Homeಮುಖಪುಟ‘ಒಂದು ದೇಶ - ಒಂದು ಚುನಾವಣೆ’ ಮಸೂದೆ ಮಂಡನೆಗೆ ಗೈರಾದ ಬಿಜೆಪಿ ಸಂಸದರಿಗೆ ಪಕ್ಷದಿಂದ ನೋಟಿಸ್...

‘ಒಂದು ದೇಶ – ಒಂದು ಚುನಾವಣೆ’ ಮಸೂದೆ ಮಂಡನೆಗೆ ಗೈರಾದ ಬಿಜೆಪಿ ಸಂಸದರಿಗೆ ಪಕ್ಷದಿಂದ ನೋಟಿಸ್ ಸಾಧ್ಯತೆ

- Advertisement -
- Advertisement -

‘ಒಂದು ದೇಶ – ಒಂದು ಚುನಾವಣೆ’ ಮಸೂದೆಗಳನ್ನು ಮಂಡಿಸುವ ವೇಳೆ ಸಂಸತ್ತಿಗೆ ಗೈರುಹಾಜರಾಗಿದ್ದ ಬಿಜೆಪಿಯ ಸಂಸದರಿಗೆ ಪಕ್ಷವು ನೋಟಿಸ್ ಕಳುಹಿಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.  ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಮಸೂದೆಗಳನ್ನು ಮಂಡಿಸಲು ಮಂಗಳವಾರ ಮತದಾನ ನಡೆದಾಗ ಬಿಜೆಪಿಯ ಹಲವಾರು ಸಂಸದರು ಸಂಸತ್ತಿಗೆ ಗೈರುಹಾಜರಾಗಿದ್ದರು. ಹಾಗಾಗಿ ಪಕ್ಷವು ತಮ್ಮ ಸದಸ್ಯರು ಯಾಕೆ ಗೈರಾಗಿದ್ದರು ಎಂಬುದನ್ನು ವಿವರಿಸುವಂತೆ ಕಳುಹಿಸಲಿದೆ.

ಪಕ್ಷವು ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಕಳುಹಿಸಿದ್ದು, ಮಂಗಳವಾರ ಸದನಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ, ಇದರ ಹೊರತಾಗಿಯೂ 20 ಕ್ಕೂ ಹೆಚ್ಚು ಬಿಜೆಪಿ ಸಂಸದರು ಸಂವಿಧಾನದ ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ ಮಸೂದೆ-2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆ – 2024 ರ ಮತದಾನದ ವೇಳೆ ಗೈರುಹಾಜರಾಗಿದ್ದರು. ಒಂದು ದೇಶ – ಒಂದು ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಕೆಲವು ಕೇಂದ್ರ ಸಚಿವರು ಮತ್ತು ಸಂಸದರು ಅಧಿಕೃತ ಕಾರ್ಯಕ್ರಮಗಳು ಮೊದಲೇ ನಿಗದಿಪಡಿಸಿದ್ದರು, ಹಾಗಾಗಿ ತಾವು ಅಂದು ಸದನದಲ್ಲಿ ಇರುವುದಿಲ್ಲ ಎಂದು ಬಿಜೆಪಿಯ ಸದನದ ವ್ಯವಸ್ಥಾಪಕರಿಗೆ ತಿಳಿಸಿದ್ದರು ಎಂದು ವರದಿಯಾಗಿದೆ. ಒಟ್ಟು 461 ಮತಗಳಲ್ಲಿ 269 ಸಂಸದರು ವಿಧೇಯಕಗಳನ್ನು ಮಂಡಿಸುವ ಪರವಾಗಿ ಮತ ಚಲಾಯಿಸಿದರೆ, ವಿಪಕ್ಷಗಳ 198 ಸಂಸದರು ಪ್ರಸ್ತಾವನೆಯ ವಿರುದ್ಧವಾಗಿ ಮತ ಚಲಾಯಿಸಿದ್ದರು.

ಮಸೂದೆಗಳನ್ನು ಮಂಡಿಸಲು ಸರಳ ಬಹುಮತದ ಅಗತ್ಯವಿದ್ದರೂ, ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು 307 ಸಂಸದರ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಮಾಡಿದ ಶಿಫಾರಸುಗಳನ್ನು ಅನುಸರಿಸಿ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪವನ್ನು ಮಾಡಲಾಗಿದೆ.

ಏಕಕಾಲದ ಚುನಾವಣೆಯ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಒಟ್ಟುಗೂಡಿಸುವ ಮೊದಲು ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳಿಂದ ಪ್ರಾರಂಭಿಸಿ ಹಂತ ಹಂತದ ವಿಧಾನವನ್ನು ಸಮಿತಿಯು ಸೂಚಿಸಿತ್ತಿ. ಸಂಸತ್ತಿನಲ್ಲಿ ಮಸೂದೆಗಳು ಅಂಗೀಕಾರಗೊಂಡರೂ, ಏಕಕಾಲಿಕ ಚುನಾವಣೆಗಳ ಅನುಷ್ಠಾನಕ್ಕೆ ಕಾಲಮಿತಿ ಸ್ಪಷ್ಟ ಹೇಳಲಾಗಿಲ್ಲ.

ಮಂಗಳವಾರ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಸೂದೆಗಳ ಪರಿಚಯದ ವೇಳೆ ನಡೆದ ಮತದಾನವು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ತೋರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...