Homeಮುಖಪುಟಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ.

ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರೂಪಮ್ ಬಲ್ಲವ್ (13) ಮತ್ತು ಸೌರವ್ ಚೌಧರಿ (8) ಗಾಯಗೊಂಡಿದ್ದಾರೆ.

ಪಾಂಡುವಾ ನೇತಾಜಿಪಲ್ಲಿ ಕಾಲೋನಿಯ ಕೊಳದ ಪಕ್ಕದಲ್ಲಿ ಮಕ್ಕಳ ಗುಂಪು ಆಟವಾಡುತ್ತಿದ್ದಾಗ ಗುಂಡಿಯೊಳಗೆ ಇದ್ದ ಸ್ಫೋಟಕ ಬ್ಲಾಸ್ಟ್‌ ಆಗಿದೆ. ಏಕಾಏಕಿ ಆ ಪ್ರದೇಶದಲ್ಲಿ ಭಾರೀ ಶಬ್ದ ಕೇಳಿ ಬಂದಿರುವ ಹಿನ್ನೆಲೆ ಸ್ಥಳಕ್ಕೆ ಜನರು ತೆರಳಿ ಪರಿಶೀಲಿಸಿದ್ದಾರೆ, ಈ ವೇಳೆ ಸ್ಥಳದಲ್ಲಿ ಕೆಲವು ಮಕ್ಕಳು ಪ್ರಜ್ಞೆ ತಪ್ಪಿ ಬಿದ್ದಿರುವುದು ಕಂಡು ಬಂದಿದೆ. ಮೂವರು ಬಾಲಕರನ್ನು ಮೊದಲು ಪಾಂಡುವಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಬಿಸ್ವಾಸ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಇನ್ನಿಬ್ಬರು ಬಾಲಕರ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಚುಂಚೂರ ಇಮಾಂಬರ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಇಂದು ಪಾಂಡುವಾದಲ್ಲಿ ಹೂಗ್ಲಿ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ರಚನಾ ಬ್ಯಾನರ್ಜಿ ಅವರನ್ನು ಬೆಂಬಲಿಸಿ ಚುನಾವಣಾ ರ್ಯಾಲಿಯನ್ನು ನಡೆಸಲಿದ್ದಾರೆ. ಈ ಮಧ್ಯೆ ಘಟನೆ ನಡೆದಿದೆ. ಈ ಕುರಿತು ಹೂಗ್ಲಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ನಾಯಕ ಮತ್ತು ಹೂಗ್ಲಿಯ ಹಾಲಿ ಸಂಸದ ಲಾಕೆಟ್ ಚಟರ್ಜಿ ಅವರು ಪಾಂಡುವಾದಲ್ಲಿ ಸಂತ್ರಸ್ತ  ಕುಟುಂಬವನ್ನು ಭೇಟಿ ಮಾಡಿದ್ದು, ಸ್ಫೋಟದಲ್ಲಿ ತೃಣಮೂಲ ಕಾಂಗ್ರೆಸ್ ಭಾಗಿಯಾಗಿದೆ ಎಂದು ಆರೋಪಿಸಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ಕಚ್ಛಾ ಬಾಂಬ್‌ ಸ್ಪೋಟ ಪ್ರಕರಣವು ಪ.ಬಂಗಾಳದಲ್ಲಿ ಆಡಳಿತರೂಡ ಟಿಎಂಸಿ ಮತ್ತು ವಿಪಕ್ಷ ಬಿಜೆಪಿ ನಡುವೆ ಅರೋಪ-ಪ್ರತ್ಯಾರೋಪಕ್ಕೆ ಸಾಕ್ಷಿಯಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ.  ಇದರಿಂದ ಮತಗಟ್ಟೆಗಳ ಸುತ್ತ ಬಿಗಿ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇದನ್ನು ಓದಿ: ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....