯದ ಮೇರೆಗೆ ನಾನು ಅಧ್ಯಕ್ಷೆಯಾದೆ, ನಾನು ಅಧ್ಯಕ್ಷೆಯಾದ ಸಂದರ್ಭದಲ್ಲಿಯೇ ಇಂತಹದ್ದೊಂದು ದೊಡ್ಡ ಪ್ರಶಸ್ತಿ ಬಂದಿದೆ. ಅದು ಈತನಕದ ಎಲ್ಲರ ದುಡಿಮೆಗೆ ಸಿಕ್ಕ ಫಲ ಎಂದು ಶಕುಂತಲಾ ಅವರು ಹೇಳುತ್ತಾರೆ. ತಮ್ಮ ಹೋರಾಟ, ಕೊರಗರ ಬದುಕಿನಲ್ಲಾದ ಬದಲಾವಣೆಯ ಬಗ್ಗೆ ನನಗೆ ಅಷ್ಟು ಗೊತ್ತಾಗಲ್ಲ ಸರ್ ಎನ್ನುವ ಮುಗ್ಧತೆಯಲ್ಲಿಯೇ ಮಾತನಾಡುವ ಶಕುಂತಲಾ ಅವರು ಕೊರಗ ಸಮುದಾಯದ ಈಗಿನ ಯುವಜನತೆಗೆ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...