Homeಮುಖಪುಟ‘ಒಂದು ದೇಶ - ಒಂದು ಚುನಾವಣೆ’ ಮಸೂದೆ ಮಂಡನೆಗೆ ಗೈರಾದ ಬಿಜೆಪಿ ಸಂಸದರಿಗೆ ಪಕ್ಷದಿಂದ ನೋಟಿಸ್...

‘ಒಂದು ದೇಶ – ಒಂದು ಚುನಾವಣೆ’ ಮಸೂದೆ ಮಂಡನೆಗೆ ಗೈರಾದ ಬಿಜೆಪಿ ಸಂಸದರಿಗೆ ಪಕ್ಷದಿಂದ ನೋಟಿಸ್ ಸಾಧ್ಯತೆ

- Advertisement -
- Advertisement -

‘ಒಂದು ದೇಶ – ಒಂದು ಚುನಾವಣೆ’ ಮಸೂದೆಗಳನ್ನು ಮಂಡಿಸುವ ವೇಳೆ ಸಂಸತ್ತಿಗೆ ಗೈರುಹಾಜರಾಗಿದ್ದ ಬಿಜೆಪಿಯ ಸಂಸದರಿಗೆ ಪಕ್ಷವು ನೋಟಿಸ್ ಕಳುಹಿಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.  ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಮಸೂದೆಗಳನ್ನು ಮಂಡಿಸಲು ಮಂಗಳವಾರ ಮತದಾನ ನಡೆದಾಗ ಬಿಜೆಪಿಯ ಹಲವಾರು ಸಂಸದರು ಸಂಸತ್ತಿಗೆ ಗೈರುಹಾಜರಾಗಿದ್ದರು. ಹಾಗಾಗಿ ಪಕ್ಷವು ತಮ್ಮ ಸದಸ್ಯರು ಯಾಕೆ ಗೈರಾಗಿದ್ದರು ಎಂಬುದನ್ನು ವಿವರಿಸುವಂತೆ ಕಳುಹಿಸಲಿದೆ.

ಪಕ್ಷವು ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಕಳುಹಿಸಿದ್ದು, ಮಂಗಳವಾರ ಸದನಕ್ಕೆ ಹಾಜರಾಗುವಂತೆ ಹೇಳಿತ್ತು. ಆದರೆ, ಇದರ ಹೊರತಾಗಿಯೂ 20 ಕ್ಕೂ ಹೆಚ್ಚು ಬಿಜೆಪಿ ಸಂಸದರು ಸಂವಿಧಾನದ ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ ಮಸೂದೆ-2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆ – 2024 ರ ಮತದಾನದ ವೇಳೆ ಗೈರುಹಾಜರಾಗಿದ್ದರು. ಒಂದು ದೇಶ – ಒಂದು ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದಾಗ್ಯೂ, ಕೆಲವು ಕೇಂದ್ರ ಸಚಿವರು ಮತ್ತು ಸಂಸದರು ಅಧಿಕೃತ ಕಾರ್ಯಕ್ರಮಗಳು ಮೊದಲೇ ನಿಗದಿಪಡಿಸಿದ್ದರು, ಹಾಗಾಗಿ ತಾವು ಅಂದು ಸದನದಲ್ಲಿ ಇರುವುದಿಲ್ಲ ಎಂದು ಬಿಜೆಪಿಯ ಸದನದ ವ್ಯವಸ್ಥಾಪಕರಿಗೆ ತಿಳಿಸಿದ್ದರು ಎಂದು ವರದಿಯಾಗಿದೆ. ಒಟ್ಟು 461 ಮತಗಳಲ್ಲಿ 269 ಸಂಸದರು ವಿಧೇಯಕಗಳನ್ನು ಮಂಡಿಸುವ ಪರವಾಗಿ ಮತ ಚಲಾಯಿಸಿದರೆ, ವಿಪಕ್ಷಗಳ 198 ಸಂಸದರು ಪ್ರಸ್ತಾವನೆಯ ವಿರುದ್ಧವಾಗಿ ಮತ ಚಲಾಯಿಸಿದ್ದರು.

ಮಸೂದೆಗಳನ್ನು ಮಂಡಿಸಲು ಸರಳ ಬಹುಮತದ ಅಗತ್ಯವಿದ್ದರೂ, ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು 307 ಸಂಸದರ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಮಾಡಿದ ಶಿಫಾರಸುಗಳನ್ನು ಅನುಸರಿಸಿ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪವನ್ನು ಮಾಡಲಾಗಿದೆ.

ಏಕಕಾಲದ ಚುನಾವಣೆಯ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಒಟ್ಟುಗೂಡಿಸುವ ಮೊದಲು ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳಿಂದ ಪ್ರಾರಂಭಿಸಿ ಹಂತ ಹಂತದ ವಿಧಾನವನ್ನು ಸಮಿತಿಯು ಸೂಚಿಸಿತ್ತಿ. ಸಂಸತ್ತಿನಲ್ಲಿ ಮಸೂದೆಗಳು ಅಂಗೀಕಾರಗೊಂಡರೂ, ಏಕಕಾಲಿಕ ಚುನಾವಣೆಗಳ ಅನುಷ್ಠಾನಕ್ಕೆ ಕಾಲಮಿತಿ ಸ್ಪಷ್ಟ ಹೇಳಲಾಗಿಲ್ಲ.

ಮಂಗಳವಾರ, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಸೂದೆಗಳ ಪರಿಚಯದ ವೇಳೆ ನಡೆದ ಮತದಾನವು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ತೋರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...